Homeಮುಖಪುಟದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

- Advertisement -
- Advertisement -

ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಭಾರತ ಸರ್ಕಾರಕ್ಕೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸುವಂತೆ ಸವಾಲು ಹಾಕಿದ್ದಾರೆ.

ಮಂಗಳವಾರ ಈ ಕುರಿತು ಟ್ವೀಟ್‌ ಮಾಡಿದ ಏಲಿಯಟ್ ಆಲ್ಡರ್ಸನ್‌ ಸುರಕ್ಷತೆಯಲ್ಲಿ ಲೋಪವಿದೆ ಎಂದು ನ್ಯಾಷನಲ್‌ ಇನ್‌ಫಾರ್ಮ್ಯಾಟಿಕ್ಸ್‌ ಸೆಂಟರ್‌ಗೆ ಎಚ್ಚರಿಸಿದ್ದರು. ಜೊತೆಗೆ ರಾಹುಲ್‌ ಗಾಂಧಿ ಅನುಮಾನ ಸತ್ಯವೆಂದು ಟ್ವೀಟ್‌ ಮಾಡುವ ಮೂಲಕ ಆರೋಗ್ಯ ಸೇತು ಒಂದು ಕಣ್ಗಾವಲು ವ್ಯವಸ್ಥೆ ಎಂಬ ಅನುಮಾನಕ್ಕೆ ಇಂಬು ನೀಡಿದ್ದರು.

ಬೆನ್ನಲ್ಲೇ ಸಚಿವ ರವಿಶಂಕರ್‌ ಪ್ರಸಾದ್‌ ಯಾವುದೇ ಲೋಪವಿಲ್ಲದ ಎಂದು ಹೇಳಿಕೆ ನೀಡಿ ಸಮರ್ಥಿಸಿಕೊಂಡಿದ್ದರು. ಆದರೆ ಏಲಿಯಟ್‌ ಆಲ್ಡರ್ಸನ್‌ ಬುಧವಾರ ಪ್ರಕಟಿಸಿದ ಸರಣಿ ಟ್ವೀಟ್‌ಗಳಲ್ಲಿ ಭಾರತ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ಏಲಿಯಟ್‌ ಆಲ್ಡರ್‌ಸನ್‌ ಸವಾಲುಗಳು

ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ ಎಂದಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು.

ಮುಂದುವರೆದು ಈ ಆಪ್‌ನ ಹಿಂದಿನ ಆವೃತ್ತಿಯಲ್ಲಿ ಸ್ವತಃ ಏಲಿಯಟ್‌ ಲೋಕಲ್‌ ಡಾಟಾಬೇಸ್‌ನಿಂದ ಯಾವುದೇ ಮಾಹಿತಿಯನ್ನು ಸುಲಭವಾಗಿ ಸಂಗ್ರಹಿಸಬಹುದು ಎಂಬುದನ್ನು ಕಂಡುಕೊಂಡಿದ್ದರು. ಮಂಗಳವಾರ ಕರೋನಾ ಸೋಂಕಿತರು, ಅನಾರೋಗ್ಯ ಪೀಡಿತರು, ತಮ್ಮ ಇಚ್ಛೆಯ ಪ್ರದೇಶದಲ್ಲಿ ಸ್ವಯಂ ತಪಾಸಣೆಗೆ ಒಳಪಟ್ಟವರ ಮಾಹಿತಿಯನ್ನು ನೋಡುವ ಅವಕಾಶವೂ ಇತ್ತು ಎಂದು ತಮ್ಮ ಟ್ವೀಟ್‌ನಲ್ಲಿ ವಿವರಿಸಿದ್ದಾರೆ. ಅಂದರೆ ಎಷ್ಟರ ಮಟ್ಟಿಗೆ ಮಾಹಿತಿ ಬಹಿರಂಗವಾಗಿತ್ತು ಎಂದರೆ ಪ್ರಧಾನಿ ಕಚೇರಿ ಅಥವಾ ಭಾರತೀಯ ಸಂಸತ್ತಿನಲ್ಲಿ ಯಾರು ಅನಾರೋಗ್ಯ ಪೀಡಿತರು ಎಂಬುದನ್ನು ತಿಳಿಯಬಹುದು ಎಂದಿದ್ದಾರೆ. ಅಂದರೆ ನಿರ್ದಿಷ್ಟವಾಗಿ ಇಂಥದ್ದೇ ಮನೆಯಲ್ಲಿ ಸೋಂಕು ತಗುಲಿದೆ ಎಂಬುದನ್ನು ಎಲ್ಲೋ ಕೂತಿರುವ ನನಗೆ ತಿಳಿಯಲು ಸಾಧ್ಯ ಎಂಬುದನ್ನು ವಿವರಿಸಿದ್ದರು.

ಅದರಂತೆ ಪ್ರಧಾನಿ ಕಚೇರಿಯಲ್ಲಿ 5 ಮಂದಿ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.

ಏಪ್ರಿಲ್‌ 4ರಿಂದ ಆರೋಗ್ಯ ಸೇತುವಿನಲ್ಲಿರುವ ಲೋಪಗಳನ್ನು ಗುರುತಿಸುತ್ತಾ ಬಂದಿರುವ ಏಲಿಯಟ್‌ ಆಲ್ಡರ್ಸನ್‌ ಬಳಕೆದಾರರ ಅಂದರೆ ಭಾರತೀಯ ನಾಗರಿಕರ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ದೀರ್ಘ ಲೇಖನ ಬರೆಯುವುದಾಗಿಯೂ ಏಲಿಯಟ್‌ ತಮ್ಮ ಟ್ವೀಟ್‌ವೊಂದರಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಏಲಿಯಟ್‌ ಆಲ್ಡರ್ಸನ್‌ ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳು ಸೋಂಕು ಹರಡುವಿಕೆಯನ್ನು ಪತ್ತೆ ಮಾಡುವ ನೆಪದಲ್ಲಿ ಕಣ್ಗಾವಲು ಇಡಲು ಆಪ್‌ಗಳನ್ನುಬಳಸುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿ ಅಂತಹ ಆಪ್‌ಗಳನ್ನು ಪಟ್ಟಿ ಮಾಡಿದ್ದರು. ಸಿಂಗಪುರ್‌, ಇಸ್ರೇಲ್‌ ಐಸ್‌ಲ್ಯಾಂಡ್‌, ಸೇರಿದಂತೆ ಹಲವು ದೇಶಗಳು ಈ ಪಟ್ಟಿಯಲ್ಲಿದ್ದವು. ಭಾರತವೂ ಅದೇ ಸಾಲಿಗೆ ಸೇರಿದೆ ಎಂಬ ಅನುಮಾನ ಈಗ ವ್ಯಕ್ತವಾಗುತ್ತಿದೆ.

ಆರೋಗ್ಯ ಸೇತು ಅಭಿಯಾನ

ಫೇಸ್‌ಬುಕ್‌ಗಿಂತ ಅತ್ಯಂತ ವೇಗವಾಗಿ ಡೌನ್‌ ಲೋಡ್‌ ಮಾಡಿಕೊಳ್ಳಲಾಗಿರುವ ಆರೋಗ್ಯ ಸೇತು ಆಪ್‌ ಹೆಚ್ಚು ಬಳಕೆಯಾಗುತ್ತಿದೆ. ಇದುವರೆಗೂ 50 ಲಕ್ಷ ಡೌನ್‌ಲೋಡ್‌ಗಳಾಗಿವೆ. ಈಗಾಗಲೇ ನಿಮ್ಮ ಮೊಬೈಲ್‌ ಹಲವು ಬಾರಿ ಎಸ್ಸೆಮ್ಮೆಸ್‌ ಬಂದಿರಬಹುದು. ಈ ಮೇಲ್‌ ಬಂದಿರಬಹುದು. ಅಷ್ಟೇ ಅಲ್ಲದೆ ಅಜಯ್‌ದೇವಗನ್‌ರಂತಹ ನಟರು ಆರೊಗ್ಯ ಸೇತು ಒಂದು ಬಾಡಿಗಾರ್ಡ್‌ ಎಂಬಂತೆ ಪ್ರಚಾರ ಕೂಡ ಮಾಡುತ್ತಿದ್ದಾರೆ.

ಕಡ್ಡಾಯವಾಗಿ ಆರೋಗ್ಯಸೇತು ಇನ್ಸ್ಟಾಲ್‌ ಮಾಡಿಸುತ್ತಿರುವುದಕ್ಕೂ, ಹಲವು ತಜ್ಞರು ಮಾಹಿತಿ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತುತ್ತಿರುವುದಕ್ಕೂ, ಏಲಿಯಟ್‌ ಆಲ್ಡರ್ಸನ್‌ ಎತ್ತಿರುವ ಪ್ರಶ್ನೆಗಳು ನಿಜಕ್ಕೂ ಭಾರತ ಸರ್ಕಾರ ಈ ಆಪ್‌ ಅನ್ನು ನಾಗರಿಕರ ಮೇಲೆ ಕಣ್ಗಾವಲು ಇಡಲೆಂದೇ ಬಳಸುತ್ತಿದೆ ಎಂಬ ಅನುಮಾನವನ್ನು ಬಲಪಡಿಸುತ್ತಿದೆ.

ಈ ಹಿಂದೆ ಜಗತ್ತಿನ ಅತ್ಯಂತ ವಿಶಿಷ್ಟ ಸೇವೆ ಎಂದು ಬಣ್ಣಿಸಲಾದ ಆಧಾರ್‌ ಮಾಹಿತಿ ಸೋರಿಕೆಯ ವಿಷಯದಲ್ಲೂ ಭಾರತ ಸರ್ಕಾರವನ್ನು ಎಚ್ಚರಿಸಿದ್ದಲ್ಲದೆ, ಸಮರ್ಥನೆ ಮಾಡಿಕೊಂಡಾಗಲೆಲ್ಲಾ, ಮುಜುಗರಕ್ಕೆ ಈಡು ಮಾಡುವಂತೆ ಮಾಹಿತಿ ಬಹಿರಂಗ ಪಡಿಸಿ, ಲೋಪಗಳನ್ನು ಎತ್ತಿ ತೋರಿಸಿದ್ದು ಇದೇ ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್ಸನ್‌.

ಕೃಪೆ: ಟೆಕ್ ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...