Homeಕರ್ನಾಟಕವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

“ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪಠ್ಯ ಪರಿಷ್ಕರಣೆಯೇ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳೂ ಅಕ್ರಮವೆಂದಲ್ಲವೇ!?”

- Advertisement -
- Advertisement -

“ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು” ಎಂದು ಅಭಿವೃದ್ಧಿ ಶಿಕ್ಷಣ ತಜ್ಞ, ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ತಿಳಿಸಿದ್ದಾರೆ.

ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರವು ತಿದ್ದೋಲೆಯನ್ನು ಹೊರಡಿಸಲು ಅನುಮತಿ ನೀಡಿ ಹೊರಡಿಸಿರುವ ಸರಕಾರೀ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ತಿದ್ದೋಲೆ ಹೊರಡಿಸಲು ಅನುಮತಿಸಿರುವ ಆದೇಶವು, ವಿಷವುಣಿಸಿದ ವ್ಯಕ್ತಿ ಸಾಯುವ ಮುನ್ನ ನೀರು ಕೊಡಲು ಕರುಣಿಸಿದಂತಿದೆ. ಈ ಮೂಲಕ ವಿಷವುಣಿಸಿದ ಘೋರ ಅಪರಾಧವನ್ನು ಮುಚ್ಚಿ ಹಾಕಿ, ಅಪರಾಧವೇ ನಡೆದಿಲ್ಲವೇನೋ ಎಂಬಂತೆ ಬಿಂಬಿಸಲು ಹೊರಟಿರುವುದು, ಇಡೀ ಪ್ರಕ್ರಿಯೆಯ ಹಿಂದಿರುವ ಕುತಂತ್ರ ಹಾಗೂ ಹುನ್ನಾರಗಳನ್ನು ಬೆತ್ತಲೆಗೊಳಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೊಸ ಪಠ್ಯಪುಸ್ತಕಗಳು ಯಾವುದೇ ಸಹಜ ನ್ಯಾಯದ ತತ್ವಗಳನ್ನು (Principles of Natural Justice) ಅನುಸರಿಸದೆ ಅಸಾಂವಿಧಾನಿಕವಾಗಿವೆ. ನಿಯಮಾನುಸಾರ ಒಪ್ಪಿತ ಪಠ್ಯಕ್ರಮ ಚೌಕಟ್ಟಿನಲ್ಲಿ ನಡೆಯದ ಅಪ್ರಬುದ್ಧ, ಅಪಾರದರ್ಶಕ ಹಾಗೂ ಅಪ್ರಜಾಸತ್ತ್ಮಕ ನಿಯಮ ಬಾಹಿರ ಪ್ರಕ್ರಿಯೆಯನ್ನು ತಿದ್ದೋಲೆ ಹೊರಡಿಸುವ ಮೂಲಕ ಮತ್ತೊಮ್ಮೆ ಸಮರ್ಥಿಸಿಕೊಳ್ಳುವ ಜನವಿರೋಧಿ ನಡೆ ತೋರಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಮಕ್ಕಳ ಕಲಿಕೆಯನ್ನು ಮತ್ತಷ್ಟು ಗೊಂದಲಗೊಳಿಸುವುದಲ್ಲದೆ, ಕಳೆದ ಹಲವಾರು ದಶಕಗಳಿಂದ ಶಾಲಾ ಶಿಕ್ಷಣದ ಸಾರ್ವತ್ರೀಕರಣಕ್ಕೆ ಅಣಿಗೊಳಿಸಿದ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡುವ ಮೂಲಕ ದಮನಿತ ಮತ್ತು ಅವಕಾಶ ವಂಚಿತ ಸಮುದಾಯಗಳ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿಯುತ್ತದೆ ಎಂದು ಎಚ್ಚರಿಸಿದ್ದಾರೆ.

ಶಿಕ್ಷಣ ಹಕ್ಕಲ್ಲ, ಅದು ಕೆಲವರ ಸವಲತ್ತು ( Education is a privilege not a Right) ಎಂದು ವಾದಿಸುತ್ತಾ ಸಾವಿರಾರು ವರ್ಷಗಳಿಂದ ಬಹುಸಂಖ್ಯಾತ ದಮನಿತರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಗಿಡುವ ಮೂಲಕ ನಡೆದಿದ್ದ ಅಕ್ಷರ ವಂಚನೆ ಸಂಸ್ಕೃತಿಯನ್ನು ಮುಂದುವರಿಸಲು, ಜನರನ್ನು ದಿಕ್ಕುತಪ್ಪಿಸಲು ಈ ಆದೇಶ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲಾ ಹಂತದಲ್ಲಿ ಶಿಕ್ಷಕರು ಮಕ್ಕಳಿಗೆ ಕಲಿಸುವ ಬದಲು, ತಿದ್ದೋಲೆ ಆದೇಶದ ಅನ್ವಯ ಪುಸ್ತಕಗಳಲ್ಲಿರುವ ದೋಷಗಳನ್ನು ತಿದ್ದುವ ಕೆಲಸದಲ್ಲಿಯೇ ಈ ಶೈಕ್ಷಣಿಕ ವರ್ಷ ಮುಗಿದು ಹೋಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯ ಪರಿಷ್ಕರಣೆ ಹೆಸರಲ್ಲಿ ಮಕ್ಕಳಿಗೆ ವಿಷಪ್ರಾಶನ ಮಾಡುವ ಈ ಕೆಲಸದಲ್ಲಿ ಸರಕಾರವನ್ನು ಬಾಹ್ಯವಾಗಿ ನಿಯಂತ್ರಿಸುತ್ತಿರುವ, ಸಂವಿಧಾನಕ್ಕೂ ಮೀರಿದ ಶಕ್ತಿಗಳು ಸರಕಾರಿ ಯಂತ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ಈಗ ಸರ್ಕಾರದ ಮೂಲಕವೇ ತಿದ್ದೋಲೆ ಕೊಡಿಸಲು ಹೊರಟಿರುವುದು ಸಂವಿಧಾನವನ್ನು ಅಣಕಿಸುವಂತಿದೆ ಎಂದು ಟೀಕಿಸಿದ್ದಾರೆ.

ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪರಿಷ್ಕರಣೆಯ ಮೂಲ ಚಿಂತನೆಯೇ ದುರುದ್ದೇಶಪೂರಿತ ಹಾಗೂ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳು ಅಕ್ರಮವೆಂದಲ್ಲವೇ! ತಿದ್ದೋಲೆ ಮೂಲಕ ಪದ, ವಾಕ್ಯ, ಪ್ಯಾರಾ, ಪೋಟೋಗಳನ್ನು ಸರಿಪಡಿಸಿದರೆ ಅದು ಸಕ್ರಮವಾಗುವುದೇ? ಎಂದು ಪ್ರಶ್ನಿಸಿದ್ದಾರೆ.

ತಿದ್ದೋಲೆ ಆದೇಶವನ್ನು ಹೊರಡಿಸುವುದೆಂದರೆ ಸರ್ಕಾರ ಪಠ್ಯ ಪರಿಷ್ಕರಣೆ ಪ್ರಕ್ರಿಯಲ್ಲಿಯಾಗಿರುವ ಲೋಪಗಳನ್ನು ಅಧಿಕೃತವಾಗಿ ಒಪ್ಪಿದೆ ಎಂದಾಯಿತು. ತಪ್ಪಾಗಿರುವುದನ್ನು ಸರಕಾರ ಒಪ್ಪಿದ ಮೇಲೆ, ತಿದ್ದೋಲೆ ಮೂಲಕ ತಿಪ್ಪೆ ಸಾರಿಸುವ ನ್ಯಾಯವನ್ನು ಕೈಬಿಟ್ಟು ಅಸಂವಿಧಾನಿಕ ಹಾಗೂ ಅಪ್ರಜಾಸತ್ತಾತ್ಮಕವಾದ ಈ ಪ್ರಕ್ರಿಯೆಯನ್ನು ಪೂರ್ಣವಾಗಿ ಸ್ಥಗಿತಗೊಳಿಸಿ, ಅಲ್ಲಿರುವ ಸಾಧಕ ಬಾಧಕಗಳನ್ನು ಅಧ್ಯಯನ ಮಾಡಲು ಒಂದು ಸ್ವತಂತ್ರ ತಜ್ಞರ ಸಮಿತಿ ಅಥವಾ ಸದನ ಸಮಿತಿಯನ್ನುಯನ್ನು ರಚಿಸುವುದು ಸೂಕ್ತ ತೀರ್ಮಾನವಾಗುತ್ತದೆ. ಅಲ್ಲಿಯವರೆಗೆ ಸಹಜ ನ್ಯಾಯದ ತತ್ವದಂತೆ ಯಥಾಸ್ಥಿಯನ್ನು, ಅಂದರೆ 2021-22ರಲ್ಲಿದ್ದ ಪುಸ್ತಕಗಳನ್ನೇ ಮುಂದುವರಿಸಿ,ತಜ್ಞರ ಸಮಿತಿ/ ಸದನ ಸಮಿತಿಯ ವರದಿ ನಂತರ ಅಂತಿಮ ತೀರ್ಮಾನ ಕೈಗೊಳ್ಳುವುದು ಸಾಂವಿಧಾನಿಕ ಹಾಗೂ ಪ್ರಜಾಸತ್ತಾತ್ಮಕ ತೀರ್ಮಾನವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಈಗಲಾದರೂ ಮುಖ್ಯಮಂತ್ರಿಯವರು, ತಮಗೇ ತಿಳಿಯದ ತೆರೆಮರೆಯ, ಈ ಎಲ್ಲಾ ಕುತಂತ್ರಗಳನ್ನು ಅರಿತು, ಸಂವಿಧಾನ ವಿರೋಧಿಗಳ ಕೈಗೊಂಬೆಯಾಗದೆ, ತಮ್ಮ ಸಂವಿಧಾನಬದ್ಧ ಅಧಿಕಾರವನ್ನು ಬಳಸಿ, ಇದಕ್ಕೆಲ್ಲ ಮೂಲ ಕಾರಣರಾದ ಶಿಕ್ಷಣ ಸಚಿವರನ್ನು ವಜಾಗೊಳಿಸಿ, ಆದೇಶರಹಿತ ಕಾನೂನು ಬಾಹಿರ ಪಠ್ಯ ಪರಿಷ್ಕರಣೆಯನ್ನು ಅಮಾನ್ಯಗೊಳಿಸಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಿದೆ ಎಂದು ಪಕ್ಷಾತೀತವಾಗಿ ಶೈಕ್ಷಣಿಕ ವಲಯದಲ್ಲಿ ಕಳೆದ ಮೂರೂವರೆ ದಶಕಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ಮಾಡುತ್ತಿರುವ ನಾನು ವಿನಮ್ರವಾಗಿ ಕೇಳಿಕೊಳ್ಳುತ್ತೇನೆ ಎಂದು ಕೋರಿದ್ದಾರೆ.

“ಇದು ಪ್ರತಿಷ್ಠೆಯ ಪ್ರಶ್ನೆಯಲ್ಲ. ಬದಲಿಗೆ ಮೌಲಿಕ ನ್ಯಾಯದ ಮತ್ತು ಪ್ರಜಾಸತ್ತೆಯನ್ನು ಗೌರವಿಸಿ ಸಂವಿಧಾನವನ್ನು ಎತ್ತಿಹಿಡಿಯುವ ಪ್ರಶ್ನೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...