Homeಮುಖಪುಟದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

- Advertisement -
- Advertisement -

ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಭಾರತ ಸರ್ಕಾರಕ್ಕೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸುವಂತೆ ಸವಾಲು ಹಾಕಿದ್ದಾರೆ.

ಮಂಗಳವಾರ ಈ ಕುರಿತು ಟ್ವೀಟ್‌ ಮಾಡಿದ ಏಲಿಯಟ್ ಆಲ್ಡರ್ಸನ್‌ ಸುರಕ್ಷತೆಯಲ್ಲಿ ಲೋಪವಿದೆ ಎಂದು ನ್ಯಾಷನಲ್‌ ಇನ್‌ಫಾರ್ಮ್ಯಾಟಿಕ್ಸ್‌ ಸೆಂಟರ್‌ಗೆ ಎಚ್ಚರಿಸಿದ್ದರು. ಜೊತೆಗೆ ರಾಹುಲ್‌ ಗಾಂಧಿ ಅನುಮಾನ ಸತ್ಯವೆಂದು ಟ್ವೀಟ್‌ ಮಾಡುವ ಮೂಲಕ ಆರೋಗ್ಯ ಸೇತು ಒಂದು ಕಣ್ಗಾವಲು ವ್ಯವಸ್ಥೆ ಎಂಬ ಅನುಮಾನಕ್ಕೆ ಇಂಬು ನೀಡಿದ್ದರು.

ಬೆನ್ನಲ್ಲೇ ಸಚಿವ ರವಿಶಂಕರ್‌ ಪ್ರಸಾದ್‌ ಯಾವುದೇ ಲೋಪವಿಲ್ಲದ ಎಂದು ಹೇಳಿಕೆ ನೀಡಿ ಸಮರ್ಥಿಸಿಕೊಂಡಿದ್ದರು. ಆದರೆ ಏಲಿಯಟ್‌ ಆಲ್ಡರ್ಸನ್‌ ಬುಧವಾರ ಪ್ರಕಟಿಸಿದ ಸರಣಿ ಟ್ವೀಟ್‌ಗಳಲ್ಲಿ ಭಾರತ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ಏಲಿಯಟ್‌ ಆಲ್ಡರ್‌ಸನ್‌ ಸವಾಲುಗಳು

ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ ಎಂದಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು.

ಮುಂದುವರೆದು ಈ ಆಪ್‌ನ ಹಿಂದಿನ ಆವೃತ್ತಿಯಲ್ಲಿ ಸ್ವತಃ ಏಲಿಯಟ್‌ ಲೋಕಲ್‌ ಡಾಟಾಬೇಸ್‌ನಿಂದ ಯಾವುದೇ ಮಾಹಿತಿಯನ್ನು ಸುಲಭವಾಗಿ ಸಂಗ್ರಹಿಸಬಹುದು ಎಂಬುದನ್ನು ಕಂಡುಕೊಂಡಿದ್ದರು. ಮಂಗಳವಾರ ಕರೋನಾ ಸೋಂಕಿತರು, ಅನಾರೋಗ್ಯ ಪೀಡಿತರು, ತಮ್ಮ ಇಚ್ಛೆಯ ಪ್ರದೇಶದಲ್ಲಿ ಸ್ವಯಂ ತಪಾಸಣೆಗೆ ಒಳಪಟ್ಟವರ ಮಾಹಿತಿಯನ್ನು ನೋಡುವ ಅವಕಾಶವೂ ಇತ್ತು ಎಂದು ತಮ್ಮ ಟ್ವೀಟ್‌ನಲ್ಲಿ ವಿವರಿಸಿದ್ದಾರೆ. ಅಂದರೆ ಎಷ್ಟರ ಮಟ್ಟಿಗೆ ಮಾಹಿತಿ ಬಹಿರಂಗವಾಗಿತ್ತು ಎಂದರೆ ಪ್ರಧಾನಿ ಕಚೇರಿ ಅಥವಾ ಭಾರತೀಯ ಸಂಸತ್ತಿನಲ್ಲಿ ಯಾರು ಅನಾರೋಗ್ಯ ಪೀಡಿತರು ಎಂಬುದನ್ನು ತಿಳಿಯಬಹುದು ಎಂದಿದ್ದಾರೆ. ಅಂದರೆ ನಿರ್ದಿಷ್ಟವಾಗಿ ಇಂಥದ್ದೇ ಮನೆಯಲ್ಲಿ ಸೋಂಕು ತಗುಲಿದೆ ಎಂಬುದನ್ನು ಎಲ್ಲೋ ಕೂತಿರುವ ನನಗೆ ತಿಳಿಯಲು ಸಾಧ್ಯ ಎಂಬುದನ್ನು ವಿವರಿಸಿದ್ದರು.

ಅದರಂತೆ ಪ್ರಧಾನಿ ಕಚೇರಿಯಲ್ಲಿ 5 ಮಂದಿ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.

ಏಪ್ರಿಲ್‌ 4ರಿಂದ ಆರೋಗ್ಯ ಸೇತುವಿನಲ್ಲಿರುವ ಲೋಪಗಳನ್ನು ಗುರುತಿಸುತ್ತಾ ಬಂದಿರುವ ಏಲಿಯಟ್‌ ಆಲ್ಡರ್ಸನ್‌ ಬಳಕೆದಾರರ ಅಂದರೆ ಭಾರತೀಯ ನಾಗರಿಕರ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ದೀರ್ಘ ಲೇಖನ ಬರೆಯುವುದಾಗಿಯೂ ಏಲಿಯಟ್‌ ತಮ್ಮ ಟ್ವೀಟ್‌ವೊಂದರಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಏಲಿಯಟ್‌ ಆಲ್ಡರ್ಸನ್‌ ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳು ಸೋಂಕು ಹರಡುವಿಕೆಯನ್ನು ಪತ್ತೆ ಮಾಡುವ ನೆಪದಲ್ಲಿ ಕಣ್ಗಾವಲು ಇಡಲು ಆಪ್‌ಗಳನ್ನುಬಳಸುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿ ಅಂತಹ ಆಪ್‌ಗಳನ್ನು ಪಟ್ಟಿ ಮಾಡಿದ್ದರು. ಸಿಂಗಪುರ್‌, ಇಸ್ರೇಲ್‌ ಐಸ್‌ಲ್ಯಾಂಡ್‌, ಸೇರಿದಂತೆ ಹಲವು ದೇಶಗಳು ಈ ಪಟ್ಟಿಯಲ್ಲಿದ್ದವು. ಭಾರತವೂ ಅದೇ ಸಾಲಿಗೆ ಸೇರಿದೆ ಎಂಬ ಅನುಮಾನ ಈಗ ವ್ಯಕ್ತವಾಗುತ್ತಿದೆ.

ಆರೋಗ್ಯ ಸೇತು ಅಭಿಯಾನ

ಫೇಸ್‌ಬುಕ್‌ಗಿಂತ ಅತ್ಯಂತ ವೇಗವಾಗಿ ಡೌನ್‌ ಲೋಡ್‌ ಮಾಡಿಕೊಳ್ಳಲಾಗಿರುವ ಆರೋಗ್ಯ ಸೇತು ಆಪ್‌ ಹೆಚ್ಚು ಬಳಕೆಯಾಗುತ್ತಿದೆ. ಇದುವರೆಗೂ 50 ಲಕ್ಷ ಡೌನ್‌ಲೋಡ್‌ಗಳಾಗಿವೆ. ಈಗಾಗಲೇ ನಿಮ್ಮ ಮೊಬೈಲ್‌ ಹಲವು ಬಾರಿ ಎಸ್ಸೆಮ್ಮೆಸ್‌ ಬಂದಿರಬಹುದು. ಈ ಮೇಲ್‌ ಬಂದಿರಬಹುದು. ಅಷ್ಟೇ ಅಲ್ಲದೆ ಅಜಯ್‌ದೇವಗನ್‌ರಂತಹ ನಟರು ಆರೊಗ್ಯ ಸೇತು ಒಂದು ಬಾಡಿಗಾರ್ಡ್‌ ಎಂಬಂತೆ ಪ್ರಚಾರ ಕೂಡ ಮಾಡುತ್ತಿದ್ದಾರೆ.

ಕಡ್ಡಾಯವಾಗಿ ಆರೋಗ್ಯಸೇತು ಇನ್ಸ್ಟಾಲ್‌ ಮಾಡಿಸುತ್ತಿರುವುದಕ್ಕೂ, ಹಲವು ತಜ್ಞರು ಮಾಹಿತಿ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತುತ್ತಿರುವುದಕ್ಕೂ, ಏಲಿಯಟ್‌ ಆಲ್ಡರ್ಸನ್‌ ಎತ್ತಿರುವ ಪ್ರಶ್ನೆಗಳು ನಿಜಕ್ಕೂ ಭಾರತ ಸರ್ಕಾರ ಈ ಆಪ್‌ ಅನ್ನು ನಾಗರಿಕರ ಮೇಲೆ ಕಣ್ಗಾವಲು ಇಡಲೆಂದೇ ಬಳಸುತ್ತಿದೆ ಎಂಬ ಅನುಮಾನವನ್ನು ಬಲಪಡಿಸುತ್ತಿದೆ.

ಈ ಹಿಂದೆ ಜಗತ್ತಿನ ಅತ್ಯಂತ ವಿಶಿಷ್ಟ ಸೇವೆ ಎಂದು ಬಣ್ಣಿಸಲಾದ ಆಧಾರ್‌ ಮಾಹಿತಿ ಸೋರಿಕೆಯ ವಿಷಯದಲ್ಲೂ ಭಾರತ ಸರ್ಕಾರವನ್ನು ಎಚ್ಚರಿಸಿದ್ದಲ್ಲದೆ, ಸಮರ್ಥನೆ ಮಾಡಿಕೊಂಡಾಗಲೆಲ್ಲಾ, ಮುಜುಗರಕ್ಕೆ ಈಡು ಮಾಡುವಂತೆ ಮಾಹಿತಿ ಬಹಿರಂಗ ಪಡಿಸಿ, ಲೋಪಗಳನ್ನು ಎತ್ತಿ ತೋರಿಸಿದ್ದು ಇದೇ ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್ಸನ್‌.

ಕೃಪೆ: ಟೆಕ್ ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...