Homeಮುಖಪುಟಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ/ ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

- Advertisement -
- Advertisement -

ಹತ್ರಾಸ್ ದುರ್ಘಟನೆ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು ಪ್ರತಿಭಟನೆಗಳು ಜರುಗುತ್ತಿವೆ. ಈ ನಡುವೆ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನರವರು ಸಹ ದನಿಯೆತ್ತಿದ್ದು ವಿಶೇಷ ಮನವಿ ಮಾಡಿದ್ದಾರೆ. ಅದರ ಪೂರ್ಣಪಾಠ ಈ ಕೆಳಗಿನಂತಿದೆ.

ನಾನು ಹತ್ರಾಸ್ ಅತ್ಯಾಚಾರ ಪ್ರಕರಣದತ್ತ ತಮ್ಮ ಗಮನವನ್ನು ಸೆಳೆಯಲು ಇಚ್ಛಿಸುತ್ತೇನೆ- ನನ್ನಂತೆಯೇ ನೀವೂ ನಿಮ್ಮ ಮನೆಗಳ ಆರಾಮದಲ್ಲಿ ಇಂಟರ್ನೆಟ್ ಸಂದೇಶಗಳನ್ನು ನೋಡುತ್ತಿರುವಾಗ, ಒಂದು ಕುಟುಂಬವನ್ನು ಅವರ ಮನೆಯಲ್ಲೇ ಕೂಡಿಹಾಕಲಾಗಿದೆ ಮತ್ತು ಉತ್ತರ ಪ್ರದೇಶ ಸರಕಾರವು ಅವರನ್ನು ತೀವ್ರವಾದ ನೋವಿಗೆ ಒಳಪಡಿಸುತ್ತಿದೆ.

ಅವರು ಮಾಡಿರುವ ಅಪರಾಧ? ಅವರ ಮನೆಮಗಳನ್ನು ಅತ್ಯಾಚಾರ ಮಾಡಲಾಗಿದೆ. ಆ ದಲಿತ ಬಾಲಕಿಯನ್ನು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮೇಲ್ಜಾತಿಯ ನಾಲ್ವರು ಪುರುಷರು ಬರ್ಬರವಾಗಿ ಅತ್ಯಾಚಾರ ಮಾಡಿದ್ದಾರೆ. ಆ ಮಹಿಳೆ ಕೆಲವು ದಿನಗಳ ಬಳಿಕ ಮೃತಪಟ್ಟಿದ್ದಾರೆ. ಆಕೆಯ ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆ ಕುಟುಂಬಕ್ಕೆ ಅನುಮತಿ ನಿರಾಕರಿಸಲಾಗಿದೆ. ಪೊಲೀಸರು ಕುಟುಂಬದ ಅನುಮತಿ ಪಡೆಯದೆಯೇ, ಅಥವಾ ಅವರಿಗೆ ಗೊತ್ತಿಲ್ಲದೇ ರಾತ್ರಿ 2.30ರ ಹೊತ್ತಿಗೆ ಶವವನ್ನು ಸುಟ್ಟುಹಾಕಿದ್ದಾರೆ.

ಇಷ್ಟು ಕ್ರೌರ್ಯ ಸಾಕಾಗಲಿಲ್ಲವೋ ಎಂಬಂತೆ ಆಕೆಯ ಕುಟುಂಬವನ್ನು ಮನೆಯೊಳಗೆ ಕೂಡಿಹಾಕಿ, ಅವರ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಳ್ಳಲಾಗಿದೆ. ಮಾಧ್ಯಮದವರಿಗಾಗಲೀ, ಪ್ರತಿಪಕ್ಷ ನಾಯಕರಿಗಾಗಲೀ ಅವರನ್ನು ಭೇಟಿಮಾಡಲು ಬಿಡಲಾಗುತ್ತಿಲ್ಲ. ಪೊಲೀಸರು ಅವರ ಮನೆಯ ಪ್ರವೇಶ, ಊರಿನ ಪ್ರವೇಶ ಮತ್ತು ಹೆದ್ದಾರಿಯಲ್ಲಿ ತಡೆಬೇಲಿ ಹಾಕಿದ್ದಾರೆ.

I want to draw your attention to the #HathrasRape incident- While you are scrolling your feed in the comfort of your…

Posted by Divya Spandana/Ramya on Saturday, October 3, 2020

ಈ ಕುಟುಂಬವನ್ನು ಭೇಟಿ ಮಾಡಲು ಯತ್ನಿಸಿದ ನಾಯಕರನ್ನು ಬಂಧಿಸಲಾಗಿದೆ, ಥಳಿಸಲಾಗಿದೆ ಮತ್ತು ಅವರ ವಿರುದ್ಧ ಕೇಸು ಜಡಿಯಲಾಗಿದೆ. ಆ ಕುಟುಂಬ ಮಾಡಿರುವ ತಪ್ಪಾದರೂ ಏನು? ತಮ್ಮ ಮನೆಮಗಳನ್ನು ಕಳೆದುಕೊಂಡಿರುವುದೇ ಸಾಕಷ್ಟು ನೋವಿನ ಸಂಗತಿ ಅಲ್ಲವೋ ಎಂಬಂತೆ ಏಕೆ ಅವರಿಗೆ ಕಿರುಕುಳ ನೀಡಿ ಇನ್ನಷ್ಟು ಪೀಡಿಸಲಾಗುತ್ತಿದೆ? ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ.

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ / ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

ಇದೆಲ್ಲಕ್ಕಿಂತ ಮೇಲಾಗಿ, ಪೊಲೀಸರು ಇವೆಲ್ಲವನ್ನೂ ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ; ಅತ್ಯಾಚಾರವನ್ನೇ ನಿರಾಕರಿಸುತ್ತಿದ್ದಾರೆ. ಸಂತ್ರಸ್ತ ಮಹಿಳೆ ಸ್ವತಃ ತನ್ನನ್ನು ಅತ್ಯಾಚಾರ ಮಾಡಿರುವುದಾಗಿ ಪೊಲೀಸರಿಗೆ ಹೇಳಿದ್ದಾರೆ. ಪೊಲೀಸರೇ ಶವವನ್ನು ಸುಟ್ಟುಹಾಕುತ್ತಿರುವ ವಿಡಿಯೋಗಳಿವೆ. ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆಕೆಯ ಕುಟುಂಬದವರು ಅಂಗಲಾಚುತ್ತಿರುವ ವಿಡಿಯೋಗಳಿವೆ. ಈ ಕುಟುಂಬದವರನ್ನು ಅವರ ಮನೆಯಲ್ಲಿಯೇ ಕೂಡಿಹಾಕಿರುವ ವಿಡಿಯೋಗಳಿವೆ.

ಅವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಇದೊಂದು ಪ್ರಜಾಪ್ರಭುತ್ವ ಎಂಬಂತೆ ನಿಮಗೆ ಅನಿಸುತ್ತಿದೆಯೆ? ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ನಮ್ಮ ಪೂರ್ವಿಕ ತಂದೆ ತಾಯಿಯರು ಕಲ್ಪಿಸಿಕೊಂಡ ದೇಶ ಇದು ಅಲ್ಲವೇ ಅಲ್ಲ. ನಮ್ಮ ದೇಶದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಯನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ.

ಆ ಕುಟುಂಬಕ್ಕೆ ನಿಮ್ಮ ಅಗತ್ಯವಿದೆ; ನೀವು ಧ್ವನಿಯೆತ್ತಿ ಮಾತನಾಡಬೇಕಾದ ಅಗತ್ಯವಿದೆ. ಈ ಕುರಿತು ಧ್ವನಿಯೆತ್ತದಿರುವುದರ ಮೂಲಕ ನೀವು ದೇಶಕ್ಕೆ ಬಹುದೊಡ್ಡ ಅಪಕಾರ ಮಾಡಿದಂತಾದೀತು.


ಇದನ್ನೂ ಓದಿ: ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...