Homeಮುಖಪುಟಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ/ ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

- Advertisement -
- Advertisement -

ಹತ್ರಾಸ್ ದುರ್ಘಟನೆ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು ಪ್ರತಿಭಟನೆಗಳು ಜರುಗುತ್ತಿವೆ. ಈ ನಡುವೆ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನರವರು ಸಹ ದನಿಯೆತ್ತಿದ್ದು ವಿಶೇಷ ಮನವಿ ಮಾಡಿದ್ದಾರೆ. ಅದರ ಪೂರ್ಣಪಾಠ ಈ ಕೆಳಗಿನಂತಿದೆ.

ನಾನು ಹತ್ರಾಸ್ ಅತ್ಯಾಚಾರ ಪ್ರಕರಣದತ್ತ ತಮ್ಮ ಗಮನವನ್ನು ಸೆಳೆಯಲು ಇಚ್ಛಿಸುತ್ತೇನೆ- ನನ್ನಂತೆಯೇ ನೀವೂ ನಿಮ್ಮ ಮನೆಗಳ ಆರಾಮದಲ್ಲಿ ಇಂಟರ್ನೆಟ್ ಸಂದೇಶಗಳನ್ನು ನೋಡುತ್ತಿರುವಾಗ, ಒಂದು ಕುಟುಂಬವನ್ನು ಅವರ ಮನೆಯಲ್ಲೇ ಕೂಡಿಹಾಕಲಾಗಿದೆ ಮತ್ತು ಉತ್ತರ ಪ್ರದೇಶ ಸರಕಾರವು ಅವರನ್ನು ತೀವ್ರವಾದ ನೋವಿಗೆ ಒಳಪಡಿಸುತ್ತಿದೆ.

ಅವರು ಮಾಡಿರುವ ಅಪರಾಧ? ಅವರ ಮನೆಮಗಳನ್ನು ಅತ್ಯಾಚಾರ ಮಾಡಲಾಗಿದೆ. ಆ ದಲಿತ ಬಾಲಕಿಯನ್ನು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮೇಲ್ಜಾತಿಯ ನಾಲ್ವರು ಪುರುಷರು ಬರ್ಬರವಾಗಿ ಅತ್ಯಾಚಾರ ಮಾಡಿದ್ದಾರೆ. ಆ ಮಹಿಳೆ ಕೆಲವು ದಿನಗಳ ಬಳಿಕ ಮೃತಪಟ್ಟಿದ್ದಾರೆ. ಆಕೆಯ ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆ ಕುಟುಂಬಕ್ಕೆ ಅನುಮತಿ ನಿರಾಕರಿಸಲಾಗಿದೆ. ಪೊಲೀಸರು ಕುಟುಂಬದ ಅನುಮತಿ ಪಡೆಯದೆಯೇ, ಅಥವಾ ಅವರಿಗೆ ಗೊತ್ತಿಲ್ಲದೇ ರಾತ್ರಿ 2.30ರ ಹೊತ್ತಿಗೆ ಶವವನ್ನು ಸುಟ್ಟುಹಾಕಿದ್ದಾರೆ.

ಇಷ್ಟು ಕ್ರೌರ್ಯ ಸಾಕಾಗಲಿಲ್ಲವೋ ಎಂಬಂತೆ ಆಕೆಯ ಕುಟುಂಬವನ್ನು ಮನೆಯೊಳಗೆ ಕೂಡಿಹಾಕಿ, ಅವರ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಳ್ಳಲಾಗಿದೆ. ಮಾಧ್ಯಮದವರಿಗಾಗಲೀ, ಪ್ರತಿಪಕ್ಷ ನಾಯಕರಿಗಾಗಲೀ ಅವರನ್ನು ಭೇಟಿಮಾಡಲು ಬಿಡಲಾಗುತ್ತಿಲ್ಲ. ಪೊಲೀಸರು ಅವರ ಮನೆಯ ಪ್ರವೇಶ, ಊರಿನ ಪ್ರವೇಶ ಮತ್ತು ಹೆದ್ದಾರಿಯಲ್ಲಿ ತಡೆಬೇಲಿ ಹಾಕಿದ್ದಾರೆ.

I want to draw your attention to the #HathrasRape incident- While you are scrolling your feed in the comfort of your…

Posted by Divya Spandana/Ramya on Saturday, October 3, 2020

ಈ ಕುಟುಂಬವನ್ನು ಭೇಟಿ ಮಾಡಲು ಯತ್ನಿಸಿದ ನಾಯಕರನ್ನು ಬಂಧಿಸಲಾಗಿದೆ, ಥಳಿಸಲಾಗಿದೆ ಮತ್ತು ಅವರ ವಿರುದ್ಧ ಕೇಸು ಜಡಿಯಲಾಗಿದೆ. ಆ ಕುಟುಂಬ ಮಾಡಿರುವ ತಪ್ಪಾದರೂ ಏನು? ತಮ್ಮ ಮನೆಮಗಳನ್ನು ಕಳೆದುಕೊಂಡಿರುವುದೇ ಸಾಕಷ್ಟು ನೋವಿನ ಸಂಗತಿ ಅಲ್ಲವೋ ಎಂಬಂತೆ ಏಕೆ ಅವರಿಗೆ ಕಿರುಕುಳ ನೀಡಿ ಇನ್ನಷ್ಟು ಪೀಡಿಸಲಾಗುತ್ತಿದೆ? ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ.

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ / ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

ಇದೆಲ್ಲಕ್ಕಿಂತ ಮೇಲಾಗಿ, ಪೊಲೀಸರು ಇವೆಲ್ಲವನ್ನೂ ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ; ಅತ್ಯಾಚಾರವನ್ನೇ ನಿರಾಕರಿಸುತ್ತಿದ್ದಾರೆ. ಸಂತ್ರಸ್ತ ಮಹಿಳೆ ಸ್ವತಃ ತನ್ನನ್ನು ಅತ್ಯಾಚಾರ ಮಾಡಿರುವುದಾಗಿ ಪೊಲೀಸರಿಗೆ ಹೇಳಿದ್ದಾರೆ. ಪೊಲೀಸರೇ ಶವವನ್ನು ಸುಟ್ಟುಹಾಕುತ್ತಿರುವ ವಿಡಿಯೋಗಳಿವೆ. ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆಕೆಯ ಕುಟುಂಬದವರು ಅಂಗಲಾಚುತ್ತಿರುವ ವಿಡಿಯೋಗಳಿವೆ. ಈ ಕುಟುಂಬದವರನ್ನು ಅವರ ಮನೆಯಲ್ಲಿಯೇ ಕೂಡಿಹಾಕಿರುವ ವಿಡಿಯೋಗಳಿವೆ.

ಅವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಇದೊಂದು ಪ್ರಜಾಪ್ರಭುತ್ವ ಎಂಬಂತೆ ನಿಮಗೆ ಅನಿಸುತ್ತಿದೆಯೆ? ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ನಮ್ಮ ಪೂರ್ವಿಕ ತಂದೆ ತಾಯಿಯರು ಕಲ್ಪಿಸಿಕೊಂಡ ದೇಶ ಇದು ಅಲ್ಲವೇ ಅಲ್ಲ. ನಮ್ಮ ದೇಶದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಯನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ.

ಆ ಕುಟುಂಬಕ್ಕೆ ನಿಮ್ಮ ಅಗತ್ಯವಿದೆ; ನೀವು ಧ್ವನಿಯೆತ್ತಿ ಮಾತನಾಡಬೇಕಾದ ಅಗತ್ಯವಿದೆ. ಈ ಕುರಿತು ಧ್ವನಿಯೆತ್ತದಿರುವುದರ ಮೂಲಕ ನೀವು ದೇಶಕ್ಕೆ ಬಹುದೊಡ್ಡ ಅಪಕಾರ ಮಾಡಿದಂತಾದೀತು.


ಇದನ್ನೂ ಓದಿ: ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...