Homeಅಂಕಣಗಳುಹಿಂಗೇ ಹೊರಟರ ಖಾಸಗಿ ಕಂಪನಿ ಸಿಈಓ ಬಜೆಟ್ ಮಂಡಿಸುವ ದಿನವೂ ದೂರವಿಲ್ಲ

ಹಿಂಗೇ ಹೊರಟರ ಖಾಸಗಿ ಕಂಪನಿ ಸಿಈಓ ಬಜೆಟ್ ಮಂಡಿಸುವ ದಿನವೂ ದೂರವಿಲ್ಲ

- Advertisement -
- Advertisement -

‘ಸರಕಾರ’ ಎನ್ನುವುದು ಪರ್ಶಿಯನ್ ಭಾಷೆ ಪದ. ಅದರ ಅನೇಕ ಅರ್ಥಗಳಲ್ಲಿ ಒಂದು ‘ಕೆಲಸದಲ್ಲಿ ಇರುವುದು’ ಅಂತ. ಸರಕಾರ ಅನ್ನುವುದೇ ಕೆಲಸ ಅನ್ನುವುದಕ್ಕ ಸಮಾನಾರ್ಥಕ ಪದ ಅನ್ನೋದಾದರ, ಸರ್ಕಾರದ ಕೆಲಸ ಏನು?

ಈ ಸರಕಾರದ ಕೆಲಸ ಏನು ಎನ್ನುವ ಸರಳವಾದ ಪ್ರಶ್ನೆ ಇಡೀ ಜಗತ್ತನ್ನು ಇಬ್ಭಾಗ ಮಾಡಿಬಿಟ್ಟಿದೆ.
ಕೆಲವರು ಸರಕಾರಕ್ಕ ಕೆಲಸನ ಇಲ್ಲ ಅನ್ನೋರು. ಇನ್ನೂ ಕೆಲವರು ಎಲ್ಲವೂ ಸರ್ಕಾರದ ಕೆಲಸ ಅನ್ನೋರು. ಅವರ ನಡುವೆ ಬಹಳ ದೊಡ್ಡ ಸಂಖ್ಯೆಯಲ್ಲಿ ಮಧ್ಯಮ ಮಾರ್ಗಿಗಳು. ಸರ್ಕಾರದ ಕೆಲಸ ಏನು ಅನ್ನೋದು ನಮಗ ಗೊತ್ತಿಲ್ಲ. ಅದು ಏನು ಅಂತ ತಿಳಕೋಳೋದು ಬೇಕಾಗಿಲ್ಲ, ಅಂತ ಇವರು ಗಟ್ಟಿಯಾಗಿ ನಂಬತಾರ. ಮಜಾ ಏನು ಅಂದ್ರ ಈ ರೀತಿಯ ಜನಗಳಿಗೆ ಅತಿ ಕಠೋರವಾದ ರಾಜಕೀಯ ನಿಲುವು ಇರ್ತಾವ. ಯಾವುದನ್ನು ನಾವು ಸ್ಪಷ್ಟವಾಗಿ ತಿಳಕೊಂಡಿರೋದಿಲ್ಲವೋ ಅದರ ಬಗ್ಗೆ ಅಭಿಪ್ರಾಯ ಮಾತ್ರ ಗಟ್ಟಿಯಾಗಿ ರೂಪಿಸಿಕೊಂಡು ಬಿಟ್ಟಿರತೀವಿ.

ಯಥಾ ಪ್ರಜಾ ತಥಾ ರಾಜಾ ಅನ್ನುವ ಗಾದಿಮಾತಿನ ಹಂಗ, ನಾವು ಹೆಂಗ ಇರತೆವೋ, ನಮ್ಮನ್ನ ಆಳುವ ಧೀರರು ಹಂಗೆ ಇರ್ತಾರ. ಎಲ್ಲ ವಿಷಯದ ಬಗ್ಗೆ ನಾವು ಸರಿಯಾಗಿ ಓದಿ, ಕೇಳಿ, ಅರ್ಥಮಾಡಿಕೊಂಡರ, ನಮಗೆ ಅರ್ಥ ಆಗಲಾರದ ವಿಷಯದ ಬಗ್ಗೆ ಪ್ರಶ್ನೆ ಮಾಡಿದರ ಅವರು ಸರಿಯಾಗಿ ಎಚ್ಚರದಿಂದ ಇರ್ತಾರ. ಅದನ್ನ ಬಿಟ್ಟು ನಮಗ ಏನು ಸರಿಯಾಗಿ ಗೊತ್ತಿಲ್ಲ. ಆದರೆ ನಾವು ಅವರ ಪರವಾಗಿ ಇದ್ದೇವೆ. ನಾವು ಅವರನ್ನ ಪ್ರಶ್ನೆ ಮಾಡೋದಿಲ್ಲ. ಯಾಕ ಅಂದ್ರ ಅವರು ತಪ್ಪು ಮಾಡಲಿಕ್ಕೆ ಸಾಧ್ಯ ಇಲ್ಲ ಅನ್ನುವ ಪ್ರಶ್ನಾತೀತ ಮಾತೃ ಪ್ರೇಮದ ನಾಗರಿಕರು ಇದ್ದರೆ, ಸರಕಾರ ಎನ್ನುವುದು ಕೈಕಯಿಯಂತಹ ತಾಯಿ ಆಗಿ ಬಿಡುತ್ತದೆ. ತನಗೆ ಓಟು ಕೊಟ್ಟ ಹಲವರನ್ನು ಮರೆತು ನೋಟು ಕೊಟ್ಟ ಕೆಲವರನ್ನು ಮಾತ್ರ ಪೋಷಿಸುತ್ತದೆ. ಆ ನೋಟು ಕೊಟ್ಟ ಕೆಲವರು ರಾಮನ ತಮ್ಮ ಭರತನ ಹಂಗ ಇದ್ದರ ಅಡ್ಡಿಯಿಲ್ಲ. ಆದರೆ ಅವರು ರಾವಣನ ತಂಗಿ ಶೂರ್ಪನಖಿ ಹಂಗ ಚೂಪಾದ ಉಗುರಿನಿಂದ ಬಡವರ ರಕ್ತ ಹೀರುವವರು ಇರ್ತಾರ.

ಮೊನ್ನೆ ನಮ್ಮ ಉಳ್ಳಿ ಪಥ್ಯದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಆಯವ್ಯಯ ಪತ್ರ ಭಾರತೀಯ ಕಂಪನಿ ವಿದೇಶಿ ಸಾಮಾನು ಬಳಸಿ ತಯಾರು ಮಾಡಿದ ಪಾಟಿ ಕಂಪ್ಯೂಟರ್‌ದೊಳಗ (ಟ್ಯಾಬ್ಲೆಟ್) ಓದಿದರು. ಹೆಸರಿನೊಳಗ ಸೀತಾ ಹಾಗೂ ರಾಮ್ ಎರಡೂ ಇರುವ ಅವರು ಜನರನ್ನು ಮಾತ್ರ ಅಯೋಧ್ಯಾ ನಾಗರಿಕರಂತೆ ನೋಡಲಿಲ್ಲ.

ನನ್ನ ಭಾಷಣದ ಮೂಲಮಂತ್ರ ಕನಿಷ್ಠ ಸರಕಾರ, ಗರಿಷ್ಟ ಆಡಳಿತ ಅಂತ ಘೋಷಿಸಿದ ಅವರು ಆ ಗುರಿ ಮುಟ್ಟುವುದು ಹೇಗೆ ಅಂತ ಬಿಡಿಸಿ ಹೇಳಲಿಲ್ಲ. ಆಡಳಿತದಲ್ಲಿ ಸರ್ಕಾರದ ಪಾಲು ಕಮ್ಮಿ ಆಗುತ್ತಾ ಹೋದರೆ ಗರಿಷ್ಟ ಆಡಳಿತ ಸಾಧ್ಯ ಆಗೋದು ಹೇಗೆ ಅನ್ನುವುದು ಅವರು ಹೇಳಲಿಲ್ಲ, ನಾವು ಕೇಳಲಿಲ್ಲ.

ಉನ್ನತ ಶಿಕ್ಷಣದ ಸ್ಥಿತಿ ಸುಧಾರಿಸುವ ಯೋಜನೆ ಒಳಗೆ ಖಾಸಗಿ ಬಂಡವಾಳ ತಂತ್ರ ಕುಶಲತೆಯು ಭಾಗ ವಹಿಸಲಿದೆಯಂತೆ. ಅಂದ್ರ ಸರಕಾರ ಕೈಚೆಲ್ಲಿ ಖಾಸಗಿಯವರಿಗೆ ದಾರಿ ಮಾಡಿಕೊಟ್ಟದ.

ಪ್ರಾಥಮಿಕ ಶಿಕ್ಷಣದೊಳಗ ಸರ್ಕಾರದ ನಿಯಂತ್ರಣ ಹಂತಹಂತವಾಗಿ ಕಮ್ಮಿಯಾಗಿ ಖಾಸಗಿಯವರ ಭಾಗಿದಾರಿಕೆ ಹೆಚ್ಚು ಆಗಲಿಕ್ಕೆ ಶುರು ಆಗತದ. ಹಿಂದೆ ಈ ಕೆಲಸ ಸಣ್ಣಗ ಶುರು ಆಗಿತ್ತು. ಇನ್ನು ಮುಂದ ಇದು ಗತಿ ಪಡತಿದ. ಅದಕ್ಕ ಸದ್ಗತಿ ಸಿಗತದೋ ಇಲ್ಲೋ.

ಸಚಿವರ ಪ್ರಕಾರ ಅಂಕೀಕೃತ ಆರೋಗ್ಯ ವಾಗ್ದಾನ ಯೋಜನೆ (ಡಿಜಿಟಲ್ ಹೆಲ್ತ್ ಅಷ್ಯೂರೆನ್ಸ್) ಪ್ರಕಾರ ಎಲ್ಲ 130 ಕೋಟಿ ಭಾರತೀಯ ರಹವಾಸಿಗಳ ಆರೋಗ್ಯ ಸೂಚಕಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಆಮೇಲೆ ಅದರ ಪ್ರಕಾರ ನಿಮ್ಮ ರೋಗದ ಲಕ್ಷಣ, ಸ್ಥಿತಿ, ರೋಗ ನಿರೋಧಕ ಶಕ್ತಿ, ಅದಕ್ಕೆ ಚಿಕಿತ್ಸೆ ಎಲ್ಲಾ. ಅದನ್ನು ಮಾಡೋರು ಯಾರು? ಖಾಸಗಿ ಕಂಪನಿಯವರು. ಅವರು ಬರೆ ನಿಮ್ಮ ರೋಗ ಚೆಕ್ ಮಾಡೋದಿಲ್ಲ. ನಿಮ್ಮ ಹಾಗೂ ನಿಮ್ಮ ಮನೆಯವರ, ನಿಮ್ಮ ಕಂಪನಿ ಉದ್ಯೋಗಿಗಳ, ಎಲ್ಲರ ಮಾಹಿತಿ ಇಟ್ಟುಕೊಂಡು ನಿಮ್ಮನ್ನ ಆಟ ಅಡಿಸತಾರ. ಅದನ್ನ ವಿಮಾ ಕಂಪನಿಗೆ ಮಾರಾಟ ಮಾಡಿಬಿಡತಾರ. ಅವರು ನಿಮ್ಮ ಆರೋಗ್ಯದ ಸ್ಥಿತಿ ಗೊತ್ತಿದ್ದರಿಂದ ನಿಮಗೆ ವಿಮೆ ಕೊಡಲಿಕ್ಕೆ ಇಲ್ಲೆ, ಅಥವಾ ಅತಿ ಹೆಚ್ಚಿನ ವೆಚ್ಚದ ಪಾಲಿಸಿ ಕೊಡಬಹುದು. ಎಲ್ಲ ಚಿಕಿತ್ಸೆ ಕೊಡಲಿಕ್ಕೆ ಮಾತ್ರ ಇರಲಿಕ್ಕಿಲ್ಲ.

ಕೋವಿಡ್ ಮಾರಿಯ ಕಾಲದಾಗ ಖಾಸಗಿ ಆಸ್ಪತ್ರೆ, ಖಾಸಗಿ ಶಾಲೆ ಹಾಗೂ ಖಾಸಗಿ ಮಾಧ್ಯಮಗಳು ಆಡಿದ ಆಟ ನೋಡಿದ ಮೇಲೆ ಸಹಿತ ಎಲ್ಲಾ ರೋಗಕು ಖಾಸಗಿ ಕ್ಷೇತ್ರ ರಾಮ ಬಾಣ ಅಲ್ಲ ಅನ್ನುವುದು ನಮಗ ಇನ್ನೂ ಖಾತರಿ ಯಾಗಿಲ್ಲ ಅಂತ ಅನ್ನಿಸತದ.

ಇನ್ನ ಉದ್ಯೋಗ ಸೃಷ್ಟಿ ಸಲುವಾಗಿ ಸರಕಾರ ಹಮ್ಮಿಕೊಂಡಿರುವ ಅನೇಕ ಯೋಜನೆಗಳಿಗೆ ಖಾಸಗಿಯವರೇ ಇಂಜಿನ್, ಗಾಲಿ ಹಾಗೂ ಇಂಧನ. ಸರಕಾರ ಯಾವುದೇ ಉದ್ಯೋಗ ಸೃಷ್ಟಿ ಮಾಡೋದಿಲ್ಲ. ಇರುವ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡೋದರಿಂದ ಜನರಿಗೆ ಒಳ್ಳೆಯದು ಆಗತದ. ಎರಡು ಬ್ಯಾಂಕು ಹಾಗೂ ಎಲ್‌ಐಸಿಗಳನ್ನು ಖಾಸಗಿಗೆ ಮಾರಾಟ ಮಾಡಿದರ ಎಲ್ಲ ಸಮಸ್ಯೆ ಪರಿಹಾರ ಆಗತದ ಅಂತ ಸಚಿವರು ಹೇಳಿದ್ದಾರ. ಅದಕ್ಕ ಸರ್ಕಾರಿ-ಖಾಸಗಿ ಸಹ ಭಾಗಿತ್ವದ ಮೊದಲ ಮಾದರಿಯಾದ ಮಾರುತಿ ಕಂಪನಿಯ ಹಿಂದಿನ ಮುಖ್ಯಸ್ಥ ಭಾರ್ಗವ ಅವರು ಒಪ್ಪಿಗೆ ಸೂಚಿಸಿಬಿಟ್ಟಾರ. ಮಾರುತಿ ಕಂಪನಿ ಸರಕಾರದಿಂದ ಅನೇಕ ಬಾರಿ ಸಹಾಯ ಪಡೆಯಿತು ಅನ್ನೋದನ್ನ ಮರ್ತುಬಿಟ್ಟಾರ.

ಸರಕಾರ ಮನಿ ಕಟ್ಟುವುದಿಲ್ಲ. ಆ ಕೆಲಸ ಮಾಡುವ ಖಾಸಗಿಯವರಿಗೆ ಸಹಾಯ ಮಾಡತದ ಅಂತ ಸಚಿವರು ಹೇಳಿಬಿಟ್ಟಾರ. ಅವರಿಗೆ ಸುಲಭ ಸಾಲ, ಕಟ್ಟು ಬಾಕಿ ಸಾಲಗಾರರ ಕಡೆ ಮೃದು ಧೋರಣೆ, ಈ ರೀತಿಯ ಡೆವಲಪರ್‌ಗಳ ಕೈಗೆ ಸಿಕ್ಕುವ ಬಡಪಾಯಿ ಮಧ್ಯಮ ವರ್ಗದವರಿಗೆ ಎರಡು ಶೇಕಡಾ ಬಡ್ಡಿ ಕಮ್ಮಿ, ಇತ್ಯಾದಿ ಘೋಷಣೆ ಮಾಡಿದ್ದಾರೆ.

ಕುಡಿಯುವ ನೀರು ಖಾಸಗಿಯವರಿಂದ ಪಡೆಯಬೇಕು. ಅದನ್ನು ಸರಕಾರ ಕೊಡಲಿಕ್ಕೆ ಆಗೋದಿಲ್ಲ. ಅದು ಸರ್ಕಾರದ ಕೆಲಸ ಅಲ್ಲ. ಅದಕ್ಕೆ ಜಲವೆ ಜೀವನ ಅನ್ನುವ ಯೋಜನೆ ಒಳಗ ಖಾಸಗಿ ಕಂಪನಿಗಳು ನೀರು ಕೊಡತಾವ. ಅವರಿಗೆ ಅನುಕೂಲ ಆಗು ಹಂಗ ಸರ್ಕಾರಿ ಅಧಿಕಾರಿಗಳು ನಡೆದುಕೊಳ್ಳಬೇಕು. ಆಡಳಿತ ಪಕ್ಷದ ಮಾಲೀಕರೆ ಸರ್ಕಾರಿ ಅಧಿಕಾರಿಗಳ ಮಾಲೀಕರು, ಅಷ್ಟೂ ತಿಳಿಯದೇ?

ಎಲ್ಲಾ ಹೋಗಲಿ, ಮುಂದಿನ ವರ್ಷದ ಜನಗಣತಿ ಸಹಿತ ಖಾಸಗಿಯವರು ಮಾಡೋರು. ಹಂಗಾರ ಇನ್ನೇನು ಉಳಿಯಿತು? ಶಾಸನ ಸಭೆ, ಚುನಾವಣೆ, ಕಾನೂನು ಮತ್ತು ಸುವ್ಯವಸ್ಥೆ, ದೇಶ ರಕ್ಷಣೆ ಹಾಗೂ ಯುದ್ಧ ಮಾಡುವುದು, ನಾಣ್ಯ ಟಂಕಿಸುವುದು ಇತ್ಯಾದಿ ಸಣ್ಣ ಪುಟ್ಟ ಕೆಲಸಗಳು. ಮುಂದಿನ ಸಾರಿ ಖಾಸಗಿ ವಿಶ್ವವಿದ್ಯಾಲಯದಿಂದ ಎಂಬಿಎ ಮಾಡಿದ ಖಾಸಗಿ ಕಂಪನಿ ಸಿಈಒ ಒಬ್ಬರು ನಮ್ಮ ಹಣಕಾಸು ಸಚಿವರ ಬದಲಿಗೆ ಬಜೆಟ್ ಮಂಡಿಸಿದರೂ ಮಂಡಿಸಬಹುದು. ಏನೇನೋ ಆಗುತ್ತಿರುವಾಗ ಇದು ಆದರೆ ಆಶ್ಚರ್ಯ ಏನು?


ಇದನ್ನೂ ಓದಿ: ಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...