Homeಮುಖಪುಟನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು: ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ

ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಪ್ರಸ್ತುತ ಕೋವಿಡ್ ಬಿಕ್ಕಟ್ಟು ಉಂಟಾಗಿರುವ ಈ ದುರಂತದ ಸಂದರ್ಭದಲ್ಲಿ ನಾವು ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೆ ಆರೋಗ್ಯ ವ್ಯವಸ್ಥೆಯನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು ಎಂದು ಕೇರಳ ಆರೋಗ್ಯ ಸಚಿವೆ ಕೆ.ಕೆ ಶೈಲಜಾ ಹೇಳಿದ್ದಾರೆ.

ಕೋವಿಡ್ ಎರಡನೇ ಅಲೆಯನ್ನು ಕೇರಳ ಎದುರಿಸುತ್ತಿರುವ ಬಗೆ ವಿಷಯದ ಕುರಿತು ಬ್ಯುಸಿನೆಸ್ ಲೈನ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.

ಇಂದಿನ ಆರೋಗ್ಯ ಬಿಕ್ಕಟ್ಟನ್ನು ಪರಿಹರಿಸಲು ನೀವು ಏನು ಸಲಹೆ ನೀಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಎಡಪಂಥೀಯಳು. ಪ್ರಸ್ತುತ ಈ ದೇಶದ ಆರೋಗ್ಯ ನೀತಿಯ ಬಗ್ಗೆ ನನಗೆ ಹೇಳಲು ಏನು ಇಲ್ಲ. ಆದರೆ ಈ ಸಮಯದಲ್ಲಿ ಕೇಂದ್ರದಲ್ಲಿ ಎಡಪಂಥೀಯರು ಅಧಿಕಾರದಲ್ಲಿದ್ದರೆ, ನಾವು ಆರೋಗ್ಯ ಮತ್ತು ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುತ್ತಿದ್ದೆವು. ಆರೋಗ್ಯ ವ್ಯವಸ್ಥೆಯ ಮೇಲೆ ಸರ್ಕಾರವು ನಿಯಂತ್ರಣ ಹೊಂದಿದ್ದರೆ ಪ್ರತಿಯೊಬ್ಬರೂ ಬಡವರು ಅಥವಾ ಶ್ರೀಮಂತರು ಎಂಬ ಬೇಧವಿಲ್ಲದೆ ಸಮಾನ ಚಿಕಿತ್ಸೆ ಪಡೆಯುತ್ತಾರೆ” ಎಂದು ಅವರು ಹೇಳಿದ್ದಾರೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪ್ರಸ್ತುತ ಸರ್ಕಾರವು ಬಂಡವಾಳಶಾಹಿ ಸಿದ್ಧಾಂತದ ಪರವಾಗಿದೆ. ಆದರೆ ಬಂಡವಾಳಶಾಹಿ ನೀತಿಯೊಳಗೂ ಸಹ ಅವರು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ಪ್ರಯತ್ನಿಸಬೇಕು. ಅವರು ಬಡವರು ಮತ್ತು ದುರ್ಬಲ ಜನರನ್ನು ಶೋಷಿಸದಂತೆ ಖಾಸಗಿ ಆರೋಗ್ಯ ವ್ಯವಸ್ಥೆಯನ್ನು ನಿಯಂತ್ರಿಸಲು ಪ್ರಯತ್ನಿಸಬೇಕು ಎಂದು ಶೈಲಜಾರವರು ತಿಳಿಸಿದ್ದಾರೆ.

ಪ್ರಸ್ತುತ ಬಿಕ್ಕಟ್ಟಿನಿಂದ ನಾವು ಕಲಿಯಬೇಕಾದ ಪಾಠಗಳು ಯಾವುವು? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಸಾಂಕ್ರಾಮಿಕದಿಂದ ನಮಗೆ ಎರಡು ಪ್ರಮುಖ ಪಾಠಗಳಿವೆ ಎಂದು ನಾನು ಭಾವಿಸುತ್ತೇನೆ. ಒಂದು, ನಮ್ಮ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು ದೇಶಕ್ಕೆ ಸರಿಯಾದ ಯೋಜನೆ ಮತ್ತು ವಿಕೇಂದ್ರೀಕೃತ ಅನುಷ್ಠಾನದ ಕಾರ್ಯವಿಧಾನಗಳು ಬೇಕಾಗುತ್ತವೆ. ಎರಡನೇದಾಗಿ ಆರೋಗ್ಯ ವ್ಯವಸ್ಥೆಯಲ್ಲಿ ಸಾರ್ವಜನಿಕ ಹೂಡಿಕೆಯನ್ನು ಹೆಚ್ಚಿಸಲು ಯಾವುದೇ ವಿಳಂಬ ಮಾಡಬಾರದು. ನಾವು ನಮ್ಮ ಜಿಡಿಪಿಯ ಕೇವಲ ಒಂದು ಶೇಕಡಾವನ್ನು ಆರೋಗ್ಯ ಕ್ಷೇತ್ರಕ್ಕೆ ಖರ್ಚು ಮಾಡುತ್ತೇವೆ, ಅದನ್ನು ಕನಿಷ್ಠ ಹತ್ತು ಶೇಕಡಾಕ್ಕೆ ಹೆಚ್ಚಿಸಬೇಕು. ಕ್ಯೂಬಾದಂತಹ ದೇಶಗಳು ಆರೋಗ್ಯ ರಕ್ಷಣೆಯಲ್ಲಿ ಹೆಚ್ಚು ಹೂಡಿಕೆ ಮಾಡುತ್ತವೆ ಎಂದು ಅವರು ತಿಳಿಸಿದ್ದಾರೆ.

ಕೇರಳದಲ್ಲಿ ನಾವು ಉತ್ತಮ ಕಟ್ಟಡಗಳು, ಶೌಚಾಲಯಗಳು, ಪ್ರಯೋಗಾಲಯಗಳು ಮತ್ತು ಹೊರ ರೋಗಿಗಳ ಕೊಠಡಿಗಳೊಂದಿಗೆ ನಮ್ಮ ಪಿಎಚ್‌ಸಿ (ಪ್ರಾಥಮಿಕ ಆರೋಗ್ಯ ಕೇಂದ್ರ) ಗಳನ್ನು ಆಕರ್ಷಕಗೊಳಿಸಿದ್ದೇವೆ. ಸ್ಥಳೀಯ ಸ್ವ-ಸರ್ಕಾರಗಳು ಮತ್ತು ಕೆಐಐಎಫ್‌ಬಿ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಮೂಲಸೌಕರ್ಯವನ್ನು ನಿರ್ಮಿಸುವ ಕುರಿತು ನಾವು ಪಂಚಾಯತ್ ಅಧ್ಯಕ್ಷರು ಮತ್ತು ವೈದ್ಯಕೀಯ ಅಧಿಕಾರಿಗಳಿಗೆ ತರಬೇತಿ ನೀಡಿದ್ದೇವೆ. ಕೇಂದ್ರದ ಯೋಜನಾ ನಿಧಿಯ ಸೀಮಿತ ಲಭ್ಯತೆಯೊಳಗೆ ಅವರು ಈ ಕೆಲಸದಲ್ಲಿ ನಮಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ಈ ಮೂಲಸೌಕರ್ಯವನ್ನು ನಿರ್ಮಿಸಲು ಬಹಳಷ್ಟು ಜನರು ಆರ್ಥಿಕವಾಗಿ ಸಹಕರಿಸಿದ್ದಾರೆ. ರಾಜ್ಯದ 946 ಪಿಎಚ್‌ಸಿಗಳಲ್ಲಿ 617 ಈಗ ಹೊಸ ಕಟ್ಟಡಗಳನ್ನು ಹೊಂದಿವೆ. ಅದು ಸಾರ್ವಜನಿಕ ಚಳುವಳಿ. ಈ 100 ಕ್ಕೂ ಹೆಚ್ಚು ಪಿಎಚ್‌ಸಿಗಳು ರಾಷ್ಟ್ರೀಯ ಗುಣಮಟ್ಟ ಖಾತರಿ ಮಾನದಂಡಗಳ (ಎನ್‌ಕ್ಯೂಎಎಸ್) ಪ್ರಮಾಣೀಕರಣವನ್ನು ಪಡೆದಿವೆ. ನಮ್ಮ ದ್ವಿತೀಯ ಹಂತದ ಆಸ್ಪತ್ರೆಗಳನ್ನು ತಾಲ್ಲೂಕು ಮಟ್ಟದಲ್ಲಿ ಸುಧಾರಿಸಿದ್ದೇವೆ. ಕೆಲವು ಆಸ್ಪತ್ರೆಗಳು ಕಾರ್ಪೊರೇಟ್ ಆಸ್ಪತ್ರೆಗಿಂತ ಹೆಚ್ಚಿನ ಸೌಲಭ್ಯಗಳನ್ನು ಹೊಂದಿವೆ. ತೃತೀಯ ಆರೋಗ್ಯ ರಕ್ಷಣೆಯೂ ಸುಧಾರಿಸಿದೆ. ವೈದ್ಯಕೀಯ ಕಾಲೇಜುಗಳನ್ನು ಆಧುನೀಕರಿಸಲಾಯಿತು. ಹೊಸ ವೈದ್ಯಕೀಯ ಕಾಲೇಜುಗಳು ಪ್ರಾರಂಭವಾದವು. ಈ ಆಸ್ಪತ್ರೆಗಳಲ್ಲಿ ಈಗ ಹೆಚ್ಚಿನ ಆಧುನಿಕ ಉಪಕರಣಗಳು ಲಭ್ಯವಿದೆ. ನಾವು ಔಷಧ ಸಂಶೋಧನೆಯನ್ನು ಉತ್ತೇಜಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

2016 ರವರೆಗೆ ರಾಜ್ಯದ ಶೇಕಡಾ 37 ರಷ್ಟು ಜನರು ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದ್ದರು. ಈಗ ರಾಜ್ಯದ ಜನಸಂಖ್ಯೆಯ ಶೇಕಡಾ 50 ಕ್ಕಿಂತ ಹೆಚ್ಚು ಜನರು ಯಾವುದೇ ಹಿಂಜರಿಕೆಯಿಲ್ಲದೆ ಸರ್ಕಾರಿ ಆಸ್ಪತ್ರೆಗಳನ್ನು ಆರಿಸಿಕೊಳ್ಳುತ್ತಾರೆ. ಈ ವ್ಯವಸ್ಥಿತ ಬದಲಾವಣೆಯು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡಿತು. ಆರೋಗ್ಯ ಪಾಲನೆಯು ಕೈಗೆಟುಕುವ ದರದಲ್ಲಿ ಸ್ನೇಹಪರವಾಗಿರಬೇಕು ಎಂಬುದು ನಮ್ಮ ನೀತಿ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ’ಭಾರತದ ಕೋವಿಡ್ ಟೀಚರ್‌’ – ಕೆ.ಕೆ. ಶೈಲಜಾರನ್ನು ಬಣ್ಣಿಸಿದ ಅಂತರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...