Homeಮುಖಪುಟನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ?

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತವಿರೋಧಿ ಕಾನೂನುಗಳನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ಪಕ್ಷದ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರೈತ ಸಮ್ಮೇಳನದಲ್ಲಿ ಸಿದ್ದರಾಮಯ್ಯ ಮಾತನಾಡಿ, “ನಾವು ಅಧಿಕಾರಕ್ಕೆ ಬಂದರೆ ದೇವರಾಜ ಅರಸು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತರುತ್ತೇವೆ” ಎಂದು ವಾಗ್ದಾನ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ವತಿಯಿಂದ ಮಂಡ್ಯದಲ್ಲಿ ನಿನ್ನೆ ಆಯೋಜಿಸಿದ್ದ ರೈತ ಸಮ್ಮೇಳನದಲ್ಲಿ, ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸರ್ಜೆವಾಲ, ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ಇದರ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ನಾನು ರೈತ ಕುಟುಂಬದಲ್ಲೇ ಹುಟ್ಟಿದವನು. 1980 ರಿಂದ 83ರವರೆಗೆ ಮೈಸೂರು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಈ ನೆಲದ ರೈತರ ಬದುಕು-ಬವಣೆ, ಕಷ್ಟ-ಸುಖಗಳನ್ನು ಕಣ್ಣಾರೆ ಕಂಡಿದ್ದೇನೆ, ಅನುಭವಿಸಿದ್ದೇನೆ. ಹಾಗಾಗಿ ರೈತರ ಪರ ಸದಾ ನಿಲ್ಲುವ ಬದ್ಧತೆ ನನ್ನಲ್ಲಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕೃಷಿ ಬೆಲೆ ಆಯೋಗ ರಚನೆ ಮತ್ತು ಎಪಿಎಂಸಿ ಮಾರುಕಟ್ಟೆಗಳಲ್ಲಿ ಆನ್‌ಲೈನ್ ಪದ್ಧತಿ ಜಾರಿಗೊಳಿಸಿದೆ. ಕಬ್ಬು ಬೆಳೆಗಾರರು ನಷ್ಟಕ್ಕೀಡಾದಾಗ ಟನ್‌ಗೆ ತಲಾ ರೂ.300 ರಂತೆ ಸುಮಾರು ರೂ.1,800 ಕೋಟಿ ಬೆಂಬಲ ಬೆಲೆ ನೀಡಿ ಖರೀದಿಸಿದ್ದು ನಮ್ಮ ಸರ್ಕಾರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

“ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ? ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂಬ ಕಾರಣ ನೀಡಿ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ರೈತರಿಂದ ಭೂಮಿಯನ್ನು ಕಸಿದು ಯಾರಿಗೆ ಕೊಡಲು ಹೊರಟಿದ್ದೀರಿ ಎಂಬುದನ್ನೂ ಜನರಿಗೆ ಹೇಳಬೇಕಲ್ಲವೇ ಮಿಸ್ಟರ್ ಯಡಿಯೂರಪ್ಪ ಅವರೇ? ಭೂ ಸುಧಾರಣಾ ಕಾಯಿದೆಯ ಉಲ್ಲಂಘನೆ ಮಾಡಿ ಕೃಷಿ ಭೂಮಿ ಖರೀದಿಸಿರುವ 1814 ಪ್ರಕರಣಗಳು ನ್ಯಾಯಾಲಯದಲ್ಲಿವೆ, ಒಟ್ಟು ಭೂಮಿಯ ಮೌಲ್ಯ ಸುಮಾರು ರೂ.50,000 ಕೋಟಿ ಆಗಲಿದೆ. ಕಾಯ್ದೆ ತಿದ್ದುಪಡಿಯಿಂದ ಈ ಎಲ್ಲಾ ಪ್ರಕರಣಗಳು ರದ್ದಾಗುತ್ತದೆ. ಈ ಹಗರಣದಲ್ಲಿ ನಿಮ್ಮ ಪಾಲೆಷ್ಟು ಮಿಸ್ಟರ್ ಯಡಿಯೂರಪ್ಪ ಅವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

“ಧ್ವನಿ ಮತದ ಮೂಲಕ ಸಂಸತ್ತಿನಲ್ಲಿ ಮಸೂದೆ ಪಾಸಾದರೂ, ಅದನ್ನು ಜನರ ಧ್ವನಿ ಎದುರು ಗೆಲ್ಲಲು ಬಿಡಬಾರದು. ಈ ಹೋರಾಟದಲ್ಲಿ ಪಕ್ಷಾತೀತವಾಗಿ ಎಲ್ಲರೂ ಭಾಗಿಯಾಗಬೇಕು. ನಾವು ಮಣ್ಣಿನ ಮಕ್ಕಳು ಅಂತ ಹೇಳಿ ಮನೆಯಲ್ಲಿ ಕೂತರೆ ಆಗಲ್ಲ. ಬೀದಿಗಿಳಿದರೆ ಮಾತ್ರ ಆಡಿದ ಮಾತಿಗೆ ಬೆಲೆ ಬರುತ್ತೆ. ನಾವು ಅಧಿಕಾರಕ್ಕೆ ಬಂದಮೇಲೆ ದೇವರಾಜ ಅರಸು ಅವರು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯಿದೆಯನ್ನು ಯಥಾವತ್ತಾಗಿ ಮರಳಿ ಜಾರಿಗೆ ತರುತ್ತೇವೆ. ಎಪಿಎಂಸಿಗಳನ್ನು ಇನ್ನಷ್ಟು ರೈತಸ್ನೇಹಿ ಮತ್ತು ಪಾರದರ್ಶಕವಾಗಿಸುತ್ತೇವೆ ಎಂಬ ವಾಗ್ದಾನವನ್ನು ನಾಡಿನ ಎಲ್ಲ ರೈತರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ನೀಡುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ರಾಹುಲ್ ಗಾಂಧಿಯವರೂ ಕೂಡ ಪಂಜಾಬ್‌ನಲ್ಲಿ ರೈತವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವಾಗ, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಕರಾಳ ಕಾಯ್ದೆಗಳನ್ನು ನಿಷೇಧಿಸುತ್ತೇವೆ” ಎಂದು ಹೇಳಿದ್ದರು.


ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...