Homeಮುಖಪುಟನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ?

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತವಿರೋಧಿ ಕಾನೂನುಗಳನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ಪಕ್ಷದ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರೈತ ಸಮ್ಮೇಳನದಲ್ಲಿ ಸಿದ್ದರಾಮಯ್ಯ ಮಾತನಾಡಿ, “ನಾವು ಅಧಿಕಾರಕ್ಕೆ ಬಂದರೆ ದೇವರಾಜ ಅರಸು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತರುತ್ತೇವೆ” ಎಂದು ವಾಗ್ದಾನ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ವತಿಯಿಂದ ಮಂಡ್ಯದಲ್ಲಿ ನಿನ್ನೆ ಆಯೋಜಿಸಿದ್ದ ರೈತ ಸಮ್ಮೇಳನದಲ್ಲಿ, ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸರ್ಜೆವಾಲ, ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ಇದರ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ನಾನು ರೈತ ಕುಟುಂಬದಲ್ಲೇ ಹುಟ್ಟಿದವನು. 1980 ರಿಂದ 83ರವರೆಗೆ ಮೈಸೂರು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಈ ನೆಲದ ರೈತರ ಬದುಕು-ಬವಣೆ, ಕಷ್ಟ-ಸುಖಗಳನ್ನು ಕಣ್ಣಾರೆ ಕಂಡಿದ್ದೇನೆ, ಅನುಭವಿಸಿದ್ದೇನೆ. ಹಾಗಾಗಿ ರೈತರ ಪರ ಸದಾ ನಿಲ್ಲುವ ಬದ್ಧತೆ ನನ್ನಲ್ಲಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕೃಷಿ ಬೆಲೆ ಆಯೋಗ ರಚನೆ ಮತ್ತು ಎಪಿಎಂಸಿ ಮಾರುಕಟ್ಟೆಗಳಲ್ಲಿ ಆನ್‌ಲೈನ್ ಪದ್ಧತಿ ಜಾರಿಗೊಳಿಸಿದೆ. ಕಬ್ಬು ಬೆಳೆಗಾರರು ನಷ್ಟಕ್ಕೀಡಾದಾಗ ಟನ್‌ಗೆ ತಲಾ ರೂ.300 ರಂತೆ ಸುಮಾರು ರೂ.1,800 ಕೋಟಿ ಬೆಂಬಲ ಬೆಲೆ ನೀಡಿ ಖರೀದಿಸಿದ್ದು ನಮ್ಮ ಸರ್ಕಾರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

“ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ? ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂಬ ಕಾರಣ ನೀಡಿ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ರೈತರಿಂದ ಭೂಮಿಯನ್ನು ಕಸಿದು ಯಾರಿಗೆ ಕೊಡಲು ಹೊರಟಿದ್ದೀರಿ ಎಂಬುದನ್ನೂ ಜನರಿಗೆ ಹೇಳಬೇಕಲ್ಲವೇ ಮಿಸ್ಟರ್ ಯಡಿಯೂರಪ್ಪ ಅವರೇ? ಭೂ ಸುಧಾರಣಾ ಕಾಯಿದೆಯ ಉಲ್ಲಂಘನೆ ಮಾಡಿ ಕೃಷಿ ಭೂಮಿ ಖರೀದಿಸಿರುವ 1814 ಪ್ರಕರಣಗಳು ನ್ಯಾಯಾಲಯದಲ್ಲಿವೆ, ಒಟ್ಟು ಭೂಮಿಯ ಮೌಲ್ಯ ಸುಮಾರು ರೂ.50,000 ಕೋಟಿ ಆಗಲಿದೆ. ಕಾಯ್ದೆ ತಿದ್ದುಪಡಿಯಿಂದ ಈ ಎಲ್ಲಾ ಪ್ರಕರಣಗಳು ರದ್ದಾಗುತ್ತದೆ. ಈ ಹಗರಣದಲ್ಲಿ ನಿಮ್ಮ ಪಾಲೆಷ್ಟು ಮಿಸ್ಟರ್ ಯಡಿಯೂರಪ್ಪ ಅವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

“ಧ್ವನಿ ಮತದ ಮೂಲಕ ಸಂಸತ್ತಿನಲ್ಲಿ ಮಸೂದೆ ಪಾಸಾದರೂ, ಅದನ್ನು ಜನರ ಧ್ವನಿ ಎದುರು ಗೆಲ್ಲಲು ಬಿಡಬಾರದು. ಈ ಹೋರಾಟದಲ್ಲಿ ಪಕ್ಷಾತೀತವಾಗಿ ಎಲ್ಲರೂ ಭಾಗಿಯಾಗಬೇಕು. ನಾವು ಮಣ್ಣಿನ ಮಕ್ಕಳು ಅಂತ ಹೇಳಿ ಮನೆಯಲ್ಲಿ ಕೂತರೆ ಆಗಲ್ಲ. ಬೀದಿಗಿಳಿದರೆ ಮಾತ್ರ ಆಡಿದ ಮಾತಿಗೆ ಬೆಲೆ ಬರುತ್ತೆ. ನಾವು ಅಧಿಕಾರಕ್ಕೆ ಬಂದಮೇಲೆ ದೇವರಾಜ ಅರಸು ಅವರು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯಿದೆಯನ್ನು ಯಥಾವತ್ತಾಗಿ ಮರಳಿ ಜಾರಿಗೆ ತರುತ್ತೇವೆ. ಎಪಿಎಂಸಿಗಳನ್ನು ಇನ್ನಷ್ಟು ರೈತಸ್ನೇಹಿ ಮತ್ತು ಪಾರದರ್ಶಕವಾಗಿಸುತ್ತೇವೆ ಎಂಬ ವಾಗ್ದಾನವನ್ನು ನಾಡಿನ ಎಲ್ಲ ರೈತರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ನೀಡುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ರಾಹುಲ್ ಗಾಂಧಿಯವರೂ ಕೂಡ ಪಂಜಾಬ್‌ನಲ್ಲಿ ರೈತವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವಾಗ, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಕರಾಳ ಕಾಯ್ದೆಗಳನ್ನು ನಿಷೇಧಿಸುತ್ತೇವೆ” ಎಂದು ಹೇಳಿದ್ದರು.


ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...