Homeದಲಿತ್ ಫೈಲ್ಸ್'ನೀವು ಎಸ್‌ಸಿಯಾಗಿದ್ದರೆ ಅಲ್ಲಿಯೇ ನಿಂತುಕೊಳ್ಳಿ..'; ದಲಿತ ಸರಪಂಚ್‌ನನ್ನು ಸಾರ್ವಜನಿಕವಾಗಿ ಅಪಮಾನಿಸಿದ ಬಿಜೆಪಿ ಶಾಸಕ

‘ನೀವು ಎಸ್‌ಸಿಯಾಗಿದ್ದರೆ ಅಲ್ಲಿಯೇ ನಿಂತುಕೊಳ್ಳಿ..’; ದಲಿತ ಸರಪಂಚ್‌ನನ್ನು ಸಾರ್ವಜನಿಕವಾಗಿ ಅಪಮಾನಿಸಿದ ಬಿಜೆಪಿ ಶಾಸಕ

- Advertisement -
- Advertisement -

ಎನ್‌ಡಿಎ ಆಡಳಿತವಿರುವ ಆಂಧ್ರಪ್ರದೇಶ ಕರ್ನೂಲ್‌ನ ಅದೋನಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕನೊಬ್ಬ ದಲಿತ ಸರಪಂಚ್‌ ಒಬ್ಬರನ್ನು ಸಾರ್ವಜನಿಕವಾಗಿ ಅಪಮಾನಿಸಿರುವ ವೀಡಿಯೊ ವೈರಲ್ ಆಗಿದೆ.

ಬಿಜೆಪಿ ಶಾಸಕರ ಈ ನಡೆಯು ಆಂಧ್ರಪ್ರದೇಶದಾದ್ಯಂತ ಆಕ್ರೋಶದ ಅಲೆಯನ್ನು ಹುಟ್ಟುಹಾಕಿದೆ. ಜೂನ್ 16 ರಂದು ನಡೆದಿರುವ ಈ ದೃಶ್ಯದಲ್ಲಿ, ಬಿಜೆಪಿ ಶಾಸಕ ಪಾರ್ಥಸಾರಥಿ ಸಾರ್ವಜನಿಕ ಸಭೆಯಲ್ಲಿ ದಲಿತ ಸರಪಂಚ್ ಒಬ್ಬರನ್ನು ಅವಮಾನಿಸಿದ್ದಾರೆ.

ವೇದಿಕೆಯಲ್ಲಿದ್ದ ಶಾಸಕರೊಂದಿಗೆ ವೇದಿಕೆ ಹಂಚಿಕೊಳ್ಳಲು ಸರಪಂಚ್ ಹಿಂಜರಿಯುತ್ತಿದ್ದಂತೆ, ಪಾರ್ಥಸಾರಥಿ ಅವರ ಜಾತಿ ಗುರುತಿನ ಬಗ್ಗೆ ಪ್ರಶ್ನಿಸಿದ್ದಾರೆ. ಸರಪಂಚ್ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ತಿಳಿದ ನಂತರ, ಶಾಸಕರು ಅವರನ್ನು ವೇದಿಕೆಯ ಕೆಳಗೆ ಇರುವಂತೆ ಸೂಚಿಸುತ್ತಾರೆ.

ಈ ವಿಡಿಯೊ ಕ್ಲಿಪ್ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ, ಅದೋನಿ ಶಾಸಕ ಪಾರ್ಥಸಾರಥಿ ತಮ್ಮ ಕರ್ನೂಲ್ ಕ್ಷೇತ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿರುವುದು ಕಂಡುಬರುತ್ತದೆ. ಅವರು ಬಿಜೆಪಿಯ ಕೆಲಸಗಳನ್ನು ವಿವರಿಸಿದ್ದಾರೆ. ಕೇಂದ್ರ ಸರ್ಕಾರವು ಸರಪಂಚ್‌ಗಳಿಗೆ ಹಣವನ್ನು ವರ್ಗಾಯಿಸುತ್ತದೆ ಎಂದು ಹೇಳುತ್ತಾ, ಸ್ಥಳೀಯ ಸರಪಂಚ್ ಅವರನ್ನು ಕರೆದಿದ್ದಾರೆ.

“ಹೇ ಸರಪಂಚ್, ನೀವು ಬನ್ನಿ ಇಲ್ಲಿ, ನೀವು ಅಲ್ಲಿ ಏಕೆ ನಿಂತಿದ್ದೀರಿ” ಎಂದು ಶಾಸಕರು ಕೇಳುತ್ತಿರುವುದನ್ನು ಕಾಣಬಹುದು. ಸರಪಂಚ್ ಶಾಸಕರೊಂದಿಗೆ ವೇದಿಕೆಯಲ್ಲಿ ಸೇರಲು ಹಿಂಜರಿಯುತ್ತಿರುವುದನ್ನು ಗಮನಿಸಿದ ಅವರು, “ಅವರು ಕ್ರಿಶ್ಚಿಯನ್ನೇ?” ಎಂದು ಅವರು ತಮ್ಮ ಪಕ್ಕದಲ್ಲಿದ್ದ ಟಿಡಿಪಿ ಸದಸ್ಯರನ್ನು ಕೇಳಿದ್ದಾರೆ. “ಅವರು ಎಸ್‌ಸಿ, ಸರ್” ಎಂದು ಅವರು ಹಲವು ಬಾರಿ ಉತ್ತರಿಸಿದರು.

ಇದರ ನಂತರ, ಪಾರ್ಥಸಾರಥಿ ಮತ್ತು ಟಿಡಿಪಿ ನಾಯಕ ಇಬ್ಬರೂ ವೇದಿಕೆಯ ಕೆಳಭಾಗಕ್ಕೆ ನೋಡಿ, ಸರಪಂಚ್‌ಗೆ ಅಲ್ಲಿಯೇ ನಿಲ್ಲುವಂತೆ ಸೂಚಿಸುವುದನ್ನು ಕಾಣಬಹುದು. “ಸರಿ, ಹಾಗಾದರೆ ಇಲ್ಲಿಗೆ ಬಂದು ನಿಂತುಕೊಳ್ಳಿ” ಎಂದು ಸ್ವಲ್ಪಹೊತ್ತಿನ ಬಳಿಕ ಅವರು ಆದೇಶ ನೀಡಿದರು.

ಅಸ್ಪೃಶ್ಯತೆಯ ಆಚರಣೆ ಬಹಿರಂಗ ಪ್ರದರ್ಶನ

ಈ ವಿಡಿಯೋ ಆನ್‌ಲೈನ್‌ನಲ್ಲಿ ಹರಡುತ್ತಿದ್ದಂತೆ, ಹಲವಾರು ನಾಗರಿಕರಿಂದ ಟೀಕೆಗಳು ವ್ಯಕ್ತವಾಗಿವೆ. ಹೆಚ್ಚಿನವರು ಈ ಕೃತ್ಯವನ್ನು ಖಂಡಿಸಿ, ಇದನ್ನು ಅಸ್ಪೃಶ್ಯತೆಯ ಬಹಿರಂಗ ಪ್ರದರ್ಶನ ಎಂದು ಕರೆದಿದ್ದಾರೆ. ವೇದಿಕೆಯಲ್ಲಿರುವ ನಾಯಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಕೆಲವರು ಒತ್ತಾಯಿಸಿದರು.

“ಇದು ತುಂಬಾ ಮೂರ್ಖತನ. ಅಲ್ಲಿನ ಶಾಸಕರು ಇನ್ನೊಬ್ಬ ಮಹಿಳೆಗೆ ಎಚ್ಚರಿಕೆ ನೀಡಿ ಆ ವ್ಯಕ್ತಿಯನ್ನು ವೇದಿಕೆಗೆ ಕರೆಸಬೇಕಿತ್ತು. ಈಗ ಇದು ನಿಜವಾದ ಎಸ್‌ಸಿ-ಎಸ್‌ಟಿ ದೌರ್ಜನ್ಯ ಪ್ರಕರಣ. ಟಿಡಿಪಿ ಮತ್ತು ಬಿಜೆಪಿ ನಾಯಕರ ಈ ತಾರತಮ್ಯದ ಕೃತ್ಯದ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಬಹುದೇ” ಎಂದು ಎಕ್ಸ್‌ ಬಳಕೆದಾರರೊಬ್ಬರು ಹೇಳಿದ್ದಾರೆ.

“ಒಬ್ಬ ಚುನಾಯಿತ ದಲಿತ ಸರಪಂಚ್‌ನನ್ನು ಶಾಸಕ ಪಾರ್ಥಸಾರಥಿ ಸಾರ್ವಜನಿಕವಾಗಿ ಅವಮಾನಿಸಿದ್ದಾರೆ; ಅದರೂ ಅವರ ಕಾರ್ಯಗಳಿಗಾಗಿ ಅಲ್ಲ, ಅವರ ಜಾತಿ ಕಾರಣಕ್ಕಾಗಿ. ಇದು ಮನು ಕಲ್ಪಿಸಿಕೊಂಡ ಭಾರತ. ಇದು ಮನು ಕನಸು ಕಂಡ ‘ವೈಭವದ’ ಭಾರತ. 2025 ರಲ್ಲಿಯೂ ಸಹ, ಜಾತಿವಾದ ಇನ್ನೂ ಅಭಿವೃದ್ಧಿ ಹೊಂದುತ್ತಿದೆ. ಹಲವರ ಮೌನವು ​​ವ್ಯವಸ್ಥಿತ ಮತ್ತು ನಾಚಿಕೆಗೇಡಿನ ಸಂಗತಿ. ನಾವು ಸ್ಮಾರ್ಟ್ ಸಿಟಿಗಳು ಮತ್ತು ಶಕ್ತಿಶಾಲಿ ರಾಕೆಟ್‌ಗಳನ್ನು ನಿರ್ಮಿಸಬಹುದು. ಆದರೆ, ನಾವು ಪ್ರತಿಯೊಬ್ಬ ಭಾರತೀಯನನ್ನು ಸಮಾನ ಘನತೆಯಿಂದ ನಡೆಸಿಕೊಳ್ಳಲು ಸಾಧ್ಯವಾಗದಿದ್ದರೆ, ಒಂದು ರಾಷ್ಟ್ರವಾಗಿ ವಿಫಲರಾಗುತ್ತಿದ್ದೇವೆ” ಎಂದು ನಾಗರಿಕ ಪತ್ರಕರ್ತ ಎಂದು ಹೇಳಿಕೊಳ್ಳುವ ವೀಣು ಕುಮಾರ್ ಎಂಬ ಮತ್ತೊಬ್ಬ ಬಳಕೆದಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೆ.ಆರ್.ಪೇಟೆ ದಲಿತ ಯುವಕನ ಸಜೀವ ದಹನ ಪ್ರಕರಣ; ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...