Homeಕರ್ನಾಟಕಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

- Advertisement -
- Advertisement -

“ನಾನು ಅಂಗಿ ಧರಿಸಿರುವುದು ಸಂವಿಧಾನ ಕಾರಣದಿಂದ. ಸಂವಿಧಾನ ಇಲ್ಲದಿದ್ದರೆ, ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ. ಇದು ನಮಗೆ ಅರ್ಥ ಆದರೆ, ನಾವು ಮತ್ತೆ ಬಿಜೆಪಿಗೆ ಮತ ಹಾಕುವುದಿಲ್ಲ. ಕರ್ನಾಟಕದ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಮಾಜಿ ಐಎಎಸ್‌ ಅಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದರು.

ಬೆಂಗಳೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ‘ಜನಾದೇಶ 2024 : ಸಂವಿಧಾನ ಕಲ್ಪಿಸಿದ ಭಾರತಕ್ಕಾಗಿ ಹೊಸ ರಾಜಕಾರಣ ಹೇಗೆ?’ ಎಂಬ ವಿಷಯ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಿಜೆಪಿಗೆ ಸಮಾನತೆ ಬೇಕಿಲ್ಲ. ಅದು ಸಂವಿಧಾನವನ್ನು ಬದಲಿಸಬೇಕೆಂದು ಬಯಸುತ್ತದೆ. ಬಿಜೆಪಿ ಸಿದ್ದಾಂತ ಹಿಂದುತ್ವ. ಹಿಂದುತ್ವದ ಮೇಲೆ ಜನರನ್ನು ಕ್ರೋಢಿಕರಿಸಿ, ವಿಷ ಬಿತ್ತುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ್ದರೆ, ಜನಪರವಾಗಿ ನಿಲ್ಲದಿದ್ದರೆ ಅದು ರಾಜಕಾರಣವಲ್ಲ” ಎಂದು ಸೆಂಥಿಲ್ ತಿಳಿಸಿದರು.

“ಎಲ್ಲಾ ಸಮಾಜದಲ್ಲಿಯೂ ಏರುಪೇರುಗಳು ಇರುತ್ತವೆ. ಆದರೆ, ಭಾರತದಲ್ಲಿ ಒಂದು ಭಯಾನಕ ವ್ಯವಸ್ಥೆ ಇದೆ. ಅದು ಜಾತಿ ವ್ಯವಸ್ಥೆ. ಇಲ್ಲಿ ನಮ್ಮ ಹೋರಾಟ ಜಾತಿ ವ್ಯವಸ್ಥೆ ವಿರುದ್ದ ಇರಬೇಕು. ಜಾತಿ ವ್ಯವಸ್ಥೆಯಲ್ಲಿ ದಲಿತರು ಹೆಚ್ಚಾಗಿ ದೌರ್ಜನ್ಯಕ್ಕೆ ತುತ್ತಾಗುತ್ತಾರೆ. ಅದೇ ರೀತಿ, ಮಹಿಳೆಯರನ್ನು ಶೋಷಣೆ ಮಾಡುವ ವ್ಯವಸ್ಥೆಯೂ ಇದೆ” ಎಂದರು.

“ಬಾಬಾ ಸಾಹೇಬರು ವಿರೋಧ ಮಾಡಿದ್ದು ಜಾತಿ ವ್ಯವಸ್ಥೆಯನ್ನು. ನಾವು ದೇಶ ಕಟ್ಟಬೇಕೆಂಬುವುದನ್ನು ಮರೆತಿದ್ದೇವೆ. ದೇಶ ಕಟ್ಟುವ ಕೆಲಸವನ್ನು ಪಕ್ಷ ಅಷ್ಟೇ ಅಲ್ಲದೇ ಪ್ರತಿಯೊಬ್ಬ ನಾಗರಿಕರು ಕೂಡ ಮಾಡಬೇಕು. ಈ ಪ್ರಕ್ರಿಯೆಯನ್ನು ಪಕ್ಷ ಮುನ್ನಡೆಸಬೇಕಾಗುತ್ತದೆ. ದೇಶ ಕಟ್ಟೋದು ಮುಖ್ಯ. ಅದನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ” ಎಂದು ಹೇಳಿದರು.

“ನಾವು ಸಂವಿಧಾನವನ್ನು ಸಂಭ್ರಮಿಸುವುದನ್ನೇ ಬಿಟ್ಟಿದ್ದೇವೆ. ನಾವು ಸಂವಿಧಾನವನ್ನು ಸಂಭ್ರಮಿಸಬೇಕು. ಪ್ರೀತಿ, ಸಮಾನತೆಯನ್ನು ಹರಡಬೇಕು. ಯುದ್ಧ ಎಂಬುವುದು ಭಾರತದ ತತ್ವವಲ್ಲ. ಈ ಯುದ್ದ ಎರಡು ಮೈಂಡ್‌ಸೆಟ್‌ಗಳ ನಡುವೆ ಇದೆ. ಒಂದು ಶ್ರೇಣೀಕರಣ, ಇನ್ನೊಂದು ಸಮಾನತೆ. ಕಾಂಗ್ರೆಸ್ ಅಂದರೆ ಸಮಾನತೆ, ಪ್ರೀತಿ, ಬಿಜೆಪಿ/ಆರ್‌ಎಸ್‌ಎಸ್‌ ಎಂದರ ಶೇಣಿ ವ್ಯವಸ್ಥೆ” ಎಂದು ವಿವರಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ 70ರ ದಶಕದಲ್ಲಿ ಒಂದು ಫಾರ್ಮೂಲವನ್ನು ಕಂಡುಕೊಂಡವು. ಅದು, ಮುಸ್ಲಿಮರನ್ನು ವಿಲನ್‌ಗಳಾಗಿ ಬಿಂಬಿಸುವುದು. ಶೇ. 20ಕ್ಕಿಂತ ಕಡಿಮೆ ಇರುವ ಮುಸ್ಲಿಮರು ಶೇ. 80ರಷ್ಟು ಇರುವ ಹಿಂದುಗಳನ್ನು ಹೆದರಿಸುತ್ತಾರೆ, ದಬ್ಬಾಳಿಕೆ ಮಾಡುತ್ತಾರೆ ಎಂಬ ವಾದವನ್ನು ಮುಂದಿಟ್ಟವು. ಹಿಂದುಗಳೆಲ್ಲರೂ ಒಂದಾಗಬೇಕೆಂದು ಜನರನ್ನು ಕ್ರೋಢೀಕರಿಸಲು ಮುಂದಾದವು. ಬಿಜೆಪಿ/ಆರ್‌ಎಸ್‌ಎಸ್‌ನ ಅಜೆಂಡಾವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೋಮುವಾದವನ್ನು ಮಣಿಸಬೇಕು” ಎಂದು ಕರೆ ಕೊಟ್ಟರು.

ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಆರಂಭಿಸಿದೆ. ಗುಜರಾತ್‌ನ ರಾಜಕೀಯ ವ್ಯವಸ್ಥೆಯು ದೇಶದ ರಾಜಕೀಯದ ಬಗ್ಗೆ ಹೆಚ್ಚು ಅರ್ಥ ಮಾಡಿಸಿತು. 2014ರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಕೋಪ ಶುರುವಾಯಿತು. ಅದರೆ, ಕೋಪದಿಂದ ಬಿಜೆಪಿ, ಆರ್‌ಎಸ್‌ಎಸ್‌ಅನ್ನು ಮಣಿಸಲು ಸಾಧ್ಯವಿಲ್ಲ ಎಂಬುವುದನ್ನು ಗ್ರಹಿಸಿದೆ ಎಂದು ತಿಳಿಸಿದರು.

“ಕಾಂಗ್ರೆಸ್ ಮತ್ತು ಬಿಜೆಪಿಯ ಸಿದ್ದಾಂತಗಳು ಏನೆಂದು ತಿಳಿದುಕೊಳ್ಳಬಹುದು. ಕಾಂಗ್ರೆಸ್‌ನಲ್ಲಿ ಸಮಾನತೆ ಇದೆ. ಜನಪರ ಸಿದ್ದಾಂತ, ದೃಷ್ಟಿಕೋನ ಇದೆ. ಆದರೆ, ಬಿಜೆಪಿಯಲ್ಲಿ ಹಿಂದುತ್ವವಿದೆ, ಸಮಾನತೆ ಇಲ್ಲ. ಕಾಂಗ್ರೆಸ್ ಅಂದರೆ ಅದು ಒಂದು ಪಕ್ಷ ಅಲ್ಲ, ಅದೊಂದು ಚಳುವಳಿ. ಕಾಂಗ್ರೆಸ್ ಎಂಬ ಪದದ ಅರ್ಥವೇ ಒಳಗೊಳ್ಳುವಿಕೆ. ಚುನಾವಣೆ ಗೆಲ್ಲಲು ಬಿಜೆಪಿ ಮುಸ್ಲಿಮರನ್ನು ದ್ವೇಷ ಮಾಡುತ್ತದೆ. ಆದರೆ, ಬಿಜೆಪಿಯ ಪ್ರಮುಖ ಟಾರ್ಗೆಟ್ ಇರುವುದು ದಲಿತರು, ಸಂವಿಧಾನ” ಎಂದು ಹೇಳಿದರು.

ಇದನ್ನೂ ಓದಿ : ಲೋಕಸಭಾ ಚುನಾವಣೆಯ ಗೆಲವು ಸೋಲಿನಲ್ಲಿ ದಲಿತರು ಮತ್ತು ಹಿಂದುಳಿದವರ ಪಾತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...