Homeಅಂಕಣಗಳುಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

- Advertisement -
- Advertisement -

ಯಾವುದೇ ಪಕ್ಷವಾದರೂ ಹೊಂದಿಕೊಂಡು ಆ ಪಕ್ಷದ ವಕ್ತಾರನಂತೆ ಮಾತನಾಡುತ್ತ ಪಾರ್ಟಿಯ ಮಾನ ಮರ್ಯಾದೆ ಕಾಪಾಡುವಂತಹ ಶಿವರಾಮೇಗೌಡರನ್ನ ಮಾತನಾಡಿಸಿ, ಅವರು ಜೆಡಿಎಸ್‌ನಿಂದ ವಜಾಗೊಂಡಿರುವ ಸಮಯದಲ್ಲಿ ಸಾಂತ್ವನ ಹೇಳುವುದು ನಮ್ಮ ಕರ್ತವ್ಯವಲ್ಲವೆ ಎಂದು ಯೋಚಿಸಿ ಮಾಡಿದರೆ ರಿಂಗಾಯ್ತು. ರಿಂಗ್ ಟೋನ್ “ಯಾರು ಏನು ಮಾಡುವರು, ನನಗೇನೂ ಕೇಡು ಮಾಡುವರು, ಯಾರು…”

“ಹಲೋ ಯಾರು”

“ನಾನು ಸಾರ್ ನಿಮ್ಮ ಹಿತೈಷಿ ಯಾಹೂ.”

“ಹಿತೈಷಿ ಅನ್ನೊರಿಂದ್ಲೆ ಹಿಂಗಾದದ್ದು ಕಂಡ್ರಿ.”

“ನಾವಂಥೋರಲ್ಲ ಸಾ. ನೀವು ಮಾತಾಡಿದ್ದ ನಿಮ್ಮ ಬುಡಕೆ ತರೋದಿಲ್ಲ ಸಾ.”

“ಆಕೆ ಹೆಣ್ಣುಮಗಳು ವಳ್ಯೊಳು ಅಂತ ಮಾತಾಡಿದ್ನಪ್ಪ, ಹಿಂಗೆ ಮಾಡ್ತಳೆ ಅಂತ ಯಾರಿಗೊತ್ತು.”

“ಆಗೊದ್ಯಲ್ಲ ವಳ್ಳೆದ್ಕೆ ಅಂತ ಭಗವದ್ಗೀತೆ ಹೇಳ್ಯದೆ ಸಾ.”

“ಏನೊಳ್ಳೆದಾಯ್ತದೆ.”

“ಡಿ.ಕೆ ಶಿವಕುಮಾರ್ ಮತ್ತೆ ನೀವು ಆತ್ಮೀಯ ಗೆಳೆಯರಲ್ಲವ ಸಾ.”

“ಅದೇನೊ ನಿಜ.”

“ಮತ್ತೆ ಅವುರು ಮುಂದೆ ಪವರಿಗೆ ಬತ್ತಾಯಿರುವಾಗ ನೀವು ಜೆಡಿಎಸ್ಸಿನಲ್ಲಿರದು ಸರೀನಾ ಸಾರ್.”

“ನೀವೇಳಿದ್ದು ಸರಿನೆ, ಅದ್ರೆ ಕುಮಾರಣ್ಣ ನನ್ನ ಬುಟ್ಟು ಯಾರು ಸರಕಾರ ಮಾಡ್ತರೆ ನೋಡ್ತಿನಿ ಅಂದವುನಲಾ.”

“ಅಷ್ಟ್‌ವೊತ್ತಿಗೆ ಏನಾಗ್ತದೊ ಏನೋ, ಯಾರು ಕಂಡವುರೆ, ನೀವು ಡಿ.ಕೆಶಿಗೆ ತುಂಬ ಬೇಕಾದೊರಾದಾಗ ನಿಮ್ಮನ್ನ ನೆಗ್ಲೆಟ್ ಮಾಡಕ್ಕೆ ಬರಲ.”

“ನನ್ನನ್ನ ಯಾರೂ ನೆಗ್ಲೆಟ್ ಮಾಡಕ್ಕಾಗಲ್ಲ ಕಂಡ್ರಿ.”

“ಆಗಲ್ಲ ಸಾರ್, ಪವರಿಗೆ ಬಂದವುರ ಮನೆ ಬಾಗ್ಲಲ್ಲಿ ದಿನ ಹೋಗಿ ನಿಂತಗತ್ತಿರಿ, ಒಂದಿನ ವಳಿಗೆ ಕರದೇ ಕರಿತರೆ.”

“ಏನೇಳ್ತಯಿದ್ದಿರಿ ನೀವು.”

“ಆಗ ದೇವೆಗೌಡ್ರಿಗೆ ಅಂಗೆ ಮಾಡಿದ್ರಲ್ಲ ಸಾರ್, ಅವರು ಮುಖ್ಯಮಂತ್ರಿಯಾಗಿದ್ದಾಗ ಅಪ್ಪಾಜಿ, ಅಪ್ಪಾಜಿ ಅಂತ ಮನೆತಕ್ಕೊಗಿ ಕೂಗುತಿದ್ರಿ ಪಾಪ. ಅವುರ ಮಕ್ಕಾಳ್ಯಾರು ಅಂಗೆ ಕರಿತಿರಲಿಲ್ಲ. ಯಲ್ಲ ಯಪ್ಪ ಯಪ್ಪ ಅಂತಿದ್ದೊ ನೀವು ಅಪ್ಪಾಜಿ ಅಂತ ಕಾಲಿಗೆ ಬಿದ್ದಿದ್ದು ವರ್ಕೌಟಾಯ್ತು, ಹೌಸಿಂಗ್ ಬೋರ್ಡ್ ಛೇರ್ಮನ್ ಮಾಡಿದ್ರು.”

“ಅದ್ಯಲ್ಲ ಹಳೆ ಕತೆ, ಈಗಂಗಿಲ್ಲ ಅವುರು.”

“ನೀವಂಗೆ ಇದ್ದಿರಲ್ಲ ಸಾ, ನೀವು ಬದ್ಲಾಗಿದ್ರೆ ಹಿಂಗ್ಯಾಕಾಗದು.”

“ಅಲ್ಲ ಕಂಡ್ರಿ, ಸತ್ಯ ಮಾತಾಡದು ತಪ್ಪ.”

“ಏನು ಸತ್ಯ ಮಾತಾಡಿದ್ರಿ.”

“ಆ ಮಾದೇಗೌಡ ನನಿಗೆ ಎರಡು ಸತಿ ಟಿಕೆಟ್ ತಪ್ಪಿಸಿದ. ನಾನು ನಮ್ಮೂರಲ್ಲಿ ಒಬ್ಬನ ಮನೆ ಮ್ಯಾಲೆ ದಾಳಿ ಮಾಡಿಸಿದೆ. ಅದ ನೋಡಕ್ಕೆ ಬಂದ ಮಾದೇಗೌಡನಿಗೆ ನನ್ನ ಕಂಡ್ರಾಯ್ತಿರಲಿಲ್ಲ. ಸೋಲಂಗೆ ಮಾಡಿದ. ಆಗ ನಾನು ಗೆದ್ದಿದ್ರೆ ಯಸ್ಸೆಂ ಕೃಷ್ಣನ ಸಂಪುಟದಲ್ಲಿ ಡಿ.ಕೆ ಶಿವಕುಮಾರ್ ಜೊತೆ ನಾನು ಮಂತ್ರಿಯಾಯ್ತಿದ್ದೆ. ಡ್ರಸ್‌ನೂ ಕೂಡ ವಲಿಸಿದ್ದೆ ಕಂಡ್ರಿ, ವಟ್ಟುರಿಯಕ್ಕಿಲ್‌ವೆ ನನಿಗೆ.”

“ಡಿ.ಕೆ ಶಿವಕುಮಾರ್‌ಗೆ ಆಸ್ತಿ ಜಾಸ್ತಿಯಾಗಿ ತೊಂದ್ರೆ ಅನುಭವುಸ್ತಾಯಿದ್ರೆ, ನೀವು ನಾಳಗೆ ತೊಂದಗರಿಗೆ ಸಿಗಾತ್ತಾಯಿದ್ದಿರಿ ಸಾ.”

“ಸತ್ಯ ಮಾತಾಡದ್ರೆ ತಪ್ಪೇನ್ರಿ.”

“ಸತ್ಯ ಮಾತಾಡಿ ಅದರ ಪರಿಣಾಮ ಹೆದ್ರಸಕ್ಕೂ ರೆಡಿಯಾಗಿ.”

“ಈಗ ರೆಡಿಯಾಗಿ ಇದ್ದಿನಲ್ಲ, ನಿಂತ ನೆಲಿಲೆ ಕುಮಾರಸ್ವಾಮಿ ನನ್ನನ್ನ ವಜಾ ಮಾಡಿದ್ರೆ ಹೋಗಿ ಕಾಲಿಗೆ ಬೀಳಕ್ಕಾಯ್ತದಾ.”

“ಆಗಲ್ಲ ಸಾ, ಅವುರ ತಂದೆ ಕಾಲಿಗೇನೂ ಬೀಳಬಹುದು, ಆದ್ರೆ ಕುಮಾರಣ್ಣ ಕಾಲಿಗೆ ನಿಮ್ಮಂತ ಸೀನಿಯರು ಬೀಳಬಾರ್ದು.”

“ಅಲ್ಲ ಕಂಡ್ರಿ ಈ ಅಪ್ಪ ಮಕ್ಕಳು ನನ್ನ ಉಪಕಾರನೆ ಮರತುಬುಡ್ತರಲ್ಲ ಹೇಳಿ.”

“ಉಪಕಾರ ಏನು ಮಾಡಿದ್ರಿ ಸಾ.”

“ಸುಮಲತ ಎಲಕ್ಷನ್ನಿಗೆ ನಿಂತಾಗ ಇದೇ ನಾಗಮಂಗಲದಲ್ಲಿ ಪ್ರಧಾನ ಭಾಷಣಕಾರ ನಾನೆಯ, ಆಗ ಸುಮಲತಕ್ಕನ್ನ ಇವುಳು ಮಾಯಾಂಗನೆ ಜಯಲಲಿತ ಆಗಕ್ಕೆ ಬಂದವುಳೆ ಬುಡಬ್ಯಾಡಿ ಸೋಲಿಸಿ ಅಂದೆ. ಅಗ ದ್ಯಾವೇಗೌಡ್ರು ಮೆಚ್ಚಿ ಶಿವರಾಮೇಗೌಡರು ಮಾತನಾಡಿದ ಮೇಲೆ ನಾನು ಭಾಷಣ ಮಾಡೊ ಅಗತ್ಯ ಇಲ್ಲ ಅಂದ್ರು, ಅವತ್ತು ನಾನು ಕ್ಯಟ್ಟ ಮಾತಾಡಕ್ಕೆ ಪುಸಲಾಯಿಸಿದೋರು. ಇವತ್ತು ಅಂತವೇ ಮಾತಾಡಿದ್ರೆ ಪಾರ್ಟಿಯಿಂದ್ಲೆ ವಜಾ ಮಾಡ್ತಾರೆ ಇದಕೇನೇಳನ.”

“ಅದ್ಕೆ ಸಾರ್ ಯಾರಿಗೂ ಕೆಟ್ಟ ಮಾತಾಡಬಾರ್ದು.”

“ಅದ್ಯಂಗ್ರಿ ಇರಕ್ಕಾಯ್ತದೆ, ಕ್ಯಟ್ಟ ಮನುಸ್ರನ ವಳ್ಳೆ ಮನುಸ್ರು ಅನ್ನಕಾಯ್ತದೆ.”

“ಮಾದೇಗೌಡ್ರು ಕ್ಯಟ್ಟೊರಲ್ಲ, ಮಂಡ್ಯದ ರೈತ ನಾಯಕರು.”

“ಯಾವ ಸೀಮೆ ರೈತನಾಯಕ. ರೈತರಾಗಿದ್ರೆ ವಲ ಉಳತಿದ್ರು, ಮಂಡ್ಯಕ್ಕೆ ಬಂದು ರಾಜಕಾರಣ ಮಾಡತಿರಲಿಲ್ಲ.”

“ರೈತ ನಾಯಕರು ವಲ ಉಳೋ ಅಗತ್ಯಯಿಲ್ಲ, ಕೂಲಿಕೊಟ್ಟು ಉಳುಸಬಹುದು. ಇವತ್ತು ಕಾವೇರಿ ಇಶ್ಯೂ ಹಿಡಕಂಡು ಹೋರಾಡೊ ಅಂಥೋರು ವಬ್ರೂಯಿಲ್ಲ. ಯಾರಿಗೂ ಕೇರ್ ಮಾಡ್ದೆ ನೇರಾ ನೇರಾ ಮಾತಾಡತಿದ್ದ ಮಾದೇಗೌಡ್ರು ಸಮಾಧಿ ವಳಗಿದ್ದ ಕಂಡೇ ನಿಮ್ಮನ್ನ ವಜಾ ಮಾಡುಸ್ತರೆ ಅಂದ್ರೆ, ಅವುರ ಪವರೆಸ್ಟದೆ ಲ್ಯಕ್ಕ ಹಾಕಿ ಸಾ.”

“ಇದ್ಕೆ ನಿಮ್ಮನ್ನ ತಲಿಲ್ದ ಪತ್ರಕರ್ತರು ಅನ್ನದು.”

“ಅಂಗಂತಿರಾ.”

“ಮತ್ತಿನೇನು ಸಾಕ್ಷಿನೆ ಸಿಕ್ತಲ್ಲಾ, ಅಲ್ಲ ಕಂಡ್ರೀ ಜೆಡಿಎಸ್ಸು ಮಂಡ್ಯ ಜಿಲ್ಲೆಲಿ ನ್ಯಲೆ ಕಳಕತ್ತಾ ಅದೆ. ಅಂಥಾ ಟೈಮಲ್ಲಿ ನಾನು ಮಾದೇಗೌಡ್ರು ಬೋದಿದ್ದಿನಿ, ಅದ್ಕೆ ಕುಮಾರಣ್ಣ ಮಾದೇಗೌಡ್ರು ನಮ್ಮವರು, ಅವುರು ಒಕ್ಕಲಿಗರ ಲೀಡ್ರು ಅಂತ ಜಾತಿ ಮಾತಾಡಿ ನನ್ನ ವಜಾ ಮಾಡಿ ಜೆಡಿಎಸ್ ಬ್ಯಳಸಕ್ಕೆ ವಂಟವುರೆ, ಸುಮಲತನ್ನ ಬೈಯಿ ಅಂತ ಹೇಳಿದೋರು, ಮಾದೇಗೌಡ್ರು ಬೋದ್ರೆ ವಜಾ ಮಾಡ್ತರಲ್ಲಾ. ಇದು ರಾಜಕಾರಣ ಅಲವೇನ್ರಿ, ಅದರಲ್ಲೂ ಜಾತಿರಾಜಕಾರಣ ಅಲವೇನ್ರಿ. ಇಂತ ವಿಷಯನೆ ನಿಮಗೆ ತಿಳಿಯದಿಲ್ಲ. ಶಿವರಾಮೇಗೌಡ ಮಾದೇಗೌಡ್ರು ಬೋದ ಅಂತ ಅಲ್ಲೆ ಗಿರಕಿ ವಡಿತಿರಿ.”

“ಮಾದೇಗೌಡ್ರುನ ಏಕವಚನದಲ್ಲಿ ಅಂದು ಬಾಳ ಹಿಂದೆ ಸಾಯಬೇಕಾಗಿತ್ತು ಅಂದಿದ್ದು ತಪ್ಪಲವ ಸಾ.”

“ಅಂದಿದ್ದು ಆಯ್ತು, ಪಾರ್ಟಿಯಿಂದ ತಗದಾಕಿದ್ದು ಆಯ್ತು, ಈಗ್ಯಾಕ್ರಿ ತಪ್ಪಾಯ್ತು ಅನ್ನನಾ.”

“ಥೂತ್ತೇರಿ.”


ಇದನ್ನೂ ಓದಿ: ಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...