Homeಕರ್ನಾಟಕವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

“ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪಠ್ಯ ಪರಿಷ್ಕರಣೆಯೇ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳೂ ಅಕ್ರಮವೆಂದಲ್ಲವೇ!?”

- Advertisement -
- Advertisement -

“ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು” ಎಂದು ಅಭಿವೃದ್ಧಿ ಶಿಕ್ಷಣ ತಜ್ಞ, ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ತಿಳಿಸಿದ್ದಾರೆ.

ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರವು ತಿದ್ದೋಲೆಯನ್ನು ಹೊರಡಿಸಲು ಅನುಮತಿ ನೀಡಿ ಹೊರಡಿಸಿರುವ ಸರಕಾರೀ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ತಿದ್ದೋಲೆ ಹೊರಡಿಸಲು ಅನುಮತಿಸಿರುವ ಆದೇಶವು, ವಿಷವುಣಿಸಿದ ವ್ಯಕ್ತಿ ಸಾಯುವ ಮುನ್ನ ನೀರು ಕೊಡಲು ಕರುಣಿಸಿದಂತಿದೆ. ಈ ಮೂಲಕ ವಿಷವುಣಿಸಿದ ಘೋರ ಅಪರಾಧವನ್ನು ಮುಚ್ಚಿ ಹಾಕಿ, ಅಪರಾಧವೇ ನಡೆದಿಲ್ಲವೇನೋ ಎಂಬಂತೆ ಬಿಂಬಿಸಲು ಹೊರಟಿರುವುದು, ಇಡೀ ಪ್ರಕ್ರಿಯೆಯ ಹಿಂದಿರುವ ಕುತಂತ್ರ ಹಾಗೂ ಹುನ್ನಾರಗಳನ್ನು ಬೆತ್ತಲೆಗೊಳಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೊಸ ಪಠ್ಯಪುಸ್ತಕಗಳು ಯಾವುದೇ ಸಹಜ ನ್ಯಾಯದ ತತ್ವಗಳನ್ನು (Principles of Natural Justice) ಅನುಸರಿಸದೆ ಅಸಾಂವಿಧಾನಿಕವಾಗಿವೆ. ನಿಯಮಾನುಸಾರ ಒಪ್ಪಿತ ಪಠ್ಯಕ್ರಮ ಚೌಕಟ್ಟಿನಲ್ಲಿ ನಡೆಯದ ಅಪ್ರಬುದ್ಧ, ಅಪಾರದರ್ಶಕ ಹಾಗೂ ಅಪ್ರಜಾಸತ್ತ್ಮಕ ನಿಯಮ ಬಾಹಿರ ಪ್ರಕ್ರಿಯೆಯನ್ನು ತಿದ್ದೋಲೆ ಹೊರಡಿಸುವ ಮೂಲಕ ಮತ್ತೊಮ್ಮೆ ಸಮರ್ಥಿಸಿಕೊಳ್ಳುವ ಜನವಿರೋಧಿ ನಡೆ ತೋರಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಮಕ್ಕಳ ಕಲಿಕೆಯನ್ನು ಮತ್ತಷ್ಟು ಗೊಂದಲಗೊಳಿಸುವುದಲ್ಲದೆ, ಕಳೆದ ಹಲವಾರು ದಶಕಗಳಿಂದ ಶಾಲಾ ಶಿಕ್ಷಣದ ಸಾರ್ವತ್ರೀಕರಣಕ್ಕೆ ಅಣಿಗೊಳಿಸಿದ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡುವ ಮೂಲಕ ದಮನಿತ ಮತ್ತು ಅವಕಾಶ ವಂಚಿತ ಸಮುದಾಯಗಳ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿಯುತ್ತದೆ ಎಂದು ಎಚ್ಚರಿಸಿದ್ದಾರೆ.

ಶಿಕ್ಷಣ ಹಕ್ಕಲ್ಲ, ಅದು ಕೆಲವರ ಸವಲತ್ತು ( Education is a privilege not a Right) ಎಂದು ವಾದಿಸುತ್ತಾ ಸಾವಿರಾರು ವರ್ಷಗಳಿಂದ ಬಹುಸಂಖ್ಯಾತ ದಮನಿತರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಗಿಡುವ ಮೂಲಕ ನಡೆದಿದ್ದ ಅಕ್ಷರ ವಂಚನೆ ಸಂಸ್ಕೃತಿಯನ್ನು ಮುಂದುವರಿಸಲು, ಜನರನ್ನು ದಿಕ್ಕುತಪ್ಪಿಸಲು ಈ ಆದೇಶ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲಾ ಹಂತದಲ್ಲಿ ಶಿಕ್ಷಕರು ಮಕ್ಕಳಿಗೆ ಕಲಿಸುವ ಬದಲು, ತಿದ್ದೋಲೆ ಆದೇಶದ ಅನ್ವಯ ಪುಸ್ತಕಗಳಲ್ಲಿರುವ ದೋಷಗಳನ್ನು ತಿದ್ದುವ ಕೆಲಸದಲ್ಲಿಯೇ ಈ ಶೈಕ್ಷಣಿಕ ವರ್ಷ ಮುಗಿದು ಹೋಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯ ಪರಿಷ್ಕರಣೆ ಹೆಸರಲ್ಲಿ ಮಕ್ಕಳಿಗೆ ವಿಷಪ್ರಾಶನ ಮಾಡುವ ಈ ಕೆಲಸದಲ್ಲಿ ಸರಕಾರವನ್ನು ಬಾಹ್ಯವಾಗಿ ನಿಯಂತ್ರಿಸುತ್ತಿರುವ, ಸಂವಿಧಾನಕ್ಕೂ ಮೀರಿದ ಶಕ್ತಿಗಳು ಸರಕಾರಿ ಯಂತ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ಈಗ ಸರ್ಕಾರದ ಮೂಲಕವೇ ತಿದ್ದೋಲೆ ಕೊಡಿಸಲು ಹೊರಟಿರುವುದು ಸಂವಿಧಾನವನ್ನು ಅಣಕಿಸುವಂತಿದೆ ಎಂದು ಟೀಕಿಸಿದ್ದಾರೆ.

ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪರಿಷ್ಕರಣೆಯ ಮೂಲ ಚಿಂತನೆಯೇ ದುರುದ್ದೇಶಪೂರಿತ ಹಾಗೂ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳು ಅಕ್ರಮವೆಂದಲ್ಲವೇ! ತಿದ್ದೋಲೆ ಮೂಲಕ ಪದ, ವಾಕ್ಯ, ಪ್ಯಾರಾ, ಪೋಟೋಗಳನ್ನು ಸರಿಪಡಿಸಿದರೆ ಅದು ಸಕ್ರಮವಾಗುವುದೇ? ಎಂದು ಪ್ರಶ್ನಿಸಿದ್ದಾರೆ.

ತಿದ್ದೋಲೆ ಆದೇಶವನ್ನು ಹೊರಡಿಸುವುದೆಂದರೆ ಸರ್ಕಾರ ಪಠ್ಯ ಪರಿಷ್ಕರಣೆ ಪ್ರಕ್ರಿಯಲ್ಲಿಯಾಗಿರುವ ಲೋಪಗಳನ್ನು ಅಧಿಕೃತವಾಗಿ ಒಪ್ಪಿದೆ ಎಂದಾಯಿತು. ತಪ್ಪಾಗಿರುವುದನ್ನು ಸರಕಾರ ಒಪ್ಪಿದ ಮೇಲೆ, ತಿದ್ದೋಲೆ ಮೂಲಕ ತಿಪ್ಪೆ ಸಾರಿಸುವ ನ್ಯಾಯವನ್ನು ಕೈಬಿಟ್ಟು ಅಸಂವಿಧಾನಿಕ ಹಾಗೂ ಅಪ್ರಜಾಸತ್ತಾತ್ಮಕವಾದ ಈ ಪ್ರಕ್ರಿಯೆಯನ್ನು ಪೂರ್ಣವಾಗಿ ಸ್ಥಗಿತಗೊಳಿಸಿ, ಅಲ್ಲಿರುವ ಸಾಧಕ ಬಾಧಕಗಳನ್ನು ಅಧ್ಯಯನ ಮಾಡಲು ಒಂದು ಸ್ವತಂತ್ರ ತಜ್ಞರ ಸಮಿತಿ ಅಥವಾ ಸದನ ಸಮಿತಿಯನ್ನುಯನ್ನು ರಚಿಸುವುದು ಸೂಕ್ತ ತೀರ್ಮಾನವಾಗುತ್ತದೆ. ಅಲ್ಲಿಯವರೆಗೆ ಸಹಜ ನ್ಯಾಯದ ತತ್ವದಂತೆ ಯಥಾಸ್ಥಿಯನ್ನು, ಅಂದರೆ 2021-22ರಲ್ಲಿದ್ದ ಪುಸ್ತಕಗಳನ್ನೇ ಮುಂದುವರಿಸಿ,ತಜ್ಞರ ಸಮಿತಿ/ ಸದನ ಸಮಿತಿಯ ವರದಿ ನಂತರ ಅಂತಿಮ ತೀರ್ಮಾನ ಕೈಗೊಳ್ಳುವುದು ಸಾಂವಿಧಾನಿಕ ಹಾಗೂ ಪ್ರಜಾಸತ್ತಾತ್ಮಕ ತೀರ್ಮಾನವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಈಗಲಾದರೂ ಮುಖ್ಯಮಂತ್ರಿಯವರು, ತಮಗೇ ತಿಳಿಯದ ತೆರೆಮರೆಯ, ಈ ಎಲ್ಲಾ ಕುತಂತ್ರಗಳನ್ನು ಅರಿತು, ಸಂವಿಧಾನ ವಿರೋಧಿಗಳ ಕೈಗೊಂಬೆಯಾಗದೆ, ತಮ್ಮ ಸಂವಿಧಾನಬದ್ಧ ಅಧಿಕಾರವನ್ನು ಬಳಸಿ, ಇದಕ್ಕೆಲ್ಲ ಮೂಲ ಕಾರಣರಾದ ಶಿಕ್ಷಣ ಸಚಿವರನ್ನು ವಜಾಗೊಳಿಸಿ, ಆದೇಶರಹಿತ ಕಾನೂನು ಬಾಹಿರ ಪಠ್ಯ ಪರಿಷ್ಕರಣೆಯನ್ನು ಅಮಾನ್ಯಗೊಳಿಸಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಿದೆ ಎಂದು ಪಕ್ಷಾತೀತವಾಗಿ ಶೈಕ್ಷಣಿಕ ವಲಯದಲ್ಲಿ ಕಳೆದ ಮೂರೂವರೆ ದಶಕಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ಮಾಡುತ್ತಿರುವ ನಾನು ವಿನಮ್ರವಾಗಿ ಕೇಳಿಕೊಳ್ಳುತ್ತೇನೆ ಎಂದು ಕೋರಿದ್ದಾರೆ.

“ಇದು ಪ್ರತಿಷ್ಠೆಯ ಪ್ರಶ್ನೆಯಲ್ಲ. ಬದಲಿಗೆ ಮೌಲಿಕ ನ್ಯಾಯದ ಮತ್ತು ಪ್ರಜಾಸತ್ತೆಯನ್ನು ಗೌರವಿಸಿ ಸಂವಿಧಾನವನ್ನು ಎತ್ತಿಹಿಡಿಯುವ ಪ್ರಶ್ನೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...