Homeಅಂಕಣಗಳುಹಿಂಗೇ ಹೊರಟರ ಖಾಸಗಿ ಕಂಪನಿ ಸಿಈಓ ಬಜೆಟ್ ಮಂಡಿಸುವ ದಿನವೂ ದೂರವಿಲ್ಲ

ಹಿಂಗೇ ಹೊರಟರ ಖಾಸಗಿ ಕಂಪನಿ ಸಿಈಓ ಬಜೆಟ್ ಮಂಡಿಸುವ ದಿನವೂ ದೂರವಿಲ್ಲ

- Advertisement -
- Advertisement -

‘ಸರಕಾರ’ ಎನ್ನುವುದು ಪರ್ಶಿಯನ್ ಭಾಷೆ ಪದ. ಅದರ ಅನೇಕ ಅರ್ಥಗಳಲ್ಲಿ ಒಂದು ‘ಕೆಲಸದಲ್ಲಿ ಇರುವುದು’ ಅಂತ. ಸರಕಾರ ಅನ್ನುವುದೇ ಕೆಲಸ ಅನ್ನುವುದಕ್ಕ ಸಮಾನಾರ್ಥಕ ಪದ ಅನ್ನೋದಾದರ, ಸರ್ಕಾರದ ಕೆಲಸ ಏನು?

ಈ ಸರಕಾರದ ಕೆಲಸ ಏನು ಎನ್ನುವ ಸರಳವಾದ ಪ್ರಶ್ನೆ ಇಡೀ ಜಗತ್ತನ್ನು ಇಬ್ಭಾಗ ಮಾಡಿಬಿಟ್ಟಿದೆ.
ಕೆಲವರು ಸರಕಾರಕ್ಕ ಕೆಲಸನ ಇಲ್ಲ ಅನ್ನೋರು. ಇನ್ನೂ ಕೆಲವರು ಎಲ್ಲವೂ ಸರ್ಕಾರದ ಕೆಲಸ ಅನ್ನೋರು. ಅವರ ನಡುವೆ ಬಹಳ ದೊಡ್ಡ ಸಂಖ್ಯೆಯಲ್ಲಿ ಮಧ್ಯಮ ಮಾರ್ಗಿಗಳು. ಸರ್ಕಾರದ ಕೆಲಸ ಏನು ಅನ್ನೋದು ನಮಗ ಗೊತ್ತಿಲ್ಲ. ಅದು ಏನು ಅಂತ ತಿಳಕೋಳೋದು ಬೇಕಾಗಿಲ್ಲ, ಅಂತ ಇವರು ಗಟ್ಟಿಯಾಗಿ ನಂಬತಾರ. ಮಜಾ ಏನು ಅಂದ್ರ ಈ ರೀತಿಯ ಜನಗಳಿಗೆ ಅತಿ ಕಠೋರವಾದ ರಾಜಕೀಯ ನಿಲುವು ಇರ್ತಾವ. ಯಾವುದನ್ನು ನಾವು ಸ್ಪಷ್ಟವಾಗಿ ತಿಳಕೊಂಡಿರೋದಿಲ್ಲವೋ ಅದರ ಬಗ್ಗೆ ಅಭಿಪ್ರಾಯ ಮಾತ್ರ ಗಟ್ಟಿಯಾಗಿ ರೂಪಿಸಿಕೊಂಡು ಬಿಟ್ಟಿರತೀವಿ.

ಯಥಾ ಪ್ರಜಾ ತಥಾ ರಾಜಾ ಅನ್ನುವ ಗಾದಿಮಾತಿನ ಹಂಗ, ನಾವು ಹೆಂಗ ಇರತೆವೋ, ನಮ್ಮನ್ನ ಆಳುವ ಧೀರರು ಹಂಗೆ ಇರ್ತಾರ. ಎಲ್ಲ ವಿಷಯದ ಬಗ್ಗೆ ನಾವು ಸರಿಯಾಗಿ ಓದಿ, ಕೇಳಿ, ಅರ್ಥಮಾಡಿಕೊಂಡರ, ನಮಗೆ ಅರ್ಥ ಆಗಲಾರದ ವಿಷಯದ ಬಗ್ಗೆ ಪ್ರಶ್ನೆ ಮಾಡಿದರ ಅವರು ಸರಿಯಾಗಿ ಎಚ್ಚರದಿಂದ ಇರ್ತಾರ. ಅದನ್ನ ಬಿಟ್ಟು ನಮಗ ಏನು ಸರಿಯಾಗಿ ಗೊತ್ತಿಲ್ಲ. ಆದರೆ ನಾವು ಅವರ ಪರವಾಗಿ ಇದ್ದೇವೆ. ನಾವು ಅವರನ್ನ ಪ್ರಶ್ನೆ ಮಾಡೋದಿಲ್ಲ. ಯಾಕ ಅಂದ್ರ ಅವರು ತಪ್ಪು ಮಾಡಲಿಕ್ಕೆ ಸಾಧ್ಯ ಇಲ್ಲ ಅನ್ನುವ ಪ್ರಶ್ನಾತೀತ ಮಾತೃ ಪ್ರೇಮದ ನಾಗರಿಕರು ಇದ್ದರೆ, ಸರಕಾರ ಎನ್ನುವುದು ಕೈಕಯಿಯಂತಹ ತಾಯಿ ಆಗಿ ಬಿಡುತ್ತದೆ. ತನಗೆ ಓಟು ಕೊಟ್ಟ ಹಲವರನ್ನು ಮರೆತು ನೋಟು ಕೊಟ್ಟ ಕೆಲವರನ್ನು ಮಾತ್ರ ಪೋಷಿಸುತ್ತದೆ. ಆ ನೋಟು ಕೊಟ್ಟ ಕೆಲವರು ರಾಮನ ತಮ್ಮ ಭರತನ ಹಂಗ ಇದ್ದರ ಅಡ್ಡಿಯಿಲ್ಲ. ಆದರೆ ಅವರು ರಾವಣನ ತಂಗಿ ಶೂರ್ಪನಖಿ ಹಂಗ ಚೂಪಾದ ಉಗುರಿನಿಂದ ಬಡವರ ರಕ್ತ ಹೀರುವವರು ಇರ್ತಾರ.

ಮೊನ್ನೆ ನಮ್ಮ ಉಳ್ಳಿ ಪಥ್ಯದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಆಯವ್ಯಯ ಪತ್ರ ಭಾರತೀಯ ಕಂಪನಿ ವಿದೇಶಿ ಸಾಮಾನು ಬಳಸಿ ತಯಾರು ಮಾಡಿದ ಪಾಟಿ ಕಂಪ್ಯೂಟರ್‌ದೊಳಗ (ಟ್ಯಾಬ್ಲೆಟ್) ಓದಿದರು. ಹೆಸರಿನೊಳಗ ಸೀತಾ ಹಾಗೂ ರಾಮ್ ಎರಡೂ ಇರುವ ಅವರು ಜನರನ್ನು ಮಾತ್ರ ಅಯೋಧ್ಯಾ ನಾಗರಿಕರಂತೆ ನೋಡಲಿಲ್ಲ.

ನನ್ನ ಭಾಷಣದ ಮೂಲಮಂತ್ರ ಕನಿಷ್ಠ ಸರಕಾರ, ಗರಿಷ್ಟ ಆಡಳಿತ ಅಂತ ಘೋಷಿಸಿದ ಅವರು ಆ ಗುರಿ ಮುಟ್ಟುವುದು ಹೇಗೆ ಅಂತ ಬಿಡಿಸಿ ಹೇಳಲಿಲ್ಲ. ಆಡಳಿತದಲ್ಲಿ ಸರ್ಕಾರದ ಪಾಲು ಕಮ್ಮಿ ಆಗುತ್ತಾ ಹೋದರೆ ಗರಿಷ್ಟ ಆಡಳಿತ ಸಾಧ್ಯ ಆಗೋದು ಹೇಗೆ ಅನ್ನುವುದು ಅವರು ಹೇಳಲಿಲ್ಲ, ನಾವು ಕೇಳಲಿಲ್ಲ.

ಉನ್ನತ ಶಿಕ್ಷಣದ ಸ್ಥಿತಿ ಸುಧಾರಿಸುವ ಯೋಜನೆ ಒಳಗೆ ಖಾಸಗಿ ಬಂಡವಾಳ ತಂತ್ರ ಕುಶಲತೆಯು ಭಾಗ ವಹಿಸಲಿದೆಯಂತೆ. ಅಂದ್ರ ಸರಕಾರ ಕೈಚೆಲ್ಲಿ ಖಾಸಗಿಯವರಿಗೆ ದಾರಿ ಮಾಡಿಕೊಟ್ಟದ.

ಪ್ರಾಥಮಿಕ ಶಿಕ್ಷಣದೊಳಗ ಸರ್ಕಾರದ ನಿಯಂತ್ರಣ ಹಂತಹಂತವಾಗಿ ಕಮ್ಮಿಯಾಗಿ ಖಾಸಗಿಯವರ ಭಾಗಿದಾರಿಕೆ ಹೆಚ್ಚು ಆಗಲಿಕ್ಕೆ ಶುರು ಆಗತದ. ಹಿಂದೆ ಈ ಕೆಲಸ ಸಣ್ಣಗ ಶುರು ಆಗಿತ್ತು. ಇನ್ನು ಮುಂದ ಇದು ಗತಿ ಪಡತಿದ. ಅದಕ್ಕ ಸದ್ಗತಿ ಸಿಗತದೋ ಇಲ್ಲೋ.

ಸಚಿವರ ಪ್ರಕಾರ ಅಂಕೀಕೃತ ಆರೋಗ್ಯ ವಾಗ್ದಾನ ಯೋಜನೆ (ಡಿಜಿಟಲ್ ಹೆಲ್ತ್ ಅಷ್ಯೂರೆನ್ಸ್) ಪ್ರಕಾರ ಎಲ್ಲ 130 ಕೋಟಿ ಭಾರತೀಯ ರಹವಾಸಿಗಳ ಆರೋಗ್ಯ ಸೂಚಕಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಆಮೇಲೆ ಅದರ ಪ್ರಕಾರ ನಿಮ್ಮ ರೋಗದ ಲಕ್ಷಣ, ಸ್ಥಿತಿ, ರೋಗ ನಿರೋಧಕ ಶಕ್ತಿ, ಅದಕ್ಕೆ ಚಿಕಿತ್ಸೆ ಎಲ್ಲಾ. ಅದನ್ನು ಮಾಡೋರು ಯಾರು? ಖಾಸಗಿ ಕಂಪನಿಯವರು. ಅವರು ಬರೆ ನಿಮ್ಮ ರೋಗ ಚೆಕ್ ಮಾಡೋದಿಲ್ಲ. ನಿಮ್ಮ ಹಾಗೂ ನಿಮ್ಮ ಮನೆಯವರ, ನಿಮ್ಮ ಕಂಪನಿ ಉದ್ಯೋಗಿಗಳ, ಎಲ್ಲರ ಮಾಹಿತಿ ಇಟ್ಟುಕೊಂಡು ನಿಮ್ಮನ್ನ ಆಟ ಅಡಿಸತಾರ. ಅದನ್ನ ವಿಮಾ ಕಂಪನಿಗೆ ಮಾರಾಟ ಮಾಡಿಬಿಡತಾರ. ಅವರು ನಿಮ್ಮ ಆರೋಗ್ಯದ ಸ್ಥಿತಿ ಗೊತ್ತಿದ್ದರಿಂದ ನಿಮಗೆ ವಿಮೆ ಕೊಡಲಿಕ್ಕೆ ಇಲ್ಲೆ, ಅಥವಾ ಅತಿ ಹೆಚ್ಚಿನ ವೆಚ್ಚದ ಪಾಲಿಸಿ ಕೊಡಬಹುದು. ಎಲ್ಲ ಚಿಕಿತ್ಸೆ ಕೊಡಲಿಕ್ಕೆ ಮಾತ್ರ ಇರಲಿಕ್ಕಿಲ್ಲ.

ಕೋವಿಡ್ ಮಾರಿಯ ಕಾಲದಾಗ ಖಾಸಗಿ ಆಸ್ಪತ್ರೆ, ಖಾಸಗಿ ಶಾಲೆ ಹಾಗೂ ಖಾಸಗಿ ಮಾಧ್ಯಮಗಳು ಆಡಿದ ಆಟ ನೋಡಿದ ಮೇಲೆ ಸಹಿತ ಎಲ್ಲಾ ರೋಗಕು ಖಾಸಗಿ ಕ್ಷೇತ್ರ ರಾಮ ಬಾಣ ಅಲ್ಲ ಅನ್ನುವುದು ನಮಗ ಇನ್ನೂ ಖಾತರಿ ಯಾಗಿಲ್ಲ ಅಂತ ಅನ್ನಿಸತದ.

ಇನ್ನ ಉದ್ಯೋಗ ಸೃಷ್ಟಿ ಸಲುವಾಗಿ ಸರಕಾರ ಹಮ್ಮಿಕೊಂಡಿರುವ ಅನೇಕ ಯೋಜನೆಗಳಿಗೆ ಖಾಸಗಿಯವರೇ ಇಂಜಿನ್, ಗಾಲಿ ಹಾಗೂ ಇಂಧನ. ಸರಕಾರ ಯಾವುದೇ ಉದ್ಯೋಗ ಸೃಷ್ಟಿ ಮಾಡೋದಿಲ್ಲ. ಇರುವ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡೋದರಿಂದ ಜನರಿಗೆ ಒಳ್ಳೆಯದು ಆಗತದ. ಎರಡು ಬ್ಯಾಂಕು ಹಾಗೂ ಎಲ್‌ಐಸಿಗಳನ್ನು ಖಾಸಗಿಗೆ ಮಾರಾಟ ಮಾಡಿದರ ಎಲ್ಲ ಸಮಸ್ಯೆ ಪರಿಹಾರ ಆಗತದ ಅಂತ ಸಚಿವರು ಹೇಳಿದ್ದಾರ. ಅದಕ್ಕ ಸರ್ಕಾರಿ-ಖಾಸಗಿ ಸಹ ಭಾಗಿತ್ವದ ಮೊದಲ ಮಾದರಿಯಾದ ಮಾರುತಿ ಕಂಪನಿಯ ಹಿಂದಿನ ಮುಖ್ಯಸ್ಥ ಭಾರ್ಗವ ಅವರು ಒಪ್ಪಿಗೆ ಸೂಚಿಸಿಬಿಟ್ಟಾರ. ಮಾರುತಿ ಕಂಪನಿ ಸರಕಾರದಿಂದ ಅನೇಕ ಬಾರಿ ಸಹಾಯ ಪಡೆಯಿತು ಅನ್ನೋದನ್ನ ಮರ್ತುಬಿಟ್ಟಾರ.

ಸರಕಾರ ಮನಿ ಕಟ್ಟುವುದಿಲ್ಲ. ಆ ಕೆಲಸ ಮಾಡುವ ಖಾಸಗಿಯವರಿಗೆ ಸಹಾಯ ಮಾಡತದ ಅಂತ ಸಚಿವರು ಹೇಳಿಬಿಟ್ಟಾರ. ಅವರಿಗೆ ಸುಲಭ ಸಾಲ, ಕಟ್ಟು ಬಾಕಿ ಸಾಲಗಾರರ ಕಡೆ ಮೃದು ಧೋರಣೆ, ಈ ರೀತಿಯ ಡೆವಲಪರ್‌ಗಳ ಕೈಗೆ ಸಿಕ್ಕುವ ಬಡಪಾಯಿ ಮಧ್ಯಮ ವರ್ಗದವರಿಗೆ ಎರಡು ಶೇಕಡಾ ಬಡ್ಡಿ ಕಮ್ಮಿ, ಇತ್ಯಾದಿ ಘೋಷಣೆ ಮಾಡಿದ್ದಾರೆ.

ಕುಡಿಯುವ ನೀರು ಖಾಸಗಿಯವರಿಂದ ಪಡೆಯಬೇಕು. ಅದನ್ನು ಸರಕಾರ ಕೊಡಲಿಕ್ಕೆ ಆಗೋದಿಲ್ಲ. ಅದು ಸರ್ಕಾರದ ಕೆಲಸ ಅಲ್ಲ. ಅದಕ್ಕೆ ಜಲವೆ ಜೀವನ ಅನ್ನುವ ಯೋಜನೆ ಒಳಗ ಖಾಸಗಿ ಕಂಪನಿಗಳು ನೀರು ಕೊಡತಾವ. ಅವರಿಗೆ ಅನುಕೂಲ ಆಗು ಹಂಗ ಸರ್ಕಾರಿ ಅಧಿಕಾರಿಗಳು ನಡೆದುಕೊಳ್ಳಬೇಕು. ಆಡಳಿತ ಪಕ್ಷದ ಮಾಲೀಕರೆ ಸರ್ಕಾರಿ ಅಧಿಕಾರಿಗಳ ಮಾಲೀಕರು, ಅಷ್ಟೂ ತಿಳಿಯದೇ?

ಎಲ್ಲಾ ಹೋಗಲಿ, ಮುಂದಿನ ವರ್ಷದ ಜನಗಣತಿ ಸಹಿತ ಖಾಸಗಿಯವರು ಮಾಡೋರು. ಹಂಗಾರ ಇನ್ನೇನು ಉಳಿಯಿತು? ಶಾಸನ ಸಭೆ, ಚುನಾವಣೆ, ಕಾನೂನು ಮತ್ತು ಸುವ್ಯವಸ್ಥೆ, ದೇಶ ರಕ್ಷಣೆ ಹಾಗೂ ಯುದ್ಧ ಮಾಡುವುದು, ನಾಣ್ಯ ಟಂಕಿಸುವುದು ಇತ್ಯಾದಿ ಸಣ್ಣ ಪುಟ್ಟ ಕೆಲಸಗಳು. ಮುಂದಿನ ಸಾರಿ ಖಾಸಗಿ ವಿಶ್ವವಿದ್ಯಾಲಯದಿಂದ ಎಂಬಿಎ ಮಾಡಿದ ಖಾಸಗಿ ಕಂಪನಿ ಸಿಈಒ ಒಬ್ಬರು ನಮ್ಮ ಹಣಕಾಸು ಸಚಿವರ ಬದಲಿಗೆ ಬಜೆಟ್ ಮಂಡಿಸಿದರೂ ಮಂಡಿಸಬಹುದು. ಏನೇನೋ ಆಗುತ್ತಿರುವಾಗ ಇದು ಆದರೆ ಆಶ್ಚರ್ಯ ಏನು?


ಇದನ್ನೂ ಓದಿ: ಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...