Homeಮುಖಪುಟನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ?

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತವಿರೋಧಿ ಕಾನೂನುಗಳನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ಪಕ್ಷದ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರೈತ ಸಮ್ಮೇಳನದಲ್ಲಿ ಸಿದ್ದರಾಮಯ್ಯ ಮಾತನಾಡಿ, “ನಾವು ಅಧಿಕಾರಕ್ಕೆ ಬಂದರೆ ದೇವರಾಜ ಅರಸು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತರುತ್ತೇವೆ” ಎಂದು ವಾಗ್ದಾನ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ವತಿಯಿಂದ ಮಂಡ್ಯದಲ್ಲಿ ನಿನ್ನೆ ಆಯೋಜಿಸಿದ್ದ ರೈತ ಸಮ್ಮೇಳನದಲ್ಲಿ, ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸರ್ಜೆವಾಲ, ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ಇದರ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ನಾನು ರೈತ ಕುಟುಂಬದಲ್ಲೇ ಹುಟ್ಟಿದವನು. 1980 ರಿಂದ 83ರವರೆಗೆ ಮೈಸೂರು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಈ ನೆಲದ ರೈತರ ಬದುಕು-ಬವಣೆ, ಕಷ್ಟ-ಸುಖಗಳನ್ನು ಕಣ್ಣಾರೆ ಕಂಡಿದ್ದೇನೆ, ಅನುಭವಿಸಿದ್ದೇನೆ. ಹಾಗಾಗಿ ರೈತರ ಪರ ಸದಾ ನಿಲ್ಲುವ ಬದ್ಧತೆ ನನ್ನಲ್ಲಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕೃಷಿ ಬೆಲೆ ಆಯೋಗ ರಚನೆ ಮತ್ತು ಎಪಿಎಂಸಿ ಮಾರುಕಟ್ಟೆಗಳಲ್ಲಿ ಆನ್‌ಲೈನ್ ಪದ್ಧತಿ ಜಾರಿಗೊಳಿಸಿದೆ. ಕಬ್ಬು ಬೆಳೆಗಾರರು ನಷ್ಟಕ್ಕೀಡಾದಾಗ ಟನ್‌ಗೆ ತಲಾ ರೂ.300 ರಂತೆ ಸುಮಾರು ರೂ.1,800 ಕೋಟಿ ಬೆಂಬಲ ಬೆಲೆ ನೀಡಿ ಖರೀದಿಸಿದ್ದು ನಮ್ಮ ಸರ್ಕಾರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

“ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ? ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂಬ ಕಾರಣ ನೀಡಿ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ರೈತರಿಂದ ಭೂಮಿಯನ್ನು ಕಸಿದು ಯಾರಿಗೆ ಕೊಡಲು ಹೊರಟಿದ್ದೀರಿ ಎಂಬುದನ್ನೂ ಜನರಿಗೆ ಹೇಳಬೇಕಲ್ಲವೇ ಮಿಸ್ಟರ್ ಯಡಿಯೂರಪ್ಪ ಅವರೇ? ಭೂ ಸುಧಾರಣಾ ಕಾಯಿದೆಯ ಉಲ್ಲಂಘನೆ ಮಾಡಿ ಕೃಷಿ ಭೂಮಿ ಖರೀದಿಸಿರುವ 1814 ಪ್ರಕರಣಗಳು ನ್ಯಾಯಾಲಯದಲ್ಲಿವೆ, ಒಟ್ಟು ಭೂಮಿಯ ಮೌಲ್ಯ ಸುಮಾರು ರೂ.50,000 ಕೋಟಿ ಆಗಲಿದೆ. ಕಾಯ್ದೆ ತಿದ್ದುಪಡಿಯಿಂದ ಈ ಎಲ್ಲಾ ಪ್ರಕರಣಗಳು ರದ್ದಾಗುತ್ತದೆ. ಈ ಹಗರಣದಲ್ಲಿ ನಿಮ್ಮ ಪಾಲೆಷ್ಟು ಮಿಸ್ಟರ್ ಯಡಿಯೂರಪ್ಪ ಅವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

“ಧ್ವನಿ ಮತದ ಮೂಲಕ ಸಂಸತ್ತಿನಲ್ಲಿ ಮಸೂದೆ ಪಾಸಾದರೂ, ಅದನ್ನು ಜನರ ಧ್ವನಿ ಎದುರು ಗೆಲ್ಲಲು ಬಿಡಬಾರದು. ಈ ಹೋರಾಟದಲ್ಲಿ ಪಕ್ಷಾತೀತವಾಗಿ ಎಲ್ಲರೂ ಭಾಗಿಯಾಗಬೇಕು. ನಾವು ಮಣ್ಣಿನ ಮಕ್ಕಳು ಅಂತ ಹೇಳಿ ಮನೆಯಲ್ಲಿ ಕೂತರೆ ಆಗಲ್ಲ. ಬೀದಿಗಿಳಿದರೆ ಮಾತ್ರ ಆಡಿದ ಮಾತಿಗೆ ಬೆಲೆ ಬರುತ್ತೆ. ನಾವು ಅಧಿಕಾರಕ್ಕೆ ಬಂದಮೇಲೆ ದೇವರಾಜ ಅರಸು ಅವರು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯಿದೆಯನ್ನು ಯಥಾವತ್ತಾಗಿ ಮರಳಿ ಜಾರಿಗೆ ತರುತ್ತೇವೆ. ಎಪಿಎಂಸಿಗಳನ್ನು ಇನ್ನಷ್ಟು ರೈತಸ್ನೇಹಿ ಮತ್ತು ಪಾರದರ್ಶಕವಾಗಿಸುತ್ತೇವೆ ಎಂಬ ವಾಗ್ದಾನವನ್ನು ನಾಡಿನ ಎಲ್ಲ ರೈತರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ನೀಡುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ರಾಹುಲ್ ಗಾಂಧಿಯವರೂ ಕೂಡ ಪಂಜಾಬ್‌ನಲ್ಲಿ ರೈತವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವಾಗ, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಕರಾಳ ಕಾಯ್ದೆಗಳನ್ನು ನಿಷೇಧಿಸುತ್ತೇವೆ” ಎಂದು ಹೇಳಿದ್ದರು.


ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...