Homeಕರ್ನಾಟಕಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

ಸಂವಿಧಾನ ಇಲ್ಲದಿದ್ದರೆ ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ: ಸಂಸದ ಸಸಿಕಾಂತ್ ಸೆಂಥಿಲ್

- Advertisement -
- Advertisement -

“ನಾನು ಅಂಗಿ ಧರಿಸಿರುವುದು ಸಂವಿಧಾನ ಕಾರಣದಿಂದ. ಸಂವಿಧಾನ ಇಲ್ಲದಿದ್ದರೆ, ನಮಗೆ ಅಂಗಿ ಧರಿಸಲು ಬಿಡುತ್ತಿರಲಿಲ್ಲ. ಇದು ನಮಗೆ ಅರ್ಥ ಆದರೆ, ನಾವು ಮತ್ತೆ ಬಿಜೆಪಿಗೆ ಮತ ಹಾಕುವುದಿಲ್ಲ. ಕರ್ನಾಟಕದ ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕಿದೆ” ಎಂದು ಮಾಜಿ ಐಎಎಸ್‌ ಅಧಿಕಾರಿ, ಸಂಸದ ಸಸಿಕಾಂತ್ ಸೆಂಥಿಲ್ ಹೇಳಿದರು.

ಬೆಂಗಳೂರಿನಲ್ಲಿ ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ‘ಜನಾದೇಶ 2024 : ಸಂವಿಧಾನ ಕಲ್ಪಿಸಿದ ಭಾರತಕ್ಕಾಗಿ ಹೊಸ ರಾಜಕಾರಣ ಹೇಗೆ?’ ಎಂಬ ವಿಷಯ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಿಜೆಪಿಗೆ ಸಮಾನತೆ ಬೇಕಿಲ್ಲ. ಅದು ಸಂವಿಧಾನವನ್ನು ಬದಲಿಸಬೇಕೆಂದು ಬಯಸುತ್ತದೆ. ಬಿಜೆಪಿ ಸಿದ್ದಾಂತ ಹಿಂದುತ್ವ. ಹಿಂದುತ್ವದ ಮೇಲೆ ಜನರನ್ನು ಕ್ರೋಢಿಕರಿಸಿ, ವಿಷ ಬಿತ್ತುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸದ್ದರೆ, ಜನಪರವಾಗಿ ನಿಲ್ಲದಿದ್ದರೆ ಅದು ರಾಜಕಾರಣವಲ್ಲ” ಎಂದು ಸೆಂಥಿಲ್ ತಿಳಿಸಿದರು.

“ಎಲ್ಲಾ ಸಮಾಜದಲ್ಲಿಯೂ ಏರುಪೇರುಗಳು ಇರುತ್ತವೆ. ಆದರೆ, ಭಾರತದಲ್ಲಿ ಒಂದು ಭಯಾನಕ ವ್ಯವಸ್ಥೆ ಇದೆ. ಅದು ಜಾತಿ ವ್ಯವಸ್ಥೆ. ಇಲ್ಲಿ ನಮ್ಮ ಹೋರಾಟ ಜಾತಿ ವ್ಯವಸ್ಥೆ ವಿರುದ್ದ ಇರಬೇಕು. ಜಾತಿ ವ್ಯವಸ್ಥೆಯಲ್ಲಿ ದಲಿತರು ಹೆಚ್ಚಾಗಿ ದೌರ್ಜನ್ಯಕ್ಕೆ ತುತ್ತಾಗುತ್ತಾರೆ. ಅದೇ ರೀತಿ, ಮಹಿಳೆಯರನ್ನು ಶೋಷಣೆ ಮಾಡುವ ವ್ಯವಸ್ಥೆಯೂ ಇದೆ” ಎಂದರು.

“ಬಾಬಾ ಸಾಹೇಬರು ವಿರೋಧ ಮಾಡಿದ್ದು ಜಾತಿ ವ್ಯವಸ್ಥೆಯನ್ನು. ನಾವು ದೇಶ ಕಟ್ಟಬೇಕೆಂಬುವುದನ್ನು ಮರೆತಿದ್ದೇವೆ. ದೇಶ ಕಟ್ಟುವ ಕೆಲಸವನ್ನು ಪಕ್ಷ ಅಷ್ಟೇ ಅಲ್ಲದೇ ಪ್ರತಿಯೊಬ್ಬ ನಾಗರಿಕರು ಕೂಡ ಮಾಡಬೇಕು. ಈ ಪ್ರಕ್ರಿಯೆಯನ್ನು ಪಕ್ಷ ಮುನ್ನಡೆಸಬೇಕಾಗುತ್ತದೆ. ದೇಶ ಕಟ್ಟೋದು ಮುಖ್ಯ. ಅದನ್ನು ನಾವೆಲ್ಲರೂ ಸೇರಿ ಮಾಡಬೇಕಿದೆ” ಎಂದು ಹೇಳಿದರು.

“ನಾವು ಸಂವಿಧಾನವನ್ನು ಸಂಭ್ರಮಿಸುವುದನ್ನೇ ಬಿಟ್ಟಿದ್ದೇವೆ. ನಾವು ಸಂವಿಧಾನವನ್ನು ಸಂಭ್ರಮಿಸಬೇಕು. ಪ್ರೀತಿ, ಸಮಾನತೆಯನ್ನು ಹರಡಬೇಕು. ಯುದ್ಧ ಎಂಬುವುದು ಭಾರತದ ತತ್ವವಲ್ಲ. ಈ ಯುದ್ದ ಎರಡು ಮೈಂಡ್‌ಸೆಟ್‌ಗಳ ನಡುವೆ ಇದೆ. ಒಂದು ಶ್ರೇಣೀಕರಣ, ಇನ್ನೊಂದು ಸಮಾನತೆ. ಕಾಂಗ್ರೆಸ್ ಅಂದರೆ ಸಮಾನತೆ, ಪ್ರೀತಿ, ಬಿಜೆಪಿ/ಆರ್‌ಎಸ್‌ಎಸ್‌ ಎಂದರ ಶೇಣಿ ವ್ಯವಸ್ಥೆ” ಎಂದು ವಿವರಿಸಿದರು.

“ಬಿಜೆಪಿ ಮತ್ತು ಆರ್‌ಎಸ್‌ಎಸ್‌ 70ರ ದಶಕದಲ್ಲಿ ಒಂದು ಫಾರ್ಮೂಲವನ್ನು ಕಂಡುಕೊಂಡವು. ಅದು, ಮುಸ್ಲಿಮರನ್ನು ವಿಲನ್‌ಗಳಾಗಿ ಬಿಂಬಿಸುವುದು. ಶೇ. 20ಕ್ಕಿಂತ ಕಡಿಮೆ ಇರುವ ಮುಸ್ಲಿಮರು ಶೇ. 80ರಷ್ಟು ಇರುವ ಹಿಂದುಗಳನ್ನು ಹೆದರಿಸುತ್ತಾರೆ, ದಬ್ಬಾಳಿಕೆ ಮಾಡುತ್ತಾರೆ ಎಂಬ ವಾದವನ್ನು ಮುಂದಿಟ್ಟವು. ಹಿಂದುಗಳೆಲ್ಲರೂ ಒಂದಾಗಬೇಕೆಂದು ಜನರನ್ನು ಕ್ರೋಢೀಕರಿಸಲು ಮುಂದಾದವು. ಬಿಜೆಪಿ/ಆರ್‌ಎಸ್‌ಎಸ್‌ನ ಅಜೆಂಡಾವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೋಮುವಾದವನ್ನು ಮಣಿಸಬೇಕು” ಎಂದು ಕರೆ ಕೊಟ್ಟರು.

ನಾನು ಕಾಲೇಜು ವಿದ್ಯಾರ್ಥಿಯಾಗಿದ್ದಾಗ ರಾಜಕೀಯವನ್ನು ಅರ್ಥ ಮಾಡಿಕೊಳ್ಳಲು ಆರಂಭಿಸಿದೆ. ಗುಜರಾತ್‌ನ ರಾಜಕೀಯ ವ್ಯವಸ್ಥೆಯು ದೇಶದ ರಾಜಕೀಯದ ಬಗ್ಗೆ ಹೆಚ್ಚು ಅರ್ಥ ಮಾಡಿಸಿತು. 2014ರಿಂದ ರಾಜಕೀಯ ವ್ಯವಸ್ಥೆಯ ಮೇಲೆ ಕೋಪ ಶುರುವಾಯಿತು. ಅದರೆ, ಕೋಪದಿಂದ ಬಿಜೆಪಿ, ಆರ್‌ಎಸ್‌ಎಸ್‌ಅನ್ನು ಮಣಿಸಲು ಸಾಧ್ಯವಿಲ್ಲ ಎಂಬುವುದನ್ನು ಗ್ರಹಿಸಿದೆ ಎಂದು ತಿಳಿಸಿದರು.

“ಕಾಂಗ್ರೆಸ್ ಮತ್ತು ಬಿಜೆಪಿಯ ಸಿದ್ದಾಂತಗಳು ಏನೆಂದು ತಿಳಿದುಕೊಳ್ಳಬಹುದು. ಕಾಂಗ್ರೆಸ್‌ನಲ್ಲಿ ಸಮಾನತೆ ಇದೆ. ಜನಪರ ಸಿದ್ದಾಂತ, ದೃಷ್ಟಿಕೋನ ಇದೆ. ಆದರೆ, ಬಿಜೆಪಿಯಲ್ಲಿ ಹಿಂದುತ್ವವಿದೆ, ಸಮಾನತೆ ಇಲ್ಲ. ಕಾಂಗ್ರೆಸ್ ಅಂದರೆ ಅದು ಒಂದು ಪಕ್ಷ ಅಲ್ಲ, ಅದೊಂದು ಚಳುವಳಿ. ಕಾಂಗ್ರೆಸ್ ಎಂಬ ಪದದ ಅರ್ಥವೇ ಒಳಗೊಳ್ಳುವಿಕೆ. ಚುನಾವಣೆ ಗೆಲ್ಲಲು ಬಿಜೆಪಿ ಮುಸ್ಲಿಮರನ್ನು ದ್ವೇಷ ಮಾಡುತ್ತದೆ. ಆದರೆ, ಬಿಜೆಪಿಯ ಪ್ರಮುಖ ಟಾರ್ಗೆಟ್ ಇರುವುದು ದಲಿತರು, ಸಂವಿಧಾನ” ಎಂದು ಹೇಳಿದರು.

ಇದನ್ನೂ ಓದಿ : ಲೋಕಸಭಾ ಚುನಾವಣೆಯ ಗೆಲವು ಸೋಲಿನಲ್ಲಿ ದಲಿತರು ಮತ್ತು ಹಿಂದುಳಿದವರ ಪಾತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...