Homeಮುಖಪುಟತಿರಂಗ ಖರೀದಿಸದಿದ್ದರೆ ಪಡಿತರ ನೀಡುವುದಿಲ್ಲ: ಬಡವರ ಮೇಲಿನ ಒತ್ತಾಯಕ್ಕೆ ವರುಣ್ ಗಾಂಧಿ ಖಂಡನೆ

ತಿರಂಗ ಖರೀದಿಸದಿದ್ದರೆ ಪಡಿತರ ನೀಡುವುದಿಲ್ಲ: ಬಡವರ ಮೇಲಿನ ಒತ್ತಾಯಕ್ಕೆ ವರುಣ್ ಗಾಂಧಿ ಖಂಡನೆ

- Advertisement -
- Advertisement -

20 ರೂಪಾಯಿಯ ಧ್ವಜವನ್ನು ಖರೀದಿಸಿದರೆ ನಿಮಗೆ ಪಡಿತರ ಸಿಗುತ್ತದೆ ಇಲ್ಲದಿದ್ದರೆ ನಿಮಗೆ ಪಡಿತರ ನೀಡುವುದಿಲ್ಲ ಎಂದು ಬಡವರಿಗೆ ಬೆದರಿಕೆ ಹಾಕಿರುವ ಅಮಾನವೀಯ ಘಟನೆ ಹರಿಯಾಣದಲ್ಲಿ ಜರುಗಿದೆ.

ಕರ್ನಾಲ್ ಜಿಲ್ಲೆಯ ಹೆಮ್ಡ ಪ್ರದೇಶದ ನ್ಯಾಯಬೆಲೆ ಅಂಗಡಿಯ ಮಾಲೀಕನೊಬ್ಬ ಪ್ರತಿಯೊಬ್ಬ ಪಡಿತರ ಚೀಟಿದಾರರು ಸಹ 20 ರೂ ಕೊಟ್ಟು ರಾಷ್ಟ್ರಧ್ವಜ ಖರೀದಿಸಬೇಕು ಎಂದು ಧಮಕಿ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ರೀತಿಯಾಗಿ ತಿರಂಗ ಕೊಳ್ಳುವಂತೆ ಬಡವರ ಮೇಲೆ ಒತ್ತಡ ಹೇರುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಡವರ ಮೇಲೆ ಬಲವಂತದ ದೇಶಪ್ರೇಮ ಹೇರುವುದು ಸರಿಯಲ್ಲ ಎಂಬ ಟೀಕೆಗಳು ಕೇಳಿ ಬಂದಿವೆ.

“ಪಡಿತರ ಚೀಟಿದಾರರನ್ನು ತ್ರಿವರ್ಣ ಧ್ವಜವನ್ನು ಖರೀದಿಸುವಂತೆ ಒತ್ತಾಯಿಸಲಾಗುತ್ತಿದೆ. ಒಂದು ವೇಳೆ ಖರೀದಿಸದಿದ್ದರೆ ಅವರ ಪಡಿತರ ನೀಡುವುದಿಲ್ಲ ಎಂದು ಬೆದರಿಸಲಾಗುತ್ತಿದೆ. ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಸಂಭ್ರಮವು ಬಡವರಿಗೆ ಹೊರೆಯಾದರೆ ಅದು ದುರದೃಷ್ಟಕರ” ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿರುವ ತ್ರಿವರ್ಣ ಧ್ವಜದ ಬೆಲೆಯು ಬಡವರ ತುತ್ತನ್ನು ಕಸಿದುಕೊಳ್ಳುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಮಕ್ಕೆ ಮುಂದಾದ ಜಿಲ್ಲಾಡಳಿತ

ವಿಷಯ ವೈರಲ್ ಆದ ನಂತರ ತಿರಂಗ ಕೊಳ್ಳುವಂತೆ ಒತ್ತಡ ಹೇರಿದ್ದ ಡಿಪೋ ಮಾಲೀಕನನ್ನು ಅಮಾನತ್ತು ಮಾಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಹೆಮ್ಡಾ ಗ್ರಾಮದ ಪಡಿತರ ಡಿಪೋದಾರರೊಬ್ಬರು 20 ರೂಪಾಯಿ ದರದಲ್ಲಿ ತಿರಂಗವನ್ನು ಖರೀದಿಸದಿದ್ದಲ್ಲಿ ಅವರಿಗೆ ಪಡಿತರ ಸಾಮಾಗ್ರಿ ನೀಡುವುದಿಲ್ಲ ಎಂದು ಧ್ವಜಗಳನ್ನು ಮಾರುತ್ತಿದ್ದರು. ಈ ವಿಷಯ ಜಿಲ್ಲಾಡಳಿತದ ಗಮನಕ್ಕೆ ಬಂದ ಕೂಡಲೇ ಅವರ ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ಕರ್ನಾಲ್ ಜಿಲ್ಲಾಧಿಕಾರಿ ಅನೀಶ್ ಯಾದವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನರಿಗೆ ಸುಲಭವಾಗಿ ತ್ರಿವರ್ಣ ಧ್ವಜಗಳು ಸಿಗುವಂತಾಗಲಿ ಎಂದು ಜಿಲ್ಲಾಡಳಿತದ ವತಿಯಿಂದ 88,400 ಧ್ವಜಗಳನ್ನು ರೇಷನ್ ಡಿಪೋಗಳಿಗೆ ನೀಡಿದ್ದೆವು. ಜನರು ಇಷ್ಟಪಟ್ಟು ಖರೀದಿಸಲಿ ಎಂಬುದು ನಮ್ಮ ಬಯಕೆಯಾಗಿತ್ತು. ಆದರೆ ಡಿಪೋ ಮಾಲೀಕರು ಕಡ್ಡಾಯ ಮಾಡಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ತ್ರಿವರ್ಣ ಧ್ವಜ ಕೊಳ್ಳುವಂತೆ ಒತ್ತಡ ಹೇರಿದ್ದು ನಿಜ ಎಂದು ಡಿಪೋ ಮಾಲೀಕ ಒಪ್ಪಿಕೊಂಡಿದ್ದಾನೆ. ಧ್ವಜಗಳನ್ನು ಮಾರುವಂತೆ ನಮಗೆ ಆದೇಶವಿದೆ. ಧ್ವಜಗಳನ್ನು ಈ ಮೊದಲೇ ನಾವು ಹಣ ಪಾವತಿಸಿ ತಂದಿದ್ದೇವೆ. ಹಾಗಾಗಿ 20 ರೂ ಪಾವತಿಸಿ ಧ್ವಜ ಕೊಳ್ಳದವರಿಗೆ ನಾನು ಪಡಿತರವನ್ನು ನೀಡುತ್ತಿಲ್ಲ. ಪಡಿತರ ಪಡೆಯುವವರಿಗೆ ಧ್ವಜ ಕೊಳ್ಳುವುದನ್ನು ಕಡ್ಡಾಯ ಮಾಡಿ ಎಂದು ಇಲಾಖೆಯ ಇನ್ಸ್‌‌ಪೆಕ್ಟರ್ ಆದೇಶ ನೀಡಿದ್ದಾರೆ. ಅವರ ಆದೇಶಗಳನ್ನು ಪಾಲಿಸುವುದು ನಮ್ಮ ಕರ್ತವ್ಯ” ಎಂದು ಮಾಧ್ಯಮದವರ ಬಳಿ ಮಾತನಾಡಿದ್ದಾನೆ.

ಇದನ್ನೂ ಓದಿ; ತಿರಂಗ ಯಾತ್ರೆ ವೇಳೆ ಹೊಡೆದಾಡಿಕೊಂಡ ಬಿಜೆಪಿ ಕಾರ್ಯಕರ್ತರು: ದಂಗೆಯಾತ್ರೆ ಮಾಡಬೇಡಿ ಎಂದ ಅಖಿಲೇಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...