Homeಕರ್ನಾಟಕಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

- Advertisement -
- Advertisement -

“ನಾನು ಅಂಗಿ ಧರಿಸಿರುವುದು ಸಂವಿಧಾನ ಕಾರಣದಿಂದ. ಸಂವಿಧಾನ ಇಲ್ಲದಿದ್ದರೆ, ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ. ಇದು ನಮಗೆ ಅರ್ಥ ಆದರೆ, ನಾವು ಮತ್ತೆ ಬಿಜೆಪಿಗೆ ಮತ ಹಾಕುವುದಿಲ್ಲ. ಕರ್ನಾಟಕದ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಮಾಜಿ ಐಎಎಸ್‌ ಅಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದರು.

ಬೆಂಗಳೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ‘ಜನಾದೇಶ 2024 : ಸಂವಿಧಾನ ಕಲ್ಪಿಸಿದ ಭಾರತಕ್ಕಾಗಿ ಹೊಸ ರಾಜಕಾರಣ ಹೇಗೆ?’ ಎಂಬ ವಿಷಯ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಿಜೆಪಿಗೆ ಸಮಾನತೆ ಬೇಕಿಲ್ಲ. ಅದು ಸಂವಿಧಾನವನ್ನು ಬದಲಿಸಬೇಕೆಂದು ಬಯಸುತ್ತದೆ. ಬಿಜೆಪಿ ಸಿದ್ದಾಂತ ಹಿಂದುತ್ವ. ಹಿಂದುತ್ವದ ಮೇಲೆ ಜನರನ್ನು ಕ್ರೋಢಿಕರಿಸಿ, ವಿಷ ಬಿತ್ತುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ್ದರೆ, ಜನಪರವಾಗಿ ನಿಲ್ಲದಿದ್ದರೆ ಅದು ರಾಜಕಾರಣವಲ್ಲ” ಎಂದು ಸೆಂಥಿಲ್ ತಿಳಿಸಿದರು.

“ಎಲ್ಲಾ ಸಮಾಜದಲ್ಲಿಯೂ ಏರುಪೇರುಗಳು ಇರುತ್ತವೆ. ಆದರೆ, ಭಾರತದಲ್ಲಿ ಒಂದು ಭಯಾನಕ ವ್ಯವಸ್ಥೆ ಇದೆ. ಅದು ಜಾತಿ ವ್ಯವಸ್ಥೆ. ಇಲ್ಲಿ ನಮ್ಮ ಹೋರಾಟ ಜಾತಿ ವ್ಯವಸ್ಥೆ ವಿರುದ್ದ ಇರಬೇಕು. ಜಾತಿ ವ್ಯವಸ್ಥೆಯಲ್ಲಿ ದಲಿತರು ಹೆಚ್ಚಾಗಿ ದೌರ್ಜನ್ಯಕ್ಕೆ ತುತ್ತಾಗುತ್ತಾರೆ. ಅದೇ ರೀತಿ, ಮಹಿಳೆಯರನ್ನು ಶೋಷಣೆ ಮಾಡುವ ವ್ಯವಸ್ಥೆಯೂ ಇದೆ” ಎಂದರು.

“ಬಾಬಾ ಸಾಹೇಬರು ವಿರೋಧ ಮಾಡಿದ್ದು ಜಾತಿ ವ್ಯವಸ್ಥೆಯನ್ನು. ನಾವು ದೇಶ ಕಟ್ಟಬೇಕೆಂಬುವುದನ್ನು ಮರೆತಿದ್ದೇವೆ. ದೇಶ ಕಟ್ಟುವ ಕೆಲಸವನ್ನು ಪಕ್ಷ ಅಷ್ಟೇ ಅಲ್ಲದೇ ಪ್ರತಿಯೊಬ್ಬ ನಾಗರಿಕರು ಕೂಡ ಮಾಡಬೇಕು. ಈ ಪ್ರಕ್ರಿಯೆಯನ್ನು ಪಕ್ಷ ಮುನ್ನಡೆಸಬೇಕಾಗುತ್ತದೆ. ದೇಶ ಕಟ್ಟೋದು ಮುಖ್ಯ. ಅದನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ” ಎಂದು ಹೇಳಿದರು.

“ನಾವು ಸಂವಿಧಾನವನ್ನು ಸಂಭ್ರಮಿಸುವುದನ್ನೇ ಬಿಟ್ಟಿದ್ದೇವೆ. ನಾವು ಸಂವಿಧಾನವನ್ನು ಸಂಭ್ರಮಿಸಬೇಕು. ಪ್ರೀತಿ, ಸಮಾನತೆಯನ್ನು ಹರಡಬೇಕು. ಯುದ್ಧ ಎಂಬುವುದು ಭಾರತದ ತತ್ವವಲ್ಲ. ಈ ಯುದ್ದ ಎರಡು ಮೈಂಡ್‌ಸೆಟ್‌ಗಳ ನಡುವೆ ಇದೆ. ಒಂದು ಶ್ರೇಣೀಕರಣ, ಇನ್ನೊಂದು ಸಮಾನತೆ. ಕಾಂಗ್ರೆಸ್ ಅಂದರೆ ಸಮಾನತೆ, ಪ್ರೀತಿ, ಬಿಜೆಪಿ/ಆರ್‌ಎಸ್‌ಎಸ್‌ ಎಂದರ ಶೇಣಿ ವ್ಯವಸ್ಥೆ” ಎಂದು ವಿವರಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ 70ರ ದಶಕದಲ್ಲಿ ಒಂದು ಫಾರ್ಮೂಲವನ್ನು ಕಂಡುಕೊಂಡವು. ಅದು, ಮುಸ್ಲಿಮರನ್ನು ವಿಲನ್‌ಗಳಾಗಿ ಬಿಂಬಿಸುವುದು. ಶೇ. 20ಕ್ಕಿಂತ ಕಡಿಮೆ ಇರುವ ಮುಸ್ಲಿಮರು ಶೇ. 80ರಷ್ಟು ಇರುವ ಹಿಂದುಗಳನ್ನು ಹೆದರಿಸುತ್ತಾರೆ, ದಬ್ಬಾಳಿಕೆ ಮಾಡುತ್ತಾರೆ ಎಂಬ ವಾದವನ್ನು ಮುಂದಿಟ್ಟವು. ಹಿಂದುಗಳೆಲ್ಲರೂ ಒಂದಾಗಬೇಕೆಂದು ಜನರನ್ನು ಕ್ರೋಢೀಕರಿಸಲು ಮುಂದಾದವು. ಬಿಜೆಪಿ/ಆರ್‌ಎಸ್‌ಎಸ್‌ನ ಅಜೆಂಡಾವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೋಮುವಾದವನ್ನು ಮಣಿಸಬೇಕು” ಎಂದು ಕರೆ ಕೊಟ್ಟರು.

ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಆರಂಭಿಸಿದೆ. ಗುಜರಾತ್‌ನ ರಾಜಕೀಯ ವ್ಯವಸ್ಥೆಯು ದೇಶದ ರಾಜಕೀಯದ ಬಗ್ಗೆ ಹೆಚ್ಚು ಅರ್ಥ ಮಾಡಿಸಿತು. 2014ರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಕೋಪ ಶುರುವಾಯಿತು. ಅದರೆ, ಕೋಪದಿಂದ ಬಿಜೆಪಿ, ಆರ್‌ಎಸ್‌ಎಸ್‌ಅನ್ನು ಮಣಿಸಲು ಸಾಧ್ಯವಿಲ್ಲ ಎಂಬುವುದನ್ನು ಗ್ರಹಿಸಿದೆ ಎಂದು ತಿಳಿಸಿದರು.

“ಕಾಂಗ್ರೆಸ್ ಮತ್ತು ಬಿಜೆಪಿಯ ಸಿದ್ದಾಂತಗಳು ಏನೆಂದು ತಿಳಿದುಕೊಳ್ಳಬಹುದು. ಕಾಂಗ್ರೆಸ್‌ನಲ್ಲಿ ಸಮಾನತೆ ಇದೆ. ಜನಪರ ಸಿದ್ದಾಂತ, ದೃಷ್ಟಿಕೋನ ಇದೆ. ಆದರೆ, ಬಿಜೆಪಿಯಲ್ಲಿ ಹಿಂದುತ್ವವಿದೆ, ಸಮಾನತೆ ಇಲ್ಲ. ಕಾಂಗ್ರೆಸ್ ಅಂದರೆ ಅದು ಒಂದು ಪಕ್ಷ ಅಲ್ಲ, ಅದೊಂದು ಚಳುವಳಿ. ಕಾಂಗ್ರೆಸ್ ಎಂಬ ಪದದ ಅರ್ಥವೇ ಒಳಗೊಳ್ಳುವಿಕೆ. ಚುನಾವಣೆ ಗೆಲ್ಲಲು ಬಿಜೆಪಿ ಮುಸ್ಲಿಮರನ್ನು ದ್ವೇಷ ಮಾಡುತ್ತದೆ. ಆದರೆ, ಬಿಜೆಪಿಯ ಪ್ರಮುಖ ಟಾರ್ಗೆಟ್ ಇರುವುದು ದಲಿತರು, ಸಂವಿಧಾನ” ಎಂದು ಹೇಳಿದರು.

ಇದನ್ನೂ ಓದಿ : ಲೋಕಸಭಾ ಚುನಾವಣೆಯ ಗೆಲವು ಸೋಲಿನಲ್ಲಿ ದಲಿತರು ಮತ್ತು ಹಿಂದುಳಿದವರ ಪಾತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...