Homeಮುಖಪುಟಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ/ ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

- Advertisement -
- Advertisement -

ಹತ್ರಾಸ್ ದುರ್ಘಟನೆ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು ಪ್ರತಿಭಟನೆಗಳು ಜರುಗುತ್ತಿವೆ. ಈ ನಡುವೆ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನರವರು ಸಹ ದನಿಯೆತ್ತಿದ್ದು ವಿಶೇಷ ಮನವಿ ಮಾಡಿದ್ದಾರೆ. ಅದರ ಪೂರ್ಣಪಾಠ ಈ ಕೆಳಗಿನಂತಿದೆ.

ನಾನು ಹತ್ರಾಸ್ ಅತ್ಯಾಚಾರ ಪ್ರಕರಣದತ್ತ ತಮ್ಮ ಗಮನವನ್ನು ಸೆಳೆಯಲು ಇಚ್ಛಿಸುತ್ತೇನೆ- ನನ್ನಂತೆಯೇ ನೀವೂ ನಿಮ್ಮ ಮನೆಗಳ ಆರಾಮದಲ್ಲಿ ಇಂಟರ್ನೆಟ್ ಸಂದೇಶಗಳನ್ನು ನೋಡುತ್ತಿರುವಾಗ, ಒಂದು ಕುಟುಂಬವನ್ನು ಅವರ ಮನೆಯಲ್ಲೇ ಕೂಡಿಹಾಕಲಾಗಿದೆ ಮತ್ತು ಉತ್ತರ ಪ್ರದೇಶ ಸರಕಾರವು ಅವರನ್ನು ತೀವ್ರವಾದ ನೋವಿಗೆ ಒಳಪಡಿಸುತ್ತಿದೆ.

ಅವರು ಮಾಡಿರುವ ಅಪರಾಧ? ಅವರ ಮನೆಮಗಳನ್ನು ಅತ್ಯಾಚಾರ ಮಾಡಲಾಗಿದೆ. ಆ ದಲಿತ ಬಾಲಕಿಯನ್ನು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮೇಲ್ಜಾತಿಯ ನಾಲ್ವರು ಪುರುಷರು ಬರ್ಬರವಾಗಿ ಅತ್ಯಾಚಾರ ಮಾಡಿದ್ದಾರೆ. ಆ ಮಹಿಳೆ ಕೆಲವು ದಿನಗಳ ಬಳಿಕ ಮೃತಪಟ್ಟಿದ್ದಾರೆ. ಆಕೆಯ ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆ ಕುಟುಂಬಕ್ಕೆ ಅನುಮತಿ ನಿರಾಕರಿಸಲಾಗಿದೆ. ಪೊಲೀಸರು ಕುಟುಂಬದ ಅನುಮತಿ ಪಡೆಯದೆಯೇ, ಅಥವಾ ಅವರಿಗೆ ಗೊತ್ತಿಲ್ಲದೇ ರಾತ್ರಿ 2.30ರ ಹೊತ್ತಿಗೆ ಶವವನ್ನು ಸುಟ್ಟುಹಾಕಿದ್ದಾರೆ.

ಇಷ್ಟು ಕ್ರೌರ್ಯ ಸಾಕಾಗಲಿಲ್ಲವೋ ಎಂಬಂತೆ ಆಕೆಯ ಕುಟುಂಬವನ್ನು ಮನೆಯೊಳಗೆ ಕೂಡಿಹಾಕಿ, ಅವರ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಳ್ಳಲಾಗಿದೆ. ಮಾಧ್ಯಮದವರಿಗಾಗಲೀ, ಪ್ರತಿಪಕ್ಷ ನಾಯಕರಿಗಾಗಲೀ ಅವರನ್ನು ಭೇಟಿಮಾಡಲು ಬಿಡಲಾಗುತ್ತಿಲ್ಲ. ಪೊಲೀಸರು ಅವರ ಮನೆಯ ಪ್ರವೇಶ, ಊರಿನ ಪ್ರವೇಶ ಮತ್ತು ಹೆದ್ದಾರಿಯಲ್ಲಿ ತಡೆಬೇಲಿ ಹಾಕಿದ್ದಾರೆ.

I want to draw your attention to the #HathrasRape incident- While you are scrolling your feed in the comfort of your…

Posted by Divya Spandana/Ramya on Saturday, October 3, 2020

ಈ ಕುಟುಂಬವನ್ನು ಭೇಟಿ ಮಾಡಲು ಯತ್ನಿಸಿದ ನಾಯಕರನ್ನು ಬಂಧಿಸಲಾಗಿದೆ, ಥಳಿಸಲಾಗಿದೆ ಮತ್ತು ಅವರ ವಿರುದ್ಧ ಕೇಸು ಜಡಿಯಲಾಗಿದೆ. ಆ ಕುಟುಂಬ ಮಾಡಿರುವ ತಪ್ಪಾದರೂ ಏನು? ತಮ್ಮ ಮನೆಮಗಳನ್ನು ಕಳೆದುಕೊಂಡಿರುವುದೇ ಸಾಕಷ್ಟು ನೋವಿನ ಸಂಗತಿ ಅಲ್ಲವೋ ಎಂಬಂತೆ ಏಕೆ ಅವರಿಗೆ ಕಿರುಕುಳ ನೀಡಿ ಇನ್ನಷ್ಟು ಪೀಡಿಸಲಾಗುತ್ತಿದೆ? ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ.

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ / ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

ಇದೆಲ್ಲಕ್ಕಿಂತ ಮೇಲಾಗಿ, ಪೊಲೀಸರು ಇವೆಲ್ಲವನ್ನೂ ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ; ಅತ್ಯಾಚಾರವನ್ನೇ ನಿರಾಕರಿಸುತ್ತಿದ್ದಾರೆ. ಸಂತ್ರಸ್ತ ಮಹಿಳೆ ಸ್ವತಃ ತನ್ನನ್ನು ಅತ್ಯಾಚಾರ ಮಾಡಿರುವುದಾಗಿ ಪೊಲೀಸರಿಗೆ ಹೇಳಿದ್ದಾರೆ. ಪೊಲೀಸರೇ ಶವವನ್ನು ಸುಟ್ಟುಹಾಕುತ್ತಿರುವ ವಿಡಿಯೋಗಳಿವೆ. ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆಕೆಯ ಕುಟುಂಬದವರು ಅಂಗಲಾಚುತ್ತಿರುವ ವಿಡಿಯೋಗಳಿವೆ. ಈ ಕುಟುಂಬದವರನ್ನು ಅವರ ಮನೆಯಲ್ಲಿಯೇ ಕೂಡಿಹಾಕಿರುವ ವಿಡಿಯೋಗಳಿವೆ.

ಅವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಇದೊಂದು ಪ್ರಜಾಪ್ರಭುತ್ವ ಎಂಬಂತೆ ನಿಮಗೆ ಅನಿಸುತ್ತಿದೆಯೆ? ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ನಮ್ಮ ಪೂರ್ವಿಕ ತಂದೆ ತಾಯಿಯರು ಕಲ್ಪಿಸಿಕೊಂಡ ದೇಶ ಇದು ಅಲ್ಲವೇ ಅಲ್ಲ. ನಮ್ಮ ದೇಶದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಯನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ.

ಆ ಕುಟುಂಬಕ್ಕೆ ನಿಮ್ಮ ಅಗತ್ಯವಿದೆ; ನೀವು ಧ್ವನಿಯೆತ್ತಿ ಮಾತನಾಡಬೇಕಾದ ಅಗತ್ಯವಿದೆ. ಈ ಕುರಿತು ಧ್ವನಿಯೆತ್ತದಿರುವುದರ ಮೂಲಕ ನೀವು ದೇಶಕ್ಕೆ ಬಹುದೊಡ್ಡ ಅಪಕಾರ ಮಾಡಿದಂತಾದೀತು.


ಇದನ್ನೂ ಓದಿ: ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...