Homeಕರ್ನಾಟಕವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

“ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪಠ್ಯ ಪರಿಷ್ಕರಣೆಯೇ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳೂ ಅಕ್ರಮವೆಂದಲ್ಲವೇ!?”

- Advertisement -
- Advertisement -

“ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು” ಎಂದು ಅಭಿವೃದ್ಧಿ ಶಿಕ್ಷಣ ತಜ್ಞ, ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ತಿಳಿಸಿದ್ದಾರೆ.

ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರವು ತಿದ್ದೋಲೆಯನ್ನು ಹೊರಡಿಸಲು ಅನುಮತಿ ನೀಡಿ ಹೊರಡಿಸಿರುವ ಸರಕಾರೀ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ತಿದ್ದೋಲೆ ಹೊರಡಿಸಲು ಅನುಮತಿಸಿರುವ ಆದೇಶವು, ವಿಷವುಣಿಸಿದ ವ್ಯಕ್ತಿ ಸಾಯುವ ಮುನ್ನ ನೀರು ಕೊಡಲು ಕರುಣಿಸಿದಂತಿದೆ. ಈ ಮೂಲಕ ವಿಷವುಣಿಸಿದ ಘೋರ ಅಪರಾಧವನ್ನು ಮುಚ್ಚಿ ಹಾಕಿ, ಅಪರಾಧವೇ ನಡೆದಿಲ್ಲವೇನೋ ಎಂಬಂತೆ ಬಿಂಬಿಸಲು ಹೊರಟಿರುವುದು, ಇಡೀ ಪ್ರಕ್ರಿಯೆಯ ಹಿಂದಿರುವ ಕುತಂತ್ರ ಹಾಗೂ ಹುನ್ನಾರಗಳನ್ನು ಬೆತ್ತಲೆಗೊಳಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೊಸ ಪಠ್ಯಪುಸ್ತಕಗಳು ಯಾವುದೇ ಸಹಜ ನ್ಯಾಯದ ತತ್ವಗಳನ್ನು (Principles of Natural Justice) ಅನುಸರಿಸದೆ ಅಸಾಂವಿಧಾನಿಕವಾಗಿವೆ. ನಿಯಮಾನುಸಾರ ಒಪ್ಪಿತ ಪಠ್ಯಕ್ರಮ ಚೌಕಟ್ಟಿನಲ್ಲಿ ನಡೆಯದ ಅಪ್ರಬುದ್ಧ, ಅಪಾರದರ್ಶಕ ಹಾಗೂ ಅಪ್ರಜಾಸತ್ತ್ಮಕ ನಿಯಮ ಬಾಹಿರ ಪ್ರಕ್ರಿಯೆಯನ್ನು ತಿದ್ದೋಲೆ ಹೊರಡಿಸುವ ಮೂಲಕ ಮತ್ತೊಮ್ಮೆ ಸಮರ್ಥಿಸಿಕೊಳ್ಳುವ ಜನವಿರೋಧಿ ನಡೆ ತೋರಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಮಕ್ಕಳ ಕಲಿಕೆಯನ್ನು ಮತ್ತಷ್ಟು ಗೊಂದಲಗೊಳಿಸುವುದಲ್ಲದೆ, ಕಳೆದ ಹಲವಾರು ದಶಕಗಳಿಂದ ಶಾಲಾ ಶಿಕ್ಷಣದ ಸಾರ್ವತ್ರೀಕರಣಕ್ಕೆ ಅಣಿಗೊಳಿಸಿದ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡುವ ಮೂಲಕ ದಮನಿತ ಮತ್ತು ಅವಕಾಶ ವಂಚಿತ ಸಮುದಾಯಗಳ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿಯುತ್ತದೆ ಎಂದು ಎಚ್ಚರಿಸಿದ್ದಾರೆ.

ಶಿಕ್ಷಣ ಹಕ್ಕಲ್ಲ, ಅದು ಕೆಲವರ ಸವಲತ್ತು ( Education is a privilege not a Right) ಎಂದು ವಾದಿಸುತ್ತಾ ಸಾವಿರಾರು ವರ್ಷಗಳಿಂದ ಬಹುಸಂಖ್ಯಾತ ದಮನಿತರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಗಿಡುವ ಮೂಲಕ ನಡೆದಿದ್ದ ಅಕ್ಷರ ವಂಚನೆ ಸಂಸ್ಕೃತಿಯನ್ನು ಮುಂದುವರಿಸಲು, ಜನರನ್ನು ದಿಕ್ಕುತಪ್ಪಿಸಲು ಈ ಆದೇಶ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲಾ ಹಂತದಲ್ಲಿ ಶಿಕ್ಷಕರು ಮಕ್ಕಳಿಗೆ ಕಲಿಸುವ ಬದಲು, ತಿದ್ದೋಲೆ ಆದೇಶದ ಅನ್ವಯ ಪುಸ್ತಕಗಳಲ್ಲಿರುವ ದೋಷಗಳನ್ನು ತಿದ್ದುವ ಕೆಲಸದಲ್ಲಿಯೇ ಈ ಶೈಕ್ಷಣಿಕ ವರ್ಷ ಮುಗಿದು ಹೋಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯ ಪರಿಷ್ಕರಣೆ ಹೆಸರಲ್ಲಿ ಮಕ್ಕಳಿಗೆ ವಿಷಪ್ರಾಶನ ಮಾಡುವ ಈ ಕೆಲಸದಲ್ಲಿ ಸರಕಾರವನ್ನು ಬಾಹ್ಯವಾಗಿ ನಿಯಂತ್ರಿಸುತ್ತಿರುವ, ಸಂವಿಧಾನಕ್ಕೂ ಮೀರಿದ ಶಕ್ತಿಗಳು ಸರಕಾರಿ ಯಂತ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ಈಗ ಸರ್ಕಾರದ ಮೂಲಕವೇ ತಿದ್ದೋಲೆ ಕೊಡಿಸಲು ಹೊರಟಿರುವುದು ಸಂವಿಧಾನವನ್ನು ಅಣಕಿಸುವಂತಿದೆ ಎಂದು ಟೀಕಿಸಿದ್ದಾರೆ.

ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪರಿಷ್ಕರಣೆಯ ಮೂಲ ಚಿಂತನೆಯೇ ದುರುದ್ದೇಶಪೂರಿತ ಹಾಗೂ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳು ಅಕ್ರಮವೆಂದಲ್ಲವೇ! ತಿದ್ದೋಲೆ ಮೂಲಕ ಪದ, ವಾಕ್ಯ, ಪ್ಯಾರಾ, ಪೋಟೋಗಳನ್ನು ಸರಿಪಡಿಸಿದರೆ ಅದು ಸಕ್ರಮವಾಗುವುದೇ? ಎಂದು ಪ್ರಶ್ನಿಸಿದ್ದಾರೆ.

ತಿದ್ದೋಲೆ ಆದೇಶವನ್ನು ಹೊರಡಿಸುವುದೆಂದರೆ ಸರ್ಕಾರ ಪಠ್ಯ ಪರಿಷ್ಕರಣೆ ಪ್ರಕ್ರಿಯಲ್ಲಿಯಾಗಿರುವ ಲೋಪಗಳನ್ನು ಅಧಿಕೃತವಾಗಿ ಒಪ್ಪಿದೆ ಎಂದಾಯಿತು. ತಪ್ಪಾಗಿರುವುದನ್ನು ಸರಕಾರ ಒಪ್ಪಿದ ಮೇಲೆ, ತಿದ್ದೋಲೆ ಮೂಲಕ ತಿಪ್ಪೆ ಸಾರಿಸುವ ನ್ಯಾಯವನ್ನು ಕೈಬಿಟ್ಟು ಅಸಂವಿಧಾನಿಕ ಹಾಗೂ ಅಪ್ರಜಾಸತ್ತಾತ್ಮಕವಾದ ಈ ಪ್ರಕ್ರಿಯೆಯನ್ನು ಪೂರ್ಣವಾಗಿ ಸ್ಥಗಿತಗೊಳಿಸಿ, ಅಲ್ಲಿರುವ ಸಾಧಕ ಬಾಧಕಗಳನ್ನು ಅಧ್ಯಯನ ಮಾಡಲು ಒಂದು ಸ್ವತಂತ್ರ ತಜ್ಞರ ಸಮಿತಿ ಅಥವಾ ಸದನ ಸಮಿತಿಯನ್ನುಯನ್ನು ರಚಿಸುವುದು ಸೂಕ್ತ ತೀರ್ಮಾನವಾಗುತ್ತದೆ. ಅಲ್ಲಿಯವರೆಗೆ ಸಹಜ ನ್ಯಾಯದ ತತ್ವದಂತೆ ಯಥಾಸ್ಥಿಯನ್ನು, ಅಂದರೆ 2021-22ರಲ್ಲಿದ್ದ ಪುಸ್ತಕಗಳನ್ನೇ ಮುಂದುವರಿಸಿ,ತಜ್ಞರ ಸಮಿತಿ/ ಸದನ ಸಮಿತಿಯ ವರದಿ ನಂತರ ಅಂತಿಮ ತೀರ್ಮಾನ ಕೈಗೊಳ್ಳುವುದು ಸಾಂವಿಧಾನಿಕ ಹಾಗೂ ಪ್ರಜಾಸತ್ತಾತ್ಮಕ ತೀರ್ಮಾನವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಈಗಲಾದರೂ ಮುಖ್ಯಮಂತ್ರಿಯವರು, ತಮಗೇ ತಿಳಿಯದ ತೆರೆಮರೆಯ, ಈ ಎಲ್ಲಾ ಕುತಂತ್ರಗಳನ್ನು ಅರಿತು, ಸಂವಿಧಾನ ವಿರೋಧಿಗಳ ಕೈಗೊಂಬೆಯಾಗದೆ, ತಮ್ಮ ಸಂವಿಧಾನಬದ್ಧ ಅಧಿಕಾರವನ್ನು ಬಳಸಿ, ಇದಕ್ಕೆಲ್ಲ ಮೂಲ ಕಾರಣರಾದ ಶಿಕ್ಷಣ ಸಚಿವರನ್ನು ವಜಾಗೊಳಿಸಿ, ಆದೇಶರಹಿತ ಕಾನೂನು ಬಾಹಿರ ಪಠ್ಯ ಪರಿಷ್ಕರಣೆಯನ್ನು ಅಮಾನ್ಯಗೊಳಿಸಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಿದೆ ಎಂದು ಪಕ್ಷಾತೀತವಾಗಿ ಶೈಕ್ಷಣಿಕ ವಲಯದಲ್ಲಿ ಕಳೆದ ಮೂರೂವರೆ ದಶಕಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ಮಾಡುತ್ತಿರುವ ನಾನು ವಿನಮ್ರವಾಗಿ ಕೇಳಿಕೊಳ್ಳುತ್ತೇನೆ ಎಂದು ಕೋರಿದ್ದಾರೆ.

“ಇದು ಪ್ರತಿಷ್ಠೆಯ ಪ್ರಶ್ನೆಯಲ್ಲ. ಬದಲಿಗೆ ಮೌಲಿಕ ನ್ಯಾಯದ ಮತ್ತು ಪ್ರಜಾಸತ್ತೆಯನ್ನು ಗೌರವಿಸಿ ಸಂವಿಧಾನವನ್ನು ಎತ್ತಿಹಿಡಿಯುವ ಪ್ರಶ್ನೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...