Homeಮುಖಪುಟದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

- Advertisement -
- Advertisement -

ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಭಾರತ ಸರ್ಕಾರಕ್ಕೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸುವಂತೆ ಸವಾಲು ಹಾಕಿದ್ದಾರೆ.

ಮಂಗಳವಾರ ಈ ಕುರಿತು ಟ್ವೀಟ್‌ ಮಾಡಿದ ಏಲಿಯಟ್ ಆಲ್ಡರ್ಸನ್‌ ಸುರಕ್ಷತೆಯಲ್ಲಿ ಲೋಪವಿದೆ ಎಂದು ನ್ಯಾಷನಲ್‌ ಇನ್‌ಫಾರ್ಮ್ಯಾಟಿಕ್ಸ್‌ ಸೆಂಟರ್‌ಗೆ ಎಚ್ಚರಿಸಿದ್ದರು. ಜೊತೆಗೆ ರಾಹುಲ್‌ ಗಾಂಧಿ ಅನುಮಾನ ಸತ್ಯವೆಂದು ಟ್ವೀಟ್‌ ಮಾಡುವ ಮೂಲಕ ಆರೋಗ್ಯ ಸೇತು ಒಂದು ಕಣ್ಗಾವಲು ವ್ಯವಸ್ಥೆ ಎಂಬ ಅನುಮಾನಕ್ಕೆ ಇಂಬು ನೀಡಿದ್ದರು.

ಬೆನ್ನಲ್ಲೇ ಸಚಿವ ರವಿಶಂಕರ್‌ ಪ್ರಸಾದ್‌ ಯಾವುದೇ ಲೋಪವಿಲ್ಲದ ಎಂದು ಹೇಳಿಕೆ ನೀಡಿ ಸಮರ್ಥಿಸಿಕೊಂಡಿದ್ದರು. ಆದರೆ ಏಲಿಯಟ್‌ ಆಲ್ಡರ್ಸನ್‌ ಬುಧವಾರ ಪ್ರಕಟಿಸಿದ ಸರಣಿ ಟ್ವೀಟ್‌ಗಳಲ್ಲಿ ಭಾರತ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ಏಲಿಯಟ್‌ ಆಲ್ಡರ್‌ಸನ್‌ ಸವಾಲುಗಳು

ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ ಎಂದಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು.

ಮುಂದುವರೆದು ಈ ಆಪ್‌ನ ಹಿಂದಿನ ಆವೃತ್ತಿಯಲ್ಲಿ ಸ್ವತಃ ಏಲಿಯಟ್‌ ಲೋಕಲ್‌ ಡಾಟಾಬೇಸ್‌ನಿಂದ ಯಾವುದೇ ಮಾಹಿತಿಯನ್ನು ಸುಲಭವಾಗಿ ಸಂಗ್ರಹಿಸಬಹುದು ಎಂಬುದನ್ನು ಕಂಡುಕೊಂಡಿದ್ದರು. ಮಂಗಳವಾರ ಕರೋನಾ ಸೋಂಕಿತರು, ಅನಾರೋಗ್ಯ ಪೀಡಿತರು, ತಮ್ಮ ಇಚ್ಛೆಯ ಪ್ರದೇಶದಲ್ಲಿ ಸ್ವಯಂ ತಪಾಸಣೆಗೆ ಒಳಪಟ್ಟವರ ಮಾಹಿತಿಯನ್ನು ನೋಡುವ ಅವಕಾಶವೂ ಇತ್ತು ಎಂದು ತಮ್ಮ ಟ್ವೀಟ್‌ನಲ್ಲಿ ವಿವರಿಸಿದ್ದಾರೆ. ಅಂದರೆ ಎಷ್ಟರ ಮಟ್ಟಿಗೆ ಮಾಹಿತಿ ಬಹಿರಂಗವಾಗಿತ್ತು ಎಂದರೆ ಪ್ರಧಾನಿ ಕಚೇರಿ ಅಥವಾ ಭಾರತೀಯ ಸಂಸತ್ತಿನಲ್ಲಿ ಯಾರು ಅನಾರೋಗ್ಯ ಪೀಡಿತರು ಎಂಬುದನ್ನು ತಿಳಿಯಬಹುದು ಎಂದಿದ್ದಾರೆ. ಅಂದರೆ ನಿರ್ದಿಷ್ಟವಾಗಿ ಇಂಥದ್ದೇ ಮನೆಯಲ್ಲಿ ಸೋಂಕು ತಗುಲಿದೆ ಎಂಬುದನ್ನು ಎಲ್ಲೋ ಕೂತಿರುವ ನನಗೆ ತಿಳಿಯಲು ಸಾಧ್ಯ ಎಂಬುದನ್ನು ವಿವರಿಸಿದ್ದರು.

ಅದರಂತೆ ಪ್ರಧಾನಿ ಕಚೇರಿಯಲ್ಲಿ 5 ಮಂದಿ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.

ಏಪ್ರಿಲ್‌ 4ರಿಂದ ಆರೋಗ್ಯ ಸೇತುವಿನಲ್ಲಿರುವ ಲೋಪಗಳನ್ನು ಗುರುತಿಸುತ್ತಾ ಬಂದಿರುವ ಏಲಿಯಟ್‌ ಆಲ್ಡರ್ಸನ್‌ ಬಳಕೆದಾರರ ಅಂದರೆ ಭಾರತೀಯ ನಾಗರಿಕರ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ದೀರ್ಘ ಲೇಖನ ಬರೆಯುವುದಾಗಿಯೂ ಏಲಿಯಟ್‌ ತಮ್ಮ ಟ್ವೀಟ್‌ವೊಂದರಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಏಲಿಯಟ್‌ ಆಲ್ಡರ್ಸನ್‌ ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳು ಸೋಂಕು ಹರಡುವಿಕೆಯನ್ನು ಪತ್ತೆ ಮಾಡುವ ನೆಪದಲ್ಲಿ ಕಣ್ಗಾವಲು ಇಡಲು ಆಪ್‌ಗಳನ್ನುಬಳಸುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿ ಅಂತಹ ಆಪ್‌ಗಳನ್ನು ಪಟ್ಟಿ ಮಾಡಿದ್ದರು. ಸಿಂಗಪುರ್‌, ಇಸ್ರೇಲ್‌ ಐಸ್‌ಲ್ಯಾಂಡ್‌, ಸೇರಿದಂತೆ ಹಲವು ದೇಶಗಳು ಈ ಪಟ್ಟಿಯಲ್ಲಿದ್ದವು. ಭಾರತವೂ ಅದೇ ಸಾಲಿಗೆ ಸೇರಿದೆ ಎಂಬ ಅನುಮಾನ ಈಗ ವ್ಯಕ್ತವಾಗುತ್ತಿದೆ.

ಆರೋಗ್ಯ ಸೇತು ಅಭಿಯಾನ

ಫೇಸ್‌ಬುಕ್‌ಗಿಂತ ಅತ್ಯಂತ ವೇಗವಾಗಿ ಡೌನ್‌ ಲೋಡ್‌ ಮಾಡಿಕೊಳ್ಳಲಾಗಿರುವ ಆರೋಗ್ಯ ಸೇತು ಆಪ್‌ ಹೆಚ್ಚು ಬಳಕೆಯಾಗುತ್ತಿದೆ. ಇದುವರೆಗೂ 50 ಲಕ್ಷ ಡೌನ್‌ಲೋಡ್‌ಗಳಾಗಿವೆ. ಈಗಾಗಲೇ ನಿಮ್ಮ ಮೊಬೈಲ್‌ ಹಲವು ಬಾರಿ ಎಸ್ಸೆಮ್ಮೆಸ್‌ ಬಂದಿರಬಹುದು. ಈ ಮೇಲ್‌ ಬಂದಿರಬಹುದು. ಅಷ್ಟೇ ಅಲ್ಲದೆ ಅಜಯ್‌ದೇವಗನ್‌ರಂತಹ ನಟರು ಆರೊಗ್ಯ ಸೇತು ಒಂದು ಬಾಡಿಗಾರ್ಡ್‌ ಎಂಬಂತೆ ಪ್ರಚಾರ ಕೂಡ ಮಾಡುತ್ತಿದ್ದಾರೆ.

ಕಡ್ಡಾಯವಾಗಿ ಆರೋಗ್ಯಸೇತು ಇನ್ಸ್ಟಾಲ್‌ ಮಾಡಿಸುತ್ತಿರುವುದಕ್ಕೂ, ಹಲವು ತಜ್ಞರು ಮಾಹಿತಿ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತುತ್ತಿರುವುದಕ್ಕೂ, ಏಲಿಯಟ್‌ ಆಲ್ಡರ್ಸನ್‌ ಎತ್ತಿರುವ ಪ್ರಶ್ನೆಗಳು ನಿಜಕ್ಕೂ ಭಾರತ ಸರ್ಕಾರ ಈ ಆಪ್‌ ಅನ್ನು ನಾಗರಿಕರ ಮೇಲೆ ಕಣ್ಗಾವಲು ಇಡಲೆಂದೇ ಬಳಸುತ್ತಿದೆ ಎಂಬ ಅನುಮಾನವನ್ನು ಬಲಪಡಿಸುತ್ತಿದೆ.

ಈ ಹಿಂದೆ ಜಗತ್ತಿನ ಅತ್ಯಂತ ವಿಶಿಷ್ಟ ಸೇವೆ ಎಂದು ಬಣ್ಣಿಸಲಾದ ಆಧಾರ್‌ ಮಾಹಿತಿ ಸೋರಿಕೆಯ ವಿಷಯದಲ್ಲೂ ಭಾರತ ಸರ್ಕಾರವನ್ನು ಎಚ್ಚರಿಸಿದ್ದಲ್ಲದೆ, ಸಮರ್ಥನೆ ಮಾಡಿಕೊಂಡಾಗಲೆಲ್ಲಾ, ಮುಜುಗರಕ್ಕೆ ಈಡು ಮಾಡುವಂತೆ ಮಾಹಿತಿ ಬಹಿರಂಗ ಪಡಿಸಿ, ಲೋಪಗಳನ್ನು ಎತ್ತಿ ತೋರಿಸಿದ್ದು ಇದೇ ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್ಸನ್‌.

ಕೃಪೆ: ಟೆಕ್ ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...