Homeಮುಖಪುಟದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

- Advertisement -
- Advertisement -

ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಭಾರತ ಸರ್ಕಾರಕ್ಕೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸುವಂತೆ ಸವಾಲು ಹಾಕಿದ್ದಾರೆ.

ಮಂಗಳವಾರ ಈ ಕುರಿತು ಟ್ವೀಟ್‌ ಮಾಡಿದ ಏಲಿಯಟ್ ಆಲ್ಡರ್ಸನ್‌ ಸುರಕ್ಷತೆಯಲ್ಲಿ ಲೋಪವಿದೆ ಎಂದು ನ್ಯಾಷನಲ್‌ ಇನ್‌ಫಾರ್ಮ್ಯಾಟಿಕ್ಸ್‌ ಸೆಂಟರ್‌ಗೆ ಎಚ್ಚರಿಸಿದ್ದರು. ಜೊತೆಗೆ ರಾಹುಲ್‌ ಗಾಂಧಿ ಅನುಮಾನ ಸತ್ಯವೆಂದು ಟ್ವೀಟ್‌ ಮಾಡುವ ಮೂಲಕ ಆರೋಗ್ಯ ಸೇತು ಒಂದು ಕಣ್ಗಾವಲು ವ್ಯವಸ್ಥೆ ಎಂಬ ಅನುಮಾನಕ್ಕೆ ಇಂಬು ನೀಡಿದ್ದರು.

ಬೆನ್ನಲ್ಲೇ ಸಚಿವ ರವಿಶಂಕರ್‌ ಪ್ರಸಾದ್‌ ಯಾವುದೇ ಲೋಪವಿಲ್ಲದ ಎಂದು ಹೇಳಿಕೆ ನೀಡಿ ಸಮರ್ಥಿಸಿಕೊಂಡಿದ್ದರು. ಆದರೆ ಏಲಿಯಟ್‌ ಆಲ್ಡರ್ಸನ್‌ ಬುಧವಾರ ಪ್ರಕಟಿಸಿದ ಸರಣಿ ಟ್ವೀಟ್‌ಗಳಲ್ಲಿ ಭಾರತ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ಏಲಿಯಟ್‌ ಆಲ್ಡರ್‌ಸನ್‌ ಸವಾಲುಗಳು

ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ ಎಂದಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು.

ಮುಂದುವರೆದು ಈ ಆಪ್‌ನ ಹಿಂದಿನ ಆವೃತ್ತಿಯಲ್ಲಿ ಸ್ವತಃ ಏಲಿಯಟ್‌ ಲೋಕಲ್‌ ಡಾಟಾಬೇಸ್‌ನಿಂದ ಯಾವುದೇ ಮಾಹಿತಿಯನ್ನು ಸುಲಭವಾಗಿ ಸಂಗ್ರಹಿಸಬಹುದು ಎಂಬುದನ್ನು ಕಂಡುಕೊಂಡಿದ್ದರು. ಮಂಗಳವಾರ ಕರೋನಾ ಸೋಂಕಿತರು, ಅನಾರೋಗ್ಯ ಪೀಡಿತರು, ತಮ್ಮ ಇಚ್ಛೆಯ ಪ್ರದೇಶದಲ್ಲಿ ಸ್ವಯಂ ತಪಾಸಣೆಗೆ ಒಳಪಟ್ಟವರ ಮಾಹಿತಿಯನ್ನು ನೋಡುವ ಅವಕಾಶವೂ ಇತ್ತು ಎಂದು ತಮ್ಮ ಟ್ವೀಟ್‌ನಲ್ಲಿ ವಿವರಿಸಿದ್ದಾರೆ. ಅಂದರೆ ಎಷ್ಟರ ಮಟ್ಟಿಗೆ ಮಾಹಿತಿ ಬಹಿರಂಗವಾಗಿತ್ತು ಎಂದರೆ ಪ್ರಧಾನಿ ಕಚೇರಿ ಅಥವಾ ಭಾರತೀಯ ಸಂಸತ್ತಿನಲ್ಲಿ ಯಾರು ಅನಾರೋಗ್ಯ ಪೀಡಿತರು ಎಂಬುದನ್ನು ತಿಳಿಯಬಹುದು ಎಂದಿದ್ದಾರೆ. ಅಂದರೆ ನಿರ್ದಿಷ್ಟವಾಗಿ ಇಂಥದ್ದೇ ಮನೆಯಲ್ಲಿ ಸೋಂಕು ತಗುಲಿದೆ ಎಂಬುದನ್ನು ಎಲ್ಲೋ ಕೂತಿರುವ ನನಗೆ ತಿಳಿಯಲು ಸಾಧ್ಯ ಎಂಬುದನ್ನು ವಿವರಿಸಿದ್ದರು.

ಅದರಂತೆ ಪ್ರಧಾನಿ ಕಚೇರಿಯಲ್ಲಿ 5 ಮಂದಿ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.

ಏಪ್ರಿಲ್‌ 4ರಿಂದ ಆರೋಗ್ಯ ಸೇತುವಿನಲ್ಲಿರುವ ಲೋಪಗಳನ್ನು ಗುರುತಿಸುತ್ತಾ ಬಂದಿರುವ ಏಲಿಯಟ್‌ ಆಲ್ಡರ್ಸನ್‌ ಬಳಕೆದಾರರ ಅಂದರೆ ಭಾರತೀಯ ನಾಗರಿಕರ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ದೀರ್ಘ ಲೇಖನ ಬರೆಯುವುದಾಗಿಯೂ ಏಲಿಯಟ್‌ ತಮ್ಮ ಟ್ವೀಟ್‌ವೊಂದರಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಏಲಿಯಟ್‌ ಆಲ್ಡರ್ಸನ್‌ ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳು ಸೋಂಕು ಹರಡುವಿಕೆಯನ್ನು ಪತ್ತೆ ಮಾಡುವ ನೆಪದಲ್ಲಿ ಕಣ್ಗಾವಲು ಇಡಲು ಆಪ್‌ಗಳನ್ನುಬಳಸುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿ ಅಂತಹ ಆಪ್‌ಗಳನ್ನು ಪಟ್ಟಿ ಮಾಡಿದ್ದರು. ಸಿಂಗಪುರ್‌, ಇಸ್ರೇಲ್‌ ಐಸ್‌ಲ್ಯಾಂಡ್‌, ಸೇರಿದಂತೆ ಹಲವು ದೇಶಗಳು ಈ ಪಟ್ಟಿಯಲ್ಲಿದ್ದವು. ಭಾರತವೂ ಅದೇ ಸಾಲಿಗೆ ಸೇರಿದೆ ಎಂಬ ಅನುಮಾನ ಈಗ ವ್ಯಕ್ತವಾಗುತ್ತಿದೆ.

ಆರೋಗ್ಯ ಸೇತು ಅಭಿಯಾನ

ಫೇಸ್‌ಬುಕ್‌ಗಿಂತ ಅತ್ಯಂತ ವೇಗವಾಗಿ ಡೌನ್‌ ಲೋಡ್‌ ಮಾಡಿಕೊಳ್ಳಲಾಗಿರುವ ಆರೋಗ್ಯ ಸೇತು ಆಪ್‌ ಹೆಚ್ಚು ಬಳಕೆಯಾಗುತ್ತಿದೆ. ಇದುವರೆಗೂ 50 ಲಕ್ಷ ಡೌನ್‌ಲೋಡ್‌ಗಳಾಗಿವೆ. ಈಗಾಗಲೇ ನಿಮ್ಮ ಮೊಬೈಲ್‌ ಹಲವು ಬಾರಿ ಎಸ್ಸೆಮ್ಮೆಸ್‌ ಬಂದಿರಬಹುದು. ಈ ಮೇಲ್‌ ಬಂದಿರಬಹುದು. ಅಷ್ಟೇ ಅಲ್ಲದೆ ಅಜಯ್‌ದೇವಗನ್‌ರಂತಹ ನಟರು ಆರೊಗ್ಯ ಸೇತು ಒಂದು ಬಾಡಿಗಾರ್ಡ್‌ ಎಂಬಂತೆ ಪ್ರಚಾರ ಕೂಡ ಮಾಡುತ್ತಿದ್ದಾರೆ.

ಕಡ್ಡಾಯವಾಗಿ ಆರೋಗ್ಯಸೇತು ಇನ್ಸ್ಟಾಲ್‌ ಮಾಡಿಸುತ್ತಿರುವುದಕ್ಕೂ, ಹಲವು ತಜ್ಞರು ಮಾಹಿತಿ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತುತ್ತಿರುವುದಕ್ಕೂ, ಏಲಿಯಟ್‌ ಆಲ್ಡರ್ಸನ್‌ ಎತ್ತಿರುವ ಪ್ರಶ್ನೆಗಳು ನಿಜಕ್ಕೂ ಭಾರತ ಸರ್ಕಾರ ಈ ಆಪ್‌ ಅನ್ನು ನಾಗರಿಕರ ಮೇಲೆ ಕಣ್ಗಾವಲು ಇಡಲೆಂದೇ ಬಳಸುತ್ತಿದೆ ಎಂಬ ಅನುಮಾನವನ್ನು ಬಲಪಡಿಸುತ್ತಿದೆ.

ಈ ಹಿಂದೆ ಜಗತ್ತಿನ ಅತ್ಯಂತ ವಿಶಿಷ್ಟ ಸೇವೆ ಎಂದು ಬಣ್ಣಿಸಲಾದ ಆಧಾರ್‌ ಮಾಹಿತಿ ಸೋರಿಕೆಯ ವಿಷಯದಲ್ಲೂ ಭಾರತ ಸರ್ಕಾರವನ್ನು ಎಚ್ಚರಿಸಿದ್ದಲ್ಲದೆ, ಸಮರ್ಥನೆ ಮಾಡಿಕೊಂಡಾಗಲೆಲ್ಲಾ, ಮುಜುಗರಕ್ಕೆ ಈಡು ಮಾಡುವಂತೆ ಮಾಹಿತಿ ಬಹಿರಂಗ ಪಡಿಸಿ, ಲೋಪಗಳನ್ನು ಎತ್ತಿ ತೋರಿಸಿದ್ದು ಇದೇ ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್ಸನ್‌.

ಕೃಪೆ: ಟೆಕ್ ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...