Homeಅಂಕಣಗಳುಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

- Advertisement -
- Advertisement -

ಯಾವುದೇ ಪಕ್ಷವಾದರೂ ಹೊಂದಿಕೊಂಡು ಆ ಪಕ್ಷದ ವಕ್ತಾರನಂತೆ ಮಾತನಾಡುತ್ತ ಪಾರ್ಟಿಯ ಮಾನ ಮರ್ಯಾದೆ ಕಾಪಾಡುವಂತಹ ಶಿವರಾಮೇಗೌಡರನ್ನ ಮಾತನಾಡಿಸಿ, ಅವರು ಜೆಡಿಎಸ್‌ನಿಂದ ವಜಾಗೊಂಡಿರುವ ಸಮಯದಲ್ಲಿ ಸಾಂತ್ವನ ಹೇಳುವುದು ನಮ್ಮ ಕರ್ತವ್ಯವಲ್ಲವೆ ಎಂದು ಯೋಚಿಸಿ ಮಾಡಿದರೆ ರಿಂಗಾಯ್ತು. ರಿಂಗ್ ಟೋನ್ “ಯಾರು ಏನು ಮಾಡುವರು, ನನಗೇನೂ ಕೇಡು ಮಾಡುವರು, ಯಾರು…”

“ಹಲೋ ಯಾರು”

“ನಾನು ಸಾರ್ ನಿಮ್ಮ ಹಿತೈಷಿ ಯಾಹೂ.”

“ಹಿತೈಷಿ ಅನ್ನೊರಿಂದ್ಲೆ ಹಿಂಗಾದದ್ದು ಕಂಡ್ರಿ.”

“ನಾವಂಥೋರಲ್ಲ ಸಾ. ನೀವು ಮಾತಾಡಿದ್ದ ನಿಮ್ಮ ಬುಡಕೆ ತರೋದಿಲ್ಲ ಸಾ.”

“ಆಕೆ ಹೆಣ್ಣುಮಗಳು ವಳ್ಯೊಳು ಅಂತ ಮಾತಾಡಿದ್ನಪ್ಪ, ಹಿಂಗೆ ಮಾಡ್ತಳೆ ಅಂತ ಯಾರಿಗೊತ್ತು.”

“ಆಗೊದ್ಯಲ್ಲ ವಳ್ಳೆದ್ಕೆ ಅಂತ ಭಗವದ್ಗೀತೆ ಹೇಳ್ಯದೆ ಸಾ.”

“ಏನೊಳ್ಳೆದಾಯ್ತದೆ.”

“ಡಿ.ಕೆ ಶಿವಕುಮಾರ್ ಮತ್ತೆ ನೀವು ಆತ್ಮೀಯ ಗೆಳೆಯರಲ್ಲವ ಸಾ.”

“ಅದೇನೊ ನಿಜ.”

“ಮತ್ತೆ ಅವುರು ಮುಂದೆ ಪವರಿಗೆ ಬತ್ತಾಯಿರುವಾಗ ನೀವು ಜೆಡಿಎಸ್ಸಿನಲ್ಲಿರದು ಸರೀನಾ ಸಾರ್.”

“ನೀವೇಳಿದ್ದು ಸರಿನೆ, ಅದ್ರೆ ಕುಮಾರಣ್ಣ ನನ್ನ ಬುಟ್ಟು ಯಾರು ಸರಕಾರ ಮಾಡ್ತರೆ ನೋಡ್ತಿನಿ ಅಂದವುನಲಾ.”

“ಅಷ್ಟ್‌ವೊತ್ತಿಗೆ ಏನಾಗ್ತದೊ ಏನೋ, ಯಾರು ಕಂಡವುರೆ, ನೀವು ಡಿ.ಕೆಶಿಗೆ ತುಂಬ ಬೇಕಾದೊರಾದಾಗ ನಿಮ್ಮನ್ನ ನೆಗ್ಲೆಟ್ ಮಾಡಕ್ಕೆ ಬರಲ.”

“ನನ್ನನ್ನ ಯಾರೂ ನೆಗ್ಲೆಟ್ ಮಾಡಕ್ಕಾಗಲ್ಲ ಕಂಡ್ರಿ.”

“ಆಗಲ್ಲ ಸಾರ್, ಪವರಿಗೆ ಬಂದವುರ ಮನೆ ಬಾಗ್ಲಲ್ಲಿ ದಿನ ಹೋಗಿ ನಿಂತಗತ್ತಿರಿ, ಒಂದಿನ ವಳಿಗೆ ಕರದೇ ಕರಿತರೆ.”

“ಏನೇಳ್ತಯಿದ್ದಿರಿ ನೀವು.”

“ಆಗ ದೇವೆಗೌಡ್ರಿಗೆ ಅಂಗೆ ಮಾಡಿದ್ರಲ್ಲ ಸಾರ್, ಅವರು ಮುಖ್ಯಮಂತ್ರಿಯಾಗಿದ್ದಾಗ ಅಪ್ಪಾಜಿ, ಅಪ್ಪಾಜಿ ಅಂತ ಮನೆತಕ್ಕೊಗಿ ಕೂಗುತಿದ್ರಿ ಪಾಪ. ಅವುರ ಮಕ್ಕಾಳ್ಯಾರು ಅಂಗೆ ಕರಿತಿರಲಿಲ್ಲ. ಯಲ್ಲ ಯಪ್ಪ ಯಪ್ಪ ಅಂತಿದ್ದೊ ನೀವು ಅಪ್ಪಾಜಿ ಅಂತ ಕಾಲಿಗೆ ಬಿದ್ದಿದ್ದು ವರ್ಕೌಟಾಯ್ತು, ಹೌಸಿಂಗ್ ಬೋರ್ಡ್ ಛೇರ್ಮನ್ ಮಾಡಿದ್ರು.”

“ಅದ್ಯಲ್ಲ ಹಳೆ ಕತೆ, ಈಗಂಗಿಲ್ಲ ಅವುರು.”

“ನೀವಂಗೆ ಇದ್ದಿರಲ್ಲ ಸಾ, ನೀವು ಬದ್ಲಾಗಿದ್ರೆ ಹಿಂಗ್ಯಾಕಾಗದು.”

“ಅಲ್ಲ ಕಂಡ್ರಿ, ಸತ್ಯ ಮಾತಾಡದು ತಪ್ಪ.”

“ಏನು ಸತ್ಯ ಮಾತಾಡಿದ್ರಿ.”

“ಆ ಮಾದೇಗೌಡ ನನಿಗೆ ಎರಡು ಸತಿ ಟಿಕೆಟ್ ತಪ್ಪಿಸಿದ. ನಾನು ನಮ್ಮೂರಲ್ಲಿ ಒಬ್ಬನ ಮನೆ ಮ್ಯಾಲೆ ದಾಳಿ ಮಾಡಿಸಿದೆ. ಅದ ನೋಡಕ್ಕೆ ಬಂದ ಮಾದೇಗೌಡನಿಗೆ ನನ್ನ ಕಂಡ್ರಾಯ್ತಿರಲಿಲ್ಲ. ಸೋಲಂಗೆ ಮಾಡಿದ. ಆಗ ನಾನು ಗೆದ್ದಿದ್ರೆ ಯಸ್ಸೆಂ ಕೃಷ್ಣನ ಸಂಪುಟದಲ್ಲಿ ಡಿ.ಕೆ ಶಿವಕುಮಾರ್ ಜೊತೆ ನಾನು ಮಂತ್ರಿಯಾಯ್ತಿದ್ದೆ. ಡ್ರಸ್‌ನೂ ಕೂಡ ವಲಿಸಿದ್ದೆ ಕಂಡ್ರಿ, ವಟ್ಟುರಿಯಕ್ಕಿಲ್‌ವೆ ನನಿಗೆ.”

“ಡಿ.ಕೆ ಶಿವಕುಮಾರ್‌ಗೆ ಆಸ್ತಿ ಜಾಸ್ತಿಯಾಗಿ ತೊಂದ್ರೆ ಅನುಭವುಸ್ತಾಯಿದ್ರೆ, ನೀವು ನಾಳಗೆ ತೊಂದಗರಿಗೆ ಸಿಗಾತ್ತಾಯಿದ್ದಿರಿ ಸಾ.”

“ಸತ್ಯ ಮಾತಾಡದ್ರೆ ತಪ್ಪೇನ್ರಿ.”

“ಸತ್ಯ ಮಾತಾಡಿ ಅದರ ಪರಿಣಾಮ ಹೆದ್ರಸಕ್ಕೂ ರೆಡಿಯಾಗಿ.”

“ಈಗ ರೆಡಿಯಾಗಿ ಇದ್ದಿನಲ್ಲ, ನಿಂತ ನೆಲಿಲೆ ಕುಮಾರಸ್ವಾಮಿ ನನ್ನನ್ನ ವಜಾ ಮಾಡಿದ್ರೆ ಹೋಗಿ ಕಾಲಿಗೆ ಬೀಳಕ್ಕಾಯ್ತದಾ.”

“ಆಗಲ್ಲ ಸಾ, ಅವುರ ತಂದೆ ಕಾಲಿಗೇನೂ ಬೀಳಬಹುದು, ಆದ್ರೆ ಕುಮಾರಣ್ಣ ಕಾಲಿಗೆ ನಿಮ್ಮಂತ ಸೀನಿಯರು ಬೀಳಬಾರ್ದು.”

“ಅಲ್ಲ ಕಂಡ್ರಿ ಈ ಅಪ್ಪ ಮಕ್ಕಳು ನನ್ನ ಉಪಕಾರನೆ ಮರತುಬುಡ್ತರಲ್ಲ ಹೇಳಿ.”

“ಉಪಕಾರ ಏನು ಮಾಡಿದ್ರಿ ಸಾ.”

“ಸುಮಲತ ಎಲಕ್ಷನ್ನಿಗೆ ನಿಂತಾಗ ಇದೇ ನಾಗಮಂಗಲದಲ್ಲಿ ಪ್ರಧಾನ ಭಾಷಣಕಾರ ನಾನೆಯ, ಆಗ ಸುಮಲತಕ್ಕನ್ನ ಇವುಳು ಮಾಯಾಂಗನೆ ಜಯಲಲಿತ ಆಗಕ್ಕೆ ಬಂದವುಳೆ ಬುಡಬ್ಯಾಡಿ ಸೋಲಿಸಿ ಅಂದೆ. ಅಗ ದ್ಯಾವೇಗೌಡ್ರು ಮೆಚ್ಚಿ ಶಿವರಾಮೇಗೌಡರು ಮಾತನಾಡಿದ ಮೇಲೆ ನಾನು ಭಾಷಣ ಮಾಡೊ ಅಗತ್ಯ ಇಲ್ಲ ಅಂದ್ರು, ಅವತ್ತು ನಾನು ಕ್ಯಟ್ಟ ಮಾತಾಡಕ್ಕೆ ಪುಸಲಾಯಿಸಿದೋರು. ಇವತ್ತು ಅಂತವೇ ಮಾತಾಡಿದ್ರೆ ಪಾರ್ಟಿಯಿಂದ್ಲೆ ವಜಾ ಮಾಡ್ತಾರೆ ಇದಕೇನೇಳನ.”

“ಅದ್ಕೆ ಸಾರ್ ಯಾರಿಗೂ ಕೆಟ್ಟ ಮಾತಾಡಬಾರ್ದು.”

“ಅದ್ಯಂಗ್ರಿ ಇರಕ್ಕಾಯ್ತದೆ, ಕ್ಯಟ್ಟ ಮನುಸ್ರನ ವಳ್ಳೆ ಮನುಸ್ರು ಅನ್ನಕಾಯ್ತದೆ.”

“ಮಾದೇಗೌಡ್ರು ಕ್ಯಟ್ಟೊರಲ್ಲ, ಮಂಡ್ಯದ ರೈತ ನಾಯಕರು.”

“ಯಾವ ಸೀಮೆ ರೈತನಾಯಕ. ರೈತರಾಗಿದ್ರೆ ವಲ ಉಳತಿದ್ರು, ಮಂಡ್ಯಕ್ಕೆ ಬಂದು ರಾಜಕಾರಣ ಮಾಡತಿರಲಿಲ್ಲ.”

“ರೈತ ನಾಯಕರು ವಲ ಉಳೋ ಅಗತ್ಯಯಿಲ್ಲ, ಕೂಲಿಕೊಟ್ಟು ಉಳುಸಬಹುದು. ಇವತ್ತು ಕಾವೇರಿ ಇಶ್ಯೂ ಹಿಡಕಂಡು ಹೋರಾಡೊ ಅಂಥೋರು ವಬ್ರೂಯಿಲ್ಲ. ಯಾರಿಗೂ ಕೇರ್ ಮಾಡ್ದೆ ನೇರಾ ನೇರಾ ಮಾತಾಡತಿದ್ದ ಮಾದೇಗೌಡ್ರು ಸಮಾಧಿ ವಳಗಿದ್ದ ಕಂಡೇ ನಿಮ್ಮನ್ನ ವಜಾ ಮಾಡುಸ್ತರೆ ಅಂದ್ರೆ, ಅವುರ ಪವರೆಸ್ಟದೆ ಲ್ಯಕ್ಕ ಹಾಕಿ ಸಾ.”

“ಇದ್ಕೆ ನಿಮ್ಮನ್ನ ತಲಿಲ್ದ ಪತ್ರಕರ್ತರು ಅನ್ನದು.”

“ಅಂಗಂತಿರಾ.”

“ಮತ್ತಿನೇನು ಸಾಕ್ಷಿನೆ ಸಿಕ್ತಲ್ಲಾ, ಅಲ್ಲ ಕಂಡ್ರೀ ಜೆಡಿಎಸ್ಸು ಮಂಡ್ಯ ಜಿಲ್ಲೆಲಿ ನ್ಯಲೆ ಕಳಕತ್ತಾ ಅದೆ. ಅಂಥಾ ಟೈಮಲ್ಲಿ ನಾನು ಮಾದೇಗೌಡ್ರು ಬೋದಿದ್ದಿನಿ, ಅದ್ಕೆ ಕುಮಾರಣ್ಣ ಮಾದೇಗೌಡ್ರು ನಮ್ಮವರು, ಅವುರು ಒಕ್ಕಲಿಗರ ಲೀಡ್ರು ಅಂತ ಜಾತಿ ಮಾತಾಡಿ ನನ್ನ ವಜಾ ಮಾಡಿ ಜೆಡಿಎಸ್ ಬ್ಯಳಸಕ್ಕೆ ವಂಟವುರೆ, ಸುಮಲತನ್ನ ಬೈಯಿ ಅಂತ ಹೇಳಿದೋರು, ಮಾದೇಗೌಡ್ರು ಬೋದ್ರೆ ವಜಾ ಮಾಡ್ತರಲ್ಲಾ. ಇದು ರಾಜಕಾರಣ ಅಲವೇನ್ರಿ, ಅದರಲ್ಲೂ ಜಾತಿರಾಜಕಾರಣ ಅಲವೇನ್ರಿ. ಇಂತ ವಿಷಯನೆ ನಿಮಗೆ ತಿಳಿಯದಿಲ್ಲ. ಶಿವರಾಮೇಗೌಡ ಮಾದೇಗೌಡ್ರು ಬೋದ ಅಂತ ಅಲ್ಲೆ ಗಿರಕಿ ವಡಿತಿರಿ.”

“ಮಾದೇಗೌಡ್ರುನ ಏಕವಚನದಲ್ಲಿ ಅಂದು ಬಾಳ ಹಿಂದೆ ಸಾಯಬೇಕಾಗಿತ್ತು ಅಂದಿದ್ದು ತಪ್ಪಲವ ಸಾ.”

“ಅಂದಿದ್ದು ಆಯ್ತು, ಪಾರ್ಟಿಯಿಂದ ತಗದಾಕಿದ್ದು ಆಯ್ತು, ಈಗ್ಯಾಕ್ರಿ ತಪ್ಪಾಯ್ತು ಅನ್ನನಾ.”

“ಥೂತ್ತೇರಿ.”


ಇದನ್ನೂ ಓದಿ: ಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...