Homeಅಂಕಣಗಳುಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

- Advertisement -
- Advertisement -

ಯಾವುದೇ ಪಕ್ಷವಾದರೂ ಹೊಂದಿಕೊಂಡು ಆ ಪಕ್ಷದ ವಕ್ತಾರನಂತೆ ಮಾತನಾಡುತ್ತ ಪಾರ್ಟಿಯ ಮಾನ ಮರ್ಯಾದೆ ಕಾಪಾಡುವಂತಹ ಶಿವರಾಮೇಗೌಡರನ್ನ ಮಾತನಾಡಿಸಿ, ಅವರು ಜೆಡಿಎಸ್‌ನಿಂದ ವಜಾಗೊಂಡಿರುವ ಸಮಯದಲ್ಲಿ ಸಾಂತ್ವನ ಹೇಳುವುದು ನಮ್ಮ ಕರ್ತವ್ಯವಲ್ಲವೆ ಎಂದು ಯೋಚಿಸಿ ಮಾಡಿದರೆ ರಿಂಗಾಯ್ತು. ರಿಂಗ್ ಟೋನ್ “ಯಾರು ಏನು ಮಾಡುವರು, ನನಗೇನೂ ಕೇಡು ಮಾಡುವರು, ಯಾರು…”

“ಹಲೋ ಯಾರು”

“ನಾನು ಸಾರ್ ನಿಮ್ಮ ಹಿತೈಷಿ ಯಾಹೂ.”

“ಹಿತೈಷಿ ಅನ್ನೊರಿಂದ್ಲೆ ಹಿಂಗಾದದ್ದು ಕಂಡ್ರಿ.”

“ನಾವಂಥೋರಲ್ಲ ಸಾ. ನೀವು ಮಾತಾಡಿದ್ದ ನಿಮ್ಮ ಬುಡಕೆ ತರೋದಿಲ್ಲ ಸಾ.”

“ಆಕೆ ಹೆಣ್ಣುಮಗಳು ವಳ್ಯೊಳು ಅಂತ ಮಾತಾಡಿದ್ನಪ್ಪ, ಹಿಂಗೆ ಮಾಡ್ತಳೆ ಅಂತ ಯಾರಿಗೊತ್ತು.”

“ಆಗೊದ್ಯಲ್ಲ ವಳ್ಳೆದ್ಕೆ ಅಂತ ಭಗವದ್ಗೀತೆ ಹೇಳ್ಯದೆ ಸಾ.”

“ಏನೊಳ್ಳೆದಾಯ್ತದೆ.”

“ಡಿ.ಕೆ ಶಿವಕುಮಾರ್ ಮತ್ತೆ ನೀವು ಆತ್ಮೀಯ ಗೆಳೆಯರಲ್ಲವ ಸಾ.”

“ಅದೇನೊ ನಿಜ.”

“ಮತ್ತೆ ಅವುರು ಮುಂದೆ ಪವರಿಗೆ ಬತ್ತಾಯಿರುವಾಗ ನೀವು ಜೆಡಿಎಸ್ಸಿನಲ್ಲಿರದು ಸರೀನಾ ಸಾರ್.”

“ನೀವೇಳಿದ್ದು ಸರಿನೆ, ಅದ್ರೆ ಕುಮಾರಣ್ಣ ನನ್ನ ಬುಟ್ಟು ಯಾರು ಸರಕಾರ ಮಾಡ್ತರೆ ನೋಡ್ತಿನಿ ಅಂದವುನಲಾ.”

“ಅಷ್ಟ್‌ವೊತ್ತಿಗೆ ಏನಾಗ್ತದೊ ಏನೋ, ಯಾರು ಕಂಡವುರೆ, ನೀವು ಡಿ.ಕೆಶಿಗೆ ತುಂಬ ಬೇಕಾದೊರಾದಾಗ ನಿಮ್ಮನ್ನ ನೆಗ್ಲೆಟ್ ಮಾಡಕ್ಕೆ ಬರಲ.”

“ನನ್ನನ್ನ ಯಾರೂ ನೆಗ್ಲೆಟ್ ಮಾಡಕ್ಕಾಗಲ್ಲ ಕಂಡ್ರಿ.”

“ಆಗಲ್ಲ ಸಾರ್, ಪವರಿಗೆ ಬಂದವುರ ಮನೆ ಬಾಗ್ಲಲ್ಲಿ ದಿನ ಹೋಗಿ ನಿಂತಗತ್ತಿರಿ, ಒಂದಿನ ವಳಿಗೆ ಕರದೇ ಕರಿತರೆ.”

“ಏನೇಳ್ತಯಿದ್ದಿರಿ ನೀವು.”

“ಆಗ ದೇವೆಗೌಡ್ರಿಗೆ ಅಂಗೆ ಮಾಡಿದ್ರಲ್ಲ ಸಾರ್, ಅವರು ಮುಖ್ಯಮಂತ್ರಿಯಾಗಿದ್ದಾಗ ಅಪ್ಪಾಜಿ, ಅಪ್ಪಾಜಿ ಅಂತ ಮನೆತಕ್ಕೊಗಿ ಕೂಗುತಿದ್ರಿ ಪಾಪ. ಅವುರ ಮಕ್ಕಾಳ್ಯಾರು ಅಂಗೆ ಕರಿತಿರಲಿಲ್ಲ. ಯಲ್ಲ ಯಪ್ಪ ಯಪ್ಪ ಅಂತಿದ್ದೊ ನೀವು ಅಪ್ಪಾಜಿ ಅಂತ ಕಾಲಿಗೆ ಬಿದ್ದಿದ್ದು ವರ್ಕೌಟಾಯ್ತು, ಹೌಸಿಂಗ್ ಬೋರ್ಡ್ ಛೇರ್ಮನ್ ಮಾಡಿದ್ರು.”

“ಅದ್ಯಲ್ಲ ಹಳೆ ಕತೆ, ಈಗಂಗಿಲ್ಲ ಅವುರು.”

“ನೀವಂಗೆ ಇದ್ದಿರಲ್ಲ ಸಾ, ನೀವು ಬದ್ಲಾಗಿದ್ರೆ ಹಿಂಗ್ಯಾಕಾಗದು.”

“ಅಲ್ಲ ಕಂಡ್ರಿ, ಸತ್ಯ ಮಾತಾಡದು ತಪ್ಪ.”

“ಏನು ಸತ್ಯ ಮಾತಾಡಿದ್ರಿ.”

“ಆ ಮಾದೇಗೌಡ ನನಿಗೆ ಎರಡು ಸತಿ ಟಿಕೆಟ್ ತಪ್ಪಿಸಿದ. ನಾನು ನಮ್ಮೂರಲ್ಲಿ ಒಬ್ಬನ ಮನೆ ಮ್ಯಾಲೆ ದಾಳಿ ಮಾಡಿಸಿದೆ. ಅದ ನೋಡಕ್ಕೆ ಬಂದ ಮಾದೇಗೌಡನಿಗೆ ನನ್ನ ಕಂಡ್ರಾಯ್ತಿರಲಿಲ್ಲ. ಸೋಲಂಗೆ ಮಾಡಿದ. ಆಗ ನಾನು ಗೆದ್ದಿದ್ರೆ ಯಸ್ಸೆಂ ಕೃಷ್ಣನ ಸಂಪುಟದಲ್ಲಿ ಡಿ.ಕೆ ಶಿವಕುಮಾರ್ ಜೊತೆ ನಾನು ಮಂತ್ರಿಯಾಯ್ತಿದ್ದೆ. ಡ್ರಸ್‌ನೂ ಕೂಡ ವಲಿಸಿದ್ದೆ ಕಂಡ್ರಿ, ವಟ್ಟುರಿಯಕ್ಕಿಲ್‌ವೆ ನನಿಗೆ.”

“ಡಿ.ಕೆ ಶಿವಕುಮಾರ್‌ಗೆ ಆಸ್ತಿ ಜಾಸ್ತಿಯಾಗಿ ತೊಂದ್ರೆ ಅನುಭವುಸ್ತಾಯಿದ್ರೆ, ನೀವು ನಾಳಗೆ ತೊಂದಗರಿಗೆ ಸಿಗಾತ್ತಾಯಿದ್ದಿರಿ ಸಾ.”

“ಸತ್ಯ ಮಾತಾಡದ್ರೆ ತಪ್ಪೇನ್ರಿ.”

“ಸತ್ಯ ಮಾತಾಡಿ ಅದರ ಪರಿಣಾಮ ಹೆದ್ರಸಕ್ಕೂ ರೆಡಿಯಾಗಿ.”

“ಈಗ ರೆಡಿಯಾಗಿ ಇದ್ದಿನಲ್ಲ, ನಿಂತ ನೆಲಿಲೆ ಕುಮಾರಸ್ವಾಮಿ ನನ್ನನ್ನ ವಜಾ ಮಾಡಿದ್ರೆ ಹೋಗಿ ಕಾಲಿಗೆ ಬೀಳಕ್ಕಾಯ್ತದಾ.”

“ಆಗಲ್ಲ ಸಾ, ಅವುರ ತಂದೆ ಕಾಲಿಗೇನೂ ಬೀಳಬಹುದು, ಆದ್ರೆ ಕುಮಾರಣ್ಣ ಕಾಲಿಗೆ ನಿಮ್ಮಂತ ಸೀನಿಯರು ಬೀಳಬಾರ್ದು.”

“ಅಲ್ಲ ಕಂಡ್ರಿ ಈ ಅಪ್ಪ ಮಕ್ಕಳು ನನ್ನ ಉಪಕಾರನೆ ಮರತುಬುಡ್ತರಲ್ಲ ಹೇಳಿ.”

“ಉಪಕಾರ ಏನು ಮಾಡಿದ್ರಿ ಸಾ.”

“ಸುಮಲತ ಎಲಕ್ಷನ್ನಿಗೆ ನಿಂತಾಗ ಇದೇ ನಾಗಮಂಗಲದಲ್ಲಿ ಪ್ರಧಾನ ಭಾಷಣಕಾರ ನಾನೆಯ, ಆಗ ಸುಮಲತಕ್ಕನ್ನ ಇವುಳು ಮಾಯಾಂಗನೆ ಜಯಲಲಿತ ಆಗಕ್ಕೆ ಬಂದವುಳೆ ಬುಡಬ್ಯಾಡಿ ಸೋಲಿಸಿ ಅಂದೆ. ಅಗ ದ್ಯಾವೇಗೌಡ್ರು ಮೆಚ್ಚಿ ಶಿವರಾಮೇಗೌಡರು ಮಾತನಾಡಿದ ಮೇಲೆ ನಾನು ಭಾಷಣ ಮಾಡೊ ಅಗತ್ಯ ಇಲ್ಲ ಅಂದ್ರು, ಅವತ್ತು ನಾನು ಕ್ಯಟ್ಟ ಮಾತಾಡಕ್ಕೆ ಪುಸಲಾಯಿಸಿದೋರು. ಇವತ್ತು ಅಂತವೇ ಮಾತಾಡಿದ್ರೆ ಪಾರ್ಟಿಯಿಂದ್ಲೆ ವಜಾ ಮಾಡ್ತಾರೆ ಇದಕೇನೇಳನ.”

“ಅದ್ಕೆ ಸಾರ್ ಯಾರಿಗೂ ಕೆಟ್ಟ ಮಾತಾಡಬಾರ್ದು.”

“ಅದ್ಯಂಗ್ರಿ ಇರಕ್ಕಾಯ್ತದೆ, ಕ್ಯಟ್ಟ ಮನುಸ್ರನ ವಳ್ಳೆ ಮನುಸ್ರು ಅನ್ನಕಾಯ್ತದೆ.”

“ಮಾದೇಗೌಡ್ರು ಕ್ಯಟ್ಟೊರಲ್ಲ, ಮಂಡ್ಯದ ರೈತ ನಾಯಕರು.”

“ಯಾವ ಸೀಮೆ ರೈತನಾಯಕ. ರೈತರಾಗಿದ್ರೆ ವಲ ಉಳತಿದ್ರು, ಮಂಡ್ಯಕ್ಕೆ ಬಂದು ರಾಜಕಾರಣ ಮಾಡತಿರಲಿಲ್ಲ.”

“ರೈತ ನಾಯಕರು ವಲ ಉಳೋ ಅಗತ್ಯಯಿಲ್ಲ, ಕೂಲಿಕೊಟ್ಟು ಉಳುಸಬಹುದು. ಇವತ್ತು ಕಾವೇರಿ ಇಶ್ಯೂ ಹಿಡಕಂಡು ಹೋರಾಡೊ ಅಂಥೋರು ವಬ್ರೂಯಿಲ್ಲ. ಯಾರಿಗೂ ಕೇರ್ ಮಾಡ್ದೆ ನೇರಾ ನೇರಾ ಮಾತಾಡತಿದ್ದ ಮಾದೇಗೌಡ್ರು ಸಮಾಧಿ ವಳಗಿದ್ದ ಕಂಡೇ ನಿಮ್ಮನ್ನ ವಜಾ ಮಾಡುಸ್ತರೆ ಅಂದ್ರೆ, ಅವುರ ಪವರೆಸ್ಟದೆ ಲ್ಯಕ್ಕ ಹಾಕಿ ಸಾ.”

“ಇದ್ಕೆ ನಿಮ್ಮನ್ನ ತಲಿಲ್ದ ಪತ್ರಕರ್ತರು ಅನ್ನದು.”

“ಅಂಗಂತಿರಾ.”

“ಮತ್ತಿನೇನು ಸಾಕ್ಷಿನೆ ಸಿಕ್ತಲ್ಲಾ, ಅಲ್ಲ ಕಂಡ್ರೀ ಜೆಡಿಎಸ್ಸು ಮಂಡ್ಯ ಜಿಲ್ಲೆಲಿ ನ್ಯಲೆ ಕಳಕತ್ತಾ ಅದೆ. ಅಂಥಾ ಟೈಮಲ್ಲಿ ನಾನು ಮಾದೇಗೌಡ್ರು ಬೋದಿದ್ದಿನಿ, ಅದ್ಕೆ ಕುಮಾರಣ್ಣ ಮಾದೇಗೌಡ್ರು ನಮ್ಮವರು, ಅವುರು ಒಕ್ಕಲಿಗರ ಲೀಡ್ರು ಅಂತ ಜಾತಿ ಮಾತಾಡಿ ನನ್ನ ವಜಾ ಮಾಡಿ ಜೆಡಿಎಸ್ ಬ್ಯಳಸಕ್ಕೆ ವಂಟವುರೆ, ಸುಮಲತನ್ನ ಬೈಯಿ ಅಂತ ಹೇಳಿದೋರು, ಮಾದೇಗೌಡ್ರು ಬೋದ್ರೆ ವಜಾ ಮಾಡ್ತರಲ್ಲಾ. ಇದು ರಾಜಕಾರಣ ಅಲವೇನ್ರಿ, ಅದರಲ್ಲೂ ಜಾತಿರಾಜಕಾರಣ ಅಲವೇನ್ರಿ. ಇಂತ ವಿಷಯನೆ ನಿಮಗೆ ತಿಳಿಯದಿಲ್ಲ. ಶಿವರಾಮೇಗೌಡ ಮಾದೇಗೌಡ್ರು ಬೋದ ಅಂತ ಅಲ್ಲೆ ಗಿರಕಿ ವಡಿತಿರಿ.”

“ಮಾದೇಗೌಡ್ರುನ ಏಕವಚನದಲ್ಲಿ ಅಂದು ಬಾಳ ಹಿಂದೆ ಸಾಯಬೇಕಾಗಿತ್ತು ಅಂದಿದ್ದು ತಪ್ಪಲವ ಸಾ.”

“ಅಂದಿದ್ದು ಆಯ್ತು, ಪಾರ್ಟಿಯಿಂದ ತಗದಾಕಿದ್ದು ಆಯ್ತು, ಈಗ್ಯಾಕ್ರಿ ತಪ್ಪಾಯ್ತು ಅನ್ನನಾ.”

“ಥೂತ್ತೇರಿ.”


ಇದನ್ನೂ ಓದಿ: ಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...