Homeಮುಖಪುಟನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಪ್ರಸ್ತುತ ಕೋವಿಡ್ ಬಿಕ್ಕಟ್ಟು ಉಂಟಾಗಿರುವ ಈ ದುರಂತದ ಸಂದರ್ಭದಲ್ಲಿ ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಹೇಳಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ಕೇರಳ ಎದುರಿಸುತ್ತಿರುವ ಬಗೆ ವಿಷಯದ ಕುರಿತು ಬ್ಯುಸಿನೆಸ್ ಲೈನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.

ಇಂದಿನ ಆರೋಗ್ಯ ಬಿಕ್ಕಟ್ಟನ್ನು ಪರಿಹರಿಸಲು ನೀವು ಏನು ಸಲಹೆ ನೀಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಎಡಪಂಥೀಯಳು. ಪ್ರಸ್ತುತ ಈ ದೇಶದ ಆರೋಗ್ಯ ನೀತಿಯ ಬಗ್ಗೆ ನನಗೆ ಹೇಳಲು ಏನು ಇಲ್ಲ. ಆದರೆ ಈ ಸಮಯದಲ್ಲಿ ಕೇಂದ್ರದಲ್ಲಿ ಎಡಪಂಥೀಯರು ಅಧಿಕಾರದಲ್ಲಿದ್ದರೆ, ನಾವು ಆರೋಗ್ಯ ಮತ್ತು ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು. ಆರೋಗ್ಯ ವ್ಯವಸ್ಥೆಯ ಮೇಲೆ ಸರ್ಕಾರವು ನಿಯಂತ್ರಣ ಹೊಂದಿದ್ದರೆ ಪ್ರತಿಯೊಬ್ಬರೂ ಬಡವರು ಅಥವಾ ಶ್ರೀಮಂತರು ಎಂಬ ಬೇಧವಿಲ್ಲದೆ ಸಮಾನ ಚಿಕಿತ್ಸೆ ಪಡೆಯುತ್ತಾರೆ” ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಸ್ತುತ ಸರ್ಕಾರವು ಬಂಡವಾಳಶಾಹಿ ಸಿದ್ಧಾಂತದ ಪರವಾಗಿದೆ. ಆದರೆ ಬಂಡವಾಳಶಾಹಿ ನೀತಿಯೊಳಗೂ ಸಹ ಅವರು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಪ್ರಯತ್ನಿಸಬೇಕು. ಅವರು ಬಡವರು ಮತ್ತು ದುರ್ಬಲ ಜನರನ್ನು ಶೋಷಿಸದಂತೆ ಖಾಸಗಿ ಆರೋಗ್ಯ ವ್ಯವಸ್ಥೆಯನ್ನು ನಿಯಂತ್ರಿಸಲು ಪ್ರಯತ್ನಿಸಬೇಕು ಎಂದು ಶೈಲಜಾರವರು ತಿಳಿಸಿದ್ದಾರೆ.

ಪ್ರಸ್ತುತ ಬಿಕ್ಕಟ್ಟಿನಿಂದ ನಾವು ಕಲಿಯಬೇಕಾದ ಪಾಠಗಳು ಯಾವುವು? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಸಾಂಕ್ರಾಮಿಕದಿಂದ ನಮಗೆ ಎರಡು ಪ್ರಮುಖ ಪಾಠಗಳಿವೆ ಎಂದು ನಾನು ಭಾವಿಸುತ್ತೇನೆ. ಒಂದು, ನಮ್ಮ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ದೇಶಕ್ಕೆ ಸರಿಯಾದ ಯೋಜನೆ ಮತ್ತು ವಿಕೇಂದ್ರೀಕೃತ ಅನುಷ್ಠಾನದ ಕಾರ್ಯವಿಧಾನಗಳು ಬೇಕಾಗುತ್ತವೆ. ಎರಡನೇದಾಗಿ ಆರೋಗ್ಯ ವ್ಯವಸ್ಥೆಯಲ್ಲಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಲು ಯಾವುದೇ ವಿಳಂಬ ಮಾಡಬಾರದು. ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು. ಕ್ಯೂಬಾದಂತಹ ದೇಶಗಳು ಆರೋಗ್ಯ ರಕ್ಷಣೆಯಲ್ಲಿ ಹೆಚ್ಚು ಹೂಡಿಕೆ ಮಾಡುತ್ತವೆ ಎಂದು ಅವರು ತಿಳಿಸಿದ್ದಾರೆ.

ಕೇರಳದಲ್ಲಿ ನಾವು ಉತ್ತಮ ಕಟ್ಟಡಗಳು, ಶೌಚಾಲಯಗಳು, ಪ್ರಯೋಗಾಲಯಗಳು ಮತ್ತು ಹೊರ ರೋಗಿಗಳ ಕೊಠಡಿಗಳೊಂದಿಗೆ ನಮ್ಮ ಪಿಎಚ್‌ಸಿ (ಪ್ರಾಥಮಿಕ ಆರೋಗ್ಯ ಕೇಂದ್ರ) ಗಳನ್ನು ಆಕರ್ಷಕಗೊಳಿಸಿದ್ದೇವೆ. ಸ್ಥಳೀಯ ಸ್ವ-ಸರ್ಕಾರಗಳು ಮತ್ತು ಕೆಐಐಎಫ್‌ಬಿ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಮೂಲಸೌಕರ್ಯವನ್ನು ನಿರ್ಮಿಸುವ ಕುರಿತು ನಾವು ಪಂಚಾಯತ್ ಅಧ್ಯಕ್ಷರು ಮತ್ತು ವೈದ್ಯಕೀಯ ಅಧಿಕಾರಿಗಳಿಗೆ ತರಬೇತಿ ನೀಡಿದ್ದೇವೆ. ಕೇಂದ್ರದ ಯೋಜನಾ ನಿಧಿಯ ಸೀಮಿತ ಲಭ್ಯತೆಯೊಳಗೆ ಅವರು ಈ ಕೆಲಸದಲ್ಲಿ ನಮಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಮೂಲಸೌಕರ್ಯವನ್ನು ನಿರ್ಮಿಸಲು ಬಹಳಷ್ಟು ಜನರು ಆರ್ಥಿಕವಾಗಿ ಸಹಕರಿಸಿದ್ದಾರೆ. ರಾಜ್ಯದ 946 ಪಿಎಚ್‌ಸಿಗಳಲ್ಲಿ 617 ಈಗ ಹೊಸ ಕಟ್ಟಡಗಳನ್ನು ಹೊಂದಿವೆ. ಅದು ಸಾರ್ವಜನಿಕ ಚಳುವಳಿ. ಈ 100 ಕ್ಕೂ ಹೆಚ್ಚು ಪಿಎಚ್‌ಸಿಗಳು ರಾಷ್ಟ್ರೀಯ ಗುಣಮಟ್ಟ ಖಾತರಿ ಮಾನದಂಡಗಳ (ಎನ್‌ಕ್ಯೂಎಎಸ್) ಪ್ರಮಾಣೀಕರಣವನ್ನು ಪಡೆದಿವೆ. ನಮ್ಮ ದ್ವಿತೀಯ ಹಂತದ ಆಸ್ಪತ್ರೆಗಳನ್ನು ತಾಲ್ಲೂಕು ಮಟ್ಟದಲ್ಲಿ ಸುಧಾರಿಸಿದ್ದೇವೆ. ಕೆಲವು ಆಸ್ಪತ್ರೆಗಳು ಕಾರ್ಪೊರೇಟ್ ಆಸ್ಪತ್ರೆಗಿಂತ ಹೆಚ್ಚಿನ ಸೌಲಭ್ಯಗಳನ್ನು ಹೊಂದಿವೆ. ತೃತೀಯ ಆರೋಗ್ಯ ರಕ್ಷಣೆಯೂ ಸುಧಾರಿಸಿದೆ. ವೈದ್ಯಕೀಯ ಕಾಲೇಜುಗಳನ್ನು ಆಧುನೀಕರಿಸಲಾಯಿತು. ಹೊಸ ವೈದ್ಯಕೀಯ ಕಾಲೇಜುಗಳು ಪ್ರಾರಂಭವಾದವು. ಈ ಆಸ್ಪತ್ರೆಗಳಲ್ಲಿ ಈಗ ಹೆಚ್ಚಿನ ಆಧುನಿಕ ಉಪಕರಣಗಳು ಲಭ್ಯವಿದೆ. ನಾವು ಔಷಧ ಸಂಶೋಧನೆಯನ್ನು ಉತ್ತೇಜಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

2016 ರವರೆಗೆ ರಾಜ್ಯದ ಶೇಕಡಾ 37 ರಷ್ಟು ಜನರು ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದರು. ಈಗ ರಾಜ್ಯದ ಜನಸಂಖ್ಯೆಯ ಶೇಕಡಾ 50 ಕ್ಕಿಂತ ಹೆಚ್ಚು ಜನರು ಯಾವುದೇ ಹಿಂಜರಿಕೆಯಿಲ್ಲದೆ ಸರ್ಕಾರಿ ಆಸ್ಪತ್ರೆಗಳನ್ನು ಆರಿಸಿಕೊಳ್ಳುತ್ತಾರೆ. ಈ ವ್ಯವಸ್ಥಿತ ಬದಲಾವಣೆಯು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಿತು. ಆರೋಗ್ಯ ಪಾಲನೆಯು ಕೈಗೆಟುಕುವ ದರದಲ್ಲಿ ಸ್ನೇಹಪರವಾಗಿರಬೇಕು ಎಂಬುದು ನಮ್ಮ ನೀತಿ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...