Homeಮುಖಪುಟ'ಮದುವೆಯಾಗದಿದ್ದರೆ ಕೆಲಸದಿಂದ ವಜಾ..'; ಟೀಕೆಗೆ ಗುರಿಯಾದ ಚೀನಾ ಕಂಪನಿ ಆದೇಶ

‘ಮದುವೆಯಾಗದಿದ್ದರೆ ಕೆಲಸದಿಂದ ವಜಾ..’; ಟೀಕೆಗೆ ಗುರಿಯಾದ ಚೀನಾ ಕಂಪನಿ ಆದೇಶ

- Advertisement -
- Advertisement -

ಸೆಪ್ಟೆಂಬರ್ ಅಂತ್ಯದೊಳಗೆ ಒಂಟಿ ಮತ್ತು ವಿಚ್ಛೇದಿತ ಉದ್ಯೋಗಿಗಳು ಒಂಟಿಯಾಗಿ ಉಳಿದರೆ ಅವರನ್ನು ಕೆಲಸದಿಂದ ತೆಗೆದುಹಾಕುವುದಾಗಿ ಚೀನಾದ ಕಂಪನಿಯೊಂದು ಇತ್ತೀಚೆಗೆ ಬೆದರಿಕೆ ಹಾಕುವ ನೋಟಿಸ್ ನೀಡಿದೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ ವರದಿ ತಿಳಿಸಿದೆ. ಈ ಕ್ರಮವನ್ನು ಅಧಿಕಾರಿಗಳು ಖಂಡಿಸಿದ್ದಾರೆ ಎಂದು ವರದಿ ತಿಳಿಸಿದೆ.

1,200 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಶುಂಟಿಯನ್ ಕೆಮಿಕಲ್ ಗ್ರೂಪ್, ಜನವರಿಯಲ್ಲಿ ಸಂಸ್ಥೆಯ ವಿವಾಹ ದರವನ್ನು ಹೆಚ್ಚಿಸುವ ಉದ್ದೇಶದಿಂದ ಈ ನೀತಿಯನ್ನು ಘೋಷಿಸಿತು ಎಂದು ತಿಳಿದುಬಂದಿದೆ.

28 ರಿಂದ 58 ವರ್ಷ ವಯಸ್ಸಿನ ಎಲ್ಲ ಒಂಟಿ ಮತ್ತು ವಿಚ್ಛೇದಿತ ಉದ್ಯೋಗಿಗಳು ಸೆಪ್ಟೆಂಬರ್, 2025 ರ ಅಂತ್ಯದ ವೇಳೆಗೆ ಮದುವೆಯಾಗಬೇಕೆಂದು ಕಂಪನಿ ಬಯಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಾರ್ಚ್ ಅಂತ್ಯದೊಳಗೆ ಸೆಟಲ್ ಆಗದವರು ಸ್ವಯಂ ನಿವೃತ್ತಿ ಪತ್ರ ಬರೆಯಬೇಕು ಎಂದು ಕಂಪನಿ ಹೇಳಿದೆ ಎಂದು ವರದಿ ಹೇಳಿದೆ.

ಜೂನ್ ಅಂತ್ಯದ ವೇಳೆಗೆ ಅವರು ವಿವಾಹವಾಗಲು ವಿಫಲವಾದರೆ ಕಂಪನಿಯು ಆ ಉದ್ಯೋಗಿಗಳ ಮೌಲ್ಯಮಾಪನವನ್ನು ನಡೆಸುತ್ತದೆ, ಅಂತಿಮವಾಗಿ ಅವರು ಸೆಪ್ಟೆಂಬರ್ ಅಂತ್ಯದವರೆಗೆ ಇನ್ನೂ ಒಂಟಿಯಾಗಿ ಉಳಿದರೆ, ಅವರನ್ನು ಕೆಲಸದಿಂದ ತೆಗೆದುಹಾಕಲಾಗುತ್ತದೆ.

‘ನಿಷ್ಠೆ ಮತ್ತು ಪುತ್ರಭಕ್ತಿ’ಯಂತಹ ಸಾಂಪ್ರದಾಯಿಕ ಚೀನೀ ಮೌಲ್ಯಗಳ ಮೇಲೆ ಒತ್ತು ನೀಡುತ್ತಾ, ಕಂಪನಿಯು ಮತ್ತೊಂದು ನೀತಿಯನ್ನು ಘೋಷಿಸಿದೆ. ಅದು “ಮದುವೆ ದರವನ್ನು ಸುಧಾರಿಸುವ ಸರ್ಕಾರದ ಕರೆಗೆ ಪ್ರತಿಕ್ರಿಯಿಸದಿರುವುದು ವಿಶ್ವಾಸದ್ರೋಹ; ನಿಮ್ಮ ಹೆತ್ತವರ ಮಾತನ್ನು ಕೇಳದಿರುವುದು ಪುತ್ರಭಕ್ತಿಯಲ್ಲ. ನಿಮ್ಮನ್ನು ಒಂಟಿಯಾಗಿರಲು ಬಿಡುವುದು ಪರೋಪಕಾರಿಯಲ್ಲ” ಎಂದು ಹೇಳುತ್ತದೆ.

ಲಿನಿ ನಗರದಲ್ಲಿ ನೆಲೆಗೊಂಡಿರುವ ಈ ಸಂಸ್ಥೆಯು 2001 ರಲ್ಲಿ ಸ್ಥಾಪನೆಯಾಯಿತು, ಇದು ಅಲ್ಲಿನ ಟಾಪ್ 50 ಉದ್ಯಮಗಳಲ್ಲಿ ಒಂದಾಗಿದೆ.

ಸ್ಥಳೀಯ ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಭದ್ರತಾ ಬ್ಯೂರೋ ಮತ್ತೊಂದು ಚೀನೀ ಮಾಧ್ಯಮಕ್ಕೆ ತಿಳಿಸಿದ್ದು, ಫೆಬ್ರವರಿ 13 ರಂದು ಸಂಸ್ಥೆಯನ್ನು ಪರಿಶೀಲಿಸಲಾಯಿತು. ಒಂದು ದಿನಕ್ಕಿಂತ ಕಡಿಮೆ ಅವಧಿಯಲ್ಲಿ ನೀತಿಯನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯು ಮತ್ತಷ್ಟು ಹೇಳಿದೆ. ಅಲ್ಲದೆ, ಯಾವುದೇ ಉದ್ಯೋಗಿಯನ್ನು ಅವರ ವೈವಾಹಿಕ ಸ್ಥಿತಿಯ ಆಧಾರದ ಮೇಲೆ ವಜಾಗೊಳಿಸಲಾಗಿಲ್ಲ ಎಂದು ಪ್ರಕಟಣೆಯು ಸ್ಪಷ್ಟಪಡಿಸಿದೆ.

ಈ ನೀತಿಯು ಆನ್‌ಲೈನ್‌ನಲ್ಲಿ ಹೆಚ್ಚಿನ ಟೀಕೆಗಳನ್ನು ಪಡೆಯಿತು, ಇದರಲ್ಲಿ ಒಬ್ಬ ಬಳಕೆದಾರರು ಕಂಪನಿಯು ತನ್ನ ಸ್ವಂತ ವ್ಯವಹಾರವನ್ನು ನೋಡಿಕೊಳ್ಳಬೇಕು, ಅದರ ಉದ್ಯೋಗಿಗಳ ವೈಯಕ್ತಿಕ ಜೀವನದಿಂದ ದೂರವಿರಬೇಕು ಎಂದು ಹೇಳಿದರು.

2019ಕ್ಕೆ ಹೋಲಿಸಿದರೆ 2024ರಲ್ಲಿ ಮಹಿಳೆಯರಿಂದ ವೇತನ ರಹಿತ ಮನೆಕೆಲಸಕ್ಕೆ ಕಡಿಮೆ ಸಮಯ ವ್ಯಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...