Homeಮುಖಪುಟನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ?

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತವಿರೋಧಿ ಕಾನೂನುಗಳನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ಪಕ್ಷದ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರೈತ ಸಮ್ಮೇಳನದಲ್ಲಿ ಸಿದ್ದರಾಮಯ್ಯ ಮಾತನಾಡಿ, “ನಾವು ಅಧಿಕಾರಕ್ಕೆ ಬಂದರೆ ದೇವರಾಜ ಅರಸು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತರುತ್ತೇವೆ” ಎಂದು ವಾಗ್ದಾನ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ವತಿಯಿಂದ ಮಂಡ್ಯದಲ್ಲಿ ನಿನ್ನೆ ಆಯೋಜಿಸಿದ್ದ ರೈತ ಸಮ್ಮೇಳನದಲ್ಲಿ, ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸರ್ಜೆವಾಲ, ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ಇದರ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ನಾನು ರೈತ ಕುಟುಂಬದಲ್ಲೇ ಹುಟ್ಟಿದವನು. 1980 ರಿಂದ 83ರವರೆಗೆ ಮೈಸೂರು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಈ ನೆಲದ ರೈತರ ಬದುಕು-ಬವಣೆ, ಕಷ್ಟ-ಸುಖಗಳನ್ನು ಕಣ್ಣಾರೆ ಕಂಡಿದ್ದೇನೆ, ಅನುಭವಿಸಿದ್ದೇನೆ. ಹಾಗಾಗಿ ರೈತರ ಪರ ಸದಾ ನಿಲ್ಲುವ ಬದ್ಧತೆ ನನ್ನಲ್ಲಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕೃಷಿ ಬೆಲೆ ಆಯೋಗ ರಚನೆ ಮತ್ತು ಎಪಿಎಂಸಿ ಮಾರುಕಟ್ಟೆಗಳಲ್ಲಿ ಆನ್‌ಲೈನ್ ಪದ್ಧತಿ ಜಾರಿಗೊಳಿಸಿದೆ. ಕಬ್ಬು ಬೆಳೆಗಾರರು ನಷ್ಟಕ್ಕೀಡಾದಾಗ ಟನ್‌ಗೆ ತಲಾ ರೂ.300 ರಂತೆ ಸುಮಾರು ರೂ.1,800 ಕೋಟಿ ಬೆಂಬಲ ಬೆಲೆ ನೀಡಿ ಖರೀದಿಸಿದ್ದು ನಮ್ಮ ಸರ್ಕಾರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

“ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ? ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂಬ ಕಾರಣ ನೀಡಿ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ರೈತರಿಂದ ಭೂಮಿಯನ್ನು ಕಸಿದು ಯಾರಿಗೆ ಕೊಡಲು ಹೊರಟಿದ್ದೀರಿ ಎಂಬುದನ್ನೂ ಜನರಿಗೆ ಹೇಳಬೇಕಲ್ಲವೇ ಮಿಸ್ಟರ್ ಯಡಿಯೂರಪ್ಪ ಅವರೇ? ಭೂ ಸುಧಾರಣಾ ಕಾಯಿದೆಯ ಉಲ್ಲಂಘನೆ ಮಾಡಿ ಕೃಷಿ ಭೂಮಿ ಖರೀದಿಸಿರುವ 1814 ಪ್ರಕರಣಗಳು ನ್ಯಾಯಾಲಯದಲ್ಲಿವೆ, ಒಟ್ಟು ಭೂಮಿಯ ಮೌಲ್ಯ ಸುಮಾರು ರೂ.50,000 ಕೋಟಿ ಆಗಲಿದೆ. ಕಾಯ್ದೆ ತಿದ್ದುಪಡಿಯಿಂದ ಈ ಎಲ್ಲಾ ಪ್ರಕರಣಗಳು ರದ್ದಾಗುತ್ತದೆ. ಈ ಹಗರಣದಲ್ಲಿ ನಿಮ್ಮ ಪಾಲೆಷ್ಟು ಮಿಸ್ಟರ್ ಯಡಿಯೂರಪ್ಪ ಅವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

“ಧ್ವನಿ ಮತದ ಮೂಲಕ ಸಂಸತ್ತಿನಲ್ಲಿ ಮಸೂದೆ ಪಾಸಾದರೂ, ಅದನ್ನು ಜನರ ಧ್ವನಿ ಎದುರು ಗೆಲ್ಲಲು ಬಿಡಬಾರದು. ಈ ಹೋರಾಟದಲ್ಲಿ ಪಕ್ಷಾತೀತವಾಗಿ ಎಲ್ಲರೂ ಭಾಗಿಯಾಗಬೇಕು. ನಾವು ಮಣ್ಣಿನ ಮಕ್ಕಳು ಅಂತ ಹೇಳಿ ಮನೆಯಲ್ಲಿ ಕೂತರೆ ಆಗಲ್ಲ. ಬೀದಿಗಿಳಿದರೆ ಮಾತ್ರ ಆಡಿದ ಮಾತಿಗೆ ಬೆಲೆ ಬರುತ್ತೆ. ನಾವು ಅಧಿಕಾರಕ್ಕೆ ಬಂದಮೇಲೆ ದೇವರಾಜ ಅರಸು ಅವರು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯಿದೆಯನ್ನು ಯಥಾವತ್ತಾಗಿ ಮರಳಿ ಜಾರಿಗೆ ತರುತ್ತೇವೆ. ಎಪಿಎಂಸಿಗಳನ್ನು ಇನ್ನಷ್ಟು ರೈತಸ್ನೇಹಿ ಮತ್ತು ಪಾರದರ್ಶಕವಾಗಿಸುತ್ತೇವೆ ಎಂಬ ವಾಗ್ದಾನವನ್ನು ನಾಡಿನ ಎಲ್ಲ ರೈತರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ನೀಡುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ರಾಹುಲ್ ಗಾಂಧಿಯವರೂ ಕೂಡ ಪಂಜಾಬ್‌ನಲ್ಲಿ ರೈತವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವಾಗ, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಕರಾಳ ಕಾಯ್ದೆಗಳನ್ನು ನಿಷೇಧಿಸುತ್ತೇವೆ” ಎಂದು ಹೇಳಿದ್ದರು.


ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...