Homeಮುಖಪುಟನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಪ್ರಸ್ತುತ ಕೋವಿಡ್ ಬಿಕ್ಕಟ್ಟು ಉಂಟಾಗಿರುವ ಈ ದುರಂತದ ಸಂದರ್ಭದಲ್ಲಿ ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಹೇಳಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ಕೇರಳ ಎದುರಿಸುತ್ತಿರುವ ಬಗೆ ವಿಷಯದ ಕುರಿತು ಬ್ಯುಸಿನೆಸ್ ಲೈನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.

ಇಂದಿನ ಆರೋಗ್ಯ ಬಿಕ್ಕಟ್ಟನ್ನು ಪರಿಹರಿಸಲು ನೀವು ಏನು ಸಲಹೆ ನೀಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಎಡಪಂಥೀಯಳು. ಪ್ರಸ್ತುತ ಈ ದೇಶದ ಆರೋಗ್ಯ ನೀತಿಯ ಬಗ್ಗೆ ನನಗೆ ಹೇಳಲು ಏನು ಇಲ್ಲ. ಆದರೆ ಈ ಸಮಯದಲ್ಲಿ ಕೇಂದ್ರದಲ್ಲಿ ಎಡಪಂಥೀಯರು ಅಧಿಕಾರದಲ್ಲಿದ್ದರೆ, ನಾವು ಆರೋಗ್ಯ ಮತ್ತು ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು. ಆರೋಗ್ಯ ವ್ಯವಸ್ಥೆಯ ಮೇಲೆ ಸರ್ಕಾರವು ನಿಯಂತ್ರಣ ಹೊಂದಿದ್ದರೆ ಪ್ರತಿಯೊಬ್ಬರೂ ಬಡವರು ಅಥವಾ ಶ್ರೀಮಂತರು ಎಂಬ ಬೇಧವಿಲ್ಲದೆ ಸಮಾನ ಚಿಕಿತ್ಸೆ ಪಡೆಯುತ್ತಾರೆ” ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಸ್ತುತ ಸರ್ಕಾರವು ಬಂಡವಾಳಶಾಹಿ ಸಿದ್ಧಾಂತದ ಪರವಾಗಿದೆ. ಆದರೆ ಬಂಡವಾಳಶಾಹಿ ನೀತಿಯೊಳಗೂ ಸಹ ಅವರು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಪ್ರಯತ್ನಿಸಬೇಕು. ಅವರು ಬಡವರು ಮತ್ತು ದುರ್ಬಲ ಜನರನ್ನು ಶೋಷಿಸದಂತೆ ಖಾಸಗಿ ಆರೋಗ್ಯ ವ್ಯವಸ್ಥೆಯನ್ನು ನಿಯಂತ್ರಿಸಲು ಪ್ರಯತ್ನಿಸಬೇಕು ಎಂದು ಶೈಲಜಾರವರು ತಿಳಿಸಿದ್ದಾರೆ.

ಪ್ರಸ್ತುತ ಬಿಕ್ಕಟ್ಟಿನಿಂದ ನಾವು ಕಲಿಯಬೇಕಾದ ಪಾಠಗಳು ಯಾವುವು? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಸಾಂಕ್ರಾಮಿಕದಿಂದ ನಮಗೆ ಎರಡು ಪ್ರಮುಖ ಪಾಠಗಳಿವೆ ಎಂದು ನಾನು ಭಾವಿಸುತ್ತೇನೆ. ಒಂದು, ನಮ್ಮ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ದೇಶಕ್ಕೆ ಸರಿಯಾದ ಯೋಜನೆ ಮತ್ತು ವಿಕೇಂದ್ರೀಕೃತ ಅನುಷ್ಠಾನದ ಕಾರ್ಯವಿಧಾನಗಳು ಬೇಕಾಗುತ್ತವೆ. ಎರಡನೇದಾಗಿ ಆರೋಗ್ಯ ವ್ಯವಸ್ಥೆಯಲ್ಲಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಲು ಯಾವುದೇ ವಿಳಂಬ ಮಾಡಬಾರದು. ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು. ಕ್ಯೂಬಾದಂತಹ ದೇಶಗಳು ಆರೋಗ್ಯ ರಕ್ಷಣೆಯಲ್ಲಿ ಹೆಚ್ಚು ಹೂಡಿಕೆ ಮಾಡುತ್ತವೆ ಎಂದು ಅವರು ತಿಳಿಸಿದ್ದಾರೆ.

ಕೇರಳದಲ್ಲಿ ನಾವು ಉತ್ತಮ ಕಟ್ಟಡಗಳು, ಶೌಚಾಲಯಗಳು, ಪ್ರಯೋಗಾಲಯಗಳು ಮತ್ತು ಹೊರ ರೋಗಿಗಳ ಕೊಠಡಿಗಳೊಂದಿಗೆ ನಮ್ಮ ಪಿಎಚ್‌ಸಿ (ಪ್ರಾಥಮಿಕ ಆರೋಗ್ಯ ಕೇಂದ್ರ) ಗಳನ್ನು ಆಕರ್ಷಕಗೊಳಿಸಿದ್ದೇವೆ. ಸ್ಥಳೀಯ ಸ್ವ-ಸರ್ಕಾರಗಳು ಮತ್ತು ಕೆಐಐಎಫ್‌ಬಿ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಮೂಲಸೌಕರ್ಯವನ್ನು ನಿರ್ಮಿಸುವ ಕುರಿತು ನಾವು ಪಂಚಾಯತ್ ಅಧ್ಯಕ್ಷರು ಮತ್ತು ವೈದ್ಯಕೀಯ ಅಧಿಕಾರಿಗಳಿಗೆ ತರಬೇತಿ ನೀಡಿದ್ದೇವೆ. ಕೇಂದ್ರದ ಯೋಜನಾ ನಿಧಿಯ ಸೀಮಿತ ಲಭ್ಯತೆಯೊಳಗೆ ಅವರು ಈ ಕೆಲಸದಲ್ಲಿ ನಮಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಮೂಲಸೌಕರ್ಯವನ್ನು ನಿರ್ಮಿಸಲು ಬಹಳಷ್ಟು ಜನರು ಆರ್ಥಿಕವಾಗಿ ಸಹಕರಿಸಿದ್ದಾರೆ. ರಾಜ್ಯದ 946 ಪಿಎಚ್‌ಸಿಗಳಲ್ಲಿ 617 ಈಗ ಹೊಸ ಕಟ್ಟಡಗಳನ್ನು ಹೊಂದಿವೆ. ಅದು ಸಾರ್ವಜನಿಕ ಚಳುವಳಿ. ಈ 100 ಕ್ಕೂ ಹೆಚ್ಚು ಪಿಎಚ್‌ಸಿಗಳು ರಾಷ್ಟ್ರೀಯ ಗುಣಮಟ್ಟ ಖಾತರಿ ಮಾನದಂಡಗಳ (ಎನ್‌ಕ್ಯೂಎಎಸ್) ಪ್ರಮಾಣೀಕರಣವನ್ನು ಪಡೆದಿವೆ. ನಮ್ಮ ದ್ವಿತೀಯ ಹಂತದ ಆಸ್ಪತ್ರೆಗಳನ್ನು ತಾಲ್ಲೂಕು ಮಟ್ಟದಲ್ಲಿ ಸುಧಾರಿಸಿದ್ದೇವೆ. ಕೆಲವು ಆಸ್ಪತ್ರೆಗಳು ಕಾರ್ಪೊರೇಟ್ ಆಸ್ಪತ್ರೆಗಿಂತ ಹೆಚ್ಚಿನ ಸೌಲಭ್ಯಗಳನ್ನು ಹೊಂದಿವೆ. ತೃತೀಯ ಆರೋಗ್ಯ ರಕ್ಷಣೆಯೂ ಸುಧಾರಿಸಿದೆ. ವೈದ್ಯಕೀಯ ಕಾಲೇಜುಗಳನ್ನು ಆಧುನೀಕರಿಸಲಾಯಿತು. ಹೊಸ ವೈದ್ಯಕೀಯ ಕಾಲೇಜುಗಳು ಪ್ರಾರಂಭವಾದವು. ಈ ಆಸ್ಪತ್ರೆಗಳಲ್ಲಿ ಈಗ ಹೆಚ್ಚಿನ ಆಧುನಿಕ ಉಪಕರಣಗಳು ಲಭ್ಯವಿದೆ. ನಾವು ಔಷಧ ಸಂಶೋಧನೆಯನ್ನು ಉತ್ತೇಜಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

2016 ರವರೆಗೆ ರಾಜ್ಯದ ಶೇಕಡಾ 37 ರಷ್ಟು ಜನರು ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದರು. ಈಗ ರಾಜ್ಯದ ಜನಸಂಖ್ಯೆಯ ಶೇಕಡಾ 50 ಕ್ಕಿಂತ ಹೆಚ್ಚು ಜನರು ಯಾವುದೇ ಹಿಂಜರಿಕೆಯಿಲ್ಲದೆ ಸರ್ಕಾರಿ ಆಸ್ಪತ್ರೆಗಳನ್ನು ಆರಿಸಿಕೊಳ್ಳುತ್ತಾರೆ. ಈ ವ್ಯವಸ್ಥಿತ ಬದಲಾವಣೆಯು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಿತು. ಆರೋಗ್ಯ ಪಾಲನೆಯು ಕೈಗೆಟುಕುವ ದರದಲ್ಲಿ ಸ್ನೇಹಪರವಾಗಿರಬೇಕು ಎಂಬುದು ನಮ್ಮ ನೀತಿ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...