Homeಮುಖಪುಟನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಪ್ರಸ್ತುತ ಕೋವಿಡ್ ಬಿಕ್ಕಟ್ಟು ಉಂಟಾಗಿರುವ ಈ ದುರಂತದ ಸಂದರ್ಭದಲ್ಲಿ ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಹೇಳಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ಕೇರಳ ಎದುರಿಸುತ್ತಿರುವ ಬಗೆ ವಿಷಯದ ಕುರಿತು ಬ್ಯುಸಿನೆಸ್ ಲೈನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.

ಇಂದಿನ ಆರೋಗ್ಯ ಬಿಕ್ಕಟ್ಟನ್ನು ಪರಿಹರಿಸಲು ನೀವು ಏನು ಸಲಹೆ ನೀಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಎಡಪಂಥೀಯಳು. ಪ್ರಸ್ತುತ ಈ ದೇಶದ ಆರೋಗ್ಯ ನೀತಿಯ ಬಗ್ಗೆ ನನಗೆ ಹೇಳಲು ಏನು ಇಲ್ಲ. ಆದರೆ ಈ ಸಮಯದಲ್ಲಿ ಕೇಂದ್ರದಲ್ಲಿ ಎಡಪಂಥೀಯರು ಅಧಿಕಾರದಲ್ಲಿದ್ದರೆ, ನಾವು ಆರೋಗ್ಯ ಮತ್ತು ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು. ಆರೋಗ್ಯ ವ್ಯವಸ್ಥೆಯ ಮೇಲೆ ಸರ್ಕಾರವು ನಿಯಂತ್ರಣ ಹೊಂದಿದ್ದರೆ ಪ್ರತಿಯೊಬ್ಬರೂ ಬಡವರು ಅಥವಾ ಶ್ರೀಮಂತರು ಎಂಬ ಬೇಧವಿಲ್ಲದೆ ಸಮಾನ ಚಿಕಿತ್ಸೆ ಪಡೆಯುತ್ತಾರೆ” ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಸ್ತುತ ಸರ್ಕಾರವು ಬಂಡವಾಳಶಾಹಿ ಸಿದ್ಧಾಂತದ ಪರವಾಗಿದೆ. ಆದರೆ ಬಂಡವಾಳಶಾಹಿ ನೀತಿಯೊಳಗೂ ಸಹ ಅವರು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಪ್ರಯತ್ನಿಸಬೇಕು. ಅವರು ಬಡವರು ಮತ್ತು ದುರ್ಬಲ ಜನರನ್ನು ಶೋಷಿಸದಂತೆ ಖಾಸಗಿ ಆರೋಗ್ಯ ವ್ಯವಸ್ಥೆಯನ್ನು ನಿಯಂತ್ರಿಸಲು ಪ್ರಯತ್ನಿಸಬೇಕು ಎಂದು ಶೈಲಜಾರವರು ತಿಳಿಸಿದ್ದಾರೆ.

ಪ್ರಸ್ತುತ ಬಿಕ್ಕಟ್ಟಿನಿಂದ ನಾವು ಕಲಿಯಬೇಕಾದ ಪಾಠಗಳು ಯಾವುವು? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಸಾಂಕ್ರಾಮಿಕದಿಂದ ನಮಗೆ ಎರಡು ಪ್ರಮುಖ ಪಾಠಗಳಿವೆ ಎಂದು ನಾನು ಭಾವಿಸುತ್ತೇನೆ. ಒಂದು, ನಮ್ಮ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ದೇಶಕ್ಕೆ ಸರಿಯಾದ ಯೋಜನೆ ಮತ್ತು ವಿಕೇಂದ್ರೀಕೃತ ಅನುಷ್ಠಾನದ ಕಾರ್ಯವಿಧಾನಗಳು ಬೇಕಾಗುತ್ತವೆ. ಎರಡನೇದಾಗಿ ಆರೋಗ್ಯ ವ್ಯವಸ್ಥೆಯಲ್ಲಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಲು ಯಾವುದೇ ವಿಳಂಬ ಮಾಡಬಾರದು. ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು. ಕ್ಯೂಬಾದಂತಹ ದೇಶಗಳು ಆರೋಗ್ಯ ರಕ್ಷಣೆಯಲ್ಲಿ ಹೆಚ್ಚು ಹೂಡಿಕೆ ಮಾಡುತ್ತವೆ ಎಂದು ಅವರು ತಿಳಿಸಿದ್ದಾರೆ.

ಕೇರಳದಲ್ಲಿ ನಾವು ಉತ್ತಮ ಕಟ್ಟಡಗಳು, ಶೌಚಾಲಯಗಳು, ಪ್ರಯೋಗಾಲಯಗಳು ಮತ್ತು ಹೊರ ರೋಗಿಗಳ ಕೊಠಡಿಗಳೊಂದಿಗೆ ನಮ್ಮ ಪಿಎಚ್‌ಸಿ (ಪ್ರಾಥಮಿಕ ಆರೋಗ್ಯ ಕೇಂದ್ರ) ಗಳನ್ನು ಆಕರ್ಷಕಗೊಳಿಸಿದ್ದೇವೆ. ಸ್ಥಳೀಯ ಸ್ವ-ಸರ್ಕಾರಗಳು ಮತ್ತು ಕೆಐಐಎಫ್‌ಬಿ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಮೂಲಸೌಕರ್ಯವನ್ನು ನಿರ್ಮಿಸುವ ಕುರಿತು ನಾವು ಪಂಚಾಯತ್ ಅಧ್ಯಕ್ಷರು ಮತ್ತು ವೈದ್ಯಕೀಯ ಅಧಿಕಾರಿಗಳಿಗೆ ತರಬೇತಿ ನೀಡಿದ್ದೇವೆ. ಕೇಂದ್ರದ ಯೋಜನಾ ನಿಧಿಯ ಸೀಮಿತ ಲಭ್ಯತೆಯೊಳಗೆ ಅವರು ಈ ಕೆಲಸದಲ್ಲಿ ನಮಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಮೂಲಸೌಕರ್ಯವನ್ನು ನಿರ್ಮಿಸಲು ಬಹಳಷ್ಟು ಜನರು ಆರ್ಥಿಕವಾಗಿ ಸಹಕರಿಸಿದ್ದಾರೆ. ರಾಜ್ಯದ 946 ಪಿಎಚ್‌ಸಿಗಳಲ್ಲಿ 617 ಈಗ ಹೊಸ ಕಟ್ಟಡಗಳನ್ನು ಹೊಂದಿವೆ. ಅದು ಸಾರ್ವಜನಿಕ ಚಳುವಳಿ. ಈ 100 ಕ್ಕೂ ಹೆಚ್ಚು ಪಿಎಚ್‌ಸಿಗಳು ರಾಷ್ಟ್ರೀಯ ಗುಣಮಟ್ಟ ಖಾತರಿ ಮಾನದಂಡಗಳ (ಎನ್‌ಕ್ಯೂಎಎಸ್) ಪ್ರಮಾಣೀಕರಣವನ್ನು ಪಡೆದಿವೆ. ನಮ್ಮ ದ್ವಿತೀಯ ಹಂತದ ಆಸ್ಪತ್ರೆಗಳನ್ನು ತಾಲ್ಲೂಕು ಮಟ್ಟದಲ್ಲಿ ಸುಧಾರಿಸಿದ್ದೇವೆ. ಕೆಲವು ಆಸ್ಪತ್ರೆಗಳು ಕಾರ್ಪೊರೇಟ್ ಆಸ್ಪತ್ರೆಗಿಂತ ಹೆಚ್ಚಿನ ಸೌಲಭ್ಯಗಳನ್ನು ಹೊಂದಿವೆ. ತೃತೀಯ ಆರೋಗ್ಯ ರಕ್ಷಣೆಯೂ ಸುಧಾರಿಸಿದೆ. ವೈದ್ಯಕೀಯ ಕಾಲೇಜುಗಳನ್ನು ಆಧುನೀಕರಿಸಲಾಯಿತು. ಹೊಸ ವೈದ್ಯಕೀಯ ಕಾಲೇಜುಗಳು ಪ್ರಾರಂಭವಾದವು. ಈ ಆಸ್ಪತ್ರೆಗಳಲ್ಲಿ ಈಗ ಹೆಚ್ಚಿನ ಆಧುನಿಕ ಉಪಕರಣಗಳು ಲಭ್ಯವಿದೆ. ನಾವು ಔಷಧ ಸಂಶೋಧನೆಯನ್ನು ಉತ್ತೇಜಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

2016 ರವರೆಗೆ ರಾಜ್ಯದ ಶೇಕಡಾ 37 ರಷ್ಟು ಜನರು ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದರು. ಈಗ ರಾಜ್ಯದ ಜನಸಂಖ್ಯೆಯ ಶೇಕಡಾ 50 ಕ್ಕಿಂತ ಹೆಚ್ಚು ಜನರು ಯಾವುದೇ ಹಿಂಜರಿಕೆಯಿಲ್ಲದೆ ಸರ್ಕಾರಿ ಆಸ್ಪತ್ರೆಗಳನ್ನು ಆರಿಸಿಕೊಳ್ಳುತ್ತಾರೆ. ಈ ವ್ಯವಸ್ಥಿತ ಬದಲಾವಣೆಯು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಿತು. ಆರೋಗ್ಯ ಪಾಲನೆಯು ಕೈಗೆಟುಕುವ ದರದಲ್ಲಿ ಸ್ನೇಹಪರವಾಗಿರಬೇಕು ಎಂಬುದು ನಮ್ಮ ನೀತಿ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...