Homeಅಂಕಣಗಳುಹಿಂಗೇ ಹೊರಟರ ಖಾಸಗಿ ಕಂಪನಿ ಸಿಈಓ ಬಜೆಟ್ ಮಂಡಿಸುವ ದಿನವೂ ದೂರವಿಲ್ಲ

ಹಿಂಗೇ ಹೊರಟರ ಖಾಸಗಿ ಕಂಪನಿ ಸಿಈಓ ಬಜೆಟ್ ಮಂಡಿಸುವ ದಿನವೂ ದೂರವಿಲ್ಲ

- Advertisement -
- Advertisement -

‘ಸರಕಾರ’ ಎನ್ನುವುದು ಪರ್ಶಿಯನ್ ಭಾಷೆ ಪದ. ಅದರ ಅನೇಕ ಅರ್ಥಗಳಲ್ಲಿ ಒಂದು ‘ಕೆಲಸದಲ್ಲಿ ಇರುವುದು’ ಅಂತ. ಸರಕಾರ ಅನ್ನುವುದೇ ಕೆಲಸ ಅನ್ನುವುದಕ್ಕ ಸಮಾನಾರ್ಥಕ ಪದ ಅನ್ನೋದಾದರ, ಸರ್ಕಾರದ ಕೆಲಸ ಏನು?

ಈ ಸರಕಾರದ ಕೆಲಸ ಏನು ಎನ್ನುವ ಸರಳವಾದ ಪ್ರಶ್ನೆ ಇಡೀ ಜಗತ್ತನ್ನು ಇಬ್ಭಾಗ ಮಾಡಿಬಿಟ್ಟಿದೆ.
ಕೆಲವರು ಸರಕಾರಕ್ಕ ಕೆಲಸನ ಇಲ್ಲ ಅನ್ನೋರು. ಇನ್ನೂ ಕೆಲವರು ಎಲ್ಲವೂ ಸರ್ಕಾರದ ಕೆಲಸ ಅನ್ನೋರು. ಅವರ ನಡುವೆ ಬಹಳ ದೊಡ್ಡ ಸಂಖ್ಯೆಯಲ್ಲಿ ಮಧ್ಯಮ ಮಾರ್ಗಿಗಳು. ಸರ್ಕಾರದ ಕೆಲಸ ಏನು ಅನ್ನೋದು ನಮಗ ಗೊತ್ತಿಲ್ಲ. ಅದು ಏನು ಅಂತ ತಿಳಕೋಳೋದು ಬೇಕಾಗಿಲ್ಲ, ಅಂತ ಇವರು ಗಟ್ಟಿಯಾಗಿ ನಂಬತಾರ. ಮಜಾ ಏನು ಅಂದ್ರ ಈ ರೀತಿಯ ಜನಗಳಿಗೆ ಅತಿ ಕಠೋರವಾದ ರಾಜಕೀಯ ನಿಲುವು ಇರ್ತಾವ. ಯಾವುದನ್ನು ನಾವು ಸ್ಪಷ್ಟವಾಗಿ ತಿಳಕೊಂಡಿರೋದಿಲ್ಲವೋ ಅದರ ಬಗ್ಗೆ ಅಭಿಪ್ರಾಯ ಮಾತ್ರ ಗಟ್ಟಿಯಾಗಿ ರೂಪಿಸಿಕೊಂಡು ಬಿಟ್ಟಿರತೀವಿ.

ಯಥಾ ಪ್ರಜಾ ತಥಾ ರಾಜಾ ಅನ್ನುವ ಗಾದಿಮಾತಿನ ಹಂಗ, ನಾವು ಹೆಂಗ ಇರತೆವೋ, ನಮ್ಮನ್ನ ಆಳುವ ಧೀರರು ಹಂಗೆ ಇರ್ತಾರ. ಎಲ್ಲ ವಿಷಯದ ಬಗ್ಗೆ ನಾವು ಸರಿಯಾಗಿ ಓದಿ, ಕೇಳಿ, ಅರ್ಥಮಾಡಿಕೊಂಡರ, ನಮಗೆ ಅರ್ಥ ಆಗಲಾರದ ವಿಷಯದ ಬಗ್ಗೆ ಪ್ರಶ್ನೆ ಮಾಡಿದರ ಅವರು ಸರಿಯಾಗಿ ಎಚ್ಚರದಿಂದ ಇರ್ತಾರ. ಅದನ್ನ ಬಿಟ್ಟು ನಮಗ ಏನು ಸರಿಯಾಗಿ ಗೊತ್ತಿಲ್ಲ. ಆದರೆ ನಾವು ಅವರ ಪರವಾಗಿ ಇದ್ದೇವೆ. ನಾವು ಅವರನ್ನ ಪ್ರಶ್ನೆ ಮಾಡೋದಿಲ್ಲ. ಯಾಕ ಅಂದ್ರ ಅವರು ತಪ್ಪು ಮಾಡಲಿಕ್ಕೆ ಸಾಧ್ಯ ಇಲ್ಲ ಅನ್ನುವ ಪ್ರಶ್ನಾತೀತ ಮಾತೃ ಪ್ರೇಮದ ನಾಗರಿಕರು ಇದ್ದರೆ, ಸರಕಾರ ಎನ್ನುವುದು ಕೈಕಯಿಯಂತಹ ತಾಯಿ ಆಗಿ ಬಿಡುತ್ತದೆ. ತನಗೆ ಓಟು ಕೊಟ್ಟ ಹಲವರನ್ನು ಮರೆತು ನೋಟು ಕೊಟ್ಟ ಕೆಲವರನ್ನು ಮಾತ್ರ ಪೋಷಿಸುತ್ತದೆ. ಆ ನೋಟು ಕೊಟ್ಟ ಕೆಲವರು ರಾಮನ ತಮ್ಮ ಭರತನ ಹಂಗ ಇದ್ದರ ಅಡ್ಡಿಯಿಲ್ಲ. ಆದರೆ ಅವರು ರಾವಣನ ತಂಗಿ ಶೂರ್ಪನಖಿ ಹಂಗ ಚೂಪಾದ ಉಗುರಿನಿಂದ ಬಡವರ ರಕ್ತ ಹೀರುವವರು ಇರ್ತಾರ.

ಮೊನ್ನೆ ನಮ್ಮ ಉಳ್ಳಿ ಪಥ್ಯದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಆಯವ್ಯಯ ಪತ್ರ ಭಾರತೀಯ ಕಂಪನಿ ವಿದೇಶಿ ಸಾಮಾನು ಬಳಸಿ ತಯಾರು ಮಾಡಿದ ಪಾಟಿ ಕಂಪ್ಯೂಟರ್‌ದೊಳಗ (ಟ್ಯಾಬ್ಲೆಟ್) ಓದಿದರು. ಹೆಸರಿನೊಳಗ ಸೀತಾ ಹಾಗೂ ರಾಮ್ ಎರಡೂ ಇರುವ ಅವರು ಜನರನ್ನು ಮಾತ್ರ ಅಯೋಧ್ಯಾ ನಾಗರಿಕರಂತೆ ನೋಡಲಿಲ್ಲ.

ನನ್ನ ಭಾಷಣದ ಮೂಲಮಂತ್ರ ಕನಿಷ್ಠ ಸರಕಾರ, ಗರಿಷ್ಟ ಆಡಳಿತ ಅಂತ ಘೋಷಿಸಿದ ಅವರು ಆ ಗುರಿ ಮುಟ್ಟುವುದು ಹೇಗೆ ಅಂತ ಬಿಡಿಸಿ ಹೇಳಲಿಲ್ಲ. ಆಡಳಿತದಲ್ಲಿ ಸರ್ಕಾರದ ಪಾಲು ಕಮ್ಮಿ ಆಗುತ್ತಾ ಹೋದರೆ ಗರಿಷ್ಟ ಆಡಳಿತ ಸಾಧ್ಯ ಆಗೋದು ಹೇಗೆ ಅನ್ನುವುದು ಅವರು ಹೇಳಲಿಲ್ಲ, ನಾವು ಕೇಳಲಿಲ್ಲ.

ಉನ್ನತ ಶಿಕ್ಷಣದ ಸ್ಥಿತಿ ಸುಧಾರಿಸುವ ಯೋಜನೆ ಒಳಗೆ ಖಾಸಗಿ ಬಂಡವಾಳ ತಂತ್ರ ಕುಶಲತೆಯು ಭಾಗ ವಹಿಸಲಿದೆಯಂತೆ. ಅಂದ್ರ ಸರಕಾರ ಕೈಚೆಲ್ಲಿ ಖಾಸಗಿಯವರಿಗೆ ದಾರಿ ಮಾಡಿಕೊಟ್ಟದ.

ಪ್ರಾಥಮಿಕ ಶಿಕ್ಷಣದೊಳಗ ಸರ್ಕಾರದ ನಿಯಂತ್ರಣ ಹಂತಹಂತವಾಗಿ ಕಮ್ಮಿಯಾಗಿ ಖಾಸಗಿಯವರ ಭಾಗಿದಾರಿಕೆ ಹೆಚ್ಚು ಆಗಲಿಕ್ಕೆ ಶುರು ಆಗತದ. ಹಿಂದೆ ಈ ಕೆಲಸ ಸಣ್ಣಗ ಶುರು ಆಗಿತ್ತು. ಇನ್ನು ಮುಂದ ಇದು ಗತಿ ಪಡತಿದ. ಅದಕ್ಕ ಸದ್ಗತಿ ಸಿಗತದೋ ಇಲ್ಲೋ.

ಸಚಿವರ ಪ್ರಕಾರ ಅಂಕೀಕೃತ ಆರೋಗ್ಯ ವಾಗ್ದಾನ ಯೋಜನೆ (ಡಿಜಿಟಲ್ ಹೆಲ್ತ್ ಅಷ್ಯೂರೆನ್ಸ್) ಪ್ರಕಾರ ಎಲ್ಲ 130 ಕೋಟಿ ಭಾರತೀಯ ರಹವಾಸಿಗಳ ಆರೋಗ್ಯ ಸೂಚಕಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ಆಮೇಲೆ ಅದರ ಪ್ರಕಾರ ನಿಮ್ಮ ರೋಗದ ಲಕ್ಷಣ, ಸ್ಥಿತಿ, ರೋಗ ನಿರೋಧಕ ಶಕ್ತಿ, ಅದಕ್ಕೆ ಚಿಕಿತ್ಸೆ ಎಲ್ಲಾ. ಅದನ್ನು ಮಾಡೋರು ಯಾರು? ಖಾಸಗಿ ಕಂಪನಿಯವರು. ಅವರು ಬರೆ ನಿಮ್ಮ ರೋಗ ಚೆಕ್ ಮಾಡೋದಿಲ್ಲ. ನಿಮ್ಮ ಹಾಗೂ ನಿಮ್ಮ ಮನೆಯವರ, ನಿಮ್ಮ ಕಂಪನಿ ಉದ್ಯೋಗಿಗಳ, ಎಲ್ಲರ ಮಾಹಿತಿ ಇಟ್ಟುಕೊಂಡು ನಿಮ್ಮನ್ನ ಆಟ ಅಡಿಸತಾರ. ಅದನ್ನ ವಿಮಾ ಕಂಪನಿಗೆ ಮಾರಾಟ ಮಾಡಿಬಿಡತಾರ. ಅವರು ನಿಮ್ಮ ಆರೋಗ್ಯದ ಸ್ಥಿತಿ ಗೊತ್ತಿದ್ದರಿಂದ ನಿಮಗೆ ವಿಮೆ ಕೊಡಲಿಕ್ಕೆ ಇಲ್ಲೆ, ಅಥವಾ ಅತಿ ಹೆಚ್ಚಿನ ವೆಚ್ಚದ ಪಾಲಿಸಿ ಕೊಡಬಹುದು. ಎಲ್ಲ ಚಿಕಿತ್ಸೆ ಕೊಡಲಿಕ್ಕೆ ಮಾತ್ರ ಇರಲಿಕ್ಕಿಲ್ಲ.

ಕೋವಿಡ್ ಮಾರಿಯ ಕಾಲದಾಗ ಖಾಸಗಿ ಆಸ್ಪತ್ರೆ, ಖಾಸಗಿ ಶಾಲೆ ಹಾಗೂ ಖಾಸಗಿ ಮಾಧ್ಯಮಗಳು ಆಡಿದ ಆಟ ನೋಡಿದ ಮೇಲೆ ಸಹಿತ ಎಲ್ಲಾ ರೋಗಕು ಖಾಸಗಿ ಕ್ಷೇತ್ರ ರಾಮ ಬಾಣ ಅಲ್ಲ ಅನ್ನುವುದು ನಮಗ ಇನ್ನೂ ಖಾತರಿ ಯಾಗಿಲ್ಲ ಅಂತ ಅನ್ನಿಸತದ.

ಇನ್ನ ಉದ್ಯೋಗ ಸೃಷ್ಟಿ ಸಲುವಾಗಿ ಸರಕಾರ ಹಮ್ಮಿಕೊಂಡಿರುವ ಅನೇಕ ಯೋಜನೆಗಳಿಗೆ ಖಾಸಗಿಯವರೇ ಇಂಜಿನ್, ಗಾಲಿ ಹಾಗೂ ಇಂಧನ. ಸರಕಾರ ಯಾವುದೇ ಉದ್ಯೋಗ ಸೃಷ್ಟಿ ಮಾಡೋದಿಲ್ಲ. ಇರುವ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡೋದರಿಂದ ಜನರಿಗೆ ಒಳ್ಳೆಯದು ಆಗತದ. ಎರಡು ಬ್ಯಾಂಕು ಹಾಗೂ ಎಲ್‌ಐಸಿಗಳನ್ನು ಖಾಸಗಿಗೆ ಮಾರಾಟ ಮಾಡಿದರ ಎಲ್ಲ ಸಮಸ್ಯೆ ಪರಿಹಾರ ಆಗತದ ಅಂತ ಸಚಿವರು ಹೇಳಿದ್ದಾರ. ಅದಕ್ಕ ಸರ್ಕಾರಿ-ಖಾಸಗಿ ಸಹ ಭಾಗಿತ್ವದ ಮೊದಲ ಮಾದರಿಯಾದ ಮಾರುತಿ ಕಂಪನಿಯ ಹಿಂದಿನ ಮುಖ್ಯಸ್ಥ ಭಾರ್ಗವ ಅವರು ಒಪ್ಪಿಗೆ ಸೂಚಿಸಿಬಿಟ್ಟಾರ. ಮಾರುತಿ ಕಂಪನಿ ಸರಕಾರದಿಂದ ಅನೇಕ ಬಾರಿ ಸಹಾಯ ಪಡೆಯಿತು ಅನ್ನೋದನ್ನ ಮರ್ತುಬಿಟ್ಟಾರ.

ಸರಕಾರ ಮನಿ ಕಟ್ಟುವುದಿಲ್ಲ. ಆ ಕೆಲಸ ಮಾಡುವ ಖಾಸಗಿಯವರಿಗೆ ಸಹಾಯ ಮಾಡತದ ಅಂತ ಸಚಿವರು ಹೇಳಿಬಿಟ್ಟಾರ. ಅವರಿಗೆ ಸುಲಭ ಸಾಲ, ಕಟ್ಟು ಬಾಕಿ ಸಾಲಗಾರರ ಕಡೆ ಮೃದು ಧೋರಣೆ, ಈ ರೀತಿಯ ಡೆವಲಪರ್‌ಗಳ ಕೈಗೆ ಸಿಕ್ಕುವ ಬಡಪಾಯಿ ಮಧ್ಯಮ ವರ್ಗದವರಿಗೆ ಎರಡು ಶೇಕಡಾ ಬಡ್ಡಿ ಕಮ್ಮಿ, ಇತ್ಯಾದಿ ಘೋಷಣೆ ಮಾಡಿದ್ದಾರೆ.

ಕುಡಿಯುವ ನೀರು ಖಾಸಗಿಯವರಿಂದ ಪಡೆಯಬೇಕು. ಅದನ್ನು ಸರಕಾರ ಕೊಡಲಿಕ್ಕೆ ಆಗೋದಿಲ್ಲ. ಅದು ಸರ್ಕಾರದ ಕೆಲಸ ಅಲ್ಲ. ಅದಕ್ಕೆ ಜಲವೆ ಜೀವನ ಅನ್ನುವ ಯೋಜನೆ ಒಳಗ ಖಾಸಗಿ ಕಂಪನಿಗಳು ನೀರು ಕೊಡತಾವ. ಅವರಿಗೆ ಅನುಕೂಲ ಆಗು ಹಂಗ ಸರ್ಕಾರಿ ಅಧಿಕಾರಿಗಳು ನಡೆದುಕೊಳ್ಳಬೇಕು. ಆಡಳಿತ ಪಕ್ಷದ ಮಾಲೀಕರೆ ಸರ್ಕಾರಿ ಅಧಿಕಾರಿಗಳ ಮಾಲೀಕರು, ಅಷ್ಟೂ ತಿಳಿಯದೇ?

ಎಲ್ಲಾ ಹೋಗಲಿ, ಮುಂದಿನ ವರ್ಷದ ಜನಗಣತಿ ಸಹಿತ ಖಾಸಗಿಯವರು ಮಾಡೋರು. ಹಂಗಾರ ಇನ್ನೇನು ಉಳಿಯಿತು? ಶಾಸನ ಸಭೆ, ಚುನಾವಣೆ, ಕಾನೂನು ಮತ್ತು ಸುವ್ಯವಸ್ಥೆ, ದೇಶ ರಕ್ಷಣೆ ಹಾಗೂ ಯುದ್ಧ ಮಾಡುವುದು, ನಾಣ್ಯ ಟಂಕಿಸುವುದು ಇತ್ಯಾದಿ ಸಣ್ಣ ಪುಟ್ಟ ಕೆಲಸಗಳು. ಮುಂದಿನ ಸಾರಿ ಖಾಸಗಿ ವಿಶ್ವವಿದ್ಯಾಲಯದಿಂದ ಎಂಬಿಎ ಮಾಡಿದ ಖಾಸಗಿ ಕಂಪನಿ ಸಿಈಒ ಒಬ್ಬರು ನಮ್ಮ ಹಣಕಾಸು ಸಚಿವರ ಬದಲಿಗೆ ಬಜೆಟ್ ಮಂಡಿಸಿದರೂ ಮಂಡಿಸಬಹುದು. ಏನೇನೋ ಆಗುತ್ತಿರುವಾಗ ಇದು ಆದರೆ ಆಶ್ಚರ್ಯ ಏನು?


ಇದನ್ನೂ ಓದಿ: ಈ ಬಜೆಟ್ ಶ್ರೀಮಂತರು ಮತ್ತು ಕಾರ್ಪೋರೇಟ್‌‌ಗಳಿಗೆ ಮಾತ್ರ: ನೆಟ್ಟಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...