Homeಮುಖಪುಟಗಾಜಾದಿಂದ ತೆರಳದಿದ್ದರೆ ಭಯೋತ್ಪಾದಕರೆಂದು ಪರಿಗಣಿಸಲಾಗುವುದು: ಪ್ಯಾಲೆಸ್ತೀನಿಯರಿಗೆ ಇಸ್ರೇಲ್ ಎಚ್ಚರಿಕೆ

ಗಾಜಾದಿಂದ ತೆರಳದಿದ್ದರೆ ಭಯೋತ್ಪಾದಕರೆಂದು ಪರಿಗಣಿಸಲಾಗುವುದು: ಪ್ಯಾಲೆಸ್ತೀನಿಯರಿಗೆ ಇಸ್ರೇಲ್ ಎಚ್ಚರಿಕೆ

- Advertisement -
- Advertisement -

ಇಸ್ರೇಲ್-ಹಮಾಸ್‌ನ ನಡುವಿನ ಯುದ್ಧ ಮೂರನೇ ವಾರಕ್ಕೆ ಕಾಲಿಟ್ಟಿದೆ. ಉತ್ತರ ಗಾಜಾದ ಮೇಲೆ ಆಕ್ರಮಣ ಮಾಡುವ ಮುಂಚಿತವಾಗಿ ಇಸ್ರೇಲ್, ದಾಳಿಗಳನ್ನು ತೀವ್ರಗೊಳಿಸುವುದಾಗಿ ಹೇಳಿಕೊಂಡಿದೆ. ರಾತ್ರಿಯಿಡೀ ಗಾಜಾದ ಮೇಲೆ ಇಸ್ರೇಲ್ ಭಾರಿ ಬಾಂಬ್ ಸ್ಫೋಟಿಸಿತು.

ಪ್ಯಾಲೆಸ್ತೀನಿಯನ್ನರಿಗೆ ಉತ್ತರ ಗಾಜಾದಿಂದ ದಕ್ಷಿಣಕ್ಕೆ ತೆರಳುವಂತೆ ಇಸ್ರೇಲ್​ ತುರ್ತು ಎಚ್ಚರಿಕೆ ನೀಡಿದೆ. ಒಂದೊಮ್ಮೆ ಹೋಗದಿದ್ದರೆ ಅಂಥವರನ್ನು ನಾವು ಉಗ್ರರೆಂದು ಪರಿಗಣಿಸಬೇಕಾಗುತ್ತದೆ ಎಂದು ಹೇಳಿದೆ. ಗಾಜಾದ ಉತ್ತರ ಭಾಗದಲ್ಲಿರುವುದು ನಿಮ್ಮ ಜೀವಕ್ಕೆ ಅಪಾಯವನ್ನುಂಟು ಮಾಡಲಿದೆ, ನಿಮಗೆ ಈಗಾಗಲೇ ದಕ್ಷಿಣಕ್ಕೆ ತೆರಳುವಂತೆ ನಾವು ಕೇಳಿಕೊಂಡಿದ್ದಾಗಿದೆ. ಇನ್ನೂ ನೀವು ಈ ಜಾಗವನ್ನು ಬಿಟ್ಟು ಹೋಗಿಲ್ಲ ಎಂದಾದರೆ ನಿಮ್ಮನ್ನು ಉಗ್ರರೆಂದು ಪರಿಗಣಿಸಲಾಗುತ್ತದೆ ಎಂದು ಇಸ್ರೇಲ್ ಹೇಳಿದೆ.

ಇಸ್ರೇಲ್​ ಇಂದು ಬೆಳಗ್ಗೆ ಗಾಜಾದ ಮಸೀದಿಯೊಂದರ ಮೇಲೆ ವೈಮಾನಿಕ ದಾಳಿ ನಡೆಸಿದೆ. ಗಾಜಾದ ವೆಸ್ಟ್​ ಬ್ಯಾಂಕ್​ನ ಜೆನಿನ್ ನಗರದಲ್ಲಿರುವ ಅಲ್​-ಅನ್ಸಾರ್ ಮಸೀದಿ ಸಂಕೀರ್ಣದಲ್ಲಿರುವ ಭಯೋತ್ಪಾದಕ ಸಂಘಟನೆ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದ್ ಕಮಾಂಡ್ ಸೆಂಟರ್ ಮೇಲೆ ಇಸ್ರೇಲಿ ಸೇನೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ವೈದ್ಯರನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿದೆ.

ಆದರೆ, ಇದು ಇನ್ನೂ ದೃಢಪಟ್ಟಿಲ್ಲ. ಇದಕ್ಕೂ ಮುನ್ನ ನೂರ್ ಶಮ್ಸ್ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲ್ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಮಕ್ಕಳು ಸೇರಿದಂತೆ 13 ಪ್ಯಾಲೆಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದರು. ಗಾಜಾ ನಗರದ ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣ ಗಾಜಾದ ಕಡೆಗೆ ವಲಸೆ ಹೋಗುವಂತೆ ಇಸ್ರೇಲ್ ಕೇಳಿಕೊಂಡಿತ್ತು. ಹಮಾಸ್ ಗುಂಪು ಇಬ್ಬರು ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮತ್ತೊಮ್ಮೆ ಗಾಜಾವನ್ನು ವಶಪಡಿಸಿಕೊಳ್ಳುವವರೆಗೆ ಯುದ್ಧವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 7ರಂದು ಗಾಜಾದ ನೆಲದ ಮೇಲೆ ಇಸ್ರೇಲ್ ಆಕ್ರಮಣ ಆರಂಭವಾಯಿತು. ಟ್ಯಾಂಕ್‌ಗಳು ಮತ್ತು ಹತ್ತಾರು ಸಾವಿರ ಸೈನಿಕರು ಗಡಿಯಲ್ಲಿ ಜಮಾವಣೆಗೊಂಡರು.

ಅಂದಾಜು 7,00,000 ಜನರು ಈಗಾಗಲೇ ಪಲಾಯನ ಮಾಡಿದ್ದಾರೆ. ಆದರೆ ಇನ್ನೂ ಅನೇಕ ಜನರು ಅಲ್ಲಿಯೇ ಉಳಿದಿದ್ದಾರೆ. ಇದು ನಾಗರಿಕ ಸಾವುನೋವುಗಳಿಗೆ ಕಾರಣವಾಗಿದೆ.

ಹಮಾಸ್‌ನ ಮೂಲಸೌಕರ್ಯ ಮತ್ತು ಭೂಗತ ಸುರಂಗ ವ್ಯವಸ್ಥೆಯು ಗಾಜಾ ನಗರದಲ್ಲಿ ಕೇಂದ್ರೀಕೃತವಾಗಿದೆ. ಅಲ್ಲಿ ಮುಂದಿನ ಹಂತದ ಆಕ್ರಮಣವು ಭೀಕರವಾಗಿರಲಿದೆ ಎಂದು ಇಸ್ರೇಲಿ ಮಿಲಿಟರಿ ಅಧಿಕಾರಿಗಳು ಹೇಳುತ್ತಾರೆ.

ಇದನ್ನೂ ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 117 ಮಕ್ಕಳು ಸೇರಿ 266 ಫೆಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...