Homeಮುಖಪುಟಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್

ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್

- Advertisement -
- Advertisement -

ಕೊರೊನಾವೈರಸ್ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದ್ದಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಮೇಲೆ ತೀವ್ರ ಪ್ರತಿದಾಳಿ ನಡೆಸಿದ್ದಾರೆ. ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು, ನಾವು ಭಾರತವಾಗಿಯೇ ಇರೋಣ ಎಂದು ಅವರು ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹಿಂದೂಸ್ತಾನ್ ಪ್ರಧಾನ ಸಂಪಾದಕ ಶಶಿ ಶೇಖರ್ ಅವರೊಂದಿಗಿನ ಸಂದರ್ಶನದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಪರೋಕ್ಷವಾಗಿ ರಾಹುಲ್‌ ಮತ್ತು ಪ್ರಿಯಾಂಕ ಇಬ್ಬರನ್ನು ಇಟಲಿಯವರು ಎಂದು ಟೀಕಿಸಿದ್ದಾರೆ.

ಸಾಂಕ್ರಾಮಿಕ ರೋಗದ ಆರಂಭಿಕ ದಿನಗಳಲ್ಲಿ ಇಟಲಿ ತೀವ್ರ ಹೊಡೆತ ತಿಂದ ಮೊದಲ ಯುರೋಪಿಯನ್ ದೇಶವಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ, ಇಟಲಿಯು 2.33 ಲಕ್ಷ ಕೊರೊನಾ ಪ್ರಕರಣಗಳು ಮತ್ತು 33,000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಇದಕ್ಕೆ ಪ್ರತಿಯಾಗಿ ಭಾರತವು 2.26 ಲಕ್ಷ ಪ್ರಕರಣಗಳು ಮತ್ತು 6,348 ಸಾವುಗಳನ್ನು ವರದಿ ಮಾಡಿದೆ.

ಫೆಬ್ರವರಿ 12 ರಂದೇ ರಾಹುಲ್‌ ಗಾಂಧಿಯವರು ಕೊರೊನಾ ವೈರಸ್‌ ಬಹಳ ಅಪಾಯಕಾರಿ. ಇದರ ಬಗ್ಗೆ ಸರ್ಕಾರ ಮುನ್ನೆಚ್ಚರಿಕೆ ತೆಗೆದುಕೊಂಡು ಎದುರಿಸಬೇಕು ಎಂದು ಟ್ವೀಟ್‌ ಮಾಡಿದ್ದರು. ಅಲ್ಲದೇ ಮಾರ್ಚ್‌ 05 ರಂದು ಅದರ ಬಗ್ಗೆ ಜ್ಞಾಪಿಸಿದ್ದರು. ನಂತರ ಮಾರ್ಚ್‌ 12 ರಂದು ಮತ್ತೊಮ್ಮೆ ತಮ್ಮ ಫೆಬ್ರವರಿ 12 ರ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ ಸರ್ಕಾರ ಏನು ಮಾಡುತ್ತಿಲ್ಲ ಎಂದು ಟೀಕಿಸಿದ್ದರು. ಮಾರ್ಚ್‌ 24 ರಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಲಾಕ್‌ಡೌನ್‌ ಘೋಷಿಸಿತ್ತು.

ಲಾಕ್‌ಡೌನ್‌ ವೇಳೆಯಲ್ಲಿ ವಲಸೆ ಕಾರ್ಮಿಕರನ್ನು ಕೇಂದ್ರ ಸರ್ಕಾರ ಮತ್ತು ಯುಪಿ ಸರ್ಕಾರ ನಡೆಸಿಕೊಂಡ ರೀತಿಗೆ ಕಾಂಗ್ರೆಸ್ ಪಕ್ಷ ಮೋದಿ ಸರ್ಕಾರದ ಮೇಲೆ ಟೀಕೆಯ ಸುರಿಮಳೆ ಸುರಿಸಿತ್ತು. ಯುಪಿಗೆ ಬಸ್‌ ಕರೆತರುವ ವಿಚಾರದಲ್ಲಿ ಪ್ರಿಯಾಂಕ ಗಾಂಧಿ ಮತ್ತು ಯೋಗಿ ಆದಿತ್ಯನಾಥ್‌ ನಡುವೆ ವಾಗ್ವಾದ ನಡೆದಿತ್ತು. ಇತ್ತೀಚಿನ ದಿನಗಳಲ್ಲಿ ಮೋದಿಯವರ ಮುಂದಾಲೋಚನೆ ಮತ್ತು ಯೋಜನೆಗಳಿಲ್ಲ ಲಾಕ್‌ಡೌನ್‌ನಿಂದಾಗಿ ನಿರುದ್ಯೋಗ ಅಧಿಕವಾಗಿದೆ, ಸಣ್ಣ ಮತ್ತು ಮದ್ಯಮ ಉದ್ಯಮಗಳು ನೆಲಕಚ್ಚಿವೆ ಎಂದು ರಾಹುಲ್‌ ಟೀಕಿಸಿದ್ದರು.

ಇದಕ್ಕೆ ಪ್ರತಿಯಾಗಿ ಯೋಗಿ ಆದಿತ್ಯನಾಥ್‌ ನಿಮ್ಮ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು ಎಂದು ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ: ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ – ಪ್ರಿಯಾಂಕ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...