Homeಮುಖಪುಟಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ/ ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

- Advertisement -
- Advertisement -

ಹತ್ರಾಸ್ ದುರ್ಘಟನೆ ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು ಪ್ರತಿಭಟನೆಗಳು ಜರುಗುತ್ತಿವೆ. ಈ ನಡುವೆ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನರವರು ಸಹ ದನಿಯೆತ್ತಿದ್ದು ವಿಶೇಷ ಮನವಿ ಮಾಡಿದ್ದಾರೆ. ಅದರ ಪೂರ್ಣಪಾಠ ಈ ಕೆಳಗಿನಂತಿದೆ.

ನಾನು ಹತ್ರಾಸ್ ಅತ್ಯಾಚಾರ ಪ್ರಕರಣದತ್ತ ತಮ್ಮ ಗಮನವನ್ನು ಸೆಳೆಯಲು ಇಚ್ಛಿಸುತ್ತೇನೆ- ನನ್ನಂತೆಯೇ ನೀವೂ ನಿಮ್ಮ ಮನೆಗಳ ಆರಾಮದಲ್ಲಿ ಇಂಟರ್ನೆಟ್ ಸಂದೇಶಗಳನ್ನು ನೋಡುತ್ತಿರುವಾಗ, ಒಂದು ಕುಟುಂಬವನ್ನು ಅವರ ಮನೆಯಲ್ಲೇ ಕೂಡಿಹಾಕಲಾಗಿದೆ ಮತ್ತು ಉತ್ತರ ಪ್ರದೇಶ ಸರಕಾರವು ಅವರನ್ನು ತೀವ್ರವಾದ ನೋವಿಗೆ ಒಳಪಡಿಸುತ್ತಿದೆ.

ಅವರು ಮಾಡಿರುವ ಅಪರಾಧ? ಅವರ ಮನೆಮಗಳನ್ನು ಅತ್ಯಾಚಾರ ಮಾಡಲಾಗಿದೆ. ಆ ದಲಿತ ಬಾಲಕಿಯನ್ನು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮೇಲ್ಜಾತಿಯ ನಾಲ್ವರು ಪುರುಷರು ಬರ್ಬರವಾಗಿ ಅತ್ಯಾಚಾರ ಮಾಡಿದ್ದಾರೆ. ಆ ಮಹಿಳೆ ಕೆಲವು ದಿನಗಳ ಬಳಿಕ ಮೃತಪಟ್ಟಿದ್ದಾರೆ. ಆಕೆಯ ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆ ಕುಟುಂಬಕ್ಕೆ ಅನುಮತಿ ನಿರಾಕರಿಸಲಾಗಿದೆ. ಪೊಲೀಸರು ಕುಟುಂಬದ ಅನುಮತಿ ಪಡೆಯದೆಯೇ, ಅಥವಾ ಅವರಿಗೆ ಗೊತ್ತಿಲ್ಲದೇ ರಾತ್ರಿ 2.30ರ ಹೊತ್ತಿಗೆ ಶವವನ್ನು ಸುಟ್ಟುಹಾಕಿದ್ದಾರೆ.

ಇಷ್ಟು ಕ್ರೌರ್ಯ ಸಾಕಾಗಲಿಲ್ಲವೋ ಎಂಬಂತೆ ಆಕೆಯ ಕುಟುಂಬವನ್ನು ಮನೆಯೊಳಗೆ ಕೂಡಿಹಾಕಿ, ಅವರ ಮೊಬೈಲ್ ಫೋನ್‌ಗಳನ್ನು ಕಿತ್ತುಕೊಳ್ಳಲಾಗಿದೆ. ಮಾಧ್ಯಮದವರಿಗಾಗಲೀ, ಪ್ರತಿಪಕ್ಷ ನಾಯಕರಿಗಾಗಲೀ ಅವರನ್ನು ಭೇಟಿಮಾಡಲು ಬಿಡಲಾಗುತ್ತಿಲ್ಲ. ಪೊಲೀಸರು ಅವರ ಮನೆಯ ಪ್ರವೇಶ, ಊರಿನ ಪ್ರವೇಶ ಮತ್ತು ಹೆದ್ದಾರಿಯಲ್ಲಿ ತಡೆಬೇಲಿ ಹಾಕಿದ್ದಾರೆ.

I want to draw your attention to the #HathrasRape incident- While you are scrolling your feed in the comfort of your…

Posted by Divya Spandana/Ramya on Saturday, October 3, 2020

ಈ ಕುಟುಂಬವನ್ನು ಭೇಟಿ ಮಾಡಲು ಯತ್ನಿಸಿದ ನಾಯಕರನ್ನು ಬಂಧಿಸಲಾಗಿದೆ, ಥಳಿಸಲಾಗಿದೆ ಮತ್ತು ಅವರ ವಿರುದ್ಧ ಕೇಸು ಜಡಿಯಲಾಗಿದೆ. ಆ ಕುಟುಂಬ ಮಾಡಿರುವ ತಪ್ಪಾದರೂ ಏನು? ತಮ್ಮ ಮನೆಮಗಳನ್ನು ಕಳೆದುಕೊಂಡಿರುವುದೇ ಸಾಕಷ್ಟು ನೋವಿನ ಸಂಗತಿ ಅಲ್ಲವೋ ಎಂಬಂತೆ ಏಕೆ ಅವರಿಗೆ ಕಿರುಕುಳ ನೀಡಿ ಇನ್ನಷ್ಟು ಪೀಡಿಸಲಾಗುತ್ತಿದೆ? ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ.

ಯಾವ ನಿಯಮಗಳ ಪುಸ್ತಕವನ್ನು ಉತ್ತರ ಪ್ರದೇಶ ಸರಕಾರ ಅನುಸರಿಸುತ್ತಿದೆ? ವೈಫಲ್ಯವನ್ನು ಮರೆಮಾಚುವ / ಗಮನ ಬೇರೆಡೆ ಸೆಳೆಯುವ ಮೋದಿಯ ನಿಯಮ ಪುಸ್ತಕವನ್ನೆ?

ಇದೆಲ್ಲಕ್ಕಿಂತ ಮೇಲಾಗಿ, ಪೊಲೀಸರು ಇವೆಲ್ಲವನ್ನೂ ನಿರಾಕರಿಸುತ್ತಿದ್ದಾರೆ ಮಾತ್ರವಲ್ಲ; ಅತ್ಯಾಚಾರವನ್ನೇ ನಿರಾಕರಿಸುತ್ತಿದ್ದಾರೆ. ಸಂತ್ರಸ್ತ ಮಹಿಳೆ ಸ್ವತಃ ತನ್ನನ್ನು ಅತ್ಯಾಚಾರ ಮಾಡಿರುವುದಾಗಿ ಪೊಲೀಸರಿಗೆ ಹೇಳಿದ್ದಾರೆ. ಪೊಲೀಸರೇ ಶವವನ್ನು ಸುಟ್ಟುಹಾಕುತ್ತಿರುವ ವಿಡಿಯೋಗಳಿವೆ. ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಆಕೆಯ ಕುಟುಂಬದವರು ಅಂಗಲಾಚುತ್ತಿರುವ ವಿಡಿಯೋಗಳಿವೆ. ಈ ಕುಟುಂಬದವರನ್ನು ಅವರ ಮನೆಯಲ್ಲಿಯೇ ಕೂಡಿಹಾಕಿರುವ ವಿಡಿಯೋಗಳಿವೆ.

ಅವರು ಯಾರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ? ಇದೊಂದು ಪ್ರಜಾಪ್ರಭುತ್ವ ಎಂಬಂತೆ ನಿಮಗೆ ಅನಿಸುತ್ತಿದೆಯೆ? ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಿದ ನಮ್ಮ ಪೂರ್ವಿಕ ತಂದೆ ತಾಯಿಯರು ಕಲ್ಪಿಸಿಕೊಂಡ ದೇಶ ಇದು ಅಲ್ಲವೇ ಅಲ್ಲ. ನಮ್ಮ ದೇಶದ ಸಾರ್ವಭೌಮತೆ, ಏಕತೆ ಮತ್ತು ಅಖಂಡತೆಯನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ.

ಆ ಕುಟುಂಬಕ್ಕೆ ನಿಮ್ಮ ಅಗತ್ಯವಿದೆ; ನೀವು ಧ್ವನಿಯೆತ್ತಿ ಮಾತನಾಡಬೇಕಾದ ಅಗತ್ಯವಿದೆ. ಈ ಕುರಿತು ಧ್ವನಿಯೆತ್ತದಿರುವುದರ ಮೂಲಕ ನೀವು ದೇಶಕ್ಕೆ ಬಹುದೊಡ್ಡ ಅಪಕಾರ ಮಾಡಿದಂತಾದೀತು.


ಇದನ್ನೂ ಓದಿ: ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...