Homeಕರ್ನಾಟಕವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು: ನಿರಂಜನಾರಾಧ್ಯ

“ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪಠ್ಯ ಪರಿಷ್ಕರಣೆಯೇ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳೂ ಅಕ್ರಮವೆಂದಲ್ಲವೇ!?”

- Advertisement -
- Advertisement -

“ವಿಷವುಣಿಸಿದ ಬಳಿಕ ನೀರು ಕೊಟ್ಟರೆ ಅಪರಾಧ ಮುಚ್ಚಿಹೋಗದು” ಎಂದು ಅಭಿವೃದ್ಧಿ ಶಿಕ್ಷಣ ತಜ್ಞ, ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಮಹಾ ಪೋಷಕರಾದ ಡಾ.ವಿ.ಪಿ.ನಿರಂಜನಾರಾಧ್ಯ ತಿಳಿಸಿದ್ದಾರೆ.

ಪಠ್ಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರವು ತಿದ್ದೋಲೆಯನ್ನು ಹೊರಡಿಸಲು ಅನುಮತಿ ನೀಡಿ ಹೊರಡಿಸಿರುವ ಸರಕಾರೀ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, “ತಿದ್ದೋಲೆ ಹೊರಡಿಸಲು ಅನುಮತಿಸಿರುವ ಆದೇಶವು, ವಿಷವುಣಿಸಿದ ವ್ಯಕ್ತಿ ಸಾಯುವ ಮುನ್ನ ನೀರು ಕೊಡಲು ಕರುಣಿಸಿದಂತಿದೆ. ಈ ಮೂಲಕ ವಿಷವುಣಿಸಿದ ಘೋರ ಅಪರಾಧವನ್ನು ಮುಚ್ಚಿ ಹಾಕಿ, ಅಪರಾಧವೇ ನಡೆದಿಲ್ಲವೇನೋ ಎಂಬಂತೆ ಬಿಂಬಿಸಲು ಹೊರಟಿರುವುದು, ಇಡೀ ಪ್ರಕ್ರಿಯೆಯ ಹಿಂದಿರುವ ಕುತಂತ್ರ ಹಾಗೂ ಹುನ್ನಾರಗಳನ್ನು ಬೆತ್ತಲೆಗೊಳಿಸಿದೆ” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೊಸ ಪಠ್ಯಪುಸ್ತಕಗಳು ಯಾವುದೇ ಸಹಜ ನ್ಯಾಯದ ತತ್ವಗಳನ್ನು (Principles of Natural Justice) ಅನುಸರಿಸದೆ ಅಸಾಂವಿಧಾನಿಕವಾಗಿವೆ. ನಿಯಮಾನುಸಾರ ಒಪ್ಪಿತ ಪಠ್ಯಕ್ರಮ ಚೌಕಟ್ಟಿನಲ್ಲಿ ನಡೆಯದ ಅಪ್ರಬುದ್ಧ, ಅಪಾರದರ್ಶಕ ಹಾಗೂ ಅಪ್ರಜಾಸತ್ತ್ಮಕ ನಿಯಮ ಬಾಹಿರ ಪ್ರಕ್ರಿಯೆಯನ್ನು ತಿದ್ದೋಲೆ ಹೊರಡಿಸುವ ಮೂಲಕ ಮತ್ತೊಮ್ಮೆ ಸಮರ್ಥಿಸಿಕೊಳ್ಳುವ ಜನವಿರೋಧಿ ನಡೆ ತೋರಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದು ಮಕ್ಕಳ ಕಲಿಕೆಯನ್ನು ಮತ್ತಷ್ಟು ಗೊಂದಲಗೊಳಿಸುವುದಲ್ಲದೆ, ಕಳೆದ ಹಲವಾರು ದಶಕಗಳಿಂದ ಶಾಲಾ ಶಿಕ್ಷಣದ ಸಾರ್ವತ್ರೀಕರಣಕ್ಕೆ ಅಣಿಗೊಳಿಸಿದ ಶಿಕ್ಷಣ ಕ್ಷೇತ್ರವನ್ನು ಹಾಳುಗೆಡುವ ಮೂಲಕ ದಮನಿತ ಮತ್ತು ಅವಕಾಶ ವಂಚಿತ ಸಮುದಾಯಗಳ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿಯುತ್ತದೆ ಎಂದು ಎಚ್ಚರಿಸಿದ್ದಾರೆ.

ಶಿಕ್ಷಣ ಹಕ್ಕಲ್ಲ, ಅದು ಕೆಲವರ ಸವಲತ್ತು ( Education is a privilege not a Right) ಎಂದು ವಾದಿಸುತ್ತಾ ಸಾವಿರಾರು ವರ್ಷಗಳಿಂದ ಬಹುಸಂಖ್ಯಾತ ದಮನಿತರನ್ನು ಶಿಕ್ಷಣ ವ್ಯವಸ್ಥೆಯಿಂದ ಹೊರಗಿಡುವ ಮೂಲಕ ನಡೆದಿದ್ದ ಅಕ್ಷರ ವಂಚನೆ ಸಂಸ್ಕೃತಿಯನ್ನು ಮುಂದುವರಿಸಲು, ಜನರನ್ನು ದಿಕ್ಕುತಪ್ಪಿಸಲು ಈ ಆದೇಶ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಶಾಲಾ ಹಂತದಲ್ಲಿ ಶಿಕ್ಷಕರು ಮಕ್ಕಳಿಗೆ ಕಲಿಸುವ ಬದಲು, ತಿದ್ದೋಲೆ ಆದೇಶದ ಅನ್ವಯ ಪುಸ್ತಕಗಳಲ್ಲಿರುವ ದೋಷಗಳನ್ನು ತಿದ್ದುವ ಕೆಲಸದಲ್ಲಿಯೇ ಈ ಶೈಕ್ಷಣಿಕ ವರ್ಷ ಮುಗಿದು ಹೋಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪಠ್ಯ ಪರಿಷ್ಕರಣೆ ಹೆಸರಲ್ಲಿ ಮಕ್ಕಳಿಗೆ ವಿಷಪ್ರಾಶನ ಮಾಡುವ ಈ ಕೆಲಸದಲ್ಲಿ ಸರಕಾರವನ್ನು ಬಾಹ್ಯವಾಗಿ ನಿಯಂತ್ರಿಸುತ್ತಿರುವ, ಸಂವಿಧಾನಕ್ಕೂ ಮೀರಿದ ಶಕ್ತಿಗಳು ಸರಕಾರಿ ಯಂತ್ರವನ್ನು ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ಈಗ ಸರ್ಕಾರದ ಮೂಲಕವೇ ತಿದ್ದೋಲೆ ಕೊಡಿಸಲು ಹೊರಟಿರುವುದು ಸಂವಿಧಾನವನ್ನು ಅಣಕಿಸುವಂತಿದೆ ಎಂದು ಟೀಕಿಸಿದ್ದಾರೆ.

ತೇಪ ಹಾಕಿದ ಬಟ್ಟೆ ಎಂದಿಗೂ ಅಸಲಿಯಾಗಲಾರದು. ಪರಿಷ್ಕರಣೆಯ ಮೂಲ ಚಿಂತನೆಯೇ ದುರುದ್ದೇಶಪೂರಿತ ಹಾಗೂ ಅಪ್ರಜಾಸತ್ತಾತ್ಮಕ ಎಂದಾದರೆ, ಅದನ್ನು ಆಧರಿಸಿ ಪರಿಷ್ಕರಿಸಿರುವ ಎಲ್ಲಾ ಪ್ರಕ್ರಿಯೆಗಳು ಅಕ್ರಮವೆಂದಲ್ಲವೇ! ತಿದ್ದೋಲೆ ಮೂಲಕ ಪದ, ವಾಕ್ಯ, ಪ್ಯಾರಾ, ಪೋಟೋಗಳನ್ನು ಸರಿಪಡಿಸಿದರೆ ಅದು ಸಕ್ರಮವಾಗುವುದೇ? ಎಂದು ಪ್ರಶ್ನಿಸಿದ್ದಾರೆ.

ತಿದ್ದೋಲೆ ಆದೇಶವನ್ನು ಹೊರಡಿಸುವುದೆಂದರೆ ಸರ್ಕಾರ ಪಠ್ಯ ಪರಿಷ್ಕರಣೆ ಪ್ರಕ್ರಿಯಲ್ಲಿಯಾಗಿರುವ ಲೋಪಗಳನ್ನು ಅಧಿಕೃತವಾಗಿ ಒಪ್ಪಿದೆ ಎಂದಾಯಿತು. ತಪ್ಪಾಗಿರುವುದನ್ನು ಸರಕಾರ ಒಪ್ಪಿದ ಮೇಲೆ, ತಿದ್ದೋಲೆ ಮೂಲಕ ತಿಪ್ಪೆ ಸಾರಿಸುವ ನ್ಯಾಯವನ್ನು ಕೈಬಿಟ್ಟು ಅಸಂವಿಧಾನಿಕ ಹಾಗೂ ಅಪ್ರಜಾಸತ್ತಾತ್ಮಕವಾದ ಈ ಪ್ರಕ್ರಿಯೆಯನ್ನು ಪೂರ್ಣವಾಗಿ ಸ್ಥಗಿತಗೊಳಿಸಿ, ಅಲ್ಲಿರುವ ಸಾಧಕ ಬಾಧಕಗಳನ್ನು ಅಧ್ಯಯನ ಮಾಡಲು ಒಂದು ಸ್ವತಂತ್ರ ತಜ್ಞರ ಸಮಿತಿ ಅಥವಾ ಸದನ ಸಮಿತಿಯನ್ನುಯನ್ನು ರಚಿಸುವುದು ಸೂಕ್ತ ತೀರ್ಮಾನವಾಗುತ್ತದೆ. ಅಲ್ಲಿಯವರೆಗೆ ಸಹಜ ನ್ಯಾಯದ ತತ್ವದಂತೆ ಯಥಾಸ್ಥಿಯನ್ನು, ಅಂದರೆ 2021-22ರಲ್ಲಿದ್ದ ಪುಸ್ತಕಗಳನ್ನೇ ಮುಂದುವರಿಸಿ,ತಜ್ಞರ ಸಮಿತಿ/ ಸದನ ಸಮಿತಿಯ ವರದಿ ನಂತರ ಅಂತಿಮ ತೀರ್ಮಾನ ಕೈಗೊಳ್ಳುವುದು ಸಾಂವಿಧಾನಿಕ ಹಾಗೂ ಪ್ರಜಾಸತ್ತಾತ್ಮಕ ತೀರ್ಮಾನವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ಪಠ್ಯ ಪರಿಷ್ಕರಣೆ: 8 ತಪ್ಪು ತಿದ್ದಲು ಮುಂದಾದ ಸರ್ಕಾರ; ಹಾಗೆಯೇ ಉಳಿದ ಸಾಲು ಸಾಲು ಎಡವಟ್ಟು!

ಈಗಲಾದರೂ ಮುಖ್ಯಮಂತ್ರಿಯವರು, ತಮಗೇ ತಿಳಿಯದ ತೆರೆಮರೆಯ, ಈ ಎಲ್ಲಾ ಕುತಂತ್ರಗಳನ್ನು ಅರಿತು, ಸಂವಿಧಾನ ವಿರೋಧಿಗಳ ಕೈಗೊಂಬೆಯಾಗದೆ, ತಮ್ಮ ಸಂವಿಧಾನಬದ್ಧ ಅಧಿಕಾರವನ್ನು ಬಳಸಿ, ಇದಕ್ಕೆಲ್ಲ ಮೂಲ ಕಾರಣರಾದ ಶಿಕ್ಷಣ ಸಚಿವರನ್ನು ವಜಾಗೊಳಿಸಿ, ಆದೇಶರಹಿತ ಕಾನೂನು ಬಾಹಿರ ಪಠ್ಯ ಪರಿಷ್ಕರಣೆಯನ್ನು ಅಮಾನ್ಯಗೊಳಿಸಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಬೇಕಿದೆ ಎಂದು ಪಕ್ಷಾತೀತವಾಗಿ ಶೈಕ್ಷಣಿಕ ವಲಯದಲ್ಲಿ ಕಳೆದ ಮೂರೂವರೆ ದಶಕಗಳಿಂದ ಶಾಲಾ ಶಿಕ್ಷಣದಲ್ಲಿ ಕೆಲಸ ಮಾಡುತ್ತಿರುವ ನಾನು ವಿನಮ್ರವಾಗಿ ಕೇಳಿಕೊಳ್ಳುತ್ತೇನೆ ಎಂದು ಕೋರಿದ್ದಾರೆ.

“ಇದು ಪ್ರತಿಷ್ಠೆಯ ಪ್ರಶ್ನೆಯಲ್ಲ. ಬದಲಿಗೆ ಮೌಲಿಕ ನ್ಯಾಯದ ಮತ್ತು ಪ್ರಜಾಸತ್ತೆಯನ್ನು ಗೌರವಿಸಿ ಸಂವಿಧಾನವನ್ನು ಎತ್ತಿಹಿಡಿಯುವ ಪ್ರಶ್ನೆ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....