Homeಅಂಕಣಗಳುಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

- Advertisement -
- Advertisement -

ಯಾವುದೇ ಪಕ್ಷವಾದರೂ ಹೊಂದಿಕೊಂಡು ಆ ಪಕ್ಷದ ವಕ್ತಾರನಂತೆ ಮಾತನಾಡುತ್ತ ಪಾರ್ಟಿಯ ಮಾನ ಮರ್ಯಾದೆ ಕಾಪಾಡುವಂತಹ ಶಿವರಾಮೇಗೌಡರನ್ನ ಮಾತನಾಡಿಸಿ, ಅವರು ಜೆಡಿಎಸ್‌ನಿಂದ ವಜಾಗೊಂಡಿರುವ ಸಮಯದಲ್ಲಿ ಸಾಂತ್ವನ ಹೇಳುವುದು ನಮ್ಮ ಕರ್ತವ್ಯವಲ್ಲವೆ ಎಂದು ಯೋಚಿಸಿ ಮಾಡಿದರೆ ರಿಂಗಾಯ್ತು. ರಿಂಗ್ ಟೋನ್ “ಯಾರು ಏನು ಮಾಡುವರು, ನನಗೇನೂ ಕೇಡು ಮಾಡುವರು, ಯಾರು…”

“ಹಲೋ ಯಾರು”

“ನಾನು ಸಾರ್ ನಿಮ್ಮ ಹಿತೈಷಿ ಯಾಹೂ.”

“ಹಿತೈಷಿ ಅನ್ನೊರಿಂದ್ಲೆ ಹಿಂಗಾದದ್ದು ಕಂಡ್ರಿ.”

“ನಾವಂಥೋರಲ್ಲ ಸಾ. ನೀವು ಮಾತಾಡಿದ್ದ ನಿಮ್ಮ ಬುಡಕೆ ತರೋದಿಲ್ಲ ಸಾ.”

“ಆಕೆ ಹೆಣ್ಣುಮಗಳು ವಳ್ಯೊಳು ಅಂತ ಮಾತಾಡಿದ್ನಪ್ಪ, ಹಿಂಗೆ ಮಾಡ್ತಳೆ ಅಂತ ಯಾರಿಗೊತ್ತು.”

“ಆಗೊದ್ಯಲ್ಲ ವಳ್ಳೆದ್ಕೆ ಅಂತ ಭಗವದ್ಗೀತೆ ಹೇಳ್ಯದೆ ಸಾ.”

“ಏನೊಳ್ಳೆದಾಯ್ತದೆ.”

“ಡಿ.ಕೆ ಶಿವಕುಮಾರ್ ಮತ್ತೆ ನೀವು ಆತ್ಮೀಯ ಗೆಳೆಯರಲ್ಲವ ಸಾ.”

“ಅದೇನೊ ನಿಜ.”

“ಮತ್ತೆ ಅವುರು ಮುಂದೆ ಪವರಿಗೆ ಬತ್ತಾಯಿರುವಾಗ ನೀವು ಜೆಡಿಎಸ್ಸಿನಲ್ಲಿರದು ಸರೀನಾ ಸಾರ್.”

“ನೀವೇಳಿದ್ದು ಸರಿನೆ, ಅದ್ರೆ ಕುಮಾರಣ್ಣ ನನ್ನ ಬುಟ್ಟು ಯಾರು ಸರಕಾರ ಮಾಡ್ತರೆ ನೋಡ್ತಿನಿ ಅಂದವುನಲಾ.”

“ಅಷ್ಟ್‌ವೊತ್ತಿಗೆ ಏನಾಗ್ತದೊ ಏನೋ, ಯಾರು ಕಂಡವುರೆ, ನೀವು ಡಿ.ಕೆಶಿಗೆ ತುಂಬ ಬೇಕಾದೊರಾದಾಗ ನಿಮ್ಮನ್ನ ನೆಗ್ಲೆಟ್ ಮಾಡಕ್ಕೆ ಬರಲ.”

“ನನ್ನನ್ನ ಯಾರೂ ನೆಗ್ಲೆಟ್ ಮಾಡಕ್ಕಾಗಲ್ಲ ಕಂಡ್ರಿ.”

“ಆಗಲ್ಲ ಸಾರ್, ಪವರಿಗೆ ಬಂದವುರ ಮನೆ ಬಾಗ್ಲಲ್ಲಿ ದಿನ ಹೋಗಿ ನಿಂತಗತ್ತಿರಿ, ಒಂದಿನ ವಳಿಗೆ ಕರದೇ ಕರಿತರೆ.”

“ಏನೇಳ್ತಯಿದ್ದಿರಿ ನೀವು.”

“ಆಗ ದೇವೆಗೌಡ್ರಿಗೆ ಅಂಗೆ ಮಾಡಿದ್ರಲ್ಲ ಸಾರ್, ಅವರು ಮುಖ್ಯಮಂತ್ರಿಯಾಗಿದ್ದಾಗ ಅಪ್ಪಾಜಿ, ಅಪ್ಪಾಜಿ ಅಂತ ಮನೆತಕ್ಕೊಗಿ ಕೂಗುತಿದ್ರಿ ಪಾಪ. ಅವುರ ಮಕ್ಕಾಳ್ಯಾರು ಅಂಗೆ ಕರಿತಿರಲಿಲ್ಲ. ಯಲ್ಲ ಯಪ್ಪ ಯಪ್ಪ ಅಂತಿದ್ದೊ ನೀವು ಅಪ್ಪಾಜಿ ಅಂತ ಕಾಲಿಗೆ ಬಿದ್ದಿದ್ದು ವರ್ಕೌಟಾಯ್ತು, ಹೌಸಿಂಗ್ ಬೋರ್ಡ್ ಛೇರ್ಮನ್ ಮಾಡಿದ್ರು.”

“ಅದ್ಯಲ್ಲ ಹಳೆ ಕತೆ, ಈಗಂಗಿಲ್ಲ ಅವುರು.”

“ನೀವಂಗೆ ಇದ್ದಿರಲ್ಲ ಸಾ, ನೀವು ಬದ್ಲಾಗಿದ್ರೆ ಹಿಂಗ್ಯಾಕಾಗದು.”

“ಅಲ್ಲ ಕಂಡ್ರಿ, ಸತ್ಯ ಮಾತಾಡದು ತಪ್ಪ.”

“ಏನು ಸತ್ಯ ಮಾತಾಡಿದ್ರಿ.”

“ಆ ಮಾದೇಗೌಡ ನನಿಗೆ ಎರಡು ಸತಿ ಟಿಕೆಟ್ ತಪ್ಪಿಸಿದ. ನಾನು ನಮ್ಮೂರಲ್ಲಿ ಒಬ್ಬನ ಮನೆ ಮ್ಯಾಲೆ ದಾಳಿ ಮಾಡಿಸಿದೆ. ಅದ ನೋಡಕ್ಕೆ ಬಂದ ಮಾದೇಗೌಡನಿಗೆ ನನ್ನ ಕಂಡ್ರಾಯ್ತಿರಲಿಲ್ಲ. ಸೋಲಂಗೆ ಮಾಡಿದ. ಆಗ ನಾನು ಗೆದ್ದಿದ್ರೆ ಯಸ್ಸೆಂ ಕೃಷ್ಣನ ಸಂಪುಟದಲ್ಲಿ ಡಿ.ಕೆ ಶಿವಕುಮಾರ್ ಜೊತೆ ನಾನು ಮಂತ್ರಿಯಾಯ್ತಿದ್ದೆ. ಡ್ರಸ್‌ನೂ ಕೂಡ ವಲಿಸಿದ್ದೆ ಕಂಡ್ರಿ, ವಟ್ಟುರಿಯಕ್ಕಿಲ್‌ವೆ ನನಿಗೆ.”

“ಡಿ.ಕೆ ಶಿವಕುಮಾರ್‌ಗೆ ಆಸ್ತಿ ಜಾಸ್ತಿಯಾಗಿ ತೊಂದ್ರೆ ಅನುಭವುಸ್ತಾಯಿದ್ರೆ, ನೀವು ನಾಳಗೆ ತೊಂದಗರಿಗೆ ಸಿಗಾತ್ತಾಯಿದ್ದಿರಿ ಸಾ.”

“ಸತ್ಯ ಮಾತಾಡದ್ರೆ ತಪ್ಪೇನ್ರಿ.”

“ಸತ್ಯ ಮಾತಾಡಿ ಅದರ ಪರಿಣಾಮ ಹೆದ್ರಸಕ್ಕೂ ರೆಡಿಯಾಗಿ.”

“ಈಗ ರೆಡಿಯಾಗಿ ಇದ್ದಿನಲ್ಲ, ನಿಂತ ನೆಲಿಲೆ ಕುಮಾರಸ್ವಾಮಿ ನನ್ನನ್ನ ವಜಾ ಮಾಡಿದ್ರೆ ಹೋಗಿ ಕಾಲಿಗೆ ಬೀಳಕ್ಕಾಯ್ತದಾ.”

“ಆಗಲ್ಲ ಸಾ, ಅವುರ ತಂದೆ ಕಾಲಿಗೇನೂ ಬೀಳಬಹುದು, ಆದ್ರೆ ಕುಮಾರಣ್ಣ ಕಾಲಿಗೆ ನಿಮ್ಮಂತ ಸೀನಿಯರು ಬೀಳಬಾರ್ದು.”

“ಅಲ್ಲ ಕಂಡ್ರಿ ಈ ಅಪ್ಪ ಮಕ್ಕಳು ನನ್ನ ಉಪಕಾರನೆ ಮರತುಬುಡ್ತರಲ್ಲ ಹೇಳಿ.”

“ಉಪಕಾರ ಏನು ಮಾಡಿದ್ರಿ ಸಾ.”

“ಸುಮಲತ ಎಲಕ್ಷನ್ನಿಗೆ ನಿಂತಾಗ ಇದೇ ನಾಗಮಂಗಲದಲ್ಲಿ ಪ್ರಧಾನ ಭಾಷಣಕಾರ ನಾನೆಯ, ಆಗ ಸುಮಲತಕ್ಕನ್ನ ಇವುಳು ಮಾಯಾಂಗನೆ ಜಯಲಲಿತ ಆಗಕ್ಕೆ ಬಂದವುಳೆ ಬುಡಬ್ಯಾಡಿ ಸೋಲಿಸಿ ಅಂದೆ. ಅಗ ದ್ಯಾವೇಗೌಡ್ರು ಮೆಚ್ಚಿ ಶಿವರಾಮೇಗೌಡರು ಮಾತನಾಡಿದ ಮೇಲೆ ನಾನು ಭಾಷಣ ಮಾಡೊ ಅಗತ್ಯ ಇಲ್ಲ ಅಂದ್ರು, ಅವತ್ತು ನಾನು ಕ್ಯಟ್ಟ ಮಾತಾಡಕ್ಕೆ ಪುಸಲಾಯಿಸಿದೋರು. ಇವತ್ತು ಅಂತವೇ ಮಾತಾಡಿದ್ರೆ ಪಾರ್ಟಿಯಿಂದ್ಲೆ ವಜಾ ಮಾಡ್ತಾರೆ ಇದಕೇನೇಳನ.”

“ಅದ್ಕೆ ಸಾರ್ ಯಾರಿಗೂ ಕೆಟ್ಟ ಮಾತಾಡಬಾರ್ದು.”

“ಅದ್ಯಂಗ್ರಿ ಇರಕ್ಕಾಯ್ತದೆ, ಕ್ಯಟ್ಟ ಮನುಸ್ರನ ವಳ್ಳೆ ಮನುಸ್ರು ಅನ್ನಕಾಯ್ತದೆ.”

“ಮಾದೇಗೌಡ್ರು ಕ್ಯಟ್ಟೊರಲ್ಲ, ಮಂಡ್ಯದ ರೈತ ನಾಯಕರು.”

“ಯಾವ ಸೀಮೆ ರೈತನಾಯಕ. ರೈತರಾಗಿದ್ರೆ ವಲ ಉಳತಿದ್ರು, ಮಂಡ್ಯಕ್ಕೆ ಬಂದು ರಾಜಕಾರಣ ಮಾಡತಿರಲಿಲ್ಲ.”

“ರೈತ ನಾಯಕರು ವಲ ಉಳೋ ಅಗತ್ಯಯಿಲ್ಲ, ಕೂಲಿಕೊಟ್ಟು ಉಳುಸಬಹುದು. ಇವತ್ತು ಕಾವೇರಿ ಇಶ್ಯೂ ಹಿಡಕಂಡು ಹೋರಾಡೊ ಅಂಥೋರು ವಬ್ರೂಯಿಲ್ಲ. ಯಾರಿಗೂ ಕೇರ್ ಮಾಡ್ದೆ ನೇರಾ ನೇರಾ ಮಾತಾಡತಿದ್ದ ಮಾದೇಗೌಡ್ರು ಸಮಾಧಿ ವಳಗಿದ್ದ ಕಂಡೇ ನಿಮ್ಮನ್ನ ವಜಾ ಮಾಡುಸ್ತರೆ ಅಂದ್ರೆ, ಅವುರ ಪವರೆಸ್ಟದೆ ಲ್ಯಕ್ಕ ಹಾಕಿ ಸಾ.”

“ಇದ್ಕೆ ನಿಮ್ಮನ್ನ ತಲಿಲ್ದ ಪತ್ರಕರ್ತರು ಅನ್ನದು.”

“ಅಂಗಂತಿರಾ.”

“ಮತ್ತಿನೇನು ಸಾಕ್ಷಿನೆ ಸಿಕ್ತಲ್ಲಾ, ಅಲ್ಲ ಕಂಡ್ರೀ ಜೆಡಿಎಸ್ಸು ಮಂಡ್ಯ ಜಿಲ್ಲೆಲಿ ನ್ಯಲೆ ಕಳಕತ್ತಾ ಅದೆ. ಅಂಥಾ ಟೈಮಲ್ಲಿ ನಾನು ಮಾದೇಗೌಡ್ರು ಬೋದಿದ್ದಿನಿ, ಅದ್ಕೆ ಕುಮಾರಣ್ಣ ಮಾದೇಗೌಡ್ರು ನಮ್ಮವರು, ಅವುರು ಒಕ್ಕಲಿಗರ ಲೀಡ್ರು ಅಂತ ಜಾತಿ ಮಾತಾಡಿ ನನ್ನ ವಜಾ ಮಾಡಿ ಜೆಡಿಎಸ್ ಬ್ಯಳಸಕ್ಕೆ ವಂಟವುರೆ, ಸುಮಲತನ್ನ ಬೈಯಿ ಅಂತ ಹೇಳಿದೋರು, ಮಾದೇಗೌಡ್ರು ಬೋದ್ರೆ ವಜಾ ಮಾಡ್ತರಲ್ಲಾ. ಇದು ರಾಜಕಾರಣ ಅಲವೇನ್ರಿ, ಅದರಲ್ಲೂ ಜಾತಿರಾಜಕಾರಣ ಅಲವೇನ್ರಿ. ಇಂತ ವಿಷಯನೆ ನಿಮಗೆ ತಿಳಿಯದಿಲ್ಲ. ಶಿವರಾಮೇಗೌಡ ಮಾದೇಗೌಡ್ರು ಬೋದ ಅಂತ ಅಲ್ಲೆ ಗಿರಕಿ ವಡಿತಿರಿ.”

“ಮಾದೇಗೌಡ್ರುನ ಏಕವಚನದಲ್ಲಿ ಅಂದು ಬಾಳ ಹಿಂದೆ ಸಾಯಬೇಕಾಗಿತ್ತು ಅಂದಿದ್ದು ತಪ್ಪಲವ ಸಾ.”

“ಅಂದಿದ್ದು ಆಯ್ತು, ಪಾರ್ಟಿಯಿಂದ ತಗದಾಕಿದ್ದು ಆಯ್ತು, ಈಗ್ಯಾಕ್ರಿ ತಪ್ಪಾಯ್ತು ಅನ್ನನಾ.”

“ಥೂತ್ತೇರಿ.”


ಇದನ್ನೂ ಓದಿ: ಬಂಡಾಯ, ಕಿಲಾಡಿ, ಕಿಡಿಗೇಡಿತನ: ಚಂಪಾರವರೊಂದಿಗೆ ಯಾಹೂ ಮಾತುಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...