Homeಮುಖಪುಟದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

- Advertisement -
- Advertisement -

ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಭಾರತ ಸರ್ಕಾರಕ್ಕೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸುವಂತೆ ಸವಾಲು ಹಾಕಿದ್ದಾರೆ.

ಮಂಗಳವಾರ ಈ ಕುರಿತು ಟ್ವೀಟ್‌ ಮಾಡಿದ ಏಲಿಯಟ್ ಆಲ್ಡರ್ಸನ್‌ ಸುರಕ್ಷತೆಯಲ್ಲಿ ಲೋಪವಿದೆ ಎಂದು ನ್ಯಾಷನಲ್‌ ಇನ್‌ಫಾರ್ಮ್ಯಾಟಿಕ್ಸ್‌ ಸೆಂಟರ್‌ಗೆ ಎಚ್ಚರಿಸಿದ್ದರು. ಜೊತೆಗೆ ರಾಹುಲ್‌ ಗಾಂಧಿ ಅನುಮಾನ ಸತ್ಯವೆಂದು ಟ್ವೀಟ್‌ ಮಾಡುವ ಮೂಲಕ ಆರೋಗ್ಯ ಸೇತು ಒಂದು ಕಣ್ಗಾವಲು ವ್ಯವಸ್ಥೆ ಎಂಬ ಅನುಮಾನಕ್ಕೆ ಇಂಬು ನೀಡಿದ್ದರು.

ಬೆನ್ನಲ್ಲೇ ಸಚಿವ ರವಿಶಂಕರ್‌ ಪ್ರಸಾದ್‌ ಯಾವುದೇ ಲೋಪವಿಲ್ಲದ ಎಂದು ಹೇಳಿಕೆ ನೀಡಿ ಸಮರ್ಥಿಸಿಕೊಂಡಿದ್ದರು. ಆದರೆ ಏಲಿಯಟ್‌ ಆಲ್ಡರ್ಸನ್‌ ಬುಧವಾರ ಪ್ರಕಟಿಸಿದ ಸರಣಿ ಟ್ವೀಟ್‌ಗಳಲ್ಲಿ ಭಾರತ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ಏಲಿಯಟ್‌ ಆಲ್ಡರ್‌ಸನ್‌ ಸವಾಲುಗಳು

ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ ಎಂದಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು.

ಮುಂದುವರೆದು ಈ ಆಪ್‌ನ ಹಿಂದಿನ ಆವೃತ್ತಿಯಲ್ಲಿ ಸ್ವತಃ ಏಲಿಯಟ್‌ ಲೋಕಲ್‌ ಡಾಟಾಬೇಸ್‌ನಿಂದ ಯಾವುದೇ ಮಾಹಿತಿಯನ್ನು ಸುಲಭವಾಗಿ ಸಂಗ್ರಹಿಸಬಹುದು ಎಂಬುದನ್ನು ಕಂಡುಕೊಂಡಿದ್ದರು. ಮಂಗಳವಾರ ಕರೋನಾ ಸೋಂಕಿತರು, ಅನಾರೋಗ್ಯ ಪೀಡಿತರು, ತಮ್ಮ ಇಚ್ಛೆಯ ಪ್ರದೇಶದಲ್ಲಿ ಸ್ವಯಂ ತಪಾಸಣೆಗೆ ಒಳಪಟ್ಟವರ ಮಾಹಿತಿಯನ್ನು ನೋಡುವ ಅವಕಾಶವೂ ಇತ್ತು ಎಂದು ತಮ್ಮ ಟ್ವೀಟ್‌ನಲ್ಲಿ ವಿವರಿಸಿದ್ದಾರೆ. ಅಂದರೆ ಎಷ್ಟರ ಮಟ್ಟಿಗೆ ಮಾಹಿತಿ ಬಹಿರಂಗವಾಗಿತ್ತು ಎಂದರೆ ಪ್ರಧಾನಿ ಕಚೇರಿ ಅಥವಾ ಭಾರತೀಯ ಸಂಸತ್ತಿನಲ್ಲಿ ಯಾರು ಅನಾರೋಗ್ಯ ಪೀಡಿತರು ಎಂಬುದನ್ನು ತಿಳಿಯಬಹುದು ಎಂದಿದ್ದಾರೆ. ಅಂದರೆ ನಿರ್ದಿಷ್ಟವಾಗಿ ಇಂಥದ್ದೇ ಮನೆಯಲ್ಲಿ ಸೋಂಕು ತಗುಲಿದೆ ಎಂಬುದನ್ನು ಎಲ್ಲೋ ಕೂತಿರುವ ನನಗೆ ತಿಳಿಯಲು ಸಾಧ್ಯ ಎಂಬುದನ್ನು ವಿವರಿಸಿದ್ದರು.

ಅದರಂತೆ ಪ್ರಧಾನಿ ಕಚೇರಿಯಲ್ಲಿ 5 ಮಂದಿ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.

ಏಪ್ರಿಲ್‌ 4ರಿಂದ ಆರೋಗ್ಯ ಸೇತುವಿನಲ್ಲಿರುವ ಲೋಪಗಳನ್ನು ಗುರುತಿಸುತ್ತಾ ಬಂದಿರುವ ಏಲಿಯಟ್‌ ಆಲ್ಡರ್ಸನ್‌ ಬಳಕೆದಾರರ ಅಂದರೆ ಭಾರತೀಯ ನಾಗರಿಕರ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ದೀರ್ಘ ಲೇಖನ ಬರೆಯುವುದಾಗಿಯೂ ಏಲಿಯಟ್‌ ತಮ್ಮ ಟ್ವೀಟ್‌ವೊಂದರಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಏಲಿಯಟ್‌ ಆಲ್ಡರ್ಸನ್‌ ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳು ಸೋಂಕು ಹರಡುವಿಕೆಯನ್ನು ಪತ್ತೆ ಮಾಡುವ ನೆಪದಲ್ಲಿ ಕಣ್ಗಾವಲು ಇಡಲು ಆಪ್‌ಗಳನ್ನುಬಳಸುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿ ಅಂತಹ ಆಪ್‌ಗಳನ್ನು ಪಟ್ಟಿ ಮಾಡಿದ್ದರು. ಸಿಂಗಪುರ್‌, ಇಸ್ರೇಲ್‌ ಐಸ್‌ಲ್ಯಾಂಡ್‌, ಸೇರಿದಂತೆ ಹಲವು ದೇಶಗಳು ಈ ಪಟ್ಟಿಯಲ್ಲಿದ್ದವು. ಭಾರತವೂ ಅದೇ ಸಾಲಿಗೆ ಸೇರಿದೆ ಎಂಬ ಅನುಮಾನ ಈಗ ವ್ಯಕ್ತವಾಗುತ್ತಿದೆ.

ಆರೋಗ್ಯ ಸೇತು ಅಭಿಯಾನ

ಫೇಸ್‌ಬುಕ್‌ಗಿಂತ ಅತ್ಯಂತ ವೇಗವಾಗಿ ಡೌನ್‌ ಲೋಡ್‌ ಮಾಡಿಕೊಳ್ಳಲಾಗಿರುವ ಆರೋಗ್ಯ ಸೇತು ಆಪ್‌ ಹೆಚ್ಚು ಬಳಕೆಯಾಗುತ್ತಿದೆ. ಇದುವರೆಗೂ 50 ಲಕ್ಷ ಡೌನ್‌ಲೋಡ್‌ಗಳಾಗಿವೆ. ಈಗಾಗಲೇ ನಿಮ್ಮ ಮೊಬೈಲ್‌ ಹಲವು ಬಾರಿ ಎಸ್ಸೆಮ್ಮೆಸ್‌ ಬಂದಿರಬಹುದು. ಈ ಮೇಲ್‌ ಬಂದಿರಬಹುದು. ಅಷ್ಟೇ ಅಲ್ಲದೆ ಅಜಯ್‌ದೇವಗನ್‌ರಂತಹ ನಟರು ಆರೊಗ್ಯ ಸೇತು ಒಂದು ಬಾಡಿಗಾರ್ಡ್‌ ಎಂಬಂತೆ ಪ್ರಚಾರ ಕೂಡ ಮಾಡುತ್ತಿದ್ದಾರೆ.

ಕಡ್ಡಾಯವಾಗಿ ಆರೋಗ್ಯಸೇತು ಇನ್ಸ್ಟಾಲ್‌ ಮಾಡಿಸುತ್ತಿರುವುದಕ್ಕೂ, ಹಲವು ತಜ್ಞರು ಮಾಹಿತಿ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತುತ್ತಿರುವುದಕ್ಕೂ, ಏಲಿಯಟ್‌ ಆಲ್ಡರ್ಸನ್‌ ಎತ್ತಿರುವ ಪ್ರಶ್ನೆಗಳು ನಿಜಕ್ಕೂ ಭಾರತ ಸರ್ಕಾರ ಈ ಆಪ್‌ ಅನ್ನು ನಾಗರಿಕರ ಮೇಲೆ ಕಣ್ಗಾವಲು ಇಡಲೆಂದೇ ಬಳಸುತ್ತಿದೆ ಎಂಬ ಅನುಮಾನವನ್ನು ಬಲಪಡಿಸುತ್ತಿದೆ.

ಈ ಹಿಂದೆ ಜಗತ್ತಿನ ಅತ್ಯಂತ ವಿಶಿಷ್ಟ ಸೇವೆ ಎಂದು ಬಣ್ಣಿಸಲಾದ ಆಧಾರ್‌ ಮಾಹಿತಿ ಸೋರಿಕೆಯ ವಿಷಯದಲ್ಲೂ ಭಾರತ ಸರ್ಕಾರವನ್ನು ಎಚ್ಚರಿಸಿದ್ದಲ್ಲದೆ, ಸಮರ್ಥನೆ ಮಾಡಿಕೊಂಡಾಗಲೆಲ್ಲಾ, ಮುಜುಗರಕ್ಕೆ ಈಡು ಮಾಡುವಂತೆ ಮಾಹಿತಿ ಬಹಿರಂಗ ಪಡಿಸಿ, ಲೋಪಗಳನ್ನು ಎತ್ತಿ ತೋರಿಸಿದ್ದು ಇದೇ ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್ಸನ್‌.

ಕೃಪೆ: ಟೆಕ್ ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...