Homeಮುಖಪುಟಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್

ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್

- Advertisement -
- Advertisement -

ಕೊರೊನಾವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಮೇಲೆ ತೀವ್ರ ಪ್ರತಿದಾಳಿ ನಡೆಸಿದ್ದಾರೆ. ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು, ನಾವು ಭಾರತವಾಗಿಯೇ ಇರೋಣ ಎಂದು ಅವರು ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹಿಂದೂಸ್ತಾನ್ ಪ್ರಧಾನ ಸಂಪಾದಕ ಶಶಿ ಶೇಖರ್ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಪರೋಕ್ಷವಾಗಿ ರಾಹುಲ್‌ ಮತ್ತು ಪ್ರಿಯಾಂಕ ಇಬ್ಬರನ್ನು ಇಟಲಿಯವರು ಎಂದು ಟೀಕಿಸಿದ್ದಾರೆ.

ಸಾಂಕ್ರಾಮಿಕ ರೋಗದ ಆರಂಭಿಕ ದಿನಗಳಲ್ಲಿ ಇಟಲಿ ತೀವ್ರ ಹೊಡೆತ ತಿಂದ ಮೊದಲ ಯುರೋಪಿಯನ್ ದೇಶವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಇಟಲಿಯು 2.33 ಲಕ್ಷ ಕೊರೊನಾ ಪ್ರಕರಣಗಳು ಮತ್ತು 33,000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಇದಕ್ಕೆ ಪ್ರತಿಯಾಗಿ ಭಾರತವು 2.26 ಲಕ್ಷ ಪ್ರಕರಣಗಳು ಮತ್ತು 6,348 ಸಾವುಗಳನ್ನು ವರದಿ ಮಾಡಿದೆ.

ಫೆಬ್ರವರಿ 12 ರಂದೇ ರಾಹುಲ್‌ ಗಾಂಧಿಯವರು ಕೊರೊನಾ ವೈರಸ್‌ ಬಹಳ ಅಪಾಯಕಾರಿ. ಇದರ ಬಗ್ಗೆ ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಂಡು ಎದುರಿಸಬೇಕು ಎಂದು ಟ್ವೀಟ್‌ ಮಾಡಿದ್ದರು. ಅಲ್ಲದೇ ಮಾರ್ಚ್‌ 05 ರಂದು ಅದರ ಬಗ್ಗೆ ಜ್ಞಾಪಿಸಿದ್ದರು. ನಂತರ ಮಾರ್ಚ್‌ 12 ರಂದು ಮತ್ತೊಮ್ಮೆ ತಮ್ಮ ಫೆಬ್ರವರಿ 12 ರ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ ಸರ್ಕಾರ ಏನು ಮಾಡುತ್ತಿಲ್ಲ ಎಂದು ಟೀಕಿಸಿದ್ದರು. ಮಾರ್ಚ್‌ 24 ರಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಲಾಕ್‌ಡೌನ್‌ ಘೋಷಿಸಿತ್ತು.

ಲಾಕ್‌ಡೌನ್‌ ವೇಳೆಯಲ್ಲಿ ವಲಸೆ ಕಾರ್ಮಿಕರನ್ನು ಕೇಂದ್ರ ಸರ್ಕಾರ ಮತ್ತು ಯುಪಿ ಸರ್ಕಾರ ನಡೆಸಿಕೊಂಡ ರೀತಿಗೆ ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ಮೇಲೆ ಟೀಕೆಯ ಸುರಿಮಳೆ ಸುರಿಸಿತ್ತು. ಯುಪಿಗೆ ಬಸ್‌ ಕರೆತರುವ ವಿಚಾರದಲ್ಲಿ ಪ್ರಿಯಾಂಕ ಗಾಂಧಿ ಮತ್ತು ಯೋಗಿ ಆದಿತ್ಯನಾಥ್‌ ನಡುವೆ ವಾಗ್ವಾದ ನಡೆದಿತ್ತು. ಇತ್ತೀಚಿನ ದಿನಗಳಲ್ಲಿ ಮೋದಿಯವರ ಮುಂದಾಲೋಚನೆ ಮತ್ತು ಯೋಜನೆಗಳಿಲ್ಲ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗ ಅಧಿಕವಾಗಿದೆ, ಸಣ್ಣ ಮತ್ತು ಮದ್ಯಮ ಉದ್ಯಮಗಳು ನೆಲಕಚ್ಚಿವೆ ಎಂದು ರಾಹುಲ್‌ ಟೀಕಿಸಿದ್ದರು.

ಇದಕ್ಕೆ ಪ್ರತಿಯಾಗಿ ಯೋಗಿ ಆದಿತ್ಯನಾಥ್‌ ನಿಮ್ಮ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು ಎಂದು ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ: ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ – ಪ್ರಿಯಾಂಕ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...