Homeಮುಖಪುಟದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

- Advertisement -
- Advertisement -

ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಭಾರತ ಸರ್ಕಾರಕ್ಕೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸುವಂತೆ ಸವಾಲು ಹಾಕಿದ್ದಾರೆ.

ಮಂಗಳವಾರ ಈ ಕುರಿತು ಟ್ವೀಟ್‌ ಮಾಡಿದ ಏಲಿಯಟ್ ಆಲ್ಡರ್ಸನ್‌ ಸುರಕ್ಷತೆಯಲ್ಲಿ ಲೋಪವಿದೆ ಎಂದು ನ್ಯಾಷನಲ್‌ ಇನ್‌ಫಾರ್ಮ್ಯಾಟಿಕ್ಸ್‌ ಸೆಂಟರ್‌ಗೆ ಎಚ್ಚರಿಸಿದ್ದರು. ಜೊತೆಗೆ ರಾಹುಲ್‌ ಗಾಂಧಿ ಅನುಮಾನ ಸತ್ಯವೆಂದು ಟ್ವೀಟ್‌ ಮಾಡುವ ಮೂಲಕ ಆರೋಗ್ಯ ಸೇತು ಒಂದು ಕಣ್ಗಾವಲು ವ್ಯವಸ್ಥೆ ಎಂಬ ಅನುಮಾನಕ್ಕೆ ಇಂಬು ನೀಡಿದ್ದರು.

ಬೆನ್ನಲ್ಲೇ ಸಚಿವ ರವಿಶಂಕರ್‌ ಪ್ರಸಾದ್‌ ಯಾವುದೇ ಲೋಪವಿಲ್ಲದ ಎಂದು ಹೇಳಿಕೆ ನೀಡಿ ಸಮರ್ಥಿಸಿಕೊಂಡಿದ್ದರು. ಆದರೆ ಏಲಿಯಟ್‌ ಆಲ್ಡರ್ಸನ್‌ ಬುಧವಾರ ಪ್ರಕಟಿಸಿದ ಸರಣಿ ಟ್ವೀಟ್‌ಗಳಲ್ಲಿ ಭಾರತ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ಏಲಿಯಟ್‌ ಆಲ್ಡರ್‌ಸನ್‌ ಸವಾಲುಗಳು

ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ ಎಂದಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು.

ಮುಂದುವರೆದು ಈ ಆಪ್‌ನ ಹಿಂದಿನ ಆವೃತ್ತಿಯಲ್ಲಿ ಸ್ವತಃ ಏಲಿಯಟ್‌ ಲೋಕಲ್‌ ಡಾಟಾಬೇಸ್‌ನಿಂದ ಯಾವುದೇ ಮಾಹಿತಿಯನ್ನು ಸುಲಭವಾಗಿ ಸಂಗ್ರಹಿಸಬಹುದು ಎಂಬುದನ್ನು ಕಂಡುಕೊಂಡಿದ್ದರು. ಮಂಗಳವಾರ ಕರೋನಾ ಸೋಂಕಿತರು, ಅನಾರೋಗ್ಯ ಪೀಡಿತರು, ತಮ್ಮ ಇಚ್ಛೆಯ ಪ್ರದೇಶದಲ್ಲಿ ಸ್ವಯಂ ತಪಾಸಣೆಗೆ ಒಳಪಟ್ಟವರ ಮಾಹಿತಿಯನ್ನು ನೋಡುವ ಅವಕಾಶವೂ ಇತ್ತು ಎಂದು ತಮ್ಮ ಟ್ವೀಟ್‌ನಲ್ಲಿ ವಿವರಿಸಿದ್ದಾರೆ. ಅಂದರೆ ಎಷ್ಟರ ಮಟ್ಟಿಗೆ ಮಾಹಿತಿ ಬಹಿರಂಗವಾಗಿತ್ತು ಎಂದರೆ ಪ್ರಧಾನಿ ಕಚೇರಿ ಅಥವಾ ಭಾರತೀಯ ಸಂಸತ್ತಿನಲ್ಲಿ ಯಾರು ಅನಾರೋಗ್ಯ ಪೀಡಿತರು ಎಂಬುದನ್ನು ತಿಳಿಯಬಹುದು ಎಂದಿದ್ದಾರೆ. ಅಂದರೆ ನಿರ್ದಿಷ್ಟವಾಗಿ ಇಂಥದ್ದೇ ಮನೆಯಲ್ಲಿ ಸೋಂಕು ತಗುಲಿದೆ ಎಂಬುದನ್ನು ಎಲ್ಲೋ ಕೂತಿರುವ ನನಗೆ ತಿಳಿಯಲು ಸಾಧ್ಯ ಎಂಬುದನ್ನು ವಿವರಿಸಿದ್ದರು.

ಅದರಂತೆ ಪ್ರಧಾನಿ ಕಚೇರಿಯಲ್ಲಿ 5 ಮಂದಿ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.

ಏಪ್ರಿಲ್‌ 4ರಿಂದ ಆರೋಗ್ಯ ಸೇತುವಿನಲ್ಲಿರುವ ಲೋಪಗಳನ್ನು ಗುರುತಿಸುತ್ತಾ ಬಂದಿರುವ ಏಲಿಯಟ್‌ ಆಲ್ಡರ್ಸನ್‌ ಬಳಕೆದಾರರ ಅಂದರೆ ಭಾರತೀಯ ನಾಗರಿಕರ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ದೀರ್ಘ ಲೇಖನ ಬರೆಯುವುದಾಗಿಯೂ ಏಲಿಯಟ್‌ ತಮ್ಮ ಟ್ವೀಟ್‌ವೊಂದರಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಏಲಿಯಟ್‌ ಆಲ್ಡರ್ಸನ್‌ ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳು ಸೋಂಕು ಹರಡುವಿಕೆಯನ್ನು ಪತ್ತೆ ಮಾಡುವ ನೆಪದಲ್ಲಿ ಕಣ್ಗಾವಲು ಇಡಲು ಆಪ್‌ಗಳನ್ನುಬಳಸುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿ ಅಂತಹ ಆಪ್‌ಗಳನ್ನು ಪಟ್ಟಿ ಮಾಡಿದ್ದರು. ಸಿಂಗಪುರ್‌, ಇಸ್ರೇಲ್‌ ಐಸ್‌ಲ್ಯಾಂಡ್‌, ಸೇರಿದಂತೆ ಹಲವು ದೇಶಗಳು ಈ ಪಟ್ಟಿಯಲ್ಲಿದ್ದವು. ಭಾರತವೂ ಅದೇ ಸಾಲಿಗೆ ಸೇರಿದೆ ಎಂಬ ಅನುಮಾನ ಈಗ ವ್ಯಕ್ತವಾಗುತ್ತಿದೆ.

ಆರೋಗ್ಯ ಸೇತು ಅಭಿಯಾನ

ಫೇಸ್‌ಬುಕ್‌ಗಿಂತ ಅತ್ಯಂತ ವೇಗವಾಗಿ ಡೌನ್‌ ಲೋಡ್‌ ಮಾಡಿಕೊಳ್ಳಲಾಗಿರುವ ಆರೋಗ್ಯ ಸೇತು ಆಪ್‌ ಹೆಚ್ಚು ಬಳಕೆಯಾಗುತ್ತಿದೆ. ಇದುವರೆಗೂ 50 ಲಕ್ಷ ಡೌನ್‌ಲೋಡ್‌ಗಳಾಗಿವೆ. ಈಗಾಗಲೇ ನಿಮ್ಮ ಮೊಬೈಲ್‌ ಹಲವು ಬಾರಿ ಎಸ್ಸೆಮ್ಮೆಸ್‌ ಬಂದಿರಬಹುದು. ಈ ಮೇಲ್‌ ಬಂದಿರಬಹುದು. ಅಷ್ಟೇ ಅಲ್ಲದೆ ಅಜಯ್‌ದೇವಗನ್‌ರಂತಹ ನಟರು ಆರೊಗ್ಯ ಸೇತು ಒಂದು ಬಾಡಿಗಾರ್ಡ್‌ ಎಂಬಂತೆ ಪ್ರಚಾರ ಕೂಡ ಮಾಡುತ್ತಿದ್ದಾರೆ.

ಕಡ್ಡಾಯವಾಗಿ ಆರೋಗ್ಯಸೇತು ಇನ್ಸ್ಟಾಲ್‌ ಮಾಡಿಸುತ್ತಿರುವುದಕ್ಕೂ, ಹಲವು ತಜ್ಞರು ಮಾಹಿತಿ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತುತ್ತಿರುವುದಕ್ಕೂ, ಏಲಿಯಟ್‌ ಆಲ್ಡರ್ಸನ್‌ ಎತ್ತಿರುವ ಪ್ರಶ್ನೆಗಳು ನಿಜಕ್ಕೂ ಭಾರತ ಸರ್ಕಾರ ಈ ಆಪ್‌ ಅನ್ನು ನಾಗರಿಕರ ಮೇಲೆ ಕಣ್ಗಾವಲು ಇಡಲೆಂದೇ ಬಳಸುತ್ತಿದೆ ಎಂಬ ಅನುಮಾನವನ್ನು ಬಲಪಡಿಸುತ್ತಿದೆ.

ಈ ಹಿಂದೆ ಜಗತ್ತಿನ ಅತ್ಯಂತ ವಿಶಿಷ್ಟ ಸೇವೆ ಎಂದು ಬಣ್ಣಿಸಲಾದ ಆಧಾರ್‌ ಮಾಹಿತಿ ಸೋರಿಕೆಯ ವಿಷಯದಲ್ಲೂ ಭಾರತ ಸರ್ಕಾರವನ್ನು ಎಚ್ಚರಿಸಿದ್ದಲ್ಲದೆ, ಸಮರ್ಥನೆ ಮಾಡಿಕೊಂಡಾಗಲೆಲ್ಲಾ, ಮುಜುಗರಕ್ಕೆ ಈಡು ಮಾಡುವಂತೆ ಮಾಹಿತಿ ಬಹಿರಂಗ ಪಡಿಸಿ, ಲೋಪಗಳನ್ನು ಎತ್ತಿ ತೋರಿಸಿದ್ದು ಇದೇ ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್ಸನ್‌.

ಕೃಪೆ: ಟೆಕ್ ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...