Homeಮುಖಪುಟತಿರಂಗ ಖರೀದಿಸದಿದ್ದರೆ ಪಡಿತರ ನೀಡುವುದಿಲ್ಲ: ಬಡವರ ಮೇಲಿನ ಒತ್ತಾಯಕ್ಕೆ ವರುಣ್ ಗಾಂಧಿ ಖಂಡನೆ

ತಿರಂಗ ಖರೀದಿಸದಿದ್ದರೆ ಪಡಿತರ ನೀಡುವುದಿಲ್ಲ: ಬಡವರ ಮೇಲಿನ ಒತ್ತಾಯಕ್ಕೆ ವರುಣ್ ಗಾಂಧಿ ಖಂಡನೆ

- Advertisement -
- Advertisement -

20 ರೂಪಾಯಿಯ ಧ್ವಜವನ್ನು ಖರೀದಿಸಿದರೆ ನಿಮಗೆ ಪಡಿತರ ಸಿಗುತ್ತದೆ ಇಲ್ಲದಿದ್ದರೆ ನಿಮಗೆ ಪಡಿತರ ನೀಡುವುದಿಲ್ಲ ಎಂದು ಬಡವರಿಗೆ ಬೆದರಿಕೆ ಹಾಕಿರುವ ಅಮಾನವೀಯ ಘಟನೆ ಹರಿಯಾಣದಲ್ಲಿ ಜರುಗಿದೆ.

ಕರ್ನಾಲ್ ಜಿಲ್ಲೆಯ ಹೆಮ್ಡ ಪ್ರದೇಶದ ನ್ಯಾಯಬೆಲೆ ಅಂಗಡಿಯ ಮಾಲೀಕನೊಬ್ಬ ಪ್ರತಿಯೊಬ್ಬ ಪಡಿತರ ಚೀಟಿದಾರರು ಸಹ 20 ರೂ ಕೊಟ್ಟು ರಾಷ್ಟ್ರಧ್ವಜ ಖರೀದಿಸಬೇಕು ಎಂದು ಧಮಕಿ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ರೀತಿಯಾಗಿ ತಿರಂಗ ಕೊಳ್ಳುವಂತೆ ಬಡವರ ಮೇಲೆ ಒತ್ತಡ ಹೇರುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಡವರ ಮೇಲೆ ಬಲವಂತದ ದೇಶಪ್ರೇಮ ಹೇರುವುದು ಸರಿಯಲ್ಲ ಎಂಬ ಟೀಕೆಗಳು ಕೇಳಿ ಬಂದಿವೆ.

“ಪಡಿತರ ಚೀಟಿದಾರರನ್ನು ತ್ರಿವರ್ಣ ಧ್ವಜವನ್ನು ಖರೀದಿಸುವಂತೆ ಒತ್ತಾಯಿಸಲಾಗುತ್ತಿದೆ. ಒಂದು ವೇಳೆ ಖರೀದಿಸದಿದ್ದರೆ ಅವರ ಪಡಿತರ ನೀಡುವುದಿಲ್ಲ ಎಂದು ಬೆದರಿಸಲಾಗುತ್ತಿದೆ. ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಸಂಭ್ರಮವು ಬಡವರಿಗೆ ಹೊರೆಯಾದರೆ ಅದು ದುರದೃಷ್ಟಕರ” ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿರುವ ತ್ರಿವರ್ಣ ಧ್ವಜದ ಬೆಲೆಯು ಬಡವರ ತುತ್ತನ್ನು ಕಸಿದುಕೊಳ್ಳುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

ವಿಷಯ ವೈರಲ್ ಆದ ನಂತರ ತಿರಂಗ ಕೊಳ್ಳುವಂತೆ ಒತ್ತಡ ಹೇರಿದ್ದ ಡಿಪೋ ಮಾಲೀಕನನ್ನು ಅಮಾನತ್ತು ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಹೆಮ್ಡಾ ಗ್ರಾಮದ ಪಡಿತರ ಡಿಪೋದಾರರೊಬ್ಬರು 20 ರೂಪಾಯಿ ದರದಲ್ಲಿ ತಿರಂಗವನ್ನು ಖರೀದಿಸದಿದ್ದಲ್ಲಿ ಅವರಿಗೆ ಪಡಿತರ ಸಾಮಾಗ್ರಿ ನೀಡುವುದಿಲ್ಲ ಎಂದು ಧ್ವಜಗಳನ್ನು ಮಾರುತ್ತಿದ್ದರು. ಈ ವಿಷಯ ಜಿಲ್ಲಾಡಳಿತದ ಗಮನಕ್ಕೆ ಬಂದ ಕೂಡಲೇ ಅವರ ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ಕರ್ನಾಲ್ ಜಿಲ್ಲಾಧಿಕಾರಿ ಅನೀಶ್ ಯಾದವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನರಿಗೆ ಸುಲಭವಾಗಿ ತ್ರಿವರ್ಣ ಧ್ವಜಗಳು ಸಿಗುವಂತಾಗಲಿ ಎಂದು ಜಿಲ್ಲಾಡಳಿತದ ವತಿಯಿಂದ 88,400 ಧ್ವಜಗಳನ್ನು ರೇಷನ್ ಡಿಪೋಗಳಿಗೆ ನೀಡಿದ್ದೆವು. ಜನರು ಇಷ್ಟಪಟ್ಟು ಖರೀದಿಸಲಿ ಎಂಬುದು ನಮ್ಮ ಬಯಕೆಯಾಗಿತ್ತು. ಆದರೆ ಡಿಪೋ ಮಾಲೀಕರು ಕಡ್ಡಾಯ ಮಾಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತ್ರಿವರ್ಣ ಧ್ವಜ ಕೊಳ್ಳುವಂತೆ ಒತ್ತಡ ಹೇರಿದ್ದು ನಿಜ ಎಂದು ಡಿಪೋ ಮಾಲೀಕ ಒಪ್ಪಿಕೊಂಡಿದ್ದಾನೆ. ಧ್ವಜಗಳನ್ನು ಮಾರುವಂತೆ ನಮಗೆ ಆದೇಶವಿದೆ. ಧ್ವಜಗಳನ್ನು ಈ ಮೊದಲೇ ನಾವು ಹಣ ಪಾವತಿಸಿ ತಂದಿದ್ದೇವೆ. ಹಾಗಾಗಿ 20 ರೂ ಪಾವತಿಸಿ ಧ್ವಜ ಕೊಳ್ಳದವರಿಗೆ ನಾನು ಪಡಿತರವನ್ನು ನೀಡುತ್ತಿಲ್ಲ. ಪಡಿತರ ಪಡೆಯುವವರಿಗೆ ಧ್ವಜ ಕೊಳ್ಳುವುದನ್ನು ಕಡ್ಡಾಯ ಮಾಡಿ ಎಂದು ಇಲಾಖೆಯ ಇನ್ಸ್‌‌ಪೆಕ್ಟರ್ ಆದೇಶ ನೀಡಿದ್ದಾರೆ. ಅವರ ಆದೇಶಗಳನ್ನು ಪಾಲಿಸುವುದು ನಮ್ಮ ಕರ್ತವ್ಯ” ಎಂದು ಮಾಧ್ಯಮದವರ ಬಳಿ ಮಾತನಾಡಿದ್ದಾನೆ.

ಇದನ್ನೂ ಓದಿ; ತಿರಂಗ ಯಾತ್ರೆ ವೇಳೆ ಹೊಡೆದಾಡಿಕೊಂಡ ಬಿಜೆಪಿ ಕಾರ್ಯಕರ್ತರು: ದಂಗೆಯಾತ್ರೆ ಮಾಡಬೇಡಿ ಎಂದ ಅಖಿಲೇಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...