Homeಕರ್ನಾಟಕಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

- Advertisement -
- Advertisement -

“ನಾನು ಅಂಗಿ ಧರಿಸಿರುವುದು ಸಂವಿಧಾನ ಕಾರಣದಿಂದ. ಸಂವಿಧಾನ ಇಲ್ಲದಿದ್ದರೆ, ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ. ಇದು ನಮಗೆ ಅರ್ಥ ಆದರೆ, ನಾವು ಮತ್ತೆ ಬಿಜೆಪಿಗೆ ಮತ ಹಾಕುವುದಿಲ್ಲ. ಕರ್ನಾಟಕದ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಮಾಜಿ ಐಎಎಸ್‌ ಅಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದರು.

ಬೆಂಗಳೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ‘ಜನಾದೇಶ 2024 : ಸಂವಿಧಾನ ಕಲ್ಪಿಸಿದ ಭಾರತಕ್ಕಾಗಿ ಹೊಸ ರಾಜಕಾರಣ ಹೇಗೆ?’ ಎಂಬ ವಿಷಯ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಿಜೆಪಿಗೆ ಸಮಾನತೆ ಬೇಕಿಲ್ಲ. ಅದು ಸಂವಿಧಾನವನ್ನು ಬದಲಿಸಬೇಕೆಂದು ಬಯಸುತ್ತದೆ. ಬಿಜೆಪಿ ಸಿದ್ದಾಂತ ಹಿಂದುತ್ವ. ಹಿಂದುತ್ವದ ಮೇಲೆ ಜನರನ್ನು ಕ್ರೋಢಿಕರಿಸಿ, ವಿಷ ಬಿತ್ತುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ್ದರೆ, ಜನಪರವಾಗಿ ನಿಲ್ಲದಿದ್ದರೆ ಅದು ರಾಜಕಾರಣವಲ್ಲ” ಎಂದು ಸೆಂಥಿಲ್ ತಿಳಿಸಿದರು.

“ಎಲ್ಲಾ ಸಮಾಜದಲ್ಲಿಯೂ ಏರುಪೇರುಗಳು ಇರುತ್ತವೆ. ಆದರೆ, ಭಾರತದಲ್ಲಿ ಒಂದು ಭಯಾನಕ ವ್ಯವಸ್ಥೆ ಇದೆ. ಅದು ಜಾತಿ ವ್ಯವಸ್ಥೆ. ಇಲ್ಲಿ ನಮ್ಮ ಹೋರಾಟ ಜಾತಿ ವ್ಯವಸ್ಥೆ ವಿರುದ್ದ ಇರಬೇಕು. ಜಾತಿ ವ್ಯವಸ್ಥೆಯಲ್ಲಿ ದಲಿತರು ಹೆಚ್ಚಾಗಿ ದೌರ್ಜನ್ಯಕ್ಕೆ ತುತ್ತಾಗುತ್ತಾರೆ. ಅದೇ ರೀತಿ, ಮಹಿಳೆಯರನ್ನು ಶೋಷಣೆ ಮಾಡುವ ವ್ಯವಸ್ಥೆಯೂ ಇದೆ” ಎಂದರು.

“ಬಾಬಾ ಸಾಹೇಬರು ವಿರೋಧ ಮಾಡಿದ್ದು ಜಾತಿ ವ್ಯವಸ್ಥೆಯನ್ನು. ನಾವು ದೇಶ ಕಟ್ಟಬೇಕೆಂಬುವುದನ್ನು ಮರೆತಿದ್ದೇವೆ. ದೇಶ ಕಟ್ಟುವ ಕೆಲಸವನ್ನು ಪಕ್ಷ ಅಷ್ಟೇ ಅಲ್ಲದೇ ಪ್ರತಿಯೊಬ್ಬ ನಾಗರಿಕರು ಕೂಡ ಮಾಡಬೇಕು. ಈ ಪ್ರಕ್ರಿಯೆಯನ್ನು ಪಕ್ಷ ಮುನ್ನಡೆಸಬೇಕಾಗುತ್ತದೆ. ದೇಶ ಕಟ್ಟೋದು ಮುಖ್ಯ. ಅದನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ” ಎಂದು ಹೇಳಿದರು.

“ನಾವು ಸಂವಿಧಾನವನ್ನು ಸಂಭ್ರಮಿಸುವುದನ್ನೇ ಬಿಟ್ಟಿದ್ದೇವೆ. ನಾವು ಸಂವಿಧಾನವನ್ನು ಸಂಭ್ರಮಿಸಬೇಕು. ಪ್ರೀತಿ, ಸಮಾನತೆಯನ್ನು ಹರಡಬೇಕು. ಯುದ್ಧ ಎಂಬುವುದು ಭಾರತದ ತತ್ವವಲ್ಲ. ಈ ಯುದ್ದ ಎರಡು ಮೈಂಡ್‌ಸೆಟ್‌ಗಳ ನಡುವೆ ಇದೆ. ಒಂದು ಶ್ರೇಣೀಕರಣ, ಇನ್ನೊಂದು ಸಮಾನತೆ. ಕಾಂಗ್ರೆಸ್ ಅಂದರೆ ಸಮಾನತೆ, ಪ್ರೀತಿ, ಬಿಜೆಪಿ/ಆರ್‌ಎಸ್‌ಎಸ್‌ ಎಂದರ ಶೇಣಿ ವ್ಯವಸ್ಥೆ” ಎಂದು ವಿವರಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ 70ರ ದಶಕದಲ್ಲಿ ಒಂದು ಫಾರ್ಮೂಲವನ್ನು ಕಂಡುಕೊಂಡವು. ಅದು, ಮುಸ್ಲಿಮರನ್ನು ವಿಲನ್‌ಗಳಾಗಿ ಬಿಂಬಿಸುವುದು. ಶೇ. 20ಕ್ಕಿಂತ ಕಡಿಮೆ ಇರುವ ಮುಸ್ಲಿಮರು ಶೇ. 80ರಷ್ಟು ಇರುವ ಹಿಂದುಗಳನ್ನು ಹೆದರಿಸುತ್ತಾರೆ, ದಬ್ಬಾಳಿಕೆ ಮಾಡುತ್ತಾರೆ ಎಂಬ ವಾದವನ್ನು ಮುಂದಿಟ್ಟವು. ಹಿಂದುಗಳೆಲ್ಲರೂ ಒಂದಾಗಬೇಕೆಂದು ಜನರನ್ನು ಕ್ರೋಢೀಕರಿಸಲು ಮುಂದಾದವು. ಬಿಜೆಪಿ/ಆರ್‌ಎಸ್‌ಎಸ್‌ನ ಅಜೆಂಡಾವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೋಮುವಾದವನ್ನು ಮಣಿಸಬೇಕು” ಎಂದು ಕರೆ ಕೊಟ್ಟರು.

ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಆರಂಭಿಸಿದೆ. ಗುಜರಾತ್‌ನ ರಾಜಕೀಯ ವ್ಯವಸ್ಥೆಯು ದೇಶದ ರಾಜಕೀಯದ ಬಗ್ಗೆ ಹೆಚ್ಚು ಅರ್ಥ ಮಾಡಿಸಿತು. 2014ರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಕೋಪ ಶುರುವಾಯಿತು. ಅದರೆ, ಕೋಪದಿಂದ ಬಿಜೆಪಿ, ಆರ್‌ಎಸ್‌ಎಸ್‌ಅನ್ನು ಮಣಿಸಲು ಸಾಧ್ಯವಿಲ್ಲ ಎಂಬುವುದನ್ನು ಗ್ರಹಿಸಿದೆ ಎಂದು ತಿಳಿಸಿದರು.

“ಕಾಂಗ್ರೆಸ್ ಮತ್ತು ಬಿಜೆಪಿಯ ಸಿದ್ದಾಂತಗಳು ಏನೆಂದು ತಿಳಿದುಕೊಳ್ಳಬಹುದು. ಕಾಂಗ್ರೆಸ್‌ನಲ್ಲಿ ಸಮಾನತೆ ಇದೆ. ಜನಪರ ಸಿದ್ದಾಂತ, ದೃಷ್ಟಿಕೋನ ಇದೆ. ಆದರೆ, ಬಿಜೆಪಿಯಲ್ಲಿ ಹಿಂದುತ್ವವಿದೆ, ಸಮಾನತೆ ಇಲ್ಲ. ಕಾಂಗ್ರೆಸ್ ಅಂದರೆ ಅದು ಒಂದು ಪಕ್ಷ ಅಲ್ಲ, ಅದೊಂದು ಚಳುವಳಿ. ಕಾಂಗ್ರೆಸ್ ಎಂಬ ಪದದ ಅರ್ಥವೇ ಒಳಗೊಳ್ಳುವಿಕೆ. ಚುನಾವಣೆ ಗೆಲ್ಲಲು ಬಿಜೆಪಿ ಮುಸ್ಲಿಮರನ್ನು ದ್ವೇಷ ಮಾಡುತ್ತದೆ. ಆದರೆ, ಬಿಜೆಪಿಯ ಪ್ರಮುಖ ಟಾರ್ಗೆಟ್ ಇರುವುದು ದಲಿತರು, ಸಂವಿಧಾನ” ಎಂದು ಹೇಳಿದರು.

ಇದನ್ನೂ ಓದಿ : ಲೋಕಸಭಾ ಚುನಾವಣೆಯ ಗೆಲವು ಸೋಲಿನಲ್ಲಿ ದಲಿತರು ಮತ್ತು ಹಿಂದುಳಿದವರ ಪಾತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...