Homeಕರ್ನಾಟಕ‘ನನ್ನ ಮಾತು ಕೇಳಿದ್ದರೆ ಯಡಿಯೂರಪ್ಪ ಜೈಲಿಗೆ ಹೋಗುತ್ತಿರಲಿಲ್ಲ’: ಜಮೀರ್ ಅಹಮದ್ ಖಾನ್

‘ನನ್ನ ಮಾತು ಕೇಳಿದ್ದರೆ ಯಡಿಯೂರಪ್ಪ ಜೈಲಿಗೆ ಹೋಗುತ್ತಿರಲಿಲ್ಲ’: ಜಮೀರ್ ಅಹಮದ್ ಖಾನ್

- Advertisement -
- Advertisement -

ಹೊಸಪೇಟೆ: ಬಿ.ಎಸ್. ಯಡಿಯೂರಪ್ಪ ಅವರು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದಾಗ, ಹಣಕಾಸು ನಿರ್ವಹಣೆ ವಿಚಾರಣೆಯಲ್ಲಿ ಸಿದ್ದರಾಮಯ್ಯ ಅವರ ಸಲಹೆ ಪಡೆಯುವಂತೆ ಸೂಚಿಸಿದ್ದೆ, ನನ್ನ ಮಾತನ್ನು ತಿರಸ್ಕರಿಸಿ, ಯಡಿಯೂರಪ್ಪನವರು ಜೈಲಿಗೆ ಹೋಗುವಂತಾಯಿತು. ನನ್ನ ಮಾತು ಕೇಳಿದ್ದರೆ ನನ್ನ ತಾಯಾಣೆಗೂ ಯಡಿಯೂರಪ್ಪನವರು ಜೈಲಿಗೆ ಹೋಗುತ್ತಿರಲಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.  

ನವೆಂಬರ್ 1ರಂದು ಹೊಸಪೇಟೆಯಲ್ಲಿ ನಡೆದ ಗ್ಯಾರಂಟಿ ಉತ್ಸವದಲ್ಲಿ ಮಾತನಾಡಿದ ಅವರು, ಹಣಕಾಸು ನಿರ್ವಹಣೆ ಸುಲಭದ ಮಾತಲ್ಲ. ಜೊತೆಗೆ ಯಡಿಯೂರಪ್ಪನವರು ಮೊದಲ ಬಾರಿಗೆ ಮುಖ್ಯಮಂತ್ರಿಗಳಾಗಿದ್ದವರು. ಅವರಿಗೆ ಹಣಕಾಸಿನ ನಿರ್ವಹಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಸಲಹೆ ಪಡೆಯುವಂತೆ ಸೂಚಿಸಿದ್ದೆ. ನಾನು ಆಗ ಜನತಾಪಕ್ಷದಲ್ಲಿದ್ದೆ, ಸಿದ್ದರಾಮಯ್ಯ ಅದಾಗಲೇ 10 ಬಾರಿ ಬಜೆಟ್ ಮಂಡಿಸಿದ್ದರು. ಅವರ ಹಣಕಾಸು ನಿರ್ವಹಣೆಯ ಅನುಭವ ದೊಡ್ಡದು. ರಾಜ್ಯದ ಹಿತ ದೃಷ್ಠಿಯಿಂದ ಹಣಕಾಸು ನಿರ್ವಹಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಸಲಹೆ ಪಡೆಯಬಹುದಿತ್ತು, ಆದರೆ ಯಡಿಯೂರಪ್ಪ ಅವರು ನನ್ನ ಮಾತನ್ನು ತಿರಸ್ಕರಿಸಿದರು. ಅದರಿಂದಲೇ ಅವರಿಗೆ ಹಣಕಾಸು ನಿರ್ವಹಣೆ ಸಾಧ್ಯವಾಗಲಿಲ್ಲ. ಕೊನೆಗೆ ಜೈಲಿಗೆ ಹೋಗುವ ಸ್ಥಿತಿಯೂ ಬಂತು ಎಂದು ಜಮೀರ್ ಅಹಮದ್ ಖಾನ್ ಹೇಳಿದರು. 

ಇದೇ ವೇಳೆ ‘ಈಗಿನ ಸರ್ಕಾರ ಐದು ಗ್ಯಾರಂಟಿಗಳನ್ನು ಕೊಟ್ಟ ಬಳಿಕ ಯಶಸ್ವಿಯಾಗಿ ಅಭಿವೃದ್ಧಿ ಕೆಲಸಗಳನ್ನೂ ನಡೆಸುತ್ತಾ ಬಂದಿದೆ. ಪ್ರತಿ ತಿಂಗಳು ಗ್ಯಾರಂಟಿ ರೂಪದಲ್ಲಿ ಒಂದು ಕುಟುಂಬಕ್ಕೆ ₹6,500 ದುಡ್ಡಿನ ಉಳಿತಾಯವಾಗುತ್ತಿದೆ. ಹಣಕಾಸು ನಿರ್ವಹಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಇರುವ ಅನುಭವದಿಂದಾಗಿಯೇ ಇದೆಲ್ಲವೂ ಸಾಧ್ಯವಾಗಿದೆ’ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ಅಂತರ್ಜಾತಿ ವಿವಾಹ, ಸೊಸೆಯ ಕುಟುಂಬದವರಿಂದ ದಲಿತ ವ್ಯಕ್ತಿ ಕೊಲೆ.

ವಧುವಿನ ಕುಟುಂಬವು ಈ ಹಿಂದೆ ವರನ ತಂದೆಯನ್ನು ಬೆದರಿಸಿ ಸೊಸೆಯನ್ನು ತಮ್ಮ ಮನೆಗೆ ವಾಪಸ್‌ ಕಳುಹಿಸಲು ಒತ್ತಾಯಿಸಿತ್ತು ಎಂದು ವರನ ಕುಟುಂಬದವರು ಆರೋಪಿಸಿದ್ದಾರೆ. ಗುಜರಾತ್‌ ನ ನರೋಲ್‌ ಬಳಿ ಅಂತರ್ಜಾತಿ ವಿವಾಹವಾದ ನಂತರ ಮೇಲ್ಜಾತಿಗೆ...

ಕನ್ನಡ ವಿರೋಧಿ ಚಟುವಟಿಕೆ: ಎಂಇಎಸ್ ನಿಷೇಧಕ್ಕೆ ಗಂಭೀರ ಚರ್ಚೆ-ಸತೀಶ ಜಾರಕಿಹೊಳಿ

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸ ದಿನದಂದೆ ನಾಡ ವಿರೋಧಿ ಘೋಷಣೆ ಹಾಕಿದ ಎಂ.ಇ.ಎಸ್ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.  ನಗರದಲ್ಲಿ ಶನಿವಾರ ರಾಜ್ಯೋತ್ಸವ...

ಬಿಹಾರದ ಒಂದೇ ಎಂಜಿನ್ ಸರ್ಕಾರ ಕೇಂದ್ರದಿಂದ ನಡೆಸಲ್ಪಡುತ್ತಿದೆ: ಪ್ರಿಯಾಂಕಾ ಗಾಂಧಿ

ಮುಂಬರುವ ರಾಜ್ಯ ಚುನಾವಣೆಯಲ್ಲಿ ಬುದ್ಧಿವಂತಿಕೆಯಿಂದ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಶನಿವಾರ ಬಿಹಾರದ ಜನರಲ್ಲಿ ಮನವಿ ಮಾಡಿದರು. ಬೇಗುಸರಾಯ್‌ನಲ್ಲಿ ನಡೆದ ರಾಜಕೀಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, "ಬಿಹಾರದ ಎನ್‌ಡಿಎ ಸರ್ಕಾರದ ಉದ್ದೇಶಗಳು...

ಮಸೀದಿ ಧ್ವಂಸಕ್ಕೆ ‘ಜೈಶ್ರೀರಾಮ್-ಜೈ ಬಜರಂಗಬಲಿ’ ಘೋಷಣೆ ಸಾಧನವಾಗಿ ಬಳಸಲಾಗುತ್ತಿದೆ: ಸ್ವಾಮಿ ಪ್ರಸಾದ್ ಮೌರ್ಯ

ಬಿಜೆಪಿ ಆಡಳಿತದಲ್ಲಿ ದಲಿತ ಮತ್ತು ಮುಸ್ಲಿಂ ಸಮುದಾಯಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. "ಈಗ ಜೈ ಶ್ರೀ...

ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಕಾಲ್ತುಳಿತ: ಆಯೋಜಕರ ಮೇಲೆ ಆರೋಪ ಹೊರಿಸಿದ ಆಂಧ್ರ ಮುಖ್ಯಮಂತ್ರಿ

ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗಾ ಪ್ರದೇಶದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಹತ್ತು ಮಂದಿ ಸಾವನ್ನಪ್ಪಿ, ಹಲವಾರು ಮಂದಿ ಗಾಯಗೊಂಡ ಘಟನೆಯ ಬಗ್ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ದೇವಸ್ಥಾನವು ಖಾಸಗಿ ವ್ಯಕ್ತಿಗೆ ಸೇರಿದ್ದು,...

ದೆಹಲಿ ವಿಷಕಾರಿ ಗಾಳಿ: ಪ್ರತಿ ಏಳು ಸಾವುಗಳಲ್ಲಿ ಒಂದು ಮಾಲಿನ್ಯಕ್ಕೆ ಸಂಬಂಧಿಸಿದ್ದು

ಆರೋಗ್ಯ ಮಾಪನ ಮತ್ತು ಮೌಲ್ಯಮಾಪನ ಸಂಸ್ಥೆ (ಐಎಚ್‌ಎಂಇ) ನಡೆಸಿದ ವಿಶ್ಲೇಷಣೆಯ ಪ್ರಕಾರ, ವಾಯು ಮಾಲಿನ್ಯವು ದೆಹಲಿಗೆ ಅತ್ಯಂತ ಮಾರಕ ಆರೋಗ್ಯ ಸಮಸ್ಯೆಯಾಗಿ ಮುಂದುವರೆದಿದೆ. ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಬೊಜ್ಜುಗಿಂತ ಹೆಚ್ಚಿನ ಜೀವಗಳನ್ನು...

ಫ್ಯಾಕ್ಟ್‌ಚೆಕ್ : ಮದ್ಯದ ನಶೆಯಲ್ಲಿ ಹುಲಿಯ ತಲೆ ಸವರಿಸಿದ ವ್ಯಕ್ತಿ…ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ರಾತ್ರಿ ಹೊತ್ತು ರಸ್ತೆಯಲ್ಲಿ ಕುಳಿತಿರುವ ಹುಲಿಯೊಂದರ ತಲೆ ಸವರುವ ವ್ಯಕ್ತಿ, ತನ್ನ ಕೈಯ್ಯಲ್ಲಿದ್ದ ಮದ್ಯದ ಬಾಟಲಿಯಿಂದ ಹುಲಿಗೆ ಮದ್ಯ ಕುಡಿಸಲು ಯತ್ನಿಸಿದ 6 ಸೆಕೆಂಡುಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದು...

ಕನ್ನಡ ವಿರೋಧಿ ಚಟುವಟಿಕೆ: ಎಂಇಎಸ್ ನಿಷೇಧಕ್ಕೆ ಗಂಭೀರ ಚರ್ಚೆ: ಸತೀಶ ಜಾರಕಿಹೊಳಿ

ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸ ದಿನದಂದೆ ನಾಡ ವಿರೋಧಿ ಘೋಷಣೆ ಹಾಕಿದ ಎಂ.ಇ.ಎಸ್ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಗಂಭೀರವಾಗಿ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.  ನಗರದಲ್ಲಿ ಶನಿವಾರ ರಾಜ್ಯೋತ್ಸವ...

ದೆಹಲಿಯನ್ನು ‘ಇಂದ್ರಪ್ರಸ್ಥ’ ಎಂದು ಮರುನಾಮಕರಣ ಮಾಡಿ: ಕೇಂದ್ರಕ್ಕೆ ಬಿಜೆಪಿ ಸಂಸದನ ಒತ್ತಾಯ

ರಾಷ್ಟ್ರ ರಾಜಧಾನಿ ದೆಹಲಿಯನ್ನು ಮಹಾಭಾರತ ಯುಗದಲ್ಲಿ ಪಾಂಡವರು ಸ್ಥಾಪಿಸಿದರು ಎಂದು ನಂಬಲಾದ ಪ್ರಾಚೀನ ನಗರದ ಹೆಸರಾದ 'ಇಂದ್ರಪ್ರಸ್ಥ' ಎಂದು ಮರುನಾಮಕರಣ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಸಂಸದ ಪ್ರವೀಣ್ ಖಂಡೇಲ್ವಾಲ್ ಕೇಂದ್ರ ಗೃಹ ಸಚಿವ...

ಗುಜರಾತ್ ಮರ್ಯಾದೆಗೇಡು ಹತ್ಯೆ: ಅಂತರ್ಜಾತಿ ವಿವಾಹವಾಗಿದ್ದ ದಲಿತ ಯುವಕನ ತಂದೆ ಕೊಲೆ

ಗುಜರಾತ್‌ನ ನರೋಲ್‌ನಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿದೆ. ಅಂತರ್ಜಾತಿ ವಿವಾಹದಿಂದ ಕೋಪಗೊಂಡ ವಧುವಿನ ಕುಟುಂಬವು ಆಕೆಯ 60 ವರ್ಷದ ದಲಿತ ಮಾವನನ್ನು ಕೊಂದ ಆರೋಪವಿದೆ. ಪೊಲೀಸರು ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ)...