Homeದಲಿತ್ ಫೈಲ್ಸ್'ನೀವು ಎಸ್‌ಸಿಯಾಗಿದ್ದರೆ ಅಲ್ಲಿಯೇ ನಿಂತುಕೊಳ್ಳಿ..'; ದಲಿತ ಸರಪಂಚ್‌ನನ್ನು ಸಾರ್ವಜನಿಕವಾಗಿ ಅಪಮಾನಿಸಿದ ಬಿಜೆಪಿ ಶಾಸಕ

‘ನೀವು ಎಸ್‌ಸಿಯಾಗಿದ್ದರೆ ಅಲ್ಲಿಯೇ ನಿಂತುಕೊಳ್ಳಿ..’; ದಲಿತ ಸರಪಂಚ್‌ನನ್ನು ಸಾರ್ವಜನಿಕವಾಗಿ ಅಪಮಾನಿಸಿದ ಬಿಜೆಪಿ ಶಾಸಕ

- Advertisement -
- Advertisement -

ಎನ್‌ಡಿಎ ಆಡಳಿತವಿರುವ ಆಂಧ್ರಪ್ರದೇಶ ಕರ್ನೂಲ್‌ನ ಅದೋನಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕನೊಬ್ಬ ದಲಿತ ಸರಪಂಚ್‌ ಒಬ್ಬರನ್ನು ಸಾರ್ವಜನಿಕವಾಗಿ ಅಪಮಾನಿಸಿರುವ ವೀಡಿಯೊ ವೈರಲ್ ಆಗಿದೆ.

ಬಿಜೆಪಿ ಶಾಸಕರ ಈ ನಡೆಯು ಆಂಧ್ರಪ್ರದೇಶದಾದ್ಯಂತ ಆಕ್ರೋಶದ ಅಲೆಯನ್ನು ಹುಟ್ಟುಹಾಕಿದೆ. ಜೂನ್ 16 ರಂದು ನಡೆದಿರುವ ಈ ದೃಶ್ಯದಲ್ಲಿ, ಬಿಜೆಪಿ ಶಾಸಕ ಪಾರ್ಥಸಾರಥಿ ಸಾರ್ವಜನಿಕ ಸಭೆಯಲ್ಲಿ ದಲಿತ ಸರಪಂಚ್ ಒಬ್ಬರನ್ನು ಅವಮಾನಿಸಿದ್ದಾರೆ.

ವೇದಿಕೆಯಲ್ಲಿದ್ದ ಶಾಸಕರೊಂದಿಗೆ ವೇದಿಕೆ ಹಂಚಿಕೊಳ್ಳಲು ಸರಪಂಚ್ ಹಿಂಜರಿಯುತ್ತಿದ್ದಂತೆ, ಪಾರ್ಥಸಾರಥಿ ಅವರ ಜಾತಿ ಗುರುತಿನ ಬಗ್ಗೆ ಪ್ರಶ್ನಿಸಿದ್ದಾರೆ. ಸರಪಂಚ್ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ತಿಳಿದ ನಂತರ, ಶಾಸಕರು ಅವರನ್ನು ವೇದಿಕೆಯ ಕೆಳಗೆ ಇರುವಂತೆ ಸೂಚಿಸುತ್ತಾರೆ.

ಈ ವಿಡಿಯೊ ಕ್ಲಿಪ್ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ, ಅದೋನಿ ಶಾಸಕ ಪಾರ್ಥಸಾರಥಿ ತಮ್ಮ ಕರ್ನೂಲ್ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವುದು ಕಂಡುಬರುತ್ತದೆ. ಅವರು ಬಿಜೆಪಿಯ ಕೆಲಸಗಳನ್ನು ವಿವರಿಸಿದ್ದಾರೆ. ಕೇಂದ್ರ ಸರ್ಕಾರವು ಸರಪಂಚ್‌ಗಳಿಗೆ ಹಣವನ್ನು ವರ್ಗಾಯಿಸುತ್ತದೆ ಎಂದು ಹೇಳುತ್ತಾ, ಸ್ಥಳೀಯ ಸರಪಂಚ್ ಅವರನ್ನು ಕರೆದಿದ್ದಾರೆ.

“ಹೇ ಸರಪಂಚ್, ನೀವು ಬನ್ನಿ ಇಲ್ಲಿ, ನೀವು ಅಲ್ಲಿ ಏಕೆ ನಿಂತಿದ್ದೀರಿ” ಎಂದು ಶಾಸಕರು ಕೇಳುತ್ತಿರುವುದನ್ನು ಕಾಣಬಹುದು. ಸರಪಂಚ್ ಶಾಸಕರೊಂದಿಗೆ ವೇದಿಕೆಯಲ್ಲಿ ಸೇರಲು ಹಿಂಜರಿಯುತ್ತಿರುವುದನ್ನು ಗಮನಿಸಿದ ಅವರು, “ಅವರು ಕ್ರಿಶ್ಚಿಯನ್ನೇ?” ಎಂದು ಅವರು ತಮ್ಮ ಪಕ್ಕದಲ್ಲಿದ್ದ ಟಿಡಿಪಿ ಸದಸ್ಯರನ್ನು ಕೇಳಿದ್ದಾರೆ. “ಅವರು ಎಸ್‌ಸಿ, ಸರ್” ಎಂದು ಅವರು ಹಲವು ಬಾರಿ ಉತ್ತರಿಸಿದರು.

ಇದರ ನಂತರ, ಪಾರ್ಥಸಾರಥಿ ಮತ್ತು ಟಿಡಿಪಿ ನಾಯಕ ಇಬ್ಬರೂ ವೇದಿಕೆಯ ಕೆಳಭಾಗಕ್ಕೆ ನೋಡಿ, ಸರಪಂಚ್‌ಗೆ ಅಲ್ಲಿಯೇ ನಿಲ್ಲುವಂತೆ ಸೂಚಿಸುವುದನ್ನು ಕಾಣಬಹುದು. “ಸರಿ, ಹಾಗಾದರೆ ಇಲ್ಲಿಗೆ ಬಂದು ನಿಂತುಕೊಳ್ಳಿ” ಎಂದು ಸ್ವಲ್ಪಹೊತ್ತಿನ ಬಳಿಕ ಅವರು ಆದೇಶ ನೀಡಿದರು.

ಅಸ್ಪೃಶ್ಯತೆಯ ಆಚರಣೆ ಬಹಿರಂಗ ಪ್ರದರ್ಶನ

ಈ ವಿಡಿಯೋ ಆನ್‌ಲೈನ್‌ನಲ್ಲಿ ಹರಡುತ್ತಿದ್ದಂತೆ, ಹಲವಾರು ನಾಗರಿಕರಿಂದ ಟೀಕೆಗಳು ವ್ಯಕ್ತವಾಗಿವೆ. ಹೆಚ್ಚಿನವರು ಈ ಕೃತ್ಯವನ್ನು ಖಂಡಿಸಿ, ಇದನ್ನು ಅಸ್ಪೃಶ್ಯತೆಯ ಬಹಿರಂಗ ಪ್ರದರ್ಶನ ಎಂದು ಕರೆದಿದ್ದಾರೆ. ವೇದಿಕೆಯಲ್ಲಿರುವ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಕೆಲವರು ಒತ್ತಾಯಿಸಿದರು.

“ಇದು ತುಂಬಾ ಮೂರ್ಖತನ. ಅಲ್ಲಿನ ಶಾಸಕರು ಇನ್ನೊಬ್ಬ ಮಹಿಳೆಗೆ ಎಚ್ಚರಿಕೆ ನೀಡಿ ಆ ವ್ಯಕ್ತಿಯನ್ನು ವೇದಿಕೆಗೆ ಕರೆಸಬೇಕಿತ್ತು. ಈಗ ಇದು ನಿಜವಾದ ಎಸ್‌ಸಿ-ಎಸ್‌ಟಿ ದೌರ್ಜನ್ಯ ಪ್ರಕರಣ. ಟಿಡಿಪಿ ಮತ್ತು ಬಿಜೆಪಿ ನಾಯಕರ ಈ ತಾರತಮ್ಯದ ಕೃತ್ಯದ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಬಹುದೇ” ಎಂದು ಎಕ್ಸ್‌ ಬಳಕೆದಾರರೊಬ್ಬರು ಹೇಳಿದ್ದಾರೆ.

“ಒಬ್ಬ ಚುನಾಯಿತ ದಲಿತ ಸರಪಂಚ್‌ನನ್ನು ಶಾಸಕ ಪಾರ್ಥಸಾರಥಿ ಸಾರ್ವಜನಿಕವಾಗಿ ಅವಮಾನಿಸಿದ್ದಾರೆ; ಅದರೂ ಅವರ ಕಾರ್ಯಗಳಿಗಾಗಿ ಅಲ್ಲ, ಅವರ ಜಾತಿ ಕಾರಣಕ್ಕಾಗಿ. ಇದು ಮನು ಕಲ್ಪಿಸಿಕೊಂಡ ಭಾರತ. ಇದು ಮನು ಕನಸು ಕಂಡ ‘ವೈಭವದ’ ಭಾರತ. 2025 ರಲ್ಲಿಯೂ ಸಹ, ಜಾತಿವಾದ ಇನ್ನೂ ಅಭಿವೃದ್ಧಿ ಹೊಂದುತ್ತಿದೆ. ಹಲವರ ಮೌನವು ​​ವ್ಯವಸ್ಥಿತ ಮತ್ತು ನಾಚಿಕೆಗೇಡಿನ ಸಂಗತಿ. ನಾವು ಸ್ಮಾರ್ಟ್ ಸಿಟಿಗಳು ಮತ್ತು ಶಕ್ತಿಶಾಲಿ ರಾಕೆಟ್‌ಗಳನ್ನು ನಿರ್ಮಿಸಬಹುದು. ಆದರೆ, ನಾವು ಪ್ರತಿಯೊಬ್ಬ ಭಾರತೀಯನನ್ನು ಸಮಾನ ಘನತೆಯಿಂದ ನಡೆಸಿಕೊಳ್ಳಲು ಸಾಧ್ಯವಾಗದಿದ್ದರೆ, ಒಂದು ರಾಷ್ಟ್ರವಾಗಿ ವಿಫಲರಾಗುತ್ತಿದ್ದೇವೆ” ಎಂದು ನಾಗರಿಕ ಪತ್ರಕರ್ತ ಎಂದು ಹೇಳಿಕೊಳ್ಳುವ ವೀಣು ಕುಮಾರ್ ಎಂಬ ಮತ್ತೊಬ್ಬ ಬಳಕೆದಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...