Homeಮುಖಪುಟಮಣಿಪುರದಲ್ಲಿ ಶಾಂತಿ-ಭದ್ರತೆ ಸ್ಥಾಪಿಸಲು ಸಾಧ್ಯವಾಗದಿದ್ದರೆ, ಅಧಿಕಾರದಲ್ಲಿರಲು ಹಕ್ಕಿಲ್ಲ: ಮೋದಿ ಹಳೆಯ ಟ್ವೀಟ್ ವೈರಲ್

ಮಣಿಪುರದಲ್ಲಿ ಶಾಂತಿ-ಭದ್ರತೆ ಸ್ಥಾಪಿಸಲು ಸಾಧ್ಯವಾಗದಿದ್ದರೆ, ಅಧಿಕಾರದಲ್ಲಿರಲು ಹಕ್ಕಿಲ್ಲ: ಮೋದಿ ಹಳೆಯ ಟ್ವೀಟ್ ವೈರಲ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು 2017ರಲ್ಲಿ ಮಣಿಪುರ ಹಿಂಸಾಚಾರದ ಕುರಿತು ಮಾಡಿದ್ದ ಟ್ವೀಟ್‌ ಒಂದು ಇದೀಗ ಸಾಕಷ್ಟು ವೈರಲ್‌ ಆಗಿದ್ದು, ಆ ಟ್ವೀಟ್ ಅವರನ್ನು ಮತ್ತು ಅವರ ಪಕ್ಷವನ್ನು ಪೇಚಿಗೆ ಸಿಲುಕಿಸಿದೆ.

ಮಣಿಪುರದ ಕುರಿತು ಮೋದಿ ಅವರು, ”ಮಣಿಪುರದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಸ್ಥಾಪಿಸಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಒಂದು ಕ್ಷಣವೂ ಅಧಿಕಾರದಲ್ಲಿರಲು ಸರ್ಕಾರಕ್ಕೆ ಹಕ್ಕಿಲ್ಲ” ಎಂದು ಟ್ವೀಟ್ ಮಾಡಿದ್ದರು.

ಮೋದಿಯವರ 2017ರಲ್ಲಿನ ಟ್ವೀಟ್‌ನ್ನು ನೆನಪಿಸಿರುವ ಆಮ್‌ ಆದ್ಮಿ ಪಕ್ಷ, ”ಮಣಿಪುರದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಸ್ಥಾಪಿಸಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ, ಒಂದು ಕ್ಷಣವೂ ಸರ್ಕಾರದಲ್ಲಿರಲು ಸರ್ಕಾರಕ್ಕೆ ಹಕ್ಕಿಲ್ಲ ಮತ್ತು ಆ ಸರ್ಕಾರವನ್ನು ವಜಾಗೊಳಿಸಬೇಕು. ಈಗ ಮಣಿಪುರ ಸರ್ಕಾರವನ್ನು ವಜಾ ಮಾಡುವ ಸಮಯ ಬಂದಿದೆ. ರಾಜ್ಯಗಳಲ್ಲಿ ಶಾಂತಿ ಸ್ಥಾಪಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯೂ ಆಗಿದೆ ಎಂದು ಸಂವಿಧಾನದ 355ನೇ ವಿಧಿ ಹೇಳುತ್ತದೆ” ಎಂದು ಹೇಳುವುದರ ಜೊತೆಗೆ ಸಂಸದ ರಾಘವ್‌ ಚಡ್ಡಾ ಅವರು ಮಾತನಾಡಿರುವ ವಿಡಿಯೋ ಕೂಡಾ ಶೇರ್‌ ಮಾಡಿದೆ.

ಅದೇ ರೀತಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ಪ್ರಧಾನಿ ಮೋದಿಯವರ ಈ ಟ್ವೀಟಿಗೆ ಪ್ರತಿಕ್ರಿಯಿಸಿದ್ದು, ”78 ದಿನಗಳ ನಂತರ, ಪ್ರಧಾನಿ ಮೋದಿ ಮಣಿಪುರದ ಬಗ್ಗೆ ಮಾತನಾಡಲು 36 ಸೆಕೆಂಡುಗಳನ್ನು ನೀಡಿದ್ದಾರೆ. ಆದರೆ ಆ ಬಿಕ್ಕಟ್ಟನ್ನು ಪರಿಹರಿಸಲು ಅವರು ಏನು ಮಾಡುತ್ತಾರೆ ಎಂಬುದರ ಕುರಿತು ಒಂದೇ ಒಂದು ಪದವನ್ನು ಮಾತನಾಡಿಲ್ಲ. ಮಣಿಪುರ ಸಂಘರ್ಷದ ಬಗ್ಗೆ ಸಂಸತ್ತಿನೊಳಗೆ ಪೂರ್ಣ ದಿನ ಚರ್ಚೆ ನಡೆಯಬೇಕು. ಅವರು ಪ್ರತಿಯೊಬ್ಬ ಸಂಸದರ ಪ್ರಶ್ನೆಗಳಿಗೆ ಉತ್ತರಿಸಬೇಕು. ಸ್ಪಷ್ಟವಾಗಿ ಹೇಳೋಣ, ಪ್ರಧಾನಿ ಮೋದಿ ಮತ್ತು ಅವರ ಸರ್ಕಾರಕ್ಕೆ ರಾಜ್ಯದಲ್ಲಿ ಶಾಂತಿಯನ್ನು ಸ್ಥಾಪಿಸಲು ಸಾಧ್ಯವಿಲ್ಲ ಮತ್ತು ಅವರಿಗೆ ಮಣಿಪುರವನ್ನು ಆಳುವ ಹಕ್ಕಿಲ್ಲ” ಎಂದು ಕಿಡಿಕಾರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...