Homeಅಂಕಣಗಳುಹಿಂಗೇ ಹೊರಟರ ಖಾಸಗಿ ಕಂಪನಿ ಸಿಈಓ ಬಜೆಟ್ ಮಂಡಿಸುವ ದಿನವೂ ದೂರವಿಲ್ಲ

ಹಿಂಗೇ ಹೊರಟರ ಖಾಸಗಿ ಕಂಪನಿ ಸಿಈಓ ಬಜೆಟ್ ಮಂಡಿಸುವ ದಿನವೂ ದೂರವಿಲ್ಲ

- Advertisement -
- Advertisement -

‘ಸರಕಾರ’ ಎನ್ನುವುದು ಪರ್ಶಿಯನ್ ಭಾಷೆ ಪದ. ಅದರ ಅನೇಕ ಅರ್ಥಗಳಲ್ಲಿ ಒಂದು ‘ಕೆಲಸದಲ್ಲಿ ಇರುವುದು’ ಅಂತ. ಸರಕಾರ ಅನ್ನುವುದೇ ಕೆಲಸ ಅನ್ನುವುದಕ್ಕ ಸಮಾನಾರ್ಥಕ ಪದ ಅನ್ನೋದಾದರ, ಸರ್ಕಾರದ ಕೆಲಸ ಏನು?

ಈ ಸರಕಾರದ ಕೆಲಸ ಏನು ಎನ್ನುವ ಸರಳವಾದ ಪ್ರಶ್ನೆ ಇಡೀ ಜಗತ್ತನ್ನು ಇಬ್ಭಾಗ ಮಾಡಿಬಿಟ್ಟಿದೆ.
ಕೆಲವರು ಸರಕಾರಕ್ಕ ಕೆಲಸನ ಇಲ್ಲ ಅನ್ನೋರು. ಇನ್ನೂ ಕೆಲವರು ಎಲ್ಲವೂ ಸರ್ಕಾರದ ಕೆಲಸ ಅನ್ನೋರು. ಅವರ ನಡುವೆ ಬಹಳ ದೊಡ್ಡ ಸಂಖ್ಯೆಯಲ್ಲಿ ಮಧ್ಯಮ ಮಾರ್ಗಿಗಳು. ಸರ್ಕಾರದ ಕೆಲಸ ಏನು ಅನ್ನೋದು ನಮಗ ಗೊತ್ತಿಲ್ಲ. ಅದು ಏನು ಅಂತ ತಿಳಕೋಳೋದು ಬೇಕಾಗಿಲ್ಲ, ಅಂತ ಇವರು ಗಟ್ಟಿಯಾಗಿ ನಂಬತಾರ. ಮಜಾ ಏನು ಅಂದ್ರ ಈ ರೀತಿಯ ಜನಗಳಿಗೆ ಅತಿ ಕಠೋರವಾದ ರಾಜಕೀಯ ನಿಲುವು ಇರ್ತಾವ. ಯಾವುದನ್ನು ನಾವು ಸ್ಪಷ್ಟವಾಗಿ ತಿಳಕೊಂಡಿರೋದಿಲ್ಲವೋ ಅದರ ಬಗ್ಗೆ ಅಭಿಪ್ರಾಯ ಮಾತ್ರ ಗಟ್ಟಿಯಾಗಿ ರೂಪಿಸಿಕೊಂಡು ಬಿಟ್ಟಿರತೀವಿ.

ಯಥಾ ಪ್ರಜಾ ತಥಾ ರಾಜಾ ಅನ್ನುವ ಗಾದಿಮಾತಿನ ಹಂಗ, ನಾವು ಹೆಂಗ ಇರತೆವೋ, ನಮ್ಮನ್ನ ಆಳುವ ಧೀರರು ಹಂಗೆ ಇರ್ತಾರ. ಎಲ್ಲ ವಿಷಯದ ಬಗ್ಗೆ ನಾವು ಸರಿಯಾಗಿ ಓದಿ, ಕೇಳಿ, ಅರ್ಥಮಾಡಿಕೊಂಡರ, ನಮಗೆ ಅರ್ಥ ಆಗಲಾರದ ವಿಷಯದ ಬಗ್ಗೆ ಪ್ರಶ್ನೆ ಮಾಡಿದರ ಅವರು ಸರಿಯಾಗಿ ಎಚ್ಚರದಿಂದ ಇರ್ತಾರ. ಅದನ್ನ ಬಿಟ್ಟು ನಮಗ ಏನು ಸರಿಯಾಗಿ ಗೊತ್ತಿಲ್ಲ. ಆದರೆ ನಾವು ಅವರ ಪರವಾಗಿ ಇದ್ದೇವೆ. ನಾವು ಅವರನ್ನ ಪ್ರಶ್ನೆ ಮಾಡೋದಿಲ್ಲ. ಯಾಕ ಅಂದ್ರ ಅವರು ತಪ್ಪು ಮಾಡಲಿಕ್ಕೆ ಸಾಧ್ಯ ಇಲ್ಲ ಅನ್ನುವ ಪ್ರಶ್ನಾತೀತ ಮಾತೃ ಪ್ರೇಮದ ನಾಗರಿಕರು ಇದ್ದರೆ, ಸರಕಾರ ಎನ್ನುವುದು ಕೈಕಯಿಯಂತಹ ತಾಯಿ ಆಗಿ ಬಿಡುತ್ತದೆ. ತನಗೆ ಓಟು ಕೊಟ್ಟ ಹಲವರನ್ನು ಮರೆತು ನೋಟು ಕೊಟ್ಟ ಕೆಲವರನ್ನು ಮಾತ್ರ ಪೋಷಿಸುತ್ತದೆ. ಆ ನೋಟು ಕೊಟ್ಟ ಕೆಲವರು ರಾಮನ ತಮ್ಮ ಭರತನ ಹಂಗ ಇದ್ದರ ಅಡ್ಡಿಯಿಲ್ಲ. ಆದರೆ ಅವರು ರಾವಣನ ತಂಗಿ ಶೂರ್ಪನಖಿ ಹಂಗ ಚೂಪಾದ ಉಗುರಿನಿಂದ ಬಡವರ ರಕ್ತ ಹೀರುವವರು ಇರ್ತಾರ.

ಮೊನ್ನೆ ನಮ್ಮ ಉಳ್ಳಿ ಪಥ್ಯದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಆಯವ್ಯಯ ಪತ್ರ ಭಾರತೀಯ ಕಂಪನಿ ವಿದೇಶಿ ಸಾಮಾನು ಬಳಸಿ ತಯಾರು ಮಾಡಿದ ಪಾಟಿ ಕಂಪ್ಯೂಟರ್‌ದೊಳಗ (ಟ್ಯಾಬ್ಲೆಟ್) ಓದಿದರು. ಹೆಸರಿನೊಳಗ ಸೀತಾ ಹಾಗೂ ರಾಮ್ ಎರಡೂ ಇರುವ ಅವರು ಜನರನ್ನು ಮಾತ್ರ ಅಯೋಧ್ಯಾ ನಾಗರಿಕರಂತೆ ನೋಡಲಿಲ್ಲ.

ನನ್ನ ಭಾಷಣದ ಮೂಲಮಂತ್ರ ಕನಿಷ್ಠ ಸರಕಾರ, ಗರಿಷ್ಟ ಆಡಳಿತ ಅಂತ ಘೋಷಿಸಿದ ಅವರು ಆ ಗುರಿ ಮುಟ್ಟುವುದು ಹೇಗೆ ಅಂತ ಬಿಡಿಸಿ ಹೇಳಲಿಲ್ಲ. ಆಡಳಿತದಲ್ಲಿ ಸರ್ಕಾರದ ಪಾಲು ಕಮ್ಮಿ ಆಗುತ್ತಾ ಹೋದರೆ ಗರಿಷ್ಟ ಆಡಳಿತ ಸಾಧ್ಯ ಆಗೋದು ಹೇಗೆ ಅನ್ನುವುದು ಅವರು ಹೇಳಲಿಲ್ಲ, ನಾವು ಕೇಳಲಿಲ್ಲ.

ಉನ್ನತ ಶಿಕ್ಷಣದ ಸ್ಥಿತಿ ಸುಧಾರಿಸುವ ಯೋಜನೆ ಒಳಗೆ ಖಾಸಗಿ ಬಂಡವಾಳ ತಂತ್ರ ಕುಶಲತೆಯು ಭಾಗ ವಹಿಸಲಿದೆಯಂತೆ. ಅಂದ್ರ ಸರಕಾರ ಕೈಚೆಲ್ಲಿ ಖಾಸಗಿಯವರಿಗೆ ದಾರಿ ಮಾಡಿಕೊಟ್ಟದ.

ಪ್ರಾಥಮಿಕ ಶಿಕ್ಷಣದೊಳಗ ಸರ್ಕಾರದ ನಿಯಂತ್ರಣ ಹಂತಹಂತವಾಗಿ ಕಮ್ಮಿಯಾಗಿ ಖಾಸಗಿಯವರ ಭಾಗಿದಾರಿಕೆ ಹೆಚ್ಚು ಆಗಲಿಕ್ಕೆ ಶುರು ಆಗತದ. ಹಿಂದೆ ಈ ಕೆಲಸ ಸಣ್ಣಗ ಶುರು ಆಗಿತ್ತು. ಇನ್ನು ಮುಂದ ಇದು ಗತಿ ಪಡತಿದ. ಅದಕ್ಕ ಸದ್ಗತಿ ಸಿಗತದೋ ಇಲ್ಲೋ.

ಸಚಿವರ ಪ್ರಕಾರ ಅಂಕೀಕೃತ ಆರೋಗ್ಯ ವಾಗ್ದಾನ ಯೋಜನೆ (ಡಿಜಿಟಲ್ ಹೆಲ್ತ್ ಅಷ್ಯೂರೆನ್ಸ್) ಪ್ರಕಾರ ಎಲ್ಲ 130 ಕೋಟಿ ಭಾರತೀಯ ರಹವಾಸಿಗಳ ಆರೋಗ್ಯ ಸೂಚಕಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಆಮೇಲೆ ಅದರ ಪ್ರಕಾರ ನಿಮ್ಮ ರೋಗದ ಲಕ್ಷಣ, ಸ್ಥಿತಿ, ರೋಗ ನಿರೋಧಕ ಶಕ್ತಿ, ಅದಕ್ಕೆ ಚಿಕಿತ್ಸೆ ಎಲ್ಲಾ. ಅದನ್ನು ಮಾಡೋರು ಯಾರು? ಖಾಸಗಿ ಕಂಪನಿಯವರು. ಅವರು ಬರೆ ನಿಮ್ಮ ರೋಗ ಚೆಕ್ ಮಾಡೋದಿಲ್ಲ. ನಿಮ್ಮ ಹಾಗೂ ನಿಮ್ಮ ಮನೆಯವರ, ನಿಮ್ಮ ಕಂಪನಿ ಉದ್ಯೋಗಿಗಳ, ಎಲ್ಲರ ಮಾಹಿತಿ ಇಟ್ಟುಕೊಂಡು ನಿಮ್ಮನ್ನ ಆಟ ಅಡಿಸತಾರ. ಅದನ್ನ ವಿಮಾ ಕಂಪನಿಗೆ ಮಾರಾಟ ಮಾಡಿಬಿಡತಾರ. ಅವರು ನಿಮ್ಮ ಆರೋಗ್ಯದ ಸ್ಥಿತಿ ಗೊತ್ತಿದ್ದರಿಂದ ನಿಮಗೆ ವಿಮೆ ಕೊಡಲಿಕ್ಕೆ ಇಲ್ಲೆ, ಅಥವಾ ಅತಿ ಹೆಚ್ಚಿನ ವೆಚ್ಚದ ಪಾಲಿಸಿ ಕೊಡಬಹುದು. ಎಲ್ಲ ಚಿಕಿತ್ಸೆ ಕೊಡಲಿಕ್ಕೆ ಮಾತ್ರ ಇರಲಿಕ್ಕಿಲ್ಲ.

ಕೋವಿಡ್ ಮಾರಿಯ ಕಾಲದಾಗ ಖಾಸಗಿ ಆಸ್ಪತ್ರೆ, ಖಾಸಗಿ ಶಾಲೆ ಹಾಗೂ ಖಾಸಗಿ ಮಾಧ್ಯಮಗಳು ಆಡಿದ ಆಟ ನೋಡಿದ ಮೇಲೆ ಸಹಿತ ಎಲ್ಲಾ ರೋಗಕು ಖಾಸಗಿ ಕ್ಷೇತ್ರ ರಾಮ ಬಾಣ ಅಲ್ಲ ಅನ್ನುವುದು ನಮಗ ಇನ್ನೂ ಖಾತರಿ ಯಾಗಿಲ್ಲ ಅಂತ ಅನ್ನಿಸತದ.

ಇನ್ನ ಉದ್ಯೋಗ ಸೃಷ್ಟಿ ಸಲುವಾಗಿ ಸರಕಾರ ಹಮ್ಮಿಕೊಂಡಿರುವ ಅನೇಕ ಯೋಜನೆಗಳಿಗೆ ಖಾಸಗಿಯವರೇ ಇಂಜಿನ್, ಗಾಲಿ ಹಾಗೂ ಇಂಧನ. ಸರಕಾರ ಯಾವುದೇ ಉದ್ಯೋಗ ಸೃಷ್ಟಿ ಮಾಡೋದಿಲ್ಲ. ಇರುವ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡೋದರಿಂದ ಜನರಿಗೆ ಒಳ್ಳೆಯದು ಆಗತದ. ಎರಡು ಬ್ಯಾಂಕು ಹಾಗೂ ಎಲ್‌ಐಸಿಗಳನ್ನು ಖಾಸಗಿಗೆ ಮಾರಾಟ ಮಾಡಿದರ ಎಲ್ಲ ಸಮಸ್ಯೆ ಪರಿಹಾರ ಆಗತದ ಅಂತ ಸಚಿವರು ಹೇಳಿದ್ದಾರ. ಅದಕ್ಕ ಸರ್ಕಾರಿ-ಖಾಸಗಿ ಸಹ ಭಾಗಿತ್ವದ ಮೊದಲ ಮಾದರಿಯಾದ ಮಾರುತಿ ಕಂಪನಿಯ ಹಿಂದಿನ ಮುಖ್ಯಸ್ಥ ಭಾರ್ಗವ ಅವರು ಒಪ್ಪಿಗೆ ಸೂಚಿಸಿಬಿಟ್ಟಾರ. ಮಾರುತಿ ಕಂಪನಿ ಸರಕಾರದಿಂದ ಅನೇಕ ಬಾರಿ ಸಹಾಯ ಪಡೆಯಿತು ಅನ್ನೋದನ್ನ ಮರ್ತುಬಿಟ್ಟಾರ.

ಸರಕಾರ ಮನಿ ಕಟ್ಟುವುದಿಲ್ಲ. ಆ ಕೆಲಸ ಮಾಡುವ ಖಾಸಗಿಯವರಿಗೆ ಸಹಾಯ ಮಾಡತದ ಅಂತ ಸಚಿವರು ಹೇಳಿಬಿಟ್ಟಾರ. ಅವರಿಗೆ ಸುಲಭ ಸಾಲ, ಕಟ್ಟು ಬಾಕಿ ಸಾಲಗಾರರ ಕಡೆ ಮೃದು ಧೋರಣೆ, ಈ ರೀತಿಯ ಡೆವಲಪರ್‌ಗಳ ಕೈಗೆ ಸಿಕ್ಕುವ ಬಡಪಾಯಿ ಮಧ್ಯಮ ವರ್ಗದವರಿಗೆ ಎರಡು ಶೇಕಡಾ ಬಡ್ಡಿ ಕಮ್ಮಿ, ಇತ್ಯಾದಿ ಘೋಷಣೆ ಮಾಡಿದ್ದಾರೆ.

ಕುಡಿಯುವ ನೀರು ಖಾಸಗಿಯವರಿಂದ ಪಡೆಯಬೇಕು. ಅದನ್ನು ಸರಕಾರ ಕೊಡಲಿಕ್ಕೆ ಆಗೋದಿಲ್ಲ. ಅದು ಸರ್ಕಾರದ ಕೆಲಸ ಅಲ್ಲ. ಅದಕ್ಕೆ ಜಲವೆ ಜೀವನ ಅನ್ನುವ ಯೋಜನೆ ಒಳಗ ಖಾಸಗಿ ಕಂಪನಿಗಳು ನೀರು ಕೊಡತಾವ. ಅವರಿಗೆ ಅನುಕೂಲ ಆಗು ಹಂಗ ಸರ್ಕಾರಿ ಅಧಿಕಾರಿಗಳು ನಡೆದುಕೊಳ್ಳಬೇಕು. ಆಡಳಿತ ಪಕ್ಷದ ಮಾಲೀಕರೆ ಸರ್ಕಾರಿ ಅಧಿಕಾರಿಗಳ ಮಾಲೀಕರು, ಅಷ್ಟೂ ತಿಳಿಯದೇ?

ಎಲ್ಲಾ ಹೋಗಲಿ, ಮುಂದಿನ ವರ್ಷದ ಜನಗಣತಿ ಸಹಿತ ಖಾಸಗಿಯವರು ಮಾಡೋರು. ಹಂಗಾರ ಇನ್ನೇನು ಉಳಿಯಿತು? ಶಾಸನ ಸಭೆ, ಚುನಾವಣೆ, ಕಾನೂನು ಮತ್ತು ಸುವ್ಯವಸ್ಥೆ, ದೇಶ ರಕ್ಷಣೆ ಹಾಗೂ ಯುದ್ಧ ಮಾಡುವುದು, ನಾಣ್ಯ ಟಂಕಿಸುವುದು ಇತ್ಯಾದಿ ಸಣ್ಣ ಪುಟ್ಟ ಕೆಲಸಗಳು. ಮುಂದಿನ ಸಾರಿ ಖಾಸಗಿ ವಿಶ್ವವಿದ್ಯಾಲಯದಿಂದ ಎಂಬಿಎ ಮಾಡಿದ ಖಾಸಗಿ ಕಂಪನಿ ಸಿಈಒ ಒಬ್ಬರು ನಮ್ಮ ಹಣಕಾಸು ಸಚಿವರ ಬದಲಿಗೆ ಬಜೆಟ್ ಮಂಡಿಸಿದರೂ ಮಂಡಿಸಬಹುದು. ಏನೇನೋ ಆಗುತ್ತಿರುವಾಗ ಇದು ಆದರೆ ಆಶ್ಚರ್ಯ ಏನು?


ಇದನ್ನೂ ಓದಿ: ಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...