Homeಮುಖಪುಟನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ?

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತವಿರೋಧಿ ಕಾನೂನುಗಳನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ಪಕ್ಷದ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರೈತ ಸಮ್ಮೇಳನದಲ್ಲಿ ಸಿದ್ದರಾಮಯ್ಯ ಮಾತನಾಡಿ, “ನಾವು ಅಧಿಕಾರಕ್ಕೆ ಬಂದರೆ ದೇವರಾಜ ಅರಸು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತರುತ್ತೇವೆ” ಎಂದು ವಾಗ್ದಾನ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ವತಿಯಿಂದ ಮಂಡ್ಯದಲ್ಲಿ ನಿನ್ನೆ ಆಯೋಜಿಸಿದ್ದ ರೈತ ಸಮ್ಮೇಳನದಲ್ಲಿ, ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸರ್ಜೆವಾಲ, ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ಇದರ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ನಾನು ರೈತ ಕುಟುಂಬದಲ್ಲೇ ಹುಟ್ಟಿದವನು. 1980 ರಿಂದ 83ರವರೆಗೆ ಮೈಸೂರು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಈ ನೆಲದ ರೈತರ ಬದುಕು-ಬವಣೆ, ಕಷ್ಟ-ಸುಖಗಳನ್ನು ಕಣ್ಣಾರೆ ಕಂಡಿದ್ದೇನೆ, ಅನುಭವಿಸಿದ್ದೇನೆ. ಹಾಗಾಗಿ ರೈತರ ಪರ ಸದಾ ನಿಲ್ಲುವ ಬದ್ಧತೆ ನನ್ನಲ್ಲಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕೃಷಿ ಬೆಲೆ ಆಯೋಗ ರಚನೆ ಮತ್ತು ಎಪಿಎಂಸಿ ಮಾರುಕಟ್ಟೆಗಳಲ್ಲಿ ಆನ್‌ಲೈನ್ ಪದ್ಧತಿ ಜಾರಿಗೊಳಿಸಿದೆ. ಕಬ್ಬು ಬೆಳೆಗಾರರು ನಷ್ಟಕ್ಕೀಡಾದಾಗ ಟನ್‌ಗೆ ತಲಾ ರೂ.300 ರಂತೆ ಸುಮಾರು ರೂ.1,800 ಕೋಟಿ ಬೆಂಬಲ ಬೆಲೆ ನೀಡಿ ಖರೀದಿಸಿದ್ದು ನಮ್ಮ ಸರ್ಕಾರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

“ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ? ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂಬ ಕಾರಣ ನೀಡಿ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ರೈತರಿಂದ ಭೂಮಿಯನ್ನು ಕಸಿದು ಯಾರಿಗೆ ಕೊಡಲು ಹೊರಟಿದ್ದೀರಿ ಎಂಬುದನ್ನೂ ಜನರಿಗೆ ಹೇಳಬೇಕಲ್ಲವೇ ಮಿಸ್ಟರ್ ಯಡಿಯೂರಪ್ಪ ಅವರೇ? ಭೂ ಸುಧಾರಣಾ ಕಾಯಿದೆಯ ಉಲ್ಲಂಘನೆ ಮಾಡಿ ಕೃಷಿ ಭೂಮಿ ಖರೀದಿಸಿರುವ 1814 ಪ್ರಕರಣಗಳು ನ್ಯಾಯಾಲಯದಲ್ಲಿವೆ, ಒಟ್ಟು ಭೂಮಿಯ ಮೌಲ್ಯ ಸುಮಾರು ರೂ.50,000 ಕೋಟಿ ಆಗಲಿದೆ. ಕಾಯ್ದೆ ತಿದ್ದುಪಡಿಯಿಂದ ಈ ಎಲ್ಲಾ ಪ್ರಕರಣಗಳು ರದ್ದಾಗುತ್ತದೆ. ಈ ಹಗರಣದಲ್ಲಿ ನಿಮ್ಮ ಪಾಲೆಷ್ಟು ಮಿಸ್ಟರ್ ಯಡಿಯೂರಪ್ಪ ಅವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

“ಧ್ವನಿ ಮತದ ಮೂಲಕ ಸಂಸತ್ತಿನಲ್ಲಿ ಮಸೂದೆ ಪಾಸಾದರೂ, ಅದನ್ನು ಜನರ ಧ್ವನಿ ಎದುರು ಗೆಲ್ಲಲು ಬಿಡಬಾರದು. ಈ ಹೋರಾಟದಲ್ಲಿ ಪಕ್ಷಾತೀತವಾಗಿ ಎಲ್ಲರೂ ಭಾಗಿಯಾಗಬೇಕು. ನಾವು ಮಣ್ಣಿನ ಮಕ್ಕಳು ಅಂತ ಹೇಳಿ ಮನೆಯಲ್ಲಿ ಕೂತರೆ ಆಗಲ್ಲ. ಬೀದಿಗಿಳಿದರೆ ಮಾತ್ರ ಆಡಿದ ಮಾತಿಗೆ ಬೆಲೆ ಬರುತ್ತೆ. ನಾವು ಅಧಿಕಾರಕ್ಕೆ ಬಂದಮೇಲೆ ದೇವರಾಜ ಅರಸು ಅವರು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯಿದೆಯನ್ನು ಯಥಾವತ್ತಾಗಿ ಮರಳಿ ಜಾರಿಗೆ ತರುತ್ತೇವೆ. ಎಪಿಎಂಸಿಗಳನ್ನು ಇನ್ನಷ್ಟು ರೈತಸ್ನೇಹಿ ಮತ್ತು ಪಾರದರ್ಶಕವಾಗಿಸುತ್ತೇವೆ ಎಂಬ ವಾಗ್ದಾನವನ್ನು ನಾಡಿನ ಎಲ್ಲ ರೈತರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ನೀಡುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ರಾಹುಲ್ ಗಾಂಧಿಯವರೂ ಕೂಡ ಪಂಜಾಬ್‌ನಲ್ಲಿ ರೈತವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವಾಗ, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಕರಾಳ ಕಾಯ್ದೆಗಳನ್ನು ನಿಷೇಧಿಸುತ್ತೇವೆ” ಎಂದು ಹೇಳಿದ್ದರು.


ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...