Homeಮುಖಪುಟದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

- Advertisement -
- Advertisement -

ಫ್ರೆಂಚ್‌ ಮೂಲದ ಹ್ಯಾಕರ್‌, ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್‌ಸನ್‌ ಭಾರತ ಸರ್ಕಾರಕ್ಕೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸುವಂತೆ ಸವಾಲು ಹಾಕಿದ್ದಾರೆ.

ಮಂಗಳವಾರ ಈ ಕುರಿತು ಟ್ವೀಟ್‌ ಮಾಡಿದ ಏಲಿಯಟ್ ಆಲ್ಡರ್ಸನ್‌ ಸುರಕ್ಷತೆಯಲ್ಲಿ ಲೋಪವಿದೆ ಎಂದು ನ್ಯಾಷನಲ್‌ ಇನ್‌ಫಾರ್ಮ್ಯಾಟಿಕ್ಸ್‌ ಸೆಂಟರ್‌ಗೆ ಎಚ್ಚರಿಸಿದ್ದರು. ಜೊತೆಗೆ ರಾಹುಲ್‌ ಗಾಂಧಿ ಅನುಮಾನ ಸತ್ಯವೆಂದು ಟ್ವೀಟ್‌ ಮಾಡುವ ಮೂಲಕ ಆರೋಗ್ಯ ಸೇತು ಒಂದು ಕಣ್ಗಾವಲು ವ್ಯವಸ್ಥೆ ಎಂಬ ಅನುಮಾನಕ್ಕೆ ಇಂಬು ನೀಡಿದ್ದರು.

ಬೆನ್ನಲ್ಲೇ ಸಚಿವ ರವಿಶಂಕರ್‌ ಪ್ರಸಾದ್‌ ಯಾವುದೇ ಲೋಪವಿಲ್ಲದ ಎಂದು ಹೇಳಿಕೆ ನೀಡಿ ಸಮರ್ಥಿಸಿಕೊಂಡಿದ್ದರು. ಆದರೆ ಏಲಿಯಟ್‌ ಆಲ್ಡರ್ಸನ್‌ ಬುಧವಾರ ಪ್ರಕಟಿಸಿದ ಸರಣಿ ಟ್ವೀಟ್‌ಗಳಲ್ಲಿ ಭಾರತ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ಏಲಿಯಟ್‌ ಆಲ್ಡರ್‌ಸನ್‌ ಸವಾಲುಗಳು

ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಮುಕ್ತವಾಗಿರಬೇಕು. ನೀವು ನಿಮ್ಮ ದೇಶದ ಪ್ರಜೆಗಳಿಗೆ ಕಡ್ಡಾಯವಾಗಿ ಆಪ್‌ ಇನ್‌ಸ್ಟಾಲ್‌ ಮಾಡಿಕೊಳ್ಳಲು ಹೇಳುತ್ತಿರುವಾಗ, ಈ ಆಪ್‌ ಏನು ಮಾಡುತ್ತಿದೆ ಎಂಬುದನ್ನು ಅರಿಯುವ ಹಕ್ಕಿದೆ. ನಿಮಗೆ ನಿಜಕ್ಕೂ ದೇಶ ಪ್ರೇಮವಿದ್ದರೆ ಆರೋಗ್ಯ ಸೇತು ಆಪ್‌ನ ಸೋರ್ಸ್‌ ಕೋಡ್‌ ಪ್ರಕಟಿಸಿ ಎಂದಿದ್ದಾರೆ.

ಸೋರ್ಸ್‌ ಆಪ್‌ನ ವಿನ್ಯಾಸವನ್ನು ರೂಪಿಸಲು ಬಳಸುವ ನಿರ್ದೇಶನಗಳ ಒಟ್ಟು ಗುಚ್ಚ. ಇದೇ ಆಪ್‌ ಕಾರ್ಯವಿಧಾನವನ್ನು ಬಿಚ್ಚಿಡುತ್ತದೆ. ಅದನ್ನ ಸರ್ಕಾರ ಮುಚ್ಚಿಡುತ್ತಿದೆ ಎಂಬುದು ಏಲಿಯಟ್‌ ಆಲ್ಡರ್ಸನ್‌ ತಕರಾರು.

ಮುಂದುವರೆದು ಈ ಆಪ್‌ನ ಹಿಂದಿನ ಆವೃತ್ತಿಯಲ್ಲಿ ಸ್ವತಃ ಏಲಿಯಟ್‌ ಲೋಕಲ್‌ ಡಾಟಾಬೇಸ್‌ನಿಂದ ಯಾವುದೇ ಮಾಹಿತಿಯನ್ನು ಸುಲಭವಾಗಿ ಸಂಗ್ರಹಿಸಬಹುದು ಎಂಬುದನ್ನು ಕಂಡುಕೊಂಡಿದ್ದರು. ಮಂಗಳವಾರ ಕರೋನಾ ಸೋಂಕಿತರು, ಅನಾರೋಗ್ಯ ಪೀಡಿತರು, ತಮ್ಮ ಇಚ್ಛೆಯ ಪ್ರದೇಶದಲ್ಲಿ ಸ್ವಯಂ ತಪಾಸಣೆಗೆ ಒಳಪಟ್ಟವರ ಮಾಹಿತಿಯನ್ನು ನೋಡುವ ಅವಕಾಶವೂ ಇತ್ತು ಎಂದು ತಮ್ಮ ಟ್ವೀಟ್‌ನಲ್ಲಿ ವಿವರಿಸಿದ್ದಾರೆ. ಅಂದರೆ ಎಷ್ಟರ ಮಟ್ಟಿಗೆ ಮಾಹಿತಿ ಬಹಿರಂಗವಾಗಿತ್ತು ಎಂದರೆ ಪ್ರಧಾನಿ ಕಚೇರಿ ಅಥವಾ ಭಾರತೀಯ ಸಂಸತ್ತಿನಲ್ಲಿ ಯಾರು ಅನಾರೋಗ್ಯ ಪೀಡಿತರು ಎಂಬುದನ್ನು ತಿಳಿಯಬಹುದು ಎಂದಿದ್ದಾರೆ. ಅಂದರೆ ನಿರ್ದಿಷ್ಟವಾಗಿ ಇಂಥದ್ದೇ ಮನೆಯಲ್ಲಿ ಸೋಂಕು ತಗುಲಿದೆ ಎಂಬುದನ್ನು ಎಲ್ಲೋ ಕೂತಿರುವ ನನಗೆ ತಿಳಿಯಲು ಸಾಧ್ಯ ಎಂಬುದನ್ನು ವಿವರಿಸಿದ್ದರು.

ಅದರಂತೆ ಪ್ರಧಾನಿ ಕಚೇರಿಯಲ್ಲಿ 5 ಮಂದಿ ಅನಾರೋಗ್ಯವಿದೆ, ಭಾರತೀಯ ಸೇನಾ ಮುಖ್ಯ ಕಚೇರಿಯಲ್ಲಿ ಇಬ್ಬರು ಅನಾರೋಗ್ಯ ಪೀಡಿತರು, ಭಾರತೀಯ ಸಂಸತ್ತಿನಲ್ಲಿ ಒಬ್ಬರಿಗೆ ಸೋಂಕಿದೆ ಗೃಹ ಕಚೇರಿಯಲ್ಲಿ ಮೂವರಿಗೆ ಸೋಂಕಿದೆ ಎಂಬ ಮಾಹಿತಿಯನ್ನು ತಮಗೆ ಸಿಕ್ಕಿದೆ. ಇನ್ನು ಮುಂದೆ ಹೇಳಬೇಕೆ ಎಂದು ಸವಾಲು ಹಾಕಿದ್ದಾರೆ.

ಏಪ್ರಿಲ್‌ 4ರಿಂದ ಆರೋಗ್ಯ ಸೇತುವಿನಲ್ಲಿರುವ ಲೋಪಗಳನ್ನು ಗುರುತಿಸುತ್ತಾ ಬಂದಿರುವ ಏಲಿಯಟ್‌ ಆಲ್ಡರ್ಸನ್‌ ಬಳಕೆದಾರರ ಅಂದರೆ ಭಾರತೀಯ ನಾಗರಿಕರ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಎಚ್ಚರಿಸಿದ್ದಾರೆ. ಈ ಕುರಿತು ದೀರ್ಘ ಲೇಖನ ಬರೆಯುವುದಾಗಿಯೂ ಏಲಿಯಟ್‌ ತಮ್ಮ ಟ್ವೀಟ್‌ವೊಂದರಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಇದೇ ಏಲಿಯಟ್‌ ಆಲ್ಡರ್ಸನ್‌ ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳು ಸೋಂಕು ಹರಡುವಿಕೆಯನ್ನು ಪತ್ತೆ ಮಾಡುವ ನೆಪದಲ್ಲಿ ಕಣ್ಗಾವಲು ಇಡಲು ಆಪ್‌ಗಳನ್ನುಬಳಸುತ್ತಿವೆ ಎಂದು ಅನುಮಾನ ವ್ಯಕ್ತಪಡಿಸಿ ಅಂತಹ ಆಪ್‌ಗಳನ್ನು ಪಟ್ಟಿ ಮಾಡಿದ್ದರು. ಸಿಂಗಪುರ್‌, ಇಸ್ರೇಲ್‌ ಐಸ್‌ಲ್ಯಾಂಡ್‌, ಸೇರಿದಂತೆ ಹಲವು ದೇಶಗಳು ಈ ಪಟ್ಟಿಯಲ್ಲಿದ್ದವು. ಭಾರತವೂ ಅದೇ ಸಾಲಿಗೆ ಸೇರಿದೆ ಎಂಬ ಅನುಮಾನ ಈಗ ವ್ಯಕ್ತವಾಗುತ್ತಿದೆ.

ಆರೋಗ್ಯ ಸೇತು ಅಭಿಯಾನ

ಫೇಸ್‌ಬುಕ್‌ಗಿಂತ ಅತ್ಯಂತ ವೇಗವಾಗಿ ಡೌನ್‌ ಲೋಡ್‌ ಮಾಡಿಕೊಳ್ಳಲಾಗಿರುವ ಆರೋಗ್ಯ ಸೇತು ಆಪ್‌ ಹೆಚ್ಚು ಬಳಕೆಯಾಗುತ್ತಿದೆ. ಇದುವರೆಗೂ 50 ಲಕ್ಷ ಡೌನ್‌ಲೋಡ್‌ಗಳಾಗಿವೆ. ಈಗಾಗಲೇ ನಿಮ್ಮ ಮೊಬೈಲ್‌ ಹಲವು ಬಾರಿ ಎಸ್ಸೆಮ್ಮೆಸ್‌ ಬಂದಿರಬಹುದು. ಈ ಮೇಲ್‌ ಬಂದಿರಬಹುದು. ಅಷ್ಟೇ ಅಲ್ಲದೆ ಅಜಯ್‌ದೇವಗನ್‌ರಂತಹ ನಟರು ಆರೊಗ್ಯ ಸೇತು ಒಂದು ಬಾಡಿಗಾರ್ಡ್‌ ಎಂಬಂತೆ ಪ್ರಚಾರ ಕೂಡ ಮಾಡುತ್ತಿದ್ದಾರೆ.

ಕಡ್ಡಾಯವಾಗಿ ಆರೋಗ್ಯಸೇತು ಇನ್ಸ್ಟಾಲ್‌ ಮಾಡಿಸುತ್ತಿರುವುದಕ್ಕೂ, ಹಲವು ತಜ್ಞರು ಮಾಹಿತಿ ಸುರಕ್ಷತೆಯ ಕುರಿತು ಪ್ರಶ್ನೆ ಎತ್ತುತ್ತಿರುವುದಕ್ಕೂ, ಏಲಿಯಟ್‌ ಆಲ್ಡರ್ಸನ್‌ ಎತ್ತಿರುವ ಪ್ರಶ್ನೆಗಳು ನಿಜಕ್ಕೂ ಭಾರತ ಸರ್ಕಾರ ಈ ಆಪ್‌ ಅನ್ನು ನಾಗರಿಕರ ಮೇಲೆ ಕಣ್ಗಾವಲು ಇಡಲೆಂದೇ ಬಳಸುತ್ತಿದೆ ಎಂಬ ಅನುಮಾನವನ್ನು ಬಲಪಡಿಸುತ್ತಿದೆ.

ಈ ಹಿಂದೆ ಜಗತ್ತಿನ ಅತ್ಯಂತ ವಿಶಿಷ್ಟ ಸೇವೆ ಎಂದು ಬಣ್ಣಿಸಲಾದ ಆಧಾರ್‌ ಮಾಹಿತಿ ಸೋರಿಕೆಯ ವಿಷಯದಲ್ಲೂ ಭಾರತ ಸರ್ಕಾರವನ್ನು ಎಚ್ಚರಿಸಿದ್ದಲ್ಲದೆ, ಸಮರ್ಥನೆ ಮಾಡಿಕೊಂಡಾಗಲೆಲ್ಲಾ, ಮುಜುಗರಕ್ಕೆ ಈಡು ಮಾಡುವಂತೆ ಮಾಹಿತಿ ಬಹಿರಂಗ ಪಡಿಸಿ, ಲೋಪಗಳನ್ನು ಎತ್ತಿ ತೋರಿಸಿದ್ದು ಇದೇ ಡಾಟಾ ಸಂಶೋಧಕ ಏಲಿಯಟ್‌ ಆಲ್ಡರ್ಸನ್‌.

ಕೃಪೆ: ಟೆಕ್ ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...