Homeಮುಖಪುಟದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

- Advertisement -
- Advertisement -

ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಭಾರತ ಸರ್ಕಾರಕ್ಕೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸುವಂತೆ ಸವಾಲು ಹಾಕಿದ್ದಾರೆ.

ಮಂಗಳವಾರ ಈ ಕುರಿತು ಟ್ವೀಟ್‌ ಮಾಡಿದ ಏಲಿಯಟ್ ಆಲ್ಡರ್ಸನ್‌ ಸುರಕ್ಷತೆಯಲ್ಲಿ ಲೋಪವಿದೆ ಎಂದು ನ್ಯಾಷನಲ್‌ ಇನ್‌ಫಾರ್ಮ್ಯಾಟಿಕ್ಸ್‌ ಸೆಂಟರ್‌ಗೆ ಎಚ್ಚರಿಸಿದ್ದರು. ಜೊತೆಗೆ ರಾಹುಲ್‌ ಗಾಂಧಿ ಅನುಮಾನ ಸತ್ಯವೆಂದು ಟ್ವೀಟ್‌ ಮಾಡುವ ಮೂಲಕ ಆರೋಗ್ಯ ಸೇತು ಒಂದು ಕಣ್ಗಾವಲು ವ್ಯವಸ್ಥೆ ಎಂಬ ಅನುಮಾನಕ್ಕೆ ಇಂಬು ನೀಡಿದ್ದರು.

ಬೆನ್ನಲ್ಲೇ ಸಚಿವ ರವಿಶಂಕರ್‌ ಪ್ರಸಾದ್‌ ಯಾವುದೇ ಲೋಪವಿಲ್ಲದ ಎಂದು ಹೇಳಿಕೆ ನೀಡಿ ಸಮರ್ಥಿಸಿಕೊಂಡಿದ್ದರು. ಆದರೆ ಏಲಿಯಟ್‌ ಆಲ್ಡರ್ಸನ್‌ ಬುಧವಾರ ಪ್ರಕಟಿಸಿದ ಸರಣಿ ಟ್ವೀಟ್‌ಗಳಲ್ಲಿ ಭಾರತ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ಏಲಿಯಟ್‌ ಆಲ್ಡರ್‌ಸನ್‌ ಸವಾಲುಗಳು

ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ ಎಂದಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು.

ಮುಂದುವರೆದು ಈ ಆಪ್‌ನ ಹಿಂದಿನ ಆವೃತ್ತಿಯಲ್ಲಿ ಸ್ವತಃ ಏಲಿಯಟ್‌ ಲೋಕಲ್‌ ಡಾಟಾಬೇಸ್‌ನಿಂದ ಯಾವುದೇ ಮಾಹಿತಿಯನ್ನು ಸುಲಭವಾಗಿ ಸಂಗ್ರಹಿಸಬಹುದು ಎಂಬುದನ್ನು ಕಂಡುಕೊಂಡಿದ್ದರು. ಮಂಗಳವಾರ ಕರೋನಾ ಸೋಂಕಿತರು, ಅನಾರೋಗ್ಯ ಪೀಡಿತರು, ತಮ್ಮ ಇಚ್ಛೆಯ ಪ್ರದೇಶದಲ್ಲಿ ಸ್ವಯಂ ತಪಾಸಣೆಗೆ ಒಳಪಟ್ಟವರ ಮಾಹಿತಿಯನ್ನು ನೋಡುವ ಅವಕಾಶವೂ ಇತ್ತು ಎಂದು ತಮ್ಮ ಟ್ವೀಟ್‌ನಲ್ಲಿ ವಿವರಿಸಿದ್ದಾರೆ. ಅಂದರೆ ಎಷ್ಟರ ಮಟ್ಟಿಗೆ ಮಾಹಿತಿ ಬಹಿರಂಗವಾಗಿತ್ತು ಎಂದರೆ ಪ್ರಧಾನಿ ಕಚೇರಿ ಅಥವಾ ಭಾರತೀಯ ಸಂಸತ್ತಿನಲ್ಲಿ ಯಾರು ಅನಾರೋಗ್ಯ ಪೀಡಿತರು ಎಂಬುದನ್ನು ತಿಳಿಯಬಹುದು ಎಂದಿದ್ದಾರೆ. ಅಂದರೆ ನಿರ್ದಿಷ್ಟವಾಗಿ ಇಂಥದ್ದೇ ಮನೆಯಲ್ಲಿ ಸೋಂಕು ತಗುಲಿದೆ ಎಂಬುದನ್ನು ಎಲ್ಲೋ ಕೂತಿರುವ ನನಗೆ ತಿಳಿಯಲು ಸಾಧ್ಯ ಎಂಬುದನ್ನು ವಿವರಿಸಿದ್ದರು.

ಅದರಂತೆ ಪ್ರಧಾನಿ ಕಚೇರಿಯಲ್ಲಿ 5 ಮಂದಿ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.

ಏಪ್ರಿಲ್‌ 4ರಿಂದ ಆರೋಗ್ಯ ಸೇತುವಿನಲ್ಲಿರುವ ಲೋಪಗಳನ್ನು ಗುರುತಿಸುತ್ತಾ ಬಂದಿರುವ ಏಲಿಯಟ್‌ ಆಲ್ಡರ್ಸನ್‌ ಬಳಕೆದಾರರ ಅಂದರೆ ಭಾರತೀಯ ನಾಗರಿಕರ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ದೀರ್ಘ ಲೇಖನ ಬರೆಯುವುದಾಗಿಯೂ ಏಲಿಯಟ್‌ ತಮ್ಮ ಟ್ವೀಟ್‌ವೊಂದರಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಏಲಿಯಟ್‌ ಆಲ್ಡರ್ಸನ್‌ ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳು ಸೋಂಕು ಹರಡುವಿಕೆಯನ್ನು ಪತ್ತೆ ಮಾಡುವ ನೆಪದಲ್ಲಿ ಕಣ್ಗಾವಲು ಇಡಲು ಆಪ್‌ಗಳನ್ನುಬಳಸುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿ ಅಂತಹ ಆಪ್‌ಗಳನ್ನು ಪಟ್ಟಿ ಮಾಡಿದ್ದರು. ಸಿಂಗಪುರ್‌, ಇಸ್ರೇಲ್‌ ಐಸ್‌ಲ್ಯಾಂಡ್‌, ಸೇರಿದಂತೆ ಹಲವು ದೇಶಗಳು ಈ ಪಟ್ಟಿಯಲ್ಲಿದ್ದವು. ಭಾರತವೂ ಅದೇ ಸಾಲಿಗೆ ಸೇರಿದೆ ಎಂಬ ಅನುಮಾನ ಈಗ ವ್ಯಕ್ತವಾಗುತ್ತಿದೆ.

ಆರೋಗ್ಯ ಸೇತು ಅಭಿಯಾನ

ಫೇಸ್‌ಬುಕ್‌ಗಿಂತ ಅತ್ಯಂತ ವೇಗವಾಗಿ ಡೌನ್‌ ಲೋಡ್‌ ಮಾಡಿಕೊಳ್ಳಲಾಗಿರುವ ಆರೋಗ್ಯ ಸೇತು ಆಪ್‌ ಹೆಚ್ಚು ಬಳಕೆಯಾಗುತ್ತಿದೆ. ಇದುವರೆಗೂ 50 ಲಕ್ಷ ಡೌನ್‌ಲೋಡ್‌ಗಳಾಗಿವೆ. ಈಗಾಗಲೇ ನಿಮ್ಮ ಮೊಬೈಲ್‌ ಹಲವು ಬಾರಿ ಎಸ್ಸೆಮ್ಮೆಸ್‌ ಬಂದಿರಬಹುದು. ಈ ಮೇಲ್‌ ಬಂದಿರಬಹುದು. ಅಷ್ಟೇ ಅಲ್ಲದೆ ಅಜಯ್‌ದೇವಗನ್‌ರಂತಹ ನಟರು ಆರೊಗ್ಯ ಸೇತು ಒಂದು ಬಾಡಿಗಾರ್ಡ್‌ ಎಂಬಂತೆ ಪ್ರಚಾರ ಕೂಡ ಮಾಡುತ್ತಿದ್ದಾರೆ.

ಕಡ್ಡಾಯವಾಗಿ ಆರೋಗ್ಯಸೇತು ಇನ್ಸ್ಟಾಲ್‌ ಮಾಡಿಸುತ್ತಿರುವುದಕ್ಕೂ, ಹಲವು ತಜ್ಞರು ಮಾಹಿತಿ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತುತ್ತಿರುವುದಕ್ಕೂ, ಏಲಿಯಟ್‌ ಆಲ್ಡರ್ಸನ್‌ ಎತ್ತಿರುವ ಪ್ರಶ್ನೆಗಳು ನಿಜಕ್ಕೂ ಭಾರತ ಸರ್ಕಾರ ಈ ಆಪ್‌ ಅನ್ನು ನಾಗರಿಕರ ಮೇಲೆ ಕಣ್ಗಾವಲು ಇಡಲೆಂದೇ ಬಳಸುತ್ತಿದೆ ಎಂಬ ಅನುಮಾನವನ್ನು ಬಲಪಡಿಸುತ್ತಿದೆ.

ಈ ಹಿಂದೆ ಜಗತ್ತಿನ ಅತ್ಯಂತ ವಿಶಿಷ್ಟ ಸೇವೆ ಎಂದು ಬಣ್ಣಿಸಲಾದ ಆಧಾರ್‌ ಮಾಹಿತಿ ಸೋರಿಕೆಯ ವಿಷಯದಲ್ಲೂ ಭಾರತ ಸರ್ಕಾರವನ್ನು ಎಚ್ಚರಿಸಿದ್ದಲ್ಲದೆ, ಸಮರ್ಥನೆ ಮಾಡಿಕೊಂಡಾಗಲೆಲ್ಲಾ, ಮುಜುಗರಕ್ಕೆ ಈಡು ಮಾಡುವಂತೆ ಮಾಹಿತಿ ಬಹಿರಂಗ ಪಡಿಸಿ, ಲೋಪಗಳನ್ನು ಎತ್ತಿ ತೋರಿಸಿದ್ದು ಇದೇ ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್ಸನ್‌.

ಕೃಪೆ: ಟೆಕ್ ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....