Homeಮುಖಪುಟನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದರೆ ಭೂ ಸುಧಾರಣೆ ಕಾಯ್ದೆಯನ್ನು ಮರಳಿ ಜಾರಿಗೆ ತರುತ್ತೇವೆ: ಸಿದ್ದರಾಮಯ್ಯ

ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ?

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತವಿರೋಧಿ ಕಾನೂನುಗಳನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ಪಕ್ಷದ ವತಿಯಿಂದ ಮಂಡ್ಯದಲ್ಲಿ ಹಮ್ಮಿಕೊಂಡಿದ್ದ ರೈತ ಸಮ್ಮೇಳನದಲ್ಲಿ ಸಿದ್ದರಾಮಯ್ಯ ಮಾತನಾಡಿ, “ನಾವು ಅಧಿಕಾರಕ್ಕೆ ಬಂದರೆ ದೇವರಾಜ ಅರಸು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತರುತ್ತೇವೆ” ಎಂದು ವಾಗ್ದಾನ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ವತಿಯಿಂದ ಮಂಡ್ಯದಲ್ಲಿ ನಿನ್ನೆ ಆಯೋಜಿಸಿದ್ದ ರೈತ ಸಮ್ಮೇಳನದಲ್ಲಿ, ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸರ್ಜೆವಾಲ, ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ: ರೈತ ವಿರೋಧಿ ಕಾಯ್ದೆ ವಿರುದ್ದ ರಾಜ್ಯದಾದ್ಯಂತ ಪ್ರತಿಭಟನೆ; ಹೋರಾಟದ ಝಲಕ್

ಇದರ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ನಾನು ರೈತ ಕುಟುಂಬದಲ್ಲೇ ಹುಟ್ಟಿದವನು. 1980 ರಿಂದ 83ರವರೆಗೆ ಮೈಸೂರು ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ಈ ನೆಲದ ರೈತರ ಬದುಕು-ಬವಣೆ, ಕಷ್ಟ-ಸುಖಗಳನ್ನು ಕಣ್ಣಾರೆ ಕಂಡಿದ್ದೇನೆ, ಅನುಭವಿಸಿದ್ದೇನೆ. ಹಾಗಾಗಿ ರೈತರ ಪರ ಸದಾ ನಿಲ್ಲುವ ಬದ್ಧತೆ ನನ್ನಲ್ಲಿದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕೃಷಿ ಬೆಲೆ ಆಯೋಗ ರಚನೆ ಮತ್ತು ಎಪಿಎಂಸಿ ಮಾರುಕಟ್ಟೆಗಳಲ್ಲಿ ಆನ್‌ಲೈನ್ ಪದ್ಧತಿ ಜಾರಿಗೊಳಿಸಿದೆ. ಕಬ್ಬು ಬೆಳೆಗಾರರು ನಷ್ಟಕ್ಕೀಡಾದಾಗ ಟನ್‌ಗೆ ತಲಾ ರೂ.300 ರಂತೆ ಸುಮಾರು ರೂ.1,800 ಕೋಟಿ ಬೆಂಬಲ ಬೆಲೆ ನೀಡಿ ಖರೀದಿಸಿದ್ದು ನಮ್ಮ ಸರ್ಕಾರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರ್‌ಸಿಇಪಿ ಬಿಜೆಪಿ ಸರ್ಕಾರದ ರೈತ ವಿರೋಧಿ ಒಪ್ಪಂದ, ರೈತರಿಗೆ ಮರಣಶಾಸನ: ಸಿದ್ದರಾಮಯ್ಯ

ಇದನ್ನೂ ಓದಿ: ಮಂಡ್ಯ: ರೈತ ಮಸೂದೆಗಳನ್ನು ವಿರೋಧಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ

“ಅಂದು ನಾವು ಕೃಷಿ ಉತ್ಪನ್ನ ಮಾರುಕಟ್ಟೆಗಳ ಆನ್‌ಲೈನ್ ಪದ್ಧತಿಯನ್ನು ಜಾರಿಗೊಳಿಸಿದಾಗ ಅದನ್ನು ಹೊಗಳಿ, ದೇಶದ ಇತರೆ ರಾಜ್ಯಗಳಿಗೂ ಅಳವಡಿಕೆ ಮಾಡುವಂತೆ ತನ್ನ ಬಜೆಟ್‌ನಲ್ಲೇ ಸಲಹೆ ನೀಡಿದ್ದ ಕೇಂದ್ರದ ಬಿಜೆಪಿ ಸರ್ಕಾರವೇ ಇಂದು ಎಪಿಎಂಸಿಗಳ ಬಾಗಿಲು ಮುಚ್ಚಲು ಹೊರಟಿರುವುದು ವಿಪರ್ಯಾಸವಲ್ಲವೇ? ರೈತರು ಕೃಷಿಯಿಂದ ವಿಮುಖರಾಗುತ್ತಿದ್ದಾರೆ ಎಂಬ ಕಾರಣ ನೀಡಿ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿದೆ. ಆದರೆ ರೈತರಿಂದ ಭೂಮಿಯನ್ನು ಕಸಿದು ಯಾರಿಗೆ ಕೊಡಲು ಹೊರಟಿದ್ದೀರಿ ಎಂಬುದನ್ನೂ ಜನರಿಗೆ ಹೇಳಬೇಕಲ್ಲವೇ ಮಿಸ್ಟರ್ ಯಡಿಯೂರಪ್ಪ ಅವರೇ? ಭೂ ಸುಧಾರಣಾ ಕಾಯಿದೆಯ ಉಲ್ಲಂಘನೆ ಮಾಡಿ ಕೃಷಿ ಭೂಮಿ ಖರೀದಿಸಿರುವ 1814 ಪ್ರಕರಣಗಳು ನ್ಯಾಯಾಲಯದಲ್ಲಿವೆ, ಒಟ್ಟು ಭೂಮಿಯ ಮೌಲ್ಯ ಸುಮಾರು ರೂ.50,000 ಕೋಟಿ ಆಗಲಿದೆ. ಕಾಯ್ದೆ ತಿದ್ದುಪಡಿಯಿಂದ ಈ ಎಲ್ಲಾ ಪ್ರಕರಣಗಳು ರದ್ದಾಗುತ್ತದೆ. ಈ ಹಗರಣದಲ್ಲಿ ನಿಮ್ಮ ಪಾಲೆಷ್ಟು ಮಿಸ್ಟರ್ ಯಡಿಯೂರಪ್ಪ ಅವರೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದ ನಟಿ ಕಂಗನಾ!

“ಧ್ವನಿ ಮತದ ಮೂಲಕ ಸಂಸತ್ತಿನಲ್ಲಿ ಮಸೂದೆ ಪಾಸಾದರೂ, ಅದನ್ನು ಜನರ ಧ್ವನಿ ಎದುರು ಗೆಲ್ಲಲು ಬಿಡಬಾರದು. ಈ ಹೋರಾಟದಲ್ಲಿ ಪಕ್ಷಾತೀತವಾಗಿ ಎಲ್ಲರೂ ಭಾಗಿಯಾಗಬೇಕು. ನಾವು ಮಣ್ಣಿನ ಮಕ್ಕಳು ಅಂತ ಹೇಳಿ ಮನೆಯಲ್ಲಿ ಕೂತರೆ ಆಗಲ್ಲ. ಬೀದಿಗಿಳಿದರೆ ಮಾತ್ರ ಆಡಿದ ಮಾತಿಗೆ ಬೆಲೆ ಬರುತ್ತೆ. ನಾವು ಅಧಿಕಾರಕ್ಕೆ ಬಂದಮೇಲೆ ದೇವರಾಜ ಅರಸು ಅವರು ಜಾರಿಗೆ ತಂದಿದ್ದ ಭೂ ಸುಧಾರಣಾ ಕಾಯಿದೆಯನ್ನು ಯಥಾವತ್ತಾಗಿ ಮರಳಿ ಜಾರಿಗೆ ತರುತ್ತೇವೆ. ಎಪಿಎಂಸಿಗಳನ್ನು ಇನ್ನಷ್ಟು ರೈತಸ್ನೇಹಿ ಮತ್ತು ಪಾರದರ್ಶಕವಾಗಿಸುತ್ತೇವೆ ಎಂಬ ವಾಗ್ದಾನವನ್ನು ನಾಡಿನ ಎಲ್ಲ ರೈತರಿಗೆ ಕಾಂಗ್ರೆಸ್ ಪಕ್ಷದ ಪರವಾಗಿ ನೀಡುತ್ತಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ರಾಹುಲ್ ಗಾಂಧಿಯವರೂ ಕೂಡ ಪಂಜಾಬ್‌ನಲ್ಲಿ ರೈತವಿರೋಧಿ ಕಾನೂನುಗಳನ್ನು ವಿರೋಧಿಸಿ ಹೋರಾಡುತ್ತಿರುವಾಗ, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಕರಾಳ ಕಾಯ್ದೆಗಳನ್ನು ನಿಷೇಧಿಸುತ್ತೇವೆ” ಎಂದು ಹೇಳಿದ್ದರು.


ಇದನ್ನೂ ಓದಿ: ರೈತವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ, ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...