Homeಕರ್ನಾಟಕಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

- Advertisement -
- Advertisement -

“ನಾನು ಅಂಗಿ ಧರಿಸಿರುವುದು ಸಂವಿಧಾನ ಕಾರಣದಿಂದ. ಸಂವಿಧಾನ ಇಲ್ಲದಿದ್ದರೆ, ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ. ಇದು ನಮಗೆ ಅರ್ಥ ಆದರೆ, ನಾವು ಮತ್ತೆ ಬಿಜೆಪಿಗೆ ಮತ ಹಾಕುವುದಿಲ್ಲ. ಕರ್ನಾಟಕದ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಮಾಜಿ ಐಎಎಸ್‌ ಅಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದರು.

ಬೆಂಗಳೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ‘ಜನಾದೇಶ 2024 : ಸಂವಿಧಾನ ಕಲ್ಪಿಸಿದ ಭಾರತಕ್ಕಾಗಿ ಹೊಸ ರಾಜಕಾರಣ ಹೇಗೆ?’ ಎಂಬ ವಿಷಯ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಿಜೆಪಿಗೆ ಸಮಾನತೆ ಬೇಕಿಲ್ಲ. ಅದು ಸಂವಿಧಾನವನ್ನು ಬದಲಿಸಬೇಕೆಂದು ಬಯಸುತ್ತದೆ. ಬಿಜೆಪಿ ಸಿದ್ದಾಂತ ಹಿಂದುತ್ವ. ಹಿಂದುತ್ವದ ಮೇಲೆ ಜನರನ್ನು ಕ್ರೋಢಿಕರಿಸಿ, ವಿಷ ಬಿತ್ತುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ್ದರೆ, ಜನಪರವಾಗಿ ನಿಲ್ಲದಿದ್ದರೆ ಅದು ರಾಜಕಾರಣವಲ್ಲ” ಎಂದು ಸೆಂಥಿಲ್ ತಿಳಿಸಿದರು.

“ಎಲ್ಲಾ ಸಮಾಜದಲ್ಲಿಯೂ ಏರುಪೇರುಗಳು ಇರುತ್ತವೆ. ಆದರೆ, ಭಾರತದಲ್ಲಿ ಒಂದು ಭಯಾನಕ ವ್ಯವಸ್ಥೆ ಇದೆ. ಅದು ಜಾತಿ ವ್ಯವಸ್ಥೆ. ಇಲ್ಲಿ ನಮ್ಮ ಹೋರಾಟ ಜಾತಿ ವ್ಯವಸ್ಥೆ ವಿರುದ್ದ ಇರಬೇಕು. ಜಾತಿ ವ್ಯವಸ್ಥೆಯಲ್ಲಿ ದಲಿತರು ಹೆಚ್ಚಾಗಿ ದೌರ್ಜನ್ಯಕ್ಕೆ ತುತ್ತಾಗುತ್ತಾರೆ. ಅದೇ ರೀತಿ, ಮಹಿಳೆಯರನ್ನು ಶೋಷಣೆ ಮಾಡುವ ವ್ಯವಸ್ಥೆಯೂ ಇದೆ” ಎಂದರು.

“ಬಾಬಾ ಸಾಹೇಬರು ವಿರೋಧ ಮಾಡಿದ್ದು ಜಾತಿ ವ್ಯವಸ್ಥೆಯನ್ನು. ನಾವು ದೇಶ ಕಟ್ಟಬೇಕೆಂಬುವುದನ್ನು ಮರೆತಿದ್ದೇವೆ. ದೇಶ ಕಟ್ಟುವ ಕೆಲಸವನ್ನು ಪಕ್ಷ ಅಷ್ಟೇ ಅಲ್ಲದೇ ಪ್ರತಿಯೊಬ್ಬ ನಾಗರಿಕರು ಕೂಡ ಮಾಡಬೇಕು. ಈ ಪ್ರಕ್ರಿಯೆಯನ್ನು ಪಕ್ಷ ಮುನ್ನಡೆಸಬೇಕಾಗುತ್ತದೆ. ದೇಶ ಕಟ್ಟೋದು ಮುಖ್ಯ. ಅದನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ” ಎಂದು ಹೇಳಿದರು.

“ನಾವು ಸಂವಿಧಾನವನ್ನು ಸಂಭ್ರಮಿಸುವುದನ್ನೇ ಬಿಟ್ಟಿದ್ದೇವೆ. ನಾವು ಸಂವಿಧಾನವನ್ನು ಸಂಭ್ರಮಿಸಬೇಕು. ಪ್ರೀತಿ, ಸಮಾನತೆಯನ್ನು ಹರಡಬೇಕು. ಯುದ್ಧ ಎಂಬುವುದು ಭಾರತದ ತತ್ವವಲ್ಲ. ಈ ಯುದ್ದ ಎರಡು ಮೈಂಡ್‌ಸೆಟ್‌ಗಳ ನಡುವೆ ಇದೆ. ಒಂದು ಶ್ರೇಣೀಕರಣ, ಇನ್ನೊಂದು ಸಮಾನತೆ. ಕಾಂಗ್ರೆಸ್ ಅಂದರೆ ಸಮಾನತೆ, ಪ್ರೀತಿ, ಬಿಜೆಪಿ/ಆರ್‌ಎಸ್‌ಎಸ್‌ ಎಂದರ ಶೇಣಿ ವ್ಯವಸ್ಥೆ” ಎಂದು ವಿವರಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ 70ರ ದಶಕದಲ್ಲಿ ಒಂದು ಫಾರ್ಮೂಲವನ್ನು ಕಂಡುಕೊಂಡವು. ಅದು, ಮುಸ್ಲಿಮರನ್ನು ವಿಲನ್‌ಗಳಾಗಿ ಬಿಂಬಿಸುವುದು. ಶೇ. 20ಕ್ಕಿಂತ ಕಡಿಮೆ ಇರುವ ಮುಸ್ಲಿಮರು ಶೇ. 80ರಷ್ಟು ಇರುವ ಹಿಂದುಗಳನ್ನು ಹೆದರಿಸುತ್ತಾರೆ, ದಬ್ಬಾಳಿಕೆ ಮಾಡುತ್ತಾರೆ ಎಂಬ ವಾದವನ್ನು ಮುಂದಿಟ್ಟವು. ಹಿಂದುಗಳೆಲ್ಲರೂ ಒಂದಾಗಬೇಕೆಂದು ಜನರನ್ನು ಕ್ರೋಢೀಕರಿಸಲು ಮುಂದಾದವು. ಬಿಜೆಪಿ/ಆರ್‌ಎಸ್‌ಎಸ್‌ನ ಅಜೆಂಡಾವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೋಮುವಾದವನ್ನು ಮಣಿಸಬೇಕು” ಎಂದು ಕರೆ ಕೊಟ್ಟರು.

ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಆರಂಭಿಸಿದೆ. ಗುಜರಾತ್‌ನ ರಾಜಕೀಯ ವ್ಯವಸ್ಥೆಯು ದೇಶದ ರಾಜಕೀಯದ ಬಗ್ಗೆ ಹೆಚ್ಚು ಅರ್ಥ ಮಾಡಿಸಿತು. 2014ರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಕೋಪ ಶುರುವಾಯಿತು. ಅದರೆ, ಕೋಪದಿಂದ ಬಿಜೆಪಿ, ಆರ್‌ಎಸ್‌ಎಸ್‌ಅನ್ನು ಮಣಿಸಲು ಸಾಧ್ಯವಿಲ್ಲ ಎಂಬುವುದನ್ನು ಗ್ರಹಿಸಿದೆ ಎಂದು ತಿಳಿಸಿದರು.

“ಕಾಂಗ್ರೆಸ್ ಮತ್ತು ಬಿಜೆಪಿಯ ಸಿದ್ದಾಂತಗಳು ಏನೆಂದು ತಿಳಿದುಕೊಳ್ಳಬಹುದು. ಕಾಂಗ್ರೆಸ್‌ನಲ್ಲಿ ಸಮಾನತೆ ಇದೆ. ಜನಪರ ಸಿದ್ದಾಂತ, ದೃಷ್ಟಿಕೋನ ಇದೆ. ಆದರೆ, ಬಿಜೆಪಿಯಲ್ಲಿ ಹಿಂದುತ್ವವಿದೆ, ಸಮಾನತೆ ಇಲ್ಲ. ಕಾಂಗ್ರೆಸ್ ಅಂದರೆ ಅದು ಒಂದು ಪಕ್ಷ ಅಲ್ಲ, ಅದೊಂದು ಚಳುವಳಿ. ಕಾಂಗ್ರೆಸ್ ಎಂಬ ಪದದ ಅರ್ಥವೇ ಒಳಗೊಳ್ಳುವಿಕೆ. ಚುನಾವಣೆ ಗೆಲ್ಲಲು ಬಿಜೆಪಿ ಮುಸ್ಲಿಮರನ್ನು ದ್ವೇಷ ಮಾಡುತ್ತದೆ. ಆದರೆ, ಬಿಜೆಪಿಯ ಪ್ರಮುಖ ಟಾರ್ಗೆಟ್ ಇರುವುದು ದಲಿತರು, ಸಂವಿಧಾನ” ಎಂದು ಹೇಳಿದರು.

ಇದನ್ನೂ ಓದಿ : ಲೋಕಸಭಾ ಚುನಾವಣೆಯ ಗೆಲವು ಸೋಲಿನಲ್ಲಿ ದಲಿತರು ಮತ್ತು ಹಿಂದುಳಿದವರ ಪಾತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...