Homeಮುಖಪುಟಗಾಜಾದಿಂದ ತೆರಳದಿದ್ದರೆ ಭಯೋತ್ಪಾದಕರೆಂದು ಪರಿಗಣಿಸಲಾಗುವುದು: ಪ್ಯಾಲೆಸ್ತೀನಿಯರಿಗೆ ಇಸ್ರೇಲ್ ಎಚ್ಚರಿಕೆ

ಗಾಜಾದಿಂದ ತೆರಳದಿದ್ದರೆ ಭಯೋತ್ಪಾದಕರೆಂದು ಪರಿಗಣಿಸಲಾಗುವುದು: ಪ್ಯಾಲೆಸ್ತೀನಿಯರಿಗೆ ಇಸ್ರೇಲ್ ಎಚ್ಚರಿಕೆ

- Advertisement -
- Advertisement -

ಇಸ್ರೇಲ್-ಹಮಾಸ್‌ನ ನಡುವಿನ ಯುದ್ಧ ಮೂರನೇ ವಾರಕ್ಕೆ ಕಾಲಿಟ್ಟಿದೆ. ಉತ್ತರ ಗಾಜಾದ ಮೇಲೆ ಆಕ್ರಮಣ ಮಾಡುವ ಮುಂಚಿತವಾಗಿ ಇಸ್ರೇಲ್, ದಾಳಿಗಳನ್ನು ತೀವ್ರಗೊಳಿಸುವುದಾಗಿ ಹೇಳಿಕೊಂಡಿದೆ. ರಾತ್ರಿಯಿಡೀ ಗಾಜಾದ ಮೇಲೆ ಇಸ್ರೇಲ್ ಭಾರಿ ಬಾಂಬ್ ಸ್ಫೋಟಿಸಿತು.

ಪ್ಯಾಲೆಸ್ತೀನಿಯನ್ನರಿಗೆ ಉತ್ತರ ಗಾಜಾದಿಂದ ದಕ್ಷಿಣಕ್ಕೆ ತೆರಳುವಂತೆ ಇಸ್ರೇಲ್​ ತುರ್ತು ಎಚ್ಚರಿಕೆ ನೀಡಿದೆ. ಒಂದೊಮ್ಮೆ ಹೋಗದಿದ್ದರೆ ಅಂಥವರನ್ನು ನಾವು ಉಗ್ರರೆಂದು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ. ಗಾಜಾದ ಉತ್ತರ ಭಾಗದಲ್ಲಿರುವುದು ನಿಮ್ಮ ಜೀವಕ್ಕೆ ಅಪಾಯವನ್ನುಂಟು ಮಾಡಲಿದೆ, ನಿಮಗೆ ಈಗಾಗಲೇ ದಕ್ಷಿಣಕ್ಕೆ ತೆರಳುವಂತೆ ನಾವು ಕೇಳಿಕೊಂಡಿದ್ದಾಗಿದೆ. ಇನ್ನೂ ನೀವು ಈ ಜಾಗವನ್ನು ಬಿಟ್ಟು ಹೋಗಿಲ್ಲ ಎಂದಾದರೆ ನಿಮ್ಮನ್ನು ಉಗ್ರರೆಂದು ಪರಿಗಣಿಸಲಾಗುತ್ತದೆ ಎಂದು ಇಸ್ರೇಲ್ ಹೇಳಿದೆ.

ಇಸ್ರೇಲ್​ ಇಂದು ಬೆಳಗ್ಗೆ ಗಾಜಾದ ಮಸೀದಿಯೊಂದರ ಮೇಲೆ ವೈಮಾನಿಕ ದಾಳಿ ನಡೆಸಿದೆ. ಗಾಜಾದ ವೆಸ್ಟ್​ ಬ್ಯಾಂಕ್​ನ ಜೆನಿನ್ ನಗರದಲ್ಲಿರುವ ಅಲ್​-ಅನ್ಸಾರ್ ಮಸೀದಿ ಸಂಕೀರ್ಣದಲ್ಲಿರುವ ಭಯೋತ್ಪಾದಕ ಸಂಘಟನೆ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದ್ ಕಮಾಂಡ್ ಸೆಂಟರ್ ಮೇಲೆ ಇಸ್ರೇಲಿ ಸೇನೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ವೈದ್ಯರನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿದೆ.

ಆದರೆ, ಇದು ಇನ್ನೂ ದೃಢಪಟ್ಟಿಲ್ಲ. ಇದಕ್ಕೂ ಮುನ್ನ ನೂರ್ ಶಮ್ಸ್ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲ್ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಮಕ್ಕಳು ಸೇರಿದಂತೆ 13 ಪ್ಯಾಲೆಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದರು. ಗಾಜಾ ನಗರದ ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣ ಗಾಜಾದ ಕಡೆಗೆ ವಲಸೆ ಹೋಗುವಂತೆ ಇಸ್ರೇಲ್ ಕೇಳಿಕೊಂಡಿತ್ತು. ಹಮಾಸ್ ಗುಂಪು ಇಬ್ಬರು ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮತ್ತೊಮ್ಮೆ ಗಾಜಾವನ್ನು ವಶಪಡಿಸಿಕೊಳ್ಳುವವರೆಗೆ ಯುದ್ಧವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 7ರಂದು ಗಾಜಾದ ನೆಲದ ಮೇಲೆ ಇಸ್ರೇಲ್ ಆಕ್ರಮಣ ಆರಂಭವಾಯಿತು. ಟ್ಯಾಂಕ್‌ಗಳು ಮತ್ತು ಹತ್ತಾರು ಸಾವಿರ ಸೈನಿಕರು ಗಡಿಯಲ್ಲಿ ಜಮಾವಣೆಗೊಂಡರು.

ಅಂದಾಜು 7,00,000 ಜನರು ಈಗಾಗಲೇ ಪಲಾಯನ ಮಾಡಿದ್ದಾರೆ. ಆದರೆ ಇನ್ನೂ ಅನೇಕ ಜನರು ಅಲ್ಲಿಯೇ ಉಳಿದಿದ್ದಾರೆ. ಇದು ನಾಗರಿಕ ಸಾವುನೋವುಗಳಿಗೆ ಕಾರಣವಾಗಿದೆ.

ಹಮಾಸ್‌ನ ಮೂಲಸೌಕರ್ಯ ಮತ್ತು ಭೂಗತ ಸುರಂಗ ವ್ಯವಸ್ಥೆಯು ಗಾಜಾ ನಗರದಲ್ಲಿ ಕೇಂದ್ರೀಕೃತವಾಗಿದೆ. ಅಲ್ಲಿ ಮುಂದಿನ ಹಂತದ ಆಕ್ರಮಣವು ಭೀಕರವಾಗಿರಲಿದೆ ಎಂದು ಇಸ್ರೇಲಿ ಮಿಲಿಟರಿ ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 117 ಮಕ್ಕಳು ಸೇರಿ 266 ಫೆಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...